Advertisement

Category: ದಿನದ ಪುಸ್ತಕ

ಕತ್ತಿಯಲಗಿನ ಮೇಲಿನ ನಡಿಗೆ ಒಂಟಿ ನಡಿಗೆ: ಲಲಿತಾ ಪವಾರ ಕಾದಂಬರಿಯ ಪುಟಗಳು

ಕಮಲಮ್ಮನವರಿಗೆ ಕಸಿವಿಸಿಯಾಯಿತು. ತನ್ನ ಮಗಳ ಸೌಂದರ್ಯದ ಬಗ್ಗೆ ಇಡೀ ಕಾಲೇಜು, ನಮ್ ಏರಿಯಾದವರು ಮಾತನಾಡುತ್ತಾರೆಂದರೆ ನಮ್ಮ ಮನೆಯ ಮೇಲೆ ಅವರ ಕಣ್ಣು ಬಿದ್ದಿದೆ ಎಂದೇ ಅರ್ಥ. ನಾನಂತು ಕೆಲಸಕ್ಕೆ ಹೋಗಿ ಬಿಡುತ್ತೇನೆ, ಇವನು ಹೊರಗೆ ಹೊರಟರೆ ಮನೆಯಲ್ಲಿ ಕಾವ್ಯ ಒಬ್ಬಳೇ ಉಳಿದು ಬಿಡುತ್ತಾಳೆ. ಇಂದು ಸಂಜೆ ಮಹಡಿ ಮೇಲಿದ್ದಾಗ ಎದುರುಗಡೆ ಮನೆಯ ಹುಡುಗ ಇಣುಕಿಣುಕಿ ತನ್ನ ಮನೆಯನ್ನು ದೃಷ್ಟಿಸುತ್ತಿದ್ದುದು ಕಂಡು ಬಂದಿತ್ತು.
ಲಲಿತಾ ಪವಾರ ಹೊಸ ಕಾದಂಬರಿ “ಒಂಟಿ ನಡಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ನಿಜವಾದ ಸೋದರಮಾವ: ಕೆ. ಸತ್ಯನಾರಾಯಣ ಕೃತಿಯ ಬರಹ

ಬೆಂಗಳೂರಿನಿಂದ ಗೌಹಾತಿಗೆ ಹೊರಟಿದ್ದ ರೈಲಿನಲ್ಲಿ ಒಬ್ಬ ಕನ್ನಡಿಗ ಪ್ರಯಾಣಿಕರ ಪರಿಚಯವಾಯಿತು. ಸದ್ಯದಲ್ಲೇ ಅವರು ನಿವೃತ್ತರಾಗಲಿದ್ದರು. ಬೆಂಗಳೂರಿಗೆ ಬಂದು ಬಂಧು-ಮಿತ್ರರ ಜೊತೆ ಬದುಕುತ್ತಾರೆ ಎಂಬುದು ನನ್ನ ನಿರೀಕ್ಷೆ. ಆದರೆ ಅವರು ಬೆಂಗಳೂರಿನಲ್ಲಿದ್ದ ಆಸ್ತಿಯನ್ನೆಲ್ಲ ಮಾರಿ, ಗೌಹಾತಿಯಲ್ಲೇ ಖಾಯಂ ಆಗಿ ನೆಲೆಸಲು ಹೊರಟಿದ್ದರು. ಈಗ ನಾವು ಅಲ್ಲಿ ಜೀವನ ಲಯಕ್ಕೆ ಹೊಂದುಕೊಂಡುಬಿಟ್ಟಿದ್ದೇವೆ. ನಮ್ಮ ತಂದೆ-ತಾಯಿ ಇಬ್ಬರೂ ಖಾಯಿಲೆ ಬಿದ್ದಾಗ ನಮಗಾಗಿ ಬಂದವರು ನೆಂಟರಿಷ್ಟರಲ್ಲ, ನಮ್ಮ ಕಾಲೊನಿಯ ಅಸ್ಸಾಮಿ ಬಂಧುಗಳು. ಅವರಿಗೆ ಕೃತಜ್ಞತೆ ಸಲ್ಲಿಸುವುದೆಂದರೆ, ಅವರೊಡನೆಯೇ ಮುಂದೆ ಬದುಕುವುದು ಎಂದುಬಿಟ್ಟರು.
ಕತೆಗಾರ ಕೆ. ಸತ್ಯನಾರಾಯಣ ಅವರ “ನನ್ನ ಪುಸ್ತಕಗಳ ಆತ್ಮಚರಿತ್ರೆ” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಹುಣಸೇ ಚಿಗುರು ಮತ್ತು ಸ್ತ್ರೀತ್ವ…: ದಯಾ ಗಂಗನಘಟ್ಟ ಮುನ್ನುಡಿ

ಪಿತೃ ಹಿತಾಸಕ್ತ ನಿಲುವುಗಳ ಅರಿವಿರುವ ಕತೆಗಾರ್ತಿ ಪ್ರಜ್ಞಾಪೂರ್ವಕವಾಗಿಯೇ ಅದನ್ನ ತಮ್ಮ ಕತೆಯಲ್ಲಿ ಕಟ್ಟುತ್ತಾರೆ. ಹಾಗಾಗಿಯೇ ಹೆಣ್ಣಿನ ಸಹಜ ಸತ್ವದ ಹುಡುಕಾಟವನ್ನ ಇವರ ಸ್ತ್ರೀ ಪಾತ್ರಗಳಲ್ಲಿ ಬೆದಕಬಹುದು. ಸ್ತ್ರೀತ್ವದ ನಿಲುವಿನ ಬಗ್ಗೆ ಇವರಿಗೊಂದು ಸ್ಪಷ್ಟ ನಿಲುವಿದೆ. ಅದರೊಳಗೊಂದು ಅವರದ್ದೇ ಆದ ಏಸ್ತೆಟಿಕ್ ಇದೆ. ಹೆಣ್ಣಿನ ಅಗತ್ಯ ಮತ್ತು ಆದ್ಯತೆಗಳನ್ನು ಮರು ಪ್ರಶ್ನಿಸಿಕೊಳ್ಳಬೇಕಾದ ಒತ್ತಡ ಕನ್ನಡದ ನವ್ಯ ಸಾಹಿತ್ಯದ ಕೊಡುಗೆಯಾಗಿತ್ತು. ಅದರ ಪರಿಧಿಯನ್ನು ದಾಟಿದ ಈ ಕಾಲಘಟ್ಟದಲ್ಲಿ ಇವರ ಕಥೆಗಳು ಹೆಣ್ಣಿಗೆ ಗಂಡಿನಿಂದ ಏನು ಬೇಕಾಗಿದೆ ಎಂಬ ಪ್ರಶ್ನೆಯನ್ನೂ ಸೂಕ್ಷ್ಮವಾಗಿ ಎತ್ತಿ ಉತ್ತರವನ್ನೂ ಮಿಂಚುವಂತೆ ಮಾಡುತ್ತವೆ.
ದೀಪದ ಮಲ್ಲಿ ಕಥಾಸಂಕಲನ “ಹುಣಸೇ ಚಿಗುರು”ಗೆ ಕತೆಗಾರ್ತಿ ದಯಾ ಗಂಗನಘಟ್ಟ ಬರೆದ ಮುನ್ನುಡಿ

Read More

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು ನನಗೆ ಕಾಣಿಸುತ್ತಿದೆ. ಸ್ಥಳೀಯ ಮಟ್ಟದಲ್ಲಿ ರೈತರು ಸಂಘಟಿತರಾದರೆ, ಸ್ಥಳೀಯ ಸಂಪನ್ಮೂಲವನ್ನೇ ಆದಷ್ಟೂ ಬಳಸಬೇಕೆಂಬ ಪ್ರೇರಣೆ ಅವರಲ್ಲಿ ಮೂಡಿತೆಂದರೆ, ಪ್ರಕೃತಿಯ ವಿನಿಮಯ ಪದ್ಧತಿಗಳನ್ನೂ ನಿಯಮಗಳನ್ನು ಗೌರವಿಸಿದಂತಾಗುತ್ತದೆ.
ಮಲ್ಲಿಕಾರ್ಜುನ ಹೊಸಪಾಳ್ಯ ಸಂಪಾದಿಸಿದ ವಿಜಯನಗರ ಜಿಲ್ಲೆಯ ಕೃಷಿ ಕಥನಗಳ “ಹಸಿರು ಮಾತುಕತೆ” ಕೃತಿಗೆ ನಾಗೇಶ ಹೆಗಡೆಯವರು ಬರೆದ ಮಾತುಗಳು

Read More

ಬಾಳ ನೌಕೆಯ ತಲ್ಲಣಗಳಿಗೆ ಬೆಳಕಿನ ದೀಪ: ಅನುಸೂಯ ಯತೀಶ್ ಬರಹ

ಕವಿ ಇಲ್ಲಿನ ಕವಿತೆಗಳನ್ನು ದೀರ್ಘವಾಗಿ ಬೆಳೆಸುತ್ತಾ ಹೋಗಿದ್ದಾರೆ ಎನ್ನುವುದಕ್ಕಿಂತ ಕವಿಯ ಧ್ಯಾನಸ್ಥ ಸ್ಥಿತಿ ಕವಿಯ ಪ್ರಜ್ಞಾಪೂರ್ವಕತೆಯನ್ನು ಮೀರಿ ಕವಿತೆಗಳನ್ನು ವಿಸ್ತಾರಗೊಳಿಸಿದೆ. ಸುಮಾರು ಮೂರು ಪುಟಗಳವರೆಗೂ ಚಾಚಿಕೊಂಡಿರುವ ಕವಿತೆಗಳ ಭಾವದೊನಲು ಎಲ್ಲೂ ಏಕತಾನತೆಗೆ ಎಡತಾಕುವುದಿಲ್ಲ. ತಾಜಾತನದ ರೂಪಕಗಳು, ಪ್ರತಿಮೆಗಳು ಕವಿತೆಗಳಿಗೆ ಗಟ್ಟಿತನ ತುಂಬಿ ಆಪ್ತತೆ ಕಾಯ್ದುಕೊಂಡಿವೆ. ಓದಿನ ಪ್ರೀತಿ ಗುಕ್ಕಿಗೂ ಬೇರೆ ಬೇರೆಯದೆ ಅರ್ಥ ಧ್ವನಿಸುವ ಕವಿತೆಗಳು ಚಿರಾಯುವಾಗಲು ಪ್ರಯತ್ನಿಸುತ್ತವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನದ ಕುರಿತು ಅನುಸೂಯ ಯತೀಶ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ