Advertisement

Category: ದಿನದ ಪುಸ್ತಕ

ನಡು ಮಧ್ಯಾಹ್ನದ ಕಣ್ಣಿನ ಕಾವ್ಯ…: ವಿ.ಚಂದ್ರಶೇಖರ ನಂಗಲಿ ಬರಹ

‘ಅಡುಗೆಯಾಟದ ಹುಡುಗಿ’ ಬಾಲ್ಯದ ಅಡುಗೆಯಾಟವೇ ಕ್ರಮೇಣ ಆ ಹುಡುಗಿಯ ಜೀವನಶೈಲಿಯಾಗಿ ಬದಲಾಗುವ ಮತ್ತು ವ್ಯಕ್ತಿತ್ವ ವಿಕಸನದ ಅವಕಾಶಗಳು ಮುಚ್ಚಿಹೋಗುವ ಬಗೆಯೊಂದು ಅನಾವರಣಗೊಳ್ಳುತ್ತಾ , ಕಡೆಗೆ ಅಮ್ಮನಿಂದ ಮಗಳಿಗೆ ಹಸ್ತಾಂತರವಾಗುವ “ಚುಚ್ಚುಗ”ವು ಬರಿಯ ಅಡುಗೆಯ ಆಯುಧವಾಗಿ ಉಳಿಯದೆ, ಹೆಣ್ಣಿನ ಪಾಲಿಗೆ ಪುರುಷ ಪ್ರಧಾನ ಸಮಾಜದ “ಚುಚ್ಚುಗ”ವಾಗುವ ರೂಪಕ ಆಗಿಬಿಡುತ್ತದೆ.
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕುರಿತು ಡಾ. ವಿ.ಚಂದ್ರಶೇಖರ ನಂಗಲಿ ಬರಹ

Read More

ತಾರಿದಂಡೆ – ಕಳೆದು ಹೋದ ಬದುಕಿನ ಸುಂದರ ಯಾನ: ಶ್ವೇತಾ ಹೊಸಬಾಳೆ ಬರಹ

ಈ ಮುತ್ತಿನಂಥಾ ಮಾತುಗಳ ಸರಣಿ ಮುಂದಿನ ಬರಹದಲ್ಲೂ ಮಾಲೆಯಾಗಿ ನಾಲ್ಕು ಸಾಲು ಗೀಚಿಯೋ, ಫೇಸ್ಬುಕ್, ವಾಟ್ಸ್ ಅಪ್‌ಗಳ ಸ್ಟೇಟಸ್‌ಗಳಲ್ಲಿ ಬರುವ ಕವನಗಳನ್ನೋದಿಕೊಂಡು ಬೀಗುವವರ ಕಿವಿಹಿಂಡಿದೆ. “ಕವಿತೆ ಒಂದು ಜೀವನ ದೃಷ್ಟಿ, ಎಷ್ಟೆಲ್ಲಾ ಸಂವೇದನಾಶೀಲರ ಪ್ರಜ್ಞಾ ಪ್ರವಾಹದ ಮನೋಸಂಗಮದಿಂದ ಅರಳುವ ಜೀವನ ಕಲೆ” ಎನ್ನುತ್ತಾ ಪರಂಪರೆಯನ್ನು ಅರಿತಿರುವುದರ ಜೊತೆಗೆ ಕವಿತಾರಚನೆಗೆ ಆಳವಾದ ಧ್ಯಾನ ಅಧ್ಯಯನದ ಅಗತ್ಯವಿದೆ ಎನ್ನುವದನ್ನು ಹೇಳುತ್ತದೆ. ಅವರ ಪುಟ್ಟ ಪುಟ್ಟ ವಾಕ್ಯಗಳನ್ನು ಓದುವುದೇ ಖುಷಿ.
ಜಯಂತ ಕಾಯ್ಕಿಣಿಯವರ “ತಾರಿದಂಡೆ” ಕೃತಿಯ ಕುರಿತು ಶ್ವೇತಾ ಹೊಸಬಾಳೆ ಬರಹ

Read More

ಓದಿನ ಧ್ಯಾನದ ನಂತರವೂ ಕಾಡುವ ಕತೆಗಳು: ಮಾರುತಿ ಗೋಪಿಕುಂಟೆ ಬರಹ

ಅರ್ಧ ನೇಯ್ದಿಟ್ಟ ಸ್ವೆಟರ್ ಯೋಧನ ಕುಟುಂಬದ ಬದುಕಿನ ಅನಾವರಣ. ಇಲ್ಲಿ ಮಹಿಳೆಯೊಬ್ಬಳ ಮಾನಸಿಕ ತುಮುಲಗಳ ಸಾಮಾಜಿಕ ಬೇಕು ಬೇಡಗಳ ಒಳಗೊಳ್ಳುವಿಕೆ ಮತ್ತು ಅದನ್ನು ಮೀರುವ ಆಕೆಯ ಕನಸು ಹರಿಯನ್ನು ಕಾಣುವ ತವಕದೊಂದಿಗೆ ಮೂರ್ತರೂಪ ಪಡೆದು ನಮ್ಮನ್ನು ಚಿಂತಿಸುವಂತೆ ಮಾಡುತ್ತದೆ.
ಸದಾಶಿವ ಸೊರಟೂರು ಅವರ ಕಥಾ ಸಂಕಲನ “ಧ್ಯಾನಕ್ಕೆ ಕೂತ ನದಿ”ಯ ಕುರಿತು ಮಾರುತಿ ಗೋಪಿಕುಂಟೆ ಬರಹ

Read More

ಪೆಣ್ಣೆತ್ತ ಖುಷಿಯನು ಲೋಕಕೆ ಹಂಚಿ…: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೇ ಸಾಕೆ ಎನ್ನುವಂತೆ ಇಂತಹ ಎಷ್ಟು ಸಾಹಿತ್ಯ ರಚನೆಯಾದರೂ ಹೆಣ್ಣಿನ ಕುರಿತಾದ ಸಮಾಜದ ಮನಸ್ಥಿತಿ ಬದಲಾಯಿಸಲು ಆಗುತ್ತಿಲ್ಲ. ಎಷ್ಟೋ ಹೆಣ್ಣೆತ್ತ ತಂದೆ – ತಾಯಿಯರಿಗೆ ಹೆಣ್ಣನ್ನು ಹೆತ್ತಿದ್ದೇವೆ ಎನ್ನುವ ನೋವಿಗಿಂತಲೂ ಹೆಣ್ಣೆತ್ತವರನ್ನು ಸಮಾಧಾನ ಮಾಡುವ ಸೋಗಿನಲ್ಲಿ ಆಡುವ ಮಾತುಗಳ ನೋವೇ ಹೆಚ್ಚೆಂಬುದನ್ನು ದೇಸಾಯಿಯವರು ಬಹಳ ವಿಶೇಷವಾಗಿ ಹಾಸ್ಯ ಮಿಶ್ರಿತಗೊಳಿಸಿ ಹೇಳಿದ್ದಾರೆ.
ಗುಂಡುರಾವ್ ದೇಸಾಯಿ ಲಲಿತ ಪ್ರಬಂಧಗಳ ಕೃತಿ “ಪೆಣ್ಣೆತ್ತ ಖುಷಿಗೆ.. ಕುರಿತು ಡಾ. ತಿಮ್ಮಯ್ಯ ಶೆಟ್ಟಿ ಇಲ್ಲೂರು ಬರಹ

Read More

ನಾರಿಯೊಡಲಿನ ಬೇವು-ಬೆಲ್ಲ: ಎಂ.ಡಿ.ಚಿತ್ತರಗಿ ಬರಹ

ಒಂದೇ ಮಾದರಿಯ ಕವಿತೆಗಳ ಕಟ್ಟನ್ನು ಇಡೀ ಸಂಕಲನದುದ್ದಕ್ಕೂ ಪೋಣಿಸಿದ ಕವಯಿತ್ರಿ ಅವಸರದ ಗಾಡಿಯನೇರದೆ ನಿಧಾನಕ್ಕೆ ಚಕ್ಕಡಿ ಹತ್ತಿದವರು. ಕಾಲುಹಾದಿಯಲ್ಲಿ ಕಡಲ ಕಂಡವರು. ಅವರೇ ಹೇಳಿಕೊಂಡಂತೆ ಮೂವತ್ತು ವರ್ಷದ ಬದುಕಿನ ಅನುಸಂಧಾನದ ಪ್ರತಿಫಲವಾಗಿ, ಕಂಡುಂಡ ಅನುಭವದ ಕಡಲನ್ನೇ ಕಡೆಕಡೆದು ನಿಲ್ಲಿಸಿದ ಐವತ್ತೇಳು ಕವಿತೆಗಳ ಗುಚ್ಛವಿದು. ಸರಳವಾದ ಭಾಷೆಯಲ್ಲಿ ತೆರೆದುಕೊಳ್ಳುವ ಕವಿತೆಗಳು ಸಹಜವಾಗಿ ಓದುಗರ ಎದೆಗಿಳಿಯುತ್ತವೆ.
ಸಾವಿತ್ರಿ ಮಜುಮದಾರ ಕವನ ಸಂಕಲನ “ನಾರಿಪದ್ಯ”ದ ಕುರಿತು ಎಂ.ಡಿ. ಚಿತ್ತರಗಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ