Advertisement

Category: ದಿನದ ಪುಸ್ತಕ

‘ಕಾಲಾಯಾತಸ್ಮೈ ನಮಃ’: ಕೆ ಸತ್ಯನಾರಾಯಣ ಕಾದಂಬರಿಯ ಕುರಿತು ಸಿ ಬಿ ಶೈಲಾ ಜಯಕುಮಾರ್ ಬರಹ

ಮಕ್ಕಳಿಗೆ ಯಾವ ಹಂತದಲ್ಲಿ ತಾಯಿ ತಂದೆಯರು ಬೇಕೆನಿಸುವುದಿಲ್ಲ ಅಥವಾ ಸಾಕೆನಿಸುತ್ತಾರೆ? ಎಂಬ ಗೊಂದಲದ ಆದರೆ ಪ್ರಸ್ತುತ ಪ್ರಶ್ನೆಯೂ ಇಲ್ಲಿದೆ! ನಮ್ಮ ತಲೆಮಾರಿನವರು ತಂದೆ ತಾಯಿಯರ ಮಾನಸಿಕ ಜಗತ್ತಿನಿಂದ ಕ್ರಮೇಣ ದೂರವಾದರೆ, ಇಂದಿನವರದು ಧಿಡೀರ್ ದೂರವಾಗುವಿಕೆ! ಭಾವನೆಗಳ ಘರ್ಷಣೆ! ಕೋಚಿಂಗ್ ಸೆಂಟರಿನಲ್ಲಿ ಡೆಪ್ಯೂಟಿ ಕರೆಸ್ಪಾಂಡೆಂಟ್ ಆಗಿದ್ದ ಮೇಲ್ ಮಧ್ಯಮ ವರ್ಗದ ರಂಗನಾಥ್ ಮತ್ತು ಶಿಕ್ಷಕಿ ಸುಧಾ ದಂಪತಿಗಳ ಮಕ್ಕಳು ವಿಕ್ರಮ್ ಹಾಗೂ ಪ್ರಾರ್ಥನಾ.
ಕೆ ಸತ್ಯನಾರಾಯಣ ಕಾದಂಬರಿ “ಕಾಲಜಿಂಕೆ”ಯ ಕುರಿತು ಸಿ ಬಿ ಶೈಲಾ ಜಯಕುಮಾರ್ ಬರಹ

Read More

ರಾಜ್ಕುಮಾರ್ ಅಂದ್ರ ಏನಂದ್ಕಂಡೆ?: ಎಂ. ಜವರಾಜ್‌ ಹೊಸ ಕಾದಂಬರಿಯ ಆಯ್ದ ಭಾಗ

ಪಂಚಾಯ್ತಿ ಆಫೀಸ್ ಮಗ್ಗುಲು ಬೀದಿಲಿದ್ದ ಕುಂಟ ಸಿದ್ದಪ್ಪನ ಮನೆಯ ಅಂಗಳದಲ್ಲಿ ಒಂದಷ್ಟು ಜನ ಮಾತಾಡ್ತ ನಿಂತಿದ್ದರು. ಅಲ್ಲಿಗೆ ನಾಕಾರು ಪೇಪರು ಬರುತ್ತಿದ್ದವು. ಕುಂಟ ಸಿದ್ದಪ್ಪ ಬಿಳಿಪಂಚೆ ಬಿಳಿ ಶರ್ಟು ಹಾಕೊಂಡು ಕ್ರಾಪ್ ತಲೆ ಬಾಚ್ಕೊಂಡು ಕಾಲಿನ ಮೇಲೆ ಕಾಲು ಹಾಕಿಕೊಂಡು “ಇದು ಗೋಕಾಕ್ ಚಳುವಳಿ ಅಂತ. ಅವ್ರೊಬ್ಬ ದೊಡ್ ಕವಿ. ಅವ್ರು ಸರ್ಕಾರಕ್ಕೆ ಬರ್ದ ಪತ್ರನ ಇಟ್ಕೊಂಡು ನಡಿತಿರ ಹೋರಾಟ ಇದು. ಏಯ್‌ ನೋಡ್ರಪ್ಪ, ಬಾಯಿಲ್ಲಿ” ಅಂತ ಕರೆದು, “ನೀನು ಐದ್ನೆ ಕ್ಲಾಸಾ? ನಾಕ್ನೆ ಕ್ಲಾಸಾ?” ಅಂದ. ನಾನು, ʼಹುʼ” ಎನ್ನುವವನಂತೆ ತಲೆದೂಗಿದೆ. “ಹೌದಾ? ಹೋಗು, ಇನ್ಮೇಲ ಇಂಗ್ಲಿಸ್ ಗಿಂಗ್ಲಿಸ್ ಓದಂಗಿಲ್ಲ, ಬರೀ ಕನ್ನಡ. ನಿನ್ತವು ಇಂಗ್ಲಿಸ್ ಬುಕ್ಸ್ ಇದ್ರ ತೂದು ಬಿಸಾಕಿ ಕನ್ನಡ ಇಟ್ಗ” ಅಂದ. ಅಲ್ಲೊಬ್ಬ ಕೇಳ್ತಿದ್ದವನು “ಇದ್ಕ ರಾಜ್ಕುಮಾರ್ ಯಾಕ್ ಮದ್ಯಕ್ ಬಂದ?” ಅಂತ ಕೇಳಿದ.
ಎಂ. ಜವರಾಜ್‌ ಹೊಸ ಕಾದಂಬರಿ “ಪೋಸ್ಟ್‌ಮ್ಯಾನ್‌ ಗಂಗಣ್ಣ” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ನಮಗೊಂದು ಸೊಸೆ ಬೇಕು: ಕೆ. ಸತ್ಯನಾರಾಯಣ ಹೊಸ ಕಾದಂಬರಿಯ ಆಯ್ದ ಭಾಗ

ಸತೀಶ ದುರ್ದಾನ ತೆಗೆದುಕೊಂಡವನಂತೆ ರೂಮಿಗೆ ಹೋಗಿ ಬಾಗಿಲನ್ನು ಪಟಾರನೆ ಹಾಕಿಕೊಂಡ. ಹಾಲ್‌ನಲ್ಲೇ ಉಳಿದಿದ್ದ ಮೂರ್ತಿ-ಅನಿತಾ ಕೂಡ ಕಾಲೆಳೆದುಕೊಂಡು ರೂಮಿಗೆ ಹೋದರು. ಇಬ್ಬರೂ ಮಂಚದ ಮೇಲೆ ನೀಟಾಗಿ ಹಾಸಿದ್ದ ಹಾಸಿಗೆಯ ಮೇಲೆ ಕುಳಿತುಕೊಂಡು ಒಬ್ಬರನ್ನೊಬ್ಬರು ನೋಡುತ್ತಲೇ ಇದ್ದರು. ಮಾತೇ ಹೊರಡಲಿಲ್ಲ. ಅನಿತಾ ಹತ್ತು ಸಲ ಬಚ್ಚಲು ಮನೆಗೆ ಹೋಗಿ ಬಂದರು. ಮೂರ್ತಿ ಒಂದಿಪ್ಪತ್ತು ಸಲ ಕೂದಲನ್ನು ಕಿತ್ತು ಹಾಕಿದರು. ಬಲಗೈ ಮಧ್ಯ ಬೆರಳಿನ ಉಗುರನ್ನು ಕಡಿಯುತ್ತಲೇ ಇದ್ದರು. ದೀಪ ಆರಿಸಿ ಮಲಗಲು ಇಬ್ಬರಿಗೂ ಭಯವಾಯಿತು. ಬಲ್ಬ್‌ ಪ್ರತಿದಿವಸವೂ ಹೊರಡಿಸುವುದಕ್ಕಿಂತ ಹೆಚ್ಚಿನ ಕಾಂತಿಯನ್ನು ಹೊರಡಿಸುತ್ತಿದೆ ಅನಿಸಿತು.
ಕೆ. ಸತ್ಯನಾರಾಯಣ ಹೊಸ ಕಾದಂಬರಿ “ನಮಗೊಂದು ಸೊಸೆ ಬೇಕು” ಕೃತಿಯ ಆಯ್ದ ಭಾಗ

Read More

ಬಿಸಿಲಿನ ತುಣುಕುಗಳಿಗೆ ಒಂದ್ ಪತ್ರ ಬರೆದು…..: ದೇವರಾಜ್‌ ಹುಣಸಿಕಟ್ಟಿ ಬರಹ

ಈ ಲೋಕದ ಹಂಗುಗಳು, ದರ್ದುಗಳು ಇರ್ಶೆಯನ್ನೇ ಹಾಸಿ ಹೊದ್ದು ಮಲಗಿವೆ. ಪ್ರೇಮಿಗಳ ಲೆಕ್ಕದಲ್ಲಂತು ಥೇಟ್ ರಾಕ್ಷಸಿ ಸೊರೂಪ… ಇಡೀ ಇತಿಹಾಸದುದ್ದಕ್ಕೂ ಇದು ದಿಟವಾಗಿದೆ… ಇಲ್ಲಾ ಅಂದ್ರೆ ರೋಮಿಯೋ ಜೂಲಿಯಟ್, ಮಮತಾಜ್ ಷಹ ಜಹಾನ್ ಇನ್ನೂ ಅದೆಷ್ಟೋ ಕಥನಗಳು ರೂಪ ಪಡೆದಿರುತ್ತಿರಲಿಲ್ಲ…
ಅಮೃತಾ ಪ್ರೀತಮ್ ಒಂದಷ್ಟು ಕವಿತೆಗಳನ್ನು “ಬಿಸಿಲಿನ ಅದೆಷ್ಟೋ ತುಣುಕುಗಳು” ಎಂಬ ಸಂಕಲನದಡಿ ರಶ್ಮಿ ಎಸ್ ಕನ್ನಡಕ್ಕೆ ಅನುವಾದಿಸಿದ್ದು, ಈ ಸಂಕಲನದ ಕುರಿತು ದೇವರಾಜ್ ಹುಣಸಿಕಟ್ಟಿ ಬರಹ

Read More

ಕರ್ವಾಲೋ ಮರು ಓದು, ಒಂದು ಧ್ಯಾನ: ದೇವಿಕಾ ನಾಗೇಶ್‌ ಬರಹ

ಇರುವೆಯಿಂದ ರಕ್ಷಿಸಿಕೊಳ್ಳಲು ಆ ಪ್ರಾಣಿ ಇದ್ದಕ್ಕಿದ್ದಂತೆ ಪಕ್ಕದ ದೊಡ್ಡ ಮರಕ್ಕೆ ಹಾರಿ ಮರ ಕೂತು ತನ್ನ ದೇಹಕ್ಕೆ ಅಂಟಿಕೊಂಡಿದ್ದ ಕೆಂಪಿರುವೆಗಳನ್ನು ತಿನ್ನತೊಡಗಿತು. ಇದು ಕಂಡು ಆಶ್ಚರ್ಯ ಚಕಿತರಾದ ಲೇಖಕರು ಹಾರೋ ಓತಿಕ್ಯಾತ ಇದು ಎಂದು ಖಾತ್ರಿಯಾದ ಖುಷಿಯಲ್ಲಿ ತನ್ನ ತಂಡದವರನ್ನು ಕೂಗಿ ಕರೆದರು. ಆದರೆ ಹಾರುವ ಓತಿಕ್ಯಾತ ಇದ್ದಲ್ಲಿ ನಿಲ್ಲುತ್ತದೆಯೇ? ಲೇಖಕರು ಅದನ್ನೇ ತದೇಕ ಚಿತ್ತರಾಗಿ ಕಣ್ಣಲ್ಲೇ ಹಿಂಬಾಲಿಸುತ್ತ ತಾವು ಕಂಡ ಈ ಅದ್ಭುತ ಸರೀಸೃಪವನ್ನು ತನ್ನ ತಂಡದವರಿಗೆ ಪರಿಚಯಿಸುವ ಆತುರದಲ್ಲಿದ್ದರು…
ಪೂರ್ಣಚಂದ್ರ ತೇಜಸ್ವಿಯವರ ಪ್ರಮುಖ ಕಾದಂಬರಿ “ಕರ್ವಾಲೋ”ದ ಮರು ಓದು, ದೇವಿಕಾ ನಾಗೇಶ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ