Advertisement

Category: ದಿನದ ಅಗ್ರ ಬರಹ

ಕಲಿತ ಬುದ್ಧಿಗಳೇ ನಮ್ಮ ನೆರಳು: ಎಸ್ ನಾಗಶ್ರೀ ಅಜಯ್ ಅಂಕಣ

ಎಷ್ಟೋ ಜನ ಸರಳತೆ, ಸಹೃದಯತೆ, ಸಹನೆ, ಕರುಣೆಯನ್ನು ನಂಬದೆ ಡಂಭಾಚಾರ, ನಾಟಕ, ಕೃತಕತೆ ಎಂಬ ಹಣೆಪಟ್ಟಿ ಕಟ್ಟಿ ಸಂಶಯದಿಂದಲೇ ಎದುರುಗೊಳ್ಳುತ್ತಾರೆ. ಹಣದೊಂದಿಗೆ ಮದ, ಅಧಿಕಾರದೊಂದಿಗೆ ದರ್ಪ, ಶ್ರೀಮಂತಿಕೆಯೊಂದಿಗೆ ಖಾಯಿಲೆ, ಬಡತನದೊಂದಿಗೆ ನೆಮ್ಮದಿ ಇದ್ದಿರಲೇಬೇಕೆಂದು ಭಾವಿಸಿರುತ್ತಾರೆ. ಅತ್ಯಂತ ರಂಜನೀಯವಾಗಿ ಅದನ್ನು ಬಣ್ಣಿಸಿಯೂ ತೋರುತ್ತಾರೆ. ಪ್ರತಿಯೊಬ್ಬ ಮನುಷ್ಯನೂ ಭಿನ್ನ. ಪ್ರತಿಯೊಬ್ಬರ ಪರಿಸ್ಥಿತಿಯೂ ಭಿನ್ನ. ಒಂದೇ ಅಚ್ಚಿನಲ್ಲಿ ಅಳೆದು, ಸುರಿದು ತಯಾರಾದ ಬದುಕಲ್ಲ ಎಲ್ಲರದ್ದು.
ಎಸ್.‌ ನಾಗಶ್ರೀ ಅಜಯ್‌ ಬರೆಯುವ ‘ಲೋಕ ಏಕಾಂತ’ ಅಂಕಣ

Read More

ಕನ್ನಡತನ ಜ್ವಲಿಸುವ ವಿಶೇಷ ತಿಂಗಳು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಹುಟ್ಟಿ ಬೆಳೆಯುವ ಕನ್ನಡಿಗ ದಂಪತಿಗಳ ಮಕ್ಕಳು ಕನ್ನಡದಲ್ಲಿ ಮಾತನಾಡುವುದು ಕಡಿಮೆ. ಒಂದುವೇಳೆ ಅವರು ಕಷ್ಟಪಟ್ಟು ಪ್ರಯತ್ನಿಸಿದರೂ ಅವರುಗಳು ಪ್ರತಿದಿನವೂ ಮಾತನಾಡುವ ಆಸ್ಟ್ರೇಲಿಯನ್ ಇಂಗ್ಲಿಷ್ ಉಚ್ಚಾರದ ಪ್ರಭಾವದಲ್ಲಿ ತಮ್ಮ ಕನ್ನಡವನ್ನು ಹೊರಡಿಸಿದಾಗ ಮಿಶ್ರಿತ ಭಾವಗಳು ಏಳುತ್ತವೆ. ಕರ್ನಾಟಕದಲ್ಲಿಯೇ ಹುಟ್ಟಿ ಕೆಲವರ್ಷ ಅಪ್ಪಟ ಕನ್ನಡತನದಲ್ಲಿ ಅಲ್ಲಿಯೇ ಬೆಳೆದು ತಮ್ಮ ಬಾಲ್ಯದಲ್ಲಿ ಆಸ್ಟ್ರೇಲಿಯಾಕ್ಕೆ ಬರುವ ಮಕ್ಕಳು ಕೆಲವೇ ವರ್ಷಗಳಲ್ಲಿ ಆಸ್ಟ್ರೇಲಿಯನ್ ಇಂಗ್ಲಿಷ್ – ಕನ್ನಡವನ್ನು ರೂಢಿಸಿಕೊಳ್ಳುತ್ತಾರೆ. ಅಪ್ಪ-ಅಮ್ಮ ಕನ್ನಡದಲ್ಲಿ ಮಾತನಾಡಿಸುವಾಗ ಈ ಮಕ್ಕಳು ಇಂಗ್ಲೀಷಿನಲ್ಲಿ ಉತ್ತರಿಸುವುದು ಸರ್ವೇಸಾಮಾನ್ಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕಾವೇರಿ ಉಗಮದೊಂದಿಗೆ ಮಡಿಕೇರಿ ದಸರಾ ವೈಭವ: ಸುಮಾವೀಣಾ ಸರಣಿ

ಹೇಗೆ ಉತ್ತರದಲ್ಲಿ ಗಂಗೆಯೋ ಹಾಗೆ ದಕ್ಷಿಣದಲ್ಲಿ ಕಾವೇರಿ. ದಕ್ಷಿಣದವರಿಗೆ ಈಕೆ ಜೀವ ನದಿಯೂ ಹೌದು! ಭಾವನದಿಯೂ ಹೌದು! ಕವಿರಾಜಮಾರ್ಗಕಾರ ಕನ್ನಡ ನಾಡಿನ ವಿಸ್ತಾರವನ್ನು ಹೇಳುವಾಗ ಕಾವೇರಿಯಿಂದ ಗೋದಾವರಿಯವರೆಗೆ ಎಂದಿದ್ದಾನೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹನ್ನೆರಡನೆಯ ಕಂತು ನಿಮ್ಮ ಓದಿಗೆ

Read More

ಸಾಕುಪ್ರಾಣಿಗಳ ಒಡನಾಟದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಒಂದು ಸಾರಿ ಅವರ ಮನೆಗೆ ಹಬ್ಬಕ್ಕೆಂದು ಹೋದಾಗ ಹಠಮಾಡಿ ಎರಡು ಪಾರಿವಾಳವನ್ನು ತಂದೆ. ನಮ್ಮ ಮನೆಯ ಹೊರಭಾಗದಲ್ಲಿ ನಾಲ್ಕು ಗೋಡೆಯನ್ನಷ್ಟೆ ಕಟ್ಟಿ ಬಚ್ಚಲು ಮನೆ ಎಂದು ಕರೆಸಿಕೊಳ್ಳುತ್ತಿದ್ದ ಬಚ್ಚಲು ಮನೆಯ ಮೂಲೆಯಲ್ಲಿ ಕಲ್ಲುಗಳಿಂದಲೆ ಗೂಡೊಂದನ್ನು ಕಟ್ಟಿ ಅದರಲ್ಲಿ ಎರಡು ಪಕ್ಷಿಗಳನ್ನು ಬಿಟ್ಟು ಸಾಕವುದೆಂದು ತೀರ್ಮಾನಿಸಿದೆ. ಆದರೆ ಅವು ಗುಂಪಿನಲ್ಲಿ ವಾಸವಾಗಿದ್ದರಿಂದ ಒಂದು ವಾರದಲ್ಲೆ ಒಂದು ಪಕ್ಷಿ ಸತ್ತೆಹೋಯಿತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹತ್ತೊಂಭತ್ತನೆಯ ಕಂತು

Read More

ಕೈ ಜೋಡಿಸಿದರೆ ಹಬ್ಬವೂ ಹಗುರ: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸಂಸ್ಕೃತಿಯ ರಕ್ಷಣೆ, ಆಚರಣೆಗಳ ಹೊಣೆಯನ್ನು ಹೆಣ್ಣಿನ ಕುತ್ತಿಗೆಗೆ ನೇತುಹಾಕಿ, ತಾವು ಮಾತ್ರ ಹಾಯಾಗಿ ಮೊಬೈಲ್, ಲ್ಯಾಪ್ ಟಾಪ್‌ಗಳಲ್ಲಿ ಕಾಡುಹರಟೆ, ಕಛೇರಿ ಕೆಲಸದಲ್ಲಿ ಕಳೆದುಹೋದರೆ, ಚಿಕ್ಕವರು ಮಾಡುವ ಕೆಲಸದಲ್ಲಿನ ಲೋಪ ಹುಡುಕುವುದರಲ್ಲೇ ಹಿರಿಯರು ನಿರತರಾದರೆ, ಓದು ಮಾತ್ರ ಸಾಕೆಂದು ಮಕ್ಕಳನ್ನು ಕೆಲಸಕ್ಕೆ ಹಚ್ಚದಿದ್ದರೆ, ಹಬ್ಬದ ಸೊಗಸು ಅರಿವಿಗೆ ಬರುವುದೇ ಇಲ್ಲ. ಒಂದು ಕಾಲಕ್ಕೆ ಮನೆಯ ಸುತ್ತಮುತ್ತ ಅನಾಯಾಸವಾಗಿ ದೊರೆಯುತ್ತಿದ್ದ ಪತ್ರೆ, ಪುಷ್ಪ, ಮಾವು, ಬೇವು, ಬಾಳೆಕಂದು, ಹೊಂಬಾಳೆ ಇವತ್ತಿಗೆ ಚಿನ್ನದ ಬೆಲೆ ಹೊತ್ತುಕೊಂಡು, ಮಾರ್ಕೆಟ್ ಸೇರಿವೆ. ಹೊಸಕಾಲದ ತಿನಿಸಿನ ರುಚಿಕಂಡ ಮಕ್ಕಳಿಗೆ ಪಾರಂಪರಿಕ ಆಹಾರ ತಮಾಷೆಯಾಗಿ ಕಾಣುತ್ತಿದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ