Advertisement

Category: ದಿನದ ಅಗ್ರ ಬರಹ

ಅರಾಸೇ ಮತ್ತು ಆರ್‌ಕೆಶ್ರೀ ಜೊತೆಗಿನ ಪ್ರಸಂಗಗಳು: ಎಚ್. ಗೋಪಾಲಕೃಷ್ಣ ಸರಣಿ

ರೂಮಿನ ತುಂಬಾ ಪುಸ್ತಕಗಳು, ಟೇಬಲ್ಲಿನ ಮೇಲೆ ಅರ್ಧ ಓದಿದ್ದ ಆರೆಂಟು ಅರೆ ತೆರೆದ ಪುಸ್ತಕ, ಅರ್ಧ ತೆರೆದುಕೊಂಡಿದ್ದ ಪೇಪರು, ರಟ್ಟಿನ ಪ್ಯಾಡ್ ಮೇಲೆ ಬರೆಯುತ್ತಿದ್ದ ಜೋಡಿಸಿದ್ದ ಹಾಳೆಗಳು, ಕ್ಯಾಪ್ ತೆಗೆದಿರಿಸಿದ ಎರಡು ಪೆನ್ನು, ಪಕ್ಕದಲ್ಲಿ ಕನ್ನಡ ಇಂಗ್ಲಿಷ್ ಡಿಕ್ಷನರಿ….. ಇದ್ದಕ್ಕಿದ್ದ ಹಾಗೆ ನನ್ನ ರೂಮಿನಲ್ಲಿ ಕೂತಿದ್ದೀನಿ, ಹರಡಿರುವ ಪುಸ್ತಕಗಳು ನಾನೇ ಹರಡಿದ್ದು, ಕ್ಯಾಪ್ ತೆಗೆದಿಟ್ಟವನು ನಾನೇ…. ಅನಿಸಿಬಿಟ್ಟಿತು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ತಾರನೆಯ ಕಂತು ನಿಮ್ಮ ಓದಿಗೆ

Read More

ಸ್ನೇಹದ ಕಡಲಲ್ಲಿ ಭಾವ ನಾವೆಯ ಪಯಣ: ರಾಮ್‌ಪ್ರಕಾಶ್‌ ರೈ ಸರಣಿ

ಆತ ಗುಹೆಯೊಳಗೆ ಬೀಳುತ್ತಿರಬೇಕಾದರೆ, ಬಾಲ್ಯದಲ್ಲಿ ನದಿಯ ನೀರಿಗೆ ಹಾರಿ, ಆನಂತರ ಈಜಲು ಅಸಾಧ್ಯವೆನಿಸಿ ಕಡೆಗೆ ಕುಟ್ಟನ್ ಬಂದು ಮೇಲೆತ್ತಿ ಕರೆದುಕೊಂಡು ಹೋಗುವ ದೃಶ್ಯವ ಹೊಲಿಯಲಾಗಿದೆ. ಹೀಗೆ ದೃಶ್ಯವೊಂದರ ಹಿಂದೆ ಅವಿತಿರುವ ಸನ್ನಿವೇಶ, ಭಾವವ ಬಣ್ಣಿಸುವ ಈ ಪ್ರಯೋಗ ಚಿತ್ರದ ಮೆಚ್ಚಿನ ಅಂಶಗಳಲ್ಲೊಂದು. ನೀರಿನ ಚಲನೆಗೆ ಅಡ್ಡಲಾಗಿ ಮಲಗುವುದು, ತನ್ನ ವಾಹನದ ತುಂಬಾ ಚೆಲ್ಲಿದ ಪದಾರ್ಥಗಳು, ಬಾಗಿಲಿನ ಅಂಚಿನಲ್ಲಿ ಅಂಟಿದ ಉಗುಳು ಕಲೆಯನ್ನು ಆಸ್ಥೆಯಿಂದ ತೆಗೆದು ಸ್ವಚ್ಛಗೊಳಿಸುವ ರಥದ ಕಡೆಗಿನ ಚಾಲಕನ ಪ್ರೇಮ ಹೀಗೆ ಬದುಕಿನ ಮೌಲ್ಯಗಳ ಬಗ್ಗೆ ಕಥೆಯು ಮೌನವಾಗಿಯೇ ಮಾತನಾಡುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಮಲಯಾಳಂನ ‘ಮಂಜುಮ್ಮೆಲ್ ಬಾಯ್ಸ್ ‘ಸಿನಿಮಾದ ವಿಶ್ಲೇಷಣೆ

Read More

ಹಿರಿಯ ಕಾದಂಬರಿಕಾರ ಕೆ.ಟಿ. ಗಟ್ಟಿ ನಿಧನ…

ಪ್ರವಾಸ ನಮಗಿಷ್ಟವಾಗುವುದು ಯಾವಾಗಲೂ ಮನೆಯಲ್ಲಿದ್ದು ಒಮ್ಮೊಮ್ಮೆ ಪ್ರವಾಸ ಹೋದಾಗ. ನಿರಂತರ ಪ್ರವಾಸದಲ್ಲಿರುವುದು ಎಷ್ಟು ರಸಹೀನ ಎಂದು ಗಗನಸಖಿಯರು ಮತ್ತು ಮೆಡಿಕಲ್ ರೆಪ್ರಸೆಂಟೇಟಿವ್‌ಗಳು ಹೇಳಿಯಾರು. ಬೇರೆ ದೇಶ, ಬೇರೆ ನಗರ, ಬೇರೆ ಮನೆ ಎಲ್ಲಾ ಅಷ್ಟೆ. ಸಾಮಾನ್ಯವಾಗಿ ‘ಅತ್ಯಂತ ಪ್ರೇಕ್ಷಣೀಯ ಸ್ಥಳ’ ಸುಪ್ರಸಿದ್ಧವಾಗಿರುತ್ತದೆ. ಅದು ಹಲವು ಬಾರಿ ಟೀವಿಯಲ್ಲಿ ಮತ್ತು ಸಿನಿಮಾದಲ್ಲಿ ಕಂಡ, ಪತ್ರಿಕೆ ಪುಸ್ತಕಗಳಲ್ಲಿ ಓದಿದ ಸ್ಥಳವೇ ಆಗಿರುತ್ತದೆ.
ಹಿರಿಯ ಸಾಹಿತಿ ಕೆ.ಟಿ. ಗಟ್ಟಿ ಇಂದು ಮಂಗಳೂರಿನಲ್ಲಿ ನಿಧನರಾಗಿದ್ದು ಅವರು ಕೆಂಡಸಂಪಿಗೆಗೆ ಬರೆದ “ಬಿಸಿಲುಕೋಲು” ಸರಣಿಯ ಕೆಲ ಬರಹಗಳು ನಿಮ್ಮ ಓದಿಗೆ

Read More

ನೌಕರಿ ಬಿಟ್ಟ ಎಂ.ಟೆಕ್ ಪದವೀಧರ ಬಾವಿ ತೋಡಿದ: ಸಿದ್ದು ಸತ್ಯಣ್ಣನವರ ಬರಹ

ಸೂರ್ಯಕಾಂತ್ ಕೃಷಿಯೆಡೆಗಿನ ಸೆಳೆತ ಇತ್ತಲ್ಲ, ಅದೇನೂ ಸಣ್ಣದಲ್ಲ. ಆದರೆ ನೀರಿಲ್ಲದೆ ಕೃಷಿ ಕೆಲಸ ಮಾಡುವುದು ಹೇಗೆ? ಅದಕ್ಕಾಗಿ ಬೋರ್‍ವೆಲ್ ಉತ್ತರದಂತೆ ಕಾಣಿಸಿದರೂ ಅದು ಪರಿಹಾರವಾಗಿ ಕಾಣಲಿಲ್ಲ. ಅದಕ್ಕಾಗಿ ಬೋರ್‍ವೆಲ್ ಹಾಕಿಸಲು ಆತನ ಮನಸ್ಸು ಒಪ್ಪಲಿಲ್ಲ. ಸತತ ಐದು ತಿಂಗಳು ಒಬ್ಬರೇ ಬಾವಿ ತೋಡಿದರು. ಮೈಗೆ ಗಾಯ, ನೋವು ಎಲ್ಲಾ ಆದವು. ಆಗ ಜನರ ಪ್ರತಿಕ್ರಿಯೆ ಇತ್ತಲ್ಲ, ಅದು ಇರಿದದ್ದು ಮನಸ್ಸಿಗೆ; ಎಲ್ಲಾ ಗಾಯಕ್ಕಿಂತ ಹೆಚ್ಚು ಕಾಡಿದ್ದು ಅದೇ ಎನ್ನುವುದು ಸೂರ್ಯಕಾಂತ್ ಮನದಾಳ.
ಸಿದ್ದು ಸತ್ಯಣ್ಣವರ ಹೊಸ ಕೃತಿ “ಬೆಳಕಿನ ತೆನೆ”ಯ ಒಂದು ಬರಹ ನಿಮ್ಮ ಓದಿಗೆ

Read More

ಸುಲಭವಾಗಿಯೇ ಬಿದ್ದ ಸೀಲು!: ಗುರುಪ್ರಸಾದ ಕುರ್ತಕೋಟಿ ಸರಣಿ

ಚೆನ್ನೈನಲ್ಲಿ ತಮಿಳು ಬರದಿದ್ದರೆ ತುಂಬಾ ಕಷ್ಟ ಅಂತ ಗೊತ್ತಿತ್ತು. ಕಾರಿನಲ್ಲಿಯೇ ಅಲ್ಲಿಗೆ ಹೊಗಿದ್ದ ನಾವು ಅಲ್ಲೊಬ್ಬರಿಗೆ ಹೊಟೇಲ್‌ಗೆ ಹೇಗೆ ಹೋಗೋದು ಅಂತ ಮಾರ್ಗದರ್ಶನ ಕೇಳಿದ್ದಕ್ಕೆ ತಮಿಳಿನಲ್ಲೇ ವಿವರಣೆ ನೀಡಿದರು. ತಮಿಳು ಬರೋದಿಲ್ಲ ಅಂತ ಹೇಳುವಷ್ಟು ಮಾತ್ರ ತಮಿಳು ಕಲಿತಿದ್ದ ನಾನು ಹಾಗೆ ಹೇಳಿ ಅವರ ಬಳಿ ಹಿಗ್ಗಾಮುಗ್ಗ ಬೈಸಿಕೊಂಡೆ. ಚೆನ್ನೈಗೆ ಬಂದವರು ಯಾಕೆ ಬೇಗನೆ ತಮಿಳು ಕಲಿಯುತ್ತಾರೆ ಅಂತ ಆಗ ನನಗೆ ತಿಳಿಯಿತು! ಬೆಂಗಳೂರಿನಲ್ಲೂ ಕನ್ನಡ ಮಾತಾಡದ ನಮ್ಮ ಕನ್ನಡಿಗರಿಗೆ ಹೀಗೆಯೇ ಬೈಯಬೇಕು ಅಂತ ಅಂದುಕೊಂಡೆ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ನಾಲ್ಕನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ