Advertisement

Category: ದಿನದ ಪುಸ್ತಕ

ಅಂಕುಡೊಂಕಿನ ಪಯಣ: ಡಾ. ಎಂ ಉಷಾ ಕಾದಂಬರಿಯ ಪುಟಗಳು

ಮೊದಲೇ ಅಸಮಧಾನಗೊಂಡಿದ್ದ ಪುಟ್ಟಮ್ಮನಿಗೆ ಮಕ್ಕಳ ಈ ಕಳ್ಳಾಟದಿಂದ ಪಿತ್ತ ನೆತ್ತಿಗೇರಿತು. ಕಂಕುಳಲ್ಲಿದ್ದ ಮಲ್ಲಿಯನ್ನು ಕೆಳಕ್ಕೆ ಕುಕ್ಕಿದವಳೆ ಸರೋಜಳ ಮೇಲೆ ಮುಗಿಬಿದ್ದಳು. ‘ಮನೆ ಕೆಲಸ ಮಾಡದು ಬುಟ್ಟು ಸೂಳೆರಂಗೆ ಅಲಂಕಾರ ಮಾಡ್ಕತಾ ಕೂತಿದಿಯಾ ಇಲ್ಲಿ? ಯಾವ ನಾಯಕಸಾನಿ ಕೊಟ್ಲೆ ಇದ್ನ ನಿಂಗೆ… ʼ ಎಂದು ಸಿಕ್ಕಸಿಕ್ಕಲ್ಲಿ ಬಡಿಯ ತೊಡಗಿದಳು. ಈ ಬಾರಿ ಗೌರಿಹಬ್ಬಕ್ಕೆಂದು ರಾಜಶೇಖರ ದಾಕ್ಷಾಯಿಣಿಗೆ ಹೊಸ ಸ್ನೋಪೌಡರ್ ಡಬ್ಬಿಗಳನ್ನು ತಂದುಕೊಟ್ಟಿದ್ದನ್ನು ಗಮನಿಸಿದ ಸರೋಜ ಚಿಕ್ಕಮ್ಮನಲ್ಲಿ ಹಳೆಯ ಡಬ್ಬಿಯನ್ನು ಕೇಳಿ ಪಡೆದಿದ್ದಳು. ಇವತ್ತು ಹಬ್ಬದ ದಿನವಾಗಿದ್ದುದು ಮತ್ತು ಕೆಲಸದಲ್ಲಿ ಮುಳುಗಿ ಹೋಗಿರುವ ಅಮ್ಮ ಗಮನಿಸುವುದಿಲ್ಲ ಎನ್ನುವ ಧೈರ್ಯದಲ್ಲಿ ಹಚ್ಚಿಕೊಂಡಿದ್ದಳು.
ಡಾ. ಎಂ. ಉಷಾ ಹೊಸ ಕಾದಂಬರಿ “ಬಾಳ ಬಟ್ಟೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

`ವ್ಯವಹಾರ ಚತುರ’ ಉಲುವಾಟು ಮಂಗಗಳು: ಡಾ. ಜೆ. ಬಾಲಕೃಷ್ಣ ಬರಹ

ಅಧ್ಯಯನದ ಮತ್ತೊಂದು ಪ್ರಮುಖ ಅಂಶವೆಂದರೆ, ಗಂಡು ಮಂಗಗಳು ಹೆಚ್ಚು ಕದಿಯುತ್ತಿದ್ದವು ಹಾಗೂ ಹದಿಹರೆಯದ ಗಂಡು ಮಂಗಗಳು ಈ ಕ್ರಿಯೆಯಲ್ಲಿ ಹೆಚ್ಚು ಪಾಲ್ಗೊಳ್ಳುತ್ತಿದ್ದವು. ವಿಜ್ಞಾನಿಗಳು ಹೇಳುವಂತೆ ಹದಿಹರೆಯದ ಮಂಗಗಳು ಹೆಚ್ಚು ಅಪಾಯಕ್ಕೆ ಒಡ್ಡಿಕೊಳ್ಳುವ ನಡವಳಿಕೆ ಹೊಂದಿರುತ್ತವೆ. ಈ ರೀತಿಯ ನಡವಳಿಕೆಯನ್ನು ಉಲುವಾಟು ಮಂಗಗಳು ಮೊದಲಿಗೆ ಹೇಗೆ ಕಲಿತವು ಎಂಬುದೇ ಅಚ್ಚರಿಯ ವಿಷಯವಾಗಿದೆ. ಬಹುಶಃ ಪ್ರಾರಂಭದಲ್ಲಿ ಮನುಷ್ಯರ ಪ್ರಭಾವವಿದ್ದರೂ ಇರಬಹುದು, ಆದರೆ ನಂತರ ಅದು ಹೇಗೆ ಒಂದು `ಸಾಂಸ್ಕೃತಿಕ ನಡವಳಿಕೆ’ಯಾಗಿ ಸಮುದಾಯದಲ್ಲಿ ಪ್ರಸಾರವಾಗಿದೆ ಎನ್ನುವುದರ ಕುರಿತು ಇನ್ನೂ ಹೆಚ್ಚಿನ ಮನೋವೈಜ್ಞಾನಿಕ ಅಧ್ಯಯನ ಅಗತ್ಯವಿದೆ ಎನ್ನುತ್ತಾರೆ ಫ್ಯಾನಿಯವರು.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಕೆಲವು ಬರಹಗಳ ಸರಣಿ ನಿಮ್ಮ ಓದಿಗೆ

Read More

ಕಾಲವೇ ಕಾಪಾಡಿ ಪೋಷಿಸಿದ ತಲೆಮಾರಿನ ಕಥೆ: ನಾರಾಯಣ ಯಾಜಿ ಬರಹ

ಕಾದಂಬರಿಯ ಪಾತ್ರಗಳು ಎರಡನೆಯ ಭಾಗದಲ್ಲಿ ಮುಖಾಮುಖಿಯಾಗುತ್ತವೆಯಾದರೂ ಅದು ತೀವ್ರತೆಗೆ ಎಡೆಮಾಡುವುದಿಲ್ಲ. ಅಲ್ಲೆಲ್ಲ ಒಂದು ಪಾತ್ರ ಸುಮ್ಮನೆ ಆ ಸ್ಥಳವನ್ನು ಬಿಟ್ಟು ದೂರಸರಿಯುತ್ತದೆ. ಚಿದಂಬರನ ಕಾಲಘಟ್ಟದಲ್ಲಿ ಅರವತ್ತರ ನಂತರದ ಸಾಮಾಜಿಕ ನಡವಳಿಕೆಯನ್ನು ಕಾಣಬಹುದು. ಮೊದಲ ಹಂತದಲ್ಲಿ ಗೋವಿಂದ ಮತ್ತು ಸವಿತಾ ದಂಪತಿಗಳ ಶ್ರಮ ಎದ್ದು ಕಾಣಿಸಿದರೆ ಎರಡನೆಯ ಭಾಗದಲ್ಲಿ ಚಿದಂಬರ ಮತ್ತು ಗಿರಿಜಾ ದಂಪತಿಗಳು ಆ ಪಾತ್ರವನ್ನು ನಿರ್ವಹಿಸಿದ್ದಾರೆ. ಇಬ್ಬರದ್ದೂ ಹೋರಾಟದ ಬದುಕು.
ರಾಜಶೇಖರ ಜೋಗಿನ್ಮನೆ ಕಾದಂಬರಿ “ಕೇಳು ಧನಂಜಯ..” ಕುರಿತು ನಾರಾಯಣ ಯಾಜಿ ಬರಹ

Read More

ಮಹಿಳಾ ಕಾವ್ಯ- ಅಲಕ್ಷಿತ ಮಹಿಳಾ ಸಾಹಿತ್ಯ ಚರಿತ್ರೆಯ ಆಕರ: ಸಬಿಹಾ ಭೂಮಿಗೌಡ

ಕವಯಿತ್ರಿಯರ ಸ್ಮೃತಿಯಲ್ಲಿ ಮತ್ತು ಅನುಭವದಲ್ಲಿ ಅಮ್ಮನ ಪಾತ್ರ, ಕಾರ್ಯ, ಲೋಕದೃಷ್ಟಿಗಳು ವಿಶಿಷ್ಟವಾಗಿವೆ. ಅಮ್ಮನನ್ನು ಅರ್ಥ ಮಾಡಿಕೊಳ್ಳಬೇಕೆಂದರೆ ಮೊದಲು ಅವಳು ಮನೆಯಿಂದ ಹೊರಹಾಕುವ ಕಸವನ್ನು ಅರ್ಥ ಮಾಡಿಕೊಳ್ಳಬೇಕು ಎನ್ನುತ್ತಾರೆ ಹಿರಿಯ ಕವಯಿತ್ರಿ! ಅಮ್ಮ ತನ್ನ ಮನೆಯ, ಮನದ, ಸಂಬಂಧದ ಯಾವ ವಸ್ತು ವಿಚಾರಗಳನ್ನೂ ಅವುಗಳಿಂದ ಪುನರ್ ಬಳಕೆ ಸಾಧ್ಯವಿಲ್ಲ ಎನಿಸುವವರೆಗೂ ಹೊರಹಾಕುವುದಿಲ್ಲ, ಅನಂತರವೇ ವಿವಿಧ ಲಕೋಟೆಗಳಲ್ಲಿ ಹಾಕಿ ಮನೆ, ಮನದಿಂದ ಹೊರ ಅಟ್ಟುತ್ತಾಳೆ ಎಂಬ ಚಿಂತನೆಯು ಹೊಸ ಒಳನೋಟವನ್ನು ನೀಡುತ್ತದೆ.
ಪ್ರೊ. ಸಬಿಹಾ ಭೂಮಿಗೌಡ ಸಂಪಾದಿಸಿದ “ಕನ್ನಡ ಮಹಿಳಾ ಕಾವ್ಯ” ಕೃತಿಗೆ ಬರೆದ ಅವರ ಮಾತುಗಳು ಇಲ್ಲಿವೆ…

Read More

ಸಹಜತೆಯ ಚೆಲುವಿನ ಕಥೆಗಳು: ಅನುಪಮಾ ಪ್ರಸಾದ್‌ ಕೃತಿಗೆ ಕೇಶವ ಮಳಗಿ ಮಾತುಗಳು

ಸಂಕಲನದ ಕಥೆಗಳು ವಿಷಯ, ವ್ಯಾಪ್ತಿ ಹಾಗೂ ಹರಹುಗಳ ದೃಷ್ಟಿಯಿಂದಲೂ ಗಮನಾರ್ಹ. ಅನುಭವದಿಂದ ಮಾಗಿದ ಕಥೆಗಾರ್ತಿಯ ಈ ಬಗೆಯ ಸೂಕ್ಷ್ಮ ಆಯ್ಕೆಯಿಂದಾಗಿ ಸಂಕಲನಕ್ಕೊಂದು ಸಹಜ ವೈವಿಧ್ಯತೆ ದೊರಕಿ ಓದುಗರು ಪ್ರತಿ ಕಥೆಯ ವಾಚನದಲ್ಲಿಯೂ ಹೊಸ ಅನುಭವವನ್ನು ಪಡೆಯಬಲ್ಲರು. ಯಾವುದೇ ಸಂವೇದನಾಶೀಲ ಲೇಖಕ ಇಂಥದ್ದನ್ನು ಸಾಧಿಸುವುದು ಗರಿಮೆಯ ಸಂಗತಿಯೇ. ಇಲ್ಲಿನ ಹದಿಮೂರು ಕಥೆಗಳು ಓದುಗರಿಗೆ ನೀಡುವ ಅನುಭವ, ಲೋಕದೃಷ್ಟಿ, ಆರ್ದ್ರತೆಯ ಸ್ಪರ್ಶದಿಂದಾಗಿ ಅವರು ನಮ್ಯವಾಗಬಲ್ಲರು. ಅರೆಚಣ ಚಿಂತಿತರಾಗಬಲ್ಲರು.
ಅನುಪಮಾ ಪ್ರಸಾದ್‌ ಕಥಾ ಸಂಕಲನ “ಚೋದ್ಯ”ಕ್ಕೆ ಕೇಶವ ಮಳಗಿ ಬರೆದ ಮಾತುಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ