Advertisement

Category: ದಿನದ ಪುಸ್ತಕ

ನುಡಿ ರಂಗವಲ್ಲಿ: ಶ್ರುತಿ ಬಿ.ಆರ್.‌ ಕಥಾಸಂಕಲನಕ್ಕೆ ಡಾ. ರಾಜೇಂದ್ರ ಚೆನ್ನಿ ಮುನ್ನುಡಿ

‘ಎಲ್ಲೆಗಳ ದಾಟಿದವಳು’ ಯಶಸ್ವಿಯಾದ ಕತೆಯಾಗಿದೆ. ಕತೆಯ ಪ್ರವೇಶದ ಭಾಗವು ಅಜ್ಜಿ ಮತ್ತು ಮೊಮ್ಮಗಳ ಪ್ರೀತಿ ಹಾಗೂ ತುಂಟತನದ ಸಂಬಂಧವನ್ನು ಕತೆಯ ಅರ್ಥಪೂರ್ಣ ಭಾಗವನ್ನಾಗಿಸುತ್ತದೆ. ಏಕೆಂದರೆ ಕತೆಯ ಮುಖ್ಯ ಭಾಗವನ್ನು ನಿರೂಪಿಸುವ ಅಜ್ಜಿ ಕೂಡ ಎಲ್ಲೆಗಳ ದಾಟದವಳು. ತನ್ನ ಸ್ವಂತ ವ್ಯಕ್ತಿತ್ವ, ಸ್ವಾತಂತ್ರ್ಯಗಳನ್ನು ಬಿಟ್ಟುಕೊಡಲು ಸಿದ್ಧವಿಲ್ಲದ ಹಟಮಾರಿ, ಹಾಗೆ ನೋಡಿದರೆ ಗಂಡಾಳ್ವಿಕೆ, ಕುಟುಂಬದೊಳಗಿನ ಕ್ರೌರ್ಯ ಇವೆಲ್ಲವುಗಳ ನಿರಂತರತೆಯ ನಡುವೆ ಹೆಣ್ಣು ಕೇವಲ ಗುಲಾಮಳಲ್ಲವೆನ್ನುವುದನ್ನು ಕತೆಯು ಪ್ರತಿಪಾದಿಸುತ್ತದೆ.
ಶ್ರುತಿ ಬಿ.ಆರ್.‌ ಕಥಾಸಂಕಲನ “ಎಲ್ಲೆಗಳ ದಾಟಿದವಳು” ಕೃತಿಗೆ ಡಾ. ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ ಇಲ್ಲಿದೆ

Read More

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ ಪತ್ರವಿದೆಯಲ್ಲ ಅದು ಒಬ್ಬ ಆದರ್ಶ ತಂದೆ ತನ್ನ ಮಗಳ ಕುರಿತ ಅಪರಿಮಿತ ಅಪ್ಯಾಯತೆ ಮತ್ತು ಕಾಳಜಿಯಿಂದ ಮಾಡಿದ ಕೆಲಸವೆಂದೇ ನನ್ನ ದೃಢಭಾವನೆ. ಈ ಪತ್ರಗಳು ಒಮ್ಮೊಮ್ಮೆ ಖಂಡಕಾವ್ಯದಂತೆಯೂ ಭಾಸವಾಗಿದ್ದು ನನಗೆ ಆಶ್ಚರ್ಯ ಹುಟ್ಟಿಸಿದೆ.
ಎಂಕೆ ಗಾಂಧಿ ರಚಿತ “ಪ್ರಿಯ ಮೀರಾ” ಬಾಪು ಮಗಳಿಗೆ ಬರೆದ ಪ್ರೇಮ ಪತ್ರಗಳನ್ನು ಮಂಜುನಾಥ್‌ ಚಾಂದ್‌ ಕನ್ನಡಕ್ಕೆ ತಂದಿದ್ದು ಈ ಕೃತಿಯ ಕುರಿತು ದೀಪಾ ಗೋನಾಳ ಬರಹ

Read More

ಸಂರಚನೆಯಲ್ಲಿ ಹೊಸತನ ಹುಡುಕುವ ಕಥೆಗಳು: ಎನ್.ಎಸ್.ಶ್ರೀಧರ ಮೂರ್ತಿ ಬರಹ

‘ಅಂತರ್ಗತ’ ದಲ್ಲಿ ಕಥೆಯಲ್ಲಿದ್ದಾತ ಎದುರಿಗೂ ಬರುತ್ತಾನೆ, ಚಿತ್ತಾಲರ ಕಥೆಯಂತೆ ಸೃಜನಶೀಲತೆಯ ನೆಲೆಗಳನ್ನು ಪರಿವೀಕ್ಷಿಸುವ ಇದು ಆ ಮೂಲಕ ಬದುಕಿನ ಮೂಲ ಆತಂಕಗಳನ್ನೂ ಗುರುತಿಸುತ್ತದೆ. ‘ತಾರೆ’ಕತೆಯಲ್ಲಿ ಕೂಡ ಇಂತಹ ಸೂಕ್ಷ್ಮಗಳನ್ನು ಗಮನಿಸ ಬಹುದು. ಅಜಿತ್ ಅವರ ಕಥನದ ಹಿರಿಮೆಯೆಂದರೆ ಅವರಿಗೆ ಓದುಗರ ಗ್ರಹಿಕೆಯ ಕುರಿತು ಇರುವ ನಂಬಿಕೆ. ಕಥನದ ಹಲವು ನೆಲೆಗಳನ್ನು ಅವರು ಮುಕ್ತವಾಗಿರಿಸಿ ಅವು ಓದುಗರ ಮನೋಭೂಮಿಕೆಯಲ್ಲಿ ಬೆಳೆಯಲು ಬಿಡುತ್ತಾರೆ. ‘ತುಂಬೀತೆ ಒಲವು’ ಈ ನೆಲೆಯಲ್ಲಿ ಬಹು ಯಶಸ್ವಿಯಾದ ಕಥೆ.
ಡಾ. ಅಜಿತ್‌ ಹರೀಶಿ ಹೊಸ ಕಥಾ ಸಂಕಲನ “ಉಪರಿ”ಯ ಕುರಿತು ಎನ್.ಎಸ್.ಶ್ರೀಧರ ಮೂರ್ತಿ ಬರಹ

Read More

ಪೌರಾಣಿಕ ಚೌಕಟ್ಟಿನಲ್ಲಿ ವರ್ತಮಾನದ ಕರ್ಣನನ್ನು ದರ್ಶಿಸಿದ ಕಾದಂಬರಿ ‘ಕವಚ’: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

‘ಕವಚ’ ಕಾದಂಬರಿಯು ಸಮಕಾಲೀನ ಬದುಕಿಗೆ ಅನ್ವಯವಾಗಬಲ್ಲ ಅನೇಕ ಸಂಗತಿಗಳನ್ನು ಪ್ರಸ್ತಾಪಿಸಿದೆ. ಗುರು ಪರಶುರಾಮರು ಅಸ್ತ್ರಗಳ ಪ್ರಯೋಗಕ್ಕೆ ಸಂಬಂಧಪಟ್ಟಂತೆ ಬೋಧನೆಯನ್ನು ನೀಡುವ ಸಂದರ್ಭದಲ್ಲಿ, ಆಕ್ರಮಣಗಳು ಸ್ವ-ರಕ್ಷಣೆಗಾಗಿಯೇ ಹೊರತು ಆಕ್ರಮಣಕ್ಕಲ್ಲ. ದುರ್ಗುಣಗಳಿಗೆ ಈಡಾದರೆ ಸಿದ್ಧಿಯಾದ ಮಂತ್ರಾಸ್ತ್ರಗಳೂ ಪ್ರಯೋಜನಕ್ಕೆ ಬರುವುದಿಲ್ಲ ಮೊದಲಾದ ವಿಚಾರಗಳನ್ನು ತಿಳಿಸಿಕೊಡುತ್ತಾರೆ. ಅರ್ಜುನನ ಚಾಪವಿದ್ಯಾ ಚಾತುರ್ಯದ ಸಮಯದಲ್ಲಿ ಕರ್ಣ ಅರ್ಜುನನ ವಿರುದ್ಧ ಹೋರಾಡಲು ನಿರ್ಧರಿಸಿದಾಗ ಜನರಿಗೆ ಅವನ ಬೆಂಬಲ ದೊರಕುತ್ತದೆ.
ರಾಧಾಕೃಷ್ಣ ಕಲ್ಚಾರ್ ಬರೆದ “ಕವಚ” ಕಾದಂಬರಿಯ ಕುರಿತು ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರಹ

Read More

ಜರ್ಮನಿಯಿಂದ ಕನ್ನಡಕ್ಕೆ ಬಂದ ‘ಈಡಾ’

ಕ್ಷಣ ಮೌನ. ಉರ್ಸುಲಾಳ ಜೊತೆ ಮಾತನಾಡದೆಯೇ ಹಾಯಾಗಿ ಕುಳಿತಿರಬಹುದು. ಅವಳು ಪೆದ್ದುಪೆದ್ದಾಗಿ ಏನೇನೋ ಪ್ರಶ್ನೆಗಳನ್ನು ಕೇಳುವುದಿಲ್ಲ. ತನ್ನ ಮೇಲೆ ಹುಡುಗನೊಬ್ಬ ಬಂದೆರಗಿದ ಘನವಾದ ವಿಷಯವನ್ನು ಹಂಚಿಕೊಳ್ಳಲು ಮಾತ್ರ ಬಾಯಿ ತೆರೆಯುವಳು. ಕೆಲವೊಮ್ಮೆ ನಾವಿಬ್ಬರೂ ಒಂದೇ ಬೆಂಚಿನ ಮೇಲೆ ಪಕ್ಕಪಕ್ಕದಲ್ಲೇ ಸುಮಾರು ಹೊತ್ತು ಕುಳಿತು ಒಂದೇ ಒಂದು ಶಬ್ದವನ್ನೂ ಉಸುರದೆ ಹೋದಂತಹ ದಿನಗಳಿವೆ. ನೀರಿನಿಂದ ಹೊರಬಂದು ಕಣ್ಣುಗಳನ್ನು ಮುಚ್ಚಿಕೊಂಡು ಬಿಸಿಲಿನ ಶಾಖಕ್ಕೆ ಮೌನವಾಗಿ ಮೈಯೊಡ್ಡಿ ಕುಳಿತಂತಹ ದಿನಗಳಿವೆ.
ಜರ್ಮನಿಯ ಕಾರೊಲೀನ ವಾಲ್‌ ಬರೆದ ‘22 ಬಾನೆನ್‌ʼ ಕಾದಂಬರಿಯನ್ನು ಹರ್ಷ ರಘುರಾಮ್‌ ಜರ್ಮನ್‌ ಭಾಷೆಯಿಂದ ನೇರವಾಗಿ ಕನ್ನಡಕ್ಕೆ ಅನುವಾದಿಸಿದ್ದು, ಈ ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ