Advertisement

Category: ದಿನದ ಪುಸ್ತಕ

ಲಂಡನ್‌ ಮತ್ತು ಟಿಪ್ಪೂ ಸುಲ್ತಾನ್: ಜೆ. ಬಾಲಕೃಷ್ಣ ಬರಹ

ಬ್ರಿಟಿಷರಿಗೆ ಆ `ವ್ಯಾಘ್ರಸ್ವಪ್ನ’ ಎಷ್ಟು ನಿದ್ರೆ ಕೆಡಿಸಿತ್ತೆಂದರೆ ಅವರು ಆ ಸಿಟ್ಟನ್ನು ಕಾಡಿನಲ್ಲಿನ ನಿಜವಾದ ಹುಲಿಗಳನ್ನು ಕೊಂದು ಅವುಗಳ ಮೇಲೆ ಕಾಲನ್ನಿಟ್ಟು ಫೋಟೊ ತೆಗೆಸಿಕೊಂಡು ಗರ್ವದಿಂದ ಬೀಗುತ್ತಿದ್ದರು. ಟಿಪ್ಪು ಹುಲಿಯೊಂದಿಗೆ ಸೆಣಸುತ್ತಿರುವ ಹಲವಾರು ಚಿತ್ರಗಳು ಟಿಪ್ಪೂನ ಕಾಲದ ನಂತರ ರಚಿತವಾಗಿವೆ. ಟಿಪ್ಪೂ ನಿಜವಾಗಿ ಹುಲಿಯೊಂದಿಗೆ ಸೆಣಸಿದ ದಾಖಲೆಗಳಿಲ್ಲವೆನ್ನುತ್ತಾರೆ ಚರಿತ್ರಕಾರರು. ಆದರೆ, ಟಿಪ್ಪೂನ ಕಾಲದ್ದೇ ಆದ ದಂತ ಕತೆಯೊಂದರಲ್ಲಿ ಹೈದರಾಲಿ ಟಿಪ್ಪೂನನ್ನು ಹೈದರಾಬಾದ್‌ಗೆ ಒಪ್ಪಂದವೊಂದರೆ ವಿಚಾರಕ್ಕೆ ಕಳುಹಿಸಿದ್ದಾಗ ಅಲ್ಲಿನ ಕಾಡೊಂದರಲ್ಲಿ ಹುಲಿಯೊಂದನ್ನು ಎದುರಿಸಿದ್ದನಂತೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ

Read More

ಐವತ್ತು ಪದ್ಯ, ಮೂವತ್ತಮೂರು ವರ್ಷ…: ದೀಪಾ ಗೋನಾಳ ಬರಹ

ಹೀಗೆ ತೇಲಿ ಹೋದ ಮತ್ತು ಕವಿತೆಯಾಗಿ ಉಳಿದು ಹೋದ ಜೀವ ಕೆತ್ತಿದ ಮೆತ್ತನೆ ಪದಗಳು ಬದುಕನ್ನ ಅವನು ಪಳಗಿಸ ಹೊರಟ ದಾರಿ ನಡುವೆ ನಿಂತು ನಕ್ಕ ದಾರಿಗಲ್ಲು. ಆ ಕಲ್ಲಿಗೂ ಕರುಳುಂಟು ಎನ್ನುವ ಅವನೊಳಗಿನ ಜೀವನಪ್ರೀತಿ. ಕವಿ ತಾನು ಇಲ್ಲದಾಗ ನಾವು ಅವನ ಮನೆಗೆ ಹೋದ್ರೆ ಏನು ಮಾಡಬೇಕು ಅಂತ ಹೇಳಿದ್ದಾನೆ, ಹೇಳಿ ಹೋಗಿದ್ದಾನೆ. ಅವನು ಇದನ್ನೆಲ್ಲ ಯಾಕೆ ಮೊದಲೇ ಇಷ್ಟು ನಿಖರವಾಗಿ ಹೇಳಿದ ಅನ್ನೊ ಪ್ರಶ್ನೆ ನನ್ನದು, ಆದರೆ ಅವನು ಹೇಳಿದ ಮಾತಿಗೆ ಬೆರಗೂ ಹಿಂಬಾಲಿಸೋದು ಕಂಡು ಆಶ್ಚರ್ಯವೂ..
ಎರಡು ವರ್ಷಗಳ ಹಿಂದೆ ತೀರಿಕೊಂಡ ಯುವಕವಿ ಅನಿಲ ಹುಲಮನಿ ಅವರ ಕವನ ಸಂಕಲನ “ಹೊಸ ಅಧ್ಯಾಯ”ವನ್ನು ಧಾರವಾಡದ ಕ್ರಾಂತಿ ಪ್ರಕಾಶನ ಪ್ರಕಟಿಸಿದ್ದು, ಈ ಸಂಕಲನದ ಕುರಿತು ದೀಪಾ ಗೋನಾಳ ಬರಹ

Read More

ಕೊನಾರ್ಕ್‌ನ ಮಿಥುನ ಶಿಲ್ಪಗಳು: ಡಾ. ಜೆ. ಬಾಲಕೃಷ್ಣ ಬರಹ

ಒರಿಸ್ಸಾದ ದೇವಾಲಯಗಳ ಹೊರಭಾಗದಲ್ಲಿ ಯಥೇಚ್ಛವಾಗಿ ಶಿಲ್ಪಕಲೆ ಇರುವಂತೆ ಅದಕ್ಕೆ ತದ್ವಿರುದ್ಧವಾಗಿ ದೇವಾಲಯಗಳ ಒಳಭಾಗ ಭಣ ಭಣಗುಟ್ಟುವಂತೆ ಖಾಲಿಯಾಗಿರುತ್ತದೆ. ಇದನ್ನು ಗಮನಿಸಿದ ಖ್ಯಾತ ಕಲೆ-ಸಂಸ್ಕೃತಿಯ ವಿದ್ವಾಂಸ ಆನಂದ ಕೂಮಾರಸ್ವಾಮಿ, `ಬದುಕೆಂಬುದು ಒಂದು ಮಾಯಾ ಪರದೆ ಇದ್ದಂತೆ. ಅದರ ಹಿಂಭಾಗದಲ್ಲಿ ದೇವರಿದ್ದಾನೆ. ದೇವಾಲಯದ ಹೊರಭಾಗದಲ್ಲಿ ನಮ್ಮ ಬದುಕಿನ, ಸಂಸಾರದ ಚಿತ್ರಣವಿರುತ್ತದೆ. ಅಲ್ಲಿನ ಕೆತ್ತನೆ, ಚಿತ್ರಣಗಳು ಬದುಕೆಂಬ ಮಾಯಾಲೋಕವನ್ನೂ, ಹುಟ್ಟು-ಸಾವುಗಳ ಬದುಕಿನ ಚಕ್ರಕ್ಕೆ ಮನುಷ್ಯನನ್ನು ಬಂಧಿಸಿರುವ ಆತನ ಆಸೆ ಆಕಾಂಕ್ಷೆಗಳನ್ನೂ, ನೋವು ನಲಿವುಗಳನ್ನೂ ಪ್ರತಿಬಿಂಬಿಸುತ್ತವೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ

Read More

ಪಪ್ಪುನಾಯಿ ಮತ್ತು ದೆಯ್ಯದ ಚಪ್ಪಲಿ: ವಿಜಯಶ್ರೀ ಹಾಲಾಡಿ ಪ್ರಬಂಧ

ಮಲೆನಾಡು, ಕರಾವಳಿ ಭಾಗದ ಹಳ್ಳಿಯ ಮನೆ ಮನೆಗಳಲ್ಲಿ ನಾಯಿಗಳಿರುವುದು ಕಡ್ಡಾಯ. ಕಾಡು, ಹಾಡಿ, ಗುಡ್ಡ, ಬಯಲುಗಳ ನಡುವೆ ಫರ್ಲಾಂಗುಗಳ ಅಂತರದಲ್ಲಿ ಅವಿತುಕೊಂಡಿರುವ ಮನೆಗಳ ರಕ್ಷಣೆಗೆ, ಜೀವಂತಿಕೆಗೆ ನಾಯಿಗಳು ಅನಿವಾರ್ಯ. ಕಳ್ಳಕಾಕರು, ಜೀವಾದಿಗಳು, ದೆವ್ವ-ಭೂತ-ಪೀಡೆ-ಕುಲೆಗಳನ್ನು ಕೂಡಾ ನಾಯಿಗಳು ದೂರವಿಡುತ್ತವೆಂಬ ನಂಬಿಕೆಯಿದೆ! ಮನುಷ್ಯರ ಕಣ್ಣಿಗೆ ಕಾಣದ ದೆವ್ವ ಭೂತಗಳು ನಾಯಿಗಳಿಗೆ ಕಾಣುತ್ತವಂತೆ, ಇದರಿಂದಾಗಿಯೇ ಅವು ರಾತ್ರಿಯಿಡೀ ಬೊಗಳುವುದಂತೆ! ನಮ್ಮ ಹಳ್ಳಿಯವರ ಈ ತರದ ಕಲ್ಪನೆಗಳಿಗೆ ಯಾವುದೇ ಆಧಾರವಿಲ್ಲವಾದರೂ ಇಂತವುಗಳನ್ನು ಕೇಳುವುದು ರೋಮಾಂಚನಕಾರಿಯಾಗಿತ್ತು.
ವಿಜಯಶ್ರೀ ಹಾಲಾಡಿ ಹೊಸ ಪ್ರಬಂಧ ಸಂಕಲನ “ಕಣ್ಣ ಕಾಡಿದ ಹಾಡು” ಒಂದು ಪ್ರಬಂಧ ನಿಮ್ಮ ಓದಿಗೆ

Read More

ಭುವನೇಶ್ವರದ ಭವ್ಯ ಲಿಂಗರಾಜ ದೇವಾಲಯ: ಡಾ. ಜೆ. ಬಾಲಕೃಷ್ಣ ಬರಹ

ಭುವನೇಶ್ವರದಲ್ಲಿ 500ಕ್ಕೂ ಹೆಚ್ಚು ದೇವಾಲಯಗಳಿದ್ದರೂ ಸಹ ಅವುಗಳಲ್ಲಿ ಲಿಂಗರಾಜ ದೇವಾಲಯ ವಾಸ್ತುಶೈಲಿಯ ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿದೆ. ಒರಿಸ್ಸಾದಲ್ಲಿ ನಿರ್ಮಿತವಾಗಿರುವ ಮೊಟ್ಟಮೊದಲ ಅತಿ ದೊಡ್ಡ ದೇವಾಲಯವಾಗಿರುವುದಲ್ಲದೆ, ಒರಿಸ್ಸಾದ ಶೈವ ದೇವಾಲಯಗಳಲ್ಲಿಯೇ ದೊಡ್ಡ ದೇವಾಲಯವಾಗಿರುವ ಲಿಂಗರಾಜ ದೇವಾಲಯ `ಕಳಿಂಗ ವಾಸ್ತುಶೈಲಿ’ಯ ಅತಿ ಸುಂದರ ಉದಾಹರಣೆಯಾಗಿದೆ. ಕ್ರಿ.ಶ. 6-7ನೇ ಶತಮಾನದಲ್ಲಿ ಆರಂಭವಾದ ಒರಿಸ್ಸಾ ದೇವಾಲಯಗಳ ವಾಸ್ತು ಶಿಲ್ಪ ನಿರ್ಮಾಣ 11ನೇ ಶತಮಾನದಲ್ಲಿ ಲಿಂಗರಾಜ ದೇವಾಲಯದ ನಿರ್ಮಾಣದ ಹೊತ್ತಿಗೆ ಉತ್ತುಂಗಕ್ಕೇರಿತ್ತು. ಆ ವಾಸ್ತು ನಿರ್ಮಾಣ 13ನೇ ಶತಮಾನದ ನಂತರ ಕ್ರಮೇಣ ಕಡಿಮೆಯಾಯಿತು.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಮತ್ತೊಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ