Advertisement

Category: ದಿನದ ಅಗ್ರ ಬರಹ

ಭಾರತ್ ಬ್ಲೇಡಿನ ಲಕ್ಷೆ ಮತ್ತು ಮನೆಕನ್ನದ ಕತೆಗಳು

ಮಹಿಳೆಯರು ಗಂಟಿಚೋರ್ ಸಮುದಾಯದ ಎಲ್ಲಾ ಸಂಗತಿಗಳಲ್ಲಿಯೂ ಪಾಲುದಾರರಾಗಿದ್ದರು. ತುಡುಗುತನದಲ್ಲಿಯೂ ಮಹಿಳೆಯರ ಪಾಲ್ಗೊಳ್ಳುವಿಕೆ ಕುತೂಹಲಕಾರಿಯಾಗಿದೆ. ಗುಂಪಾಗಿ ತುಡುಗು ಮಾಡುವುದಕ್ಕಿಂತ ಒಂಟಿಯಾಗಿ ತುಡುಗು ಮಾಡುವ ಪ್ರಮಾಣ ಹೆಚ್ಚಾಗಿತ್ತು. ಹಾಗಾಗಿ ಗಂಟಿಚೋರರ ತುಡುಗುತನದ ಪ್ರವೃತ್ತಿಯಲ್ಲಿ ಮಹಿಳೆಯರ ಪಾಲುದಾರಿಕೆ ವಿಶೇಷವಾಗಿದೆ. ಇವರಲ್ಲಿಯೂ ಪ್ರಾದೇಶಿಕವಾಗಿ ತುಂಬಾ ಪ್ರಸಿದ್ಧಿಯನ್ನು ಪಡೆದ ಮಹಿಳೆಯರೂ ಇದ್ದಾರೆ. ‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಅರುಣ್ ಜೋಳದ ಕೂಡ್ಲಿಗಿ ಬರೆದ ಬರಹ ಇಲ್ಲಿದೆ. 

Read More

ಓದುವ ಖುಷಿಗೆ ಪ್ರೇರಣೆ ನೀಡುವ ಹೊಸ ಪರಿಮಳ

ಓದುವುದನ್ನು ಇಷ್ಟಪಡುವವರಿಗೆ ಲೇಖ ಮಲ್ಲಿಕಾ ಪುಸ್ತಕ ಇಷ್ಟವಾಗಬಹುದು. ತಮ್ಮ ದೀರ್ಘವಾದ ಓದಿನ ಅನುಭವ ಸಾರವನ್ನು ಭಟ್ಟಿಇಳಿಸಿ, ಲೇಖಕಿ ಸುಮಾ ವೀಣಾ ಅವರು ಈ ಕೃತಿಯನ್ನು ರಚಿಸಿದ್ದಾರೆ. ಸಾಹಿತ್ಯ ಲೋಕದ ಕೈಪಿಡಿಯಂತಿರುವ ಪುಸ್ತಕದಲ್ಲಿ, ಉಲ್ಲೇಖವಾಗಿರುವ ಪುಸ್ತಕಗಳೂ ಮಹತ್ವದ್ದಾಗಿವೆ. ತಮ್ಮ ಅಧ್ಯಯನಶೀಲತೆ, ಸಂಶೋಧನೆ, ಸಾಹಿತ್ಯಾಸಕ್ತಿ, ತೌಲನಿಕ ಮೀಮಾಂಸೆಯನ್ನೊಳಗೊಂಡಂತೆ ಅವರು ರೂಪಿಸಿದ ಈ ಪುಸ್ತಕವು ಸಂಗ್ರಾಹ್ಯವಾದುದು. ಲೇಖ ಮಲ್ಲಿಕಾ ಸಾಹಿತ್ಯ ಕೃತಿಯ ಕುರಿತ ವಿಶ್ಲೇಷಣಾ ಬರಹವೊಂದನ್ನು ಬರೆದಿದ್ದಾರೆ ಡಿ.ಯಶೋದಾ. 

Read More

ಭುಪೇನ್ ಹಝಾರಿಕಾ ಮಗನ ಕನಸಿನ ನಕಾಶೆಯಿದು

2011ರ ನವೆಂಬರ್ ತಿಂಗಳ 5 ನೆಯ ತಾರೀಕಿನಂದು ತಮ್ಮ 85ನೆಯ ವಯಸ್ಸಿನಲ್ಲಿ ಮುಂಬೈನಲ್ಲಿ ತೀರಿಕೊಂಡ ಭುಪೇನ್ ಅವರ ಕಳೇಬರವನ್ನು ಗೌಹಾಟಿಯ ವಿಶ್ವವಿದ್ಯಾಲಯದ ಬಳಿಯ ಸ್ಥಳದಲ್ಲಿ ಸಮಾಧಿ ಮಾಡಲಾಗಿದೆ. 200 ಎಕರೆಗಳ ಜಾಗದಲ್ಲಿ ಸ್ಮಾರಕವೊಂದು ನಿರ್ಮಾಣವಾಗುತ್ತಿದೆ. ಅಲ್ಲಿ ಸಂಗ್ರಹಾಲಯದ ಜೊತೆಗೆ ಅಧ್ಯಯನ ಪೀಠ ಸ್ಥಾಪಿಸುವುದರ ಮೂಲಕ ಅಸ್ಸಾಮಿ ಶೈಲಿಯ ಸಂಗೀತ ಕಲಿಕೆಗೆ, ಪ್ರಸ್ತುತಿಗೆ ಒತ್ತು ಕೊಡುವ ಉದ್ದೇಶವಿದೆ. ಕಂಡಷ್ಟು ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ  ಅವರು ಭುಪೇನ್ ಹಝಾರಿಕ ಅವರ ಕುರಿತು  ಬರೆದ ಬರಹ. 

Read More

ಮರದ ನೆರಳಿನಲ್ಲಿ…

ಮನೆಯ ಎದುರಿಗೆ ರಸ್ತೆಯ ಪಕ್ಕದಲ್ಲಿ ಜೀರಕನ ಮರ ಹಣ್ಣು ಬಿಟ್ಟಾಗ ನಮಗೆ ಆ ಮರದ ಆಕರ್ಷಣೆ.. ಹೊಂಬಣ್ಣದ ಜೀರ್ಕ ಹಣ್ಣುಗಳನ್ನು ದೋಟಿಗೆ ಎಟುಕಿಸಿ ಉದುರಿಸಿ ಹಿರಿಯರ ಕಣ್ಣು ತಪ್ಪಿಸಿ ಅಡಿಕೆ ಚಪ್ಪರದ ಮೇಲೆ ತೆಗೆದುಕೊಂಡು ಹೋಗಿ ಇಟ್ಟು.. ಅಡಿಗೆ ಮನೆಯಿಂದ ಉಪ್ಪು ಬಾಳೆಲೆ, ಬೆಲ್ಲ ಇನ್ನೊಬ್ಬರು ತರುವುದು. ಜೀರಿಗೆ ಮೆಣಸು ಮತ್ತೊಬ್ಬರು.. ಹಣ್ಣಿನ ತೊಳೆ ಬಿಡಿಸಿ ಬಾಳೆ ಎಲೆ ಮೇಲೆ ಉಪ್ಪು, ಮೆಣಸು ಬೆಲ್ಲ ಹಾಕಿ ಕಲೆಸಿ ಮತ್ತೆ ಚಿಕ್ಕ ಬಾಳೆ ಎಲೆ ತುಂಡಿನ ಮೇಲೆ ಎಲ್ಲರಿಗೂ ಹಂಚಿ ಆ ಕಟುವಾದ ಹುಳಿ, ಸಿಹಿ, ಖಾರದ ರುಚಿಯನ್ನು ಚಪ್ಪರಿಸಿಕೊಂಡು ತಿನ್ನುತ್ತಿದ್ದೆವು..
ಡಾ. ಎಲ್.ಸಿ. ಸುಮಿತ್ರಾ ಬರೆದ ಪ್ರಬಂಧ

Read More

ಕಣ್ಮರೆಯಾಗುತ್ತಿರುವ ದೇಸೀ ಕಥನ, ಕಸುಬು ಹಾಗೂ ಅವುಗಳು ಪೊರೆದ ನುಡಿಸಂಪತ್ತು

ಒಂದು ದಿನ ಸಂಜೆ ಬುಡುಗೊಚ್ಚ ಕೊಪ್ಪಲಿನ ಮೆದೆಯಲ್ಲಿ ಹುಲ್ಲು ಹಿರಿಯುತ್ತಿದ್ದನಂತೆ. ಆಗ ಆಕಾಶದ ಕಡೆಯಿಂದ ಬೆಳ್ಳನೆಯ ಬೆಳಕೊಂದು ಇಳುಕಂಡು ಬಂದು ಅವನೆದುರಿನ ಬೇಲಿಯನ್ನು ಹೊಕ್ಕಿತ್ತಂತೆ. ಕಣ್ಮುಚ್ಚಿ ಬಿಡುವುದರೊಳಗೆ ಆ ಬೆಳಕು ಬೇಲಿಯನ್ನೆಲ್ಲಾ ಆವರಿಸಿಕೊಂಡು ಆ ಇಡೀ ಬೇಲಿಯನ್ನು ಬೆಳಗಿಸತೊಡಗಿತ್ತಂತೆ. ಗಾಬರಿಗೊಂಡ ಬುಡುಗೊಚ್ಚ ಹುಲ್ಲು ಹಿರಿಯುವುದನ್ನು ಬಿಟ್ಟು ಬೇಲಿಯನ್ನೇ ದಿಟ್ಟಿಸತೊಡಗಿದ್ದನಂತೆ.
ಎಸ್. ಗಂಗಾಧರಯ್ಯ ಬರೆದ ‘ಮಣ್ಣಿನ ಮುಚ್ಚಳ’ ಹೊಸ ಕಥಾ ಸಂಕಲನಕ್ಕೆ ಬರೆದುಕೊಂಡಿರುವ ಮಾತುಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ