Advertisement

Category: ದಿನದ ಅಗ್ರ ಬರಹ

ಕ್ಲಬ್ ಹೌಸ್ ಮಾತುಕಥೆಯಲ್ಲಿ ಕಂಡ ನಟರ ಎರಡು ಬಗೆ…

ಹೊಸತರಲ್ಲಿ ಎಲ್ಲ ಚೆಂದವೇ. ಒಂದು ವಾರ ಕಳೆಯುವಷ್ಟರಲ್ಲಿ ಈ ಕೇಳ್ಮೆ ಕೂಡ ಯಾಕೊ ಮನೊಟನಸ್ ಆಗುತ್ತಿದೆ ಅನಿಸಿತು. ಕೇಳ್ಮೆಯ ಮೂಲಕ ವಿಚಾರ ಕ್ರೋಢೀಕರಣ ಸರಿ. ಓದುವ ತ್ರಾಸಿಗಿಂತ ಕೇಳ್ಮೆ ಸುಲಭ. ಇದೂ ಸರಿ. ಆದರೆ ಕೇಳಿಸಿಕೊಂಡದ್ದನ್ನು ಒಂದು ಕಡೆ ಅಕ್ಷರ ಮತ್ತು ಪದಗಳಲ್ಲಿ ಕ್ರಮಬದ್ಧವಾಗಿ ದಾಖಲಿಸಬೇಕಾಗುವಾಗ ವಾಕ್ಯರಚನೆ ಬಿಗಿಬಂಧದಲ್ಲಿ ರೂಪುತಳೆಯಬೇಕಾದರೆ ಓದಿನ ಸಂಗ ಅಗತ್ಯ ಬೇಕು ಎಂಬ ಅರಿವು ಜಾಗೃತವಾಯಿತು.
ಎನ್‌.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ಧಾರವಾಡದಲ್ಲಿ ಅನುರಣಿಸಿದ ‘ಮಂದ್ರ ಮಧ್ಯಮ’

ರಹಿಮತ್ ಖಾನರ ಗೆಳೆಯರ ಬಳಗ ದೊಡ್ಡದಿತ್ತು. ಸವಾಯಿ ಗಂಧರ್ವ ಮತ್ತು ಕಿರಾನಾ ಘರಾನಾ ಸ್ಥಾಪಕ ಅಬ್ದುಲ್ ಕರೀಂ ಖಾನ್ ಸಾಹಬ್ ಈ ಸಾಲಿನಲ್ಲಿ ಪ್ರಮುಖರು. ಈ ಮೂವರು ಸೇರಿದ ಜಾಗದಲ್ಲಿ ಸಂಗೀತದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಸವಾಯಿ ಗಂಧರ್ವರ ಕುಂದಗೋಳದ ‘ವಾಡ’ದಲ್ಲಿ ಈ ತ್ರಿಮೂರ್ತಿಗಳು ಅಪರೂಪಕ್ಕೊಮ್ಮೆ ಸೇರುತ್ತಿದ್ದರು. ಮದ್ಯಪಾನವೂ ಜೋರಾಗಿಯೇ ಇತ್ತು. ಕುಂದಗೋಳದ ಪಾನಗೋಷ್ಠಿಯಲ್ಲಿ ನಡೆಯುತ್ತಿದ್ದ ವಿಚಿತ್ರ ಘಟನೆಗಳು ಆಗಿನ ಕಲಾವಿದರ ಪ್ರತಿಭೆಗೂ ಸಾಕ್ಷಿಯಾಗಿದ್ದವು.. ಶೇಣಿ ಮುರಳಿ ಬರೆದ ಉಸ್ತಾದ್ ರಫೀಕ್ ಖಾನ್ ಜೀವನಚರಿತ್ರೆ ‘ಖಾನ್ ಕಾಂಪೌಂಡ್’ನ ಅಧ್ಯಾಯ ಕೆಂಡಸಂಪಿಗೆ ಓದುಗರಿಗಾಗಿ.

Read More

ಅಣಬೆ ಬೆಳೆಗೆ ಕೈ ಹಾಕಿದ ನಮ್ಮೂರ ಹುಡುಗರ ಕಥೆ

ಆತ್ಮಾರಾಮನ ಸಹಾಯದಿಂದ ರಾಮಣ್ಣನ ಮನೆಯ ಹಿಂಭಾಗದ ಕೋಣೆಯನ್ನು ಬಾಡಿಗೆ ಹಿಡಿದು ಅಲ್ಲಿ ಅಣಬೆ ಕೃಷಿಗೆ ಓನಾಮ ಹಾಡಲಾಯಿತು. ಅದು ಬಿಟ್ಟರೆ ಅನ್ಯಮಾರ್ಗವಿಲ್ಲದೆ ಪಕ್ಕದ ಬೀದಿಯ ಆಫೀಸರನ ಮನೆಗೆ ಹೋಗಬೇಕಾಗಿತ್ತು. ಆದರೆ ಅಲ್ಲಿ ಅವನ ಹೆಂಡತಿಯ ಕಾಟ ಎಂಬುದು ಇವರ ದರ್ದು! ಅಂತೂ ಒಂದು ಶುಭದಿನ ಒಣಹುಲ್ಲಿನ ರಾಶಿ ಬಂದು ಬಿದ್ದು ಅಣಬೆ ಬೆಳೆಗೆ ನಾಂದಿಯಾಯಿತು. ಕೋಣೆಯ ಒಳಗೆ ಒಂದಷ್ಟು ಕಬ್ಬಿಣದ ರ‌್ಯಾಕ್‌ಗಳು ಬಂದವು.
ಮಧುರಾಣಿ ಬರೆಯುವ “ಮಠದ ಕೇರಿ” ಕಥಾನಕ

Read More

ವ್ಯಕ್ತಿಗಳ ತಲ್ಲಣಗಳ ಮೂಲಕ ರಾಜಕೀಯ ಸಾಮಾಜಿಕ ಪ್ರಶ್ನೆಗಳನ್ನು ಕೇಳುವ ಇಷಿಗುರೊ: ಎಸ್. ಸಿರಾಜ್ ಅಹಮದ್ ಅಂಕಣ

“ಸ್ಟೀವನ್ಸ್ ತನ್ನ ವೃತ್ತಿಯ ಹುಸಿ ಘನತೆ ಮತ್ತು ಹೊಣೆಗಾರಿಕೆಗಳಲ್ಲಿ ಅವನ ಒಳ ಬದುಕು ಎಷ್ಟು ಮುರುಟಿಹೋಗಿದೆ ಎಂದರೆ ಅವನು ಅಪರೂಪಕ್ಕೆ ಎಂಬಂತೆ ರೊಮ್ಯಾಂಟಿಕ್ ಕಾದಂಬರಿಯನ್ನು ಓದುವುದು ತನ್ನ ವೃತ್ತಿಗೆ ಅಗತ್ಯವಾಗಿ ಬೇಕಾದ ಇಂಗ್ಲೀಷನ್ನು ಸರಿಪಡಿಸಿಕೊಳ್ಳಲು ಮಾತ್ರ! ಸ್ಟೀವನ್ಸ್ ಏನು ಓದುತ್ತಾನೆ, ಅವನ ಕತ್ತಲಗೂಡಿನಂತಹ ಕೋಣೆಯಲ್ಲಿ ಯಾಕೆ ಒಂದು ಹೂಗುಚ್ಛವನ್ನೂ ಇಡಲು ಜಾಗವಿಲ್ಲ ಎಂದೆಲ್ಲ ಯೋಚಿಸುತ್ತ, ಅವನ ಅಂತರಂಗವನ್ನು ತಡವಿ, ಒಳಗನ್ನು ಅರಿತುಕೊಳ್ಳುವ ಆಸೆಯಿಂದ ಹೊರಡುವ ಮಿಸ್ ಕೆಂಟನ್‍ ಗೆ ಅಲ್ಲಿ ಕಾಣುವುದು ಇಂಥ ಒಣ ಶಿಷ್ಟಾಚಾರ, ವೃತ್ತಿಯ ಬಗೆಗಿನ ಕುರುಡು ನಿಷ್ಠೆ. ಮಾತ್ರ.”
ಎಸ್. ಸಿರಾಜ್ ಅಹಮದ್ ಬರೆಯುವ ಅಂಕಣ

Read More

ಹೂವಿನ ಹಡಗಲಿಯ ದೇವಾಲಯಗಳು: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಗದಗದಿಂದ ಹೊರಟು ಹೂವಿನ ಹಡಗಲಿಯನ್ನು ತಲುಪಿದ ನಮ್ಮನ್ನು ಮಿತ್ರ ಪಂಪಾಪತಿರಾಯರು ದೊಡ್ಡ ಅಂಗಳವಿದ್ದ ಮನೆಯೊಂದಕ್ಕೆ ಕರೆದೊಯ್ದರು. ವಾಸ್ತವವಾಗಿ, ಅದು ವಾಸದ ಮನೆಯಾಗಿರದೆ, ಹೊಯ್ಸಳ ಕಾಲದ ದೇವಶಿಲ್ಪಗಳನ್ನು ಇರಿಸಿದ ಗುಡಿಯೆಂದು ತಿಳಿದಾಗ ಅಚ್ಚರಿಯಾಯಿತು. ಯೋಗಮಾಧವನ ಭವ್ಯವಾದ ಶಿಲ್ಪವೊಂದನ್ನು ಇಲ್ಲಿನ ಕೋಷ್ಠವೊಂದರಲ್ಲಿ ಇರಿಸಿದೆ. ಆರಡಿ ಎತ್ತರದ ಈ ವಿಗ್ರಹವು ಹೊಯ್ಸಳ ಕಾಲದ ಅತಿ ಸುಂದರ ಮೂರ್ತಿಗಳಲ್ಲೊಂದೆಂಬುದರಲ್ಲಿ ಸಂಶಯವಿಲ್ಲ. ಚತುರ್ಭುಜ ವಿಷ್ಣು ಹಿಂದಿನ ಎರಡು ಕೈಗಳಲ್ಲಿ ಶಂಖಚಕ್ರಗಳನ್ನು ಧರಿಸಿದ್ದು ಮುಂದಿನ ಕೈಗಳಲ್ಲಿ ಯೋಗಮುದ್ರೆಯನ್ನು ಪ್ರದರ್ಶಿಸುತ್ತ ಕಣ್ಮುಚ್ಚಿ ಪದ್ಮಾಸನದಲ್ಲಿ ಕುಳಿತಿರುವ ಭಂಗಿ ಅನನ್ಯವಾಗಿದೆ.”
ಟಿ. ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿಯ ನಲ್ವತೈದನೆಯ ಕಂತು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ