Advertisement

Category: ದಿನದ ಪುಸ್ತಕ

ಹೊನ್ನೆಯ ಹಾಡಿನಂಥಾ ಆತ್ಮಕಥನ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಕರ್ನಾಟಕ ಸಂಗೀತವನ್ನು ಶಾಸ್ತ್ರೀಯವಾಗಿ ಕಲಿತು ಆಕಾಶವಾಣಿ ಗಾಯಕಿಯಾಗಿ ಭಾವಗೀತೆಯನ್ನು ಪಿ. ಕಾಳಿಂಗರಾವ್ ಅವರ ಜೊತೆಯಲ್ಲಿ ಹಾಡಿ ಪ್ರಚಾರ ನೀಡಿದ್ದು ಮೊದಲಿಗೆ ಲೀಲಾವತಿಯವರೇ. ಭಾವಗೀತೆ ಭಕ್ತಿಗೀತೆ ಕೀರ್ತನೆಗಳು ವಚನಗಳು ಗಜಲ್‌ಗಳು ಜನಪದಗೀತೆಗಳು, ರವೀಂದ್ರ ಸಂಗೀತ ಹೀಗೆ ಬೇರೆ ಭಾಷೆಯ ಇತರ ಪ್ರಾಕಾರಗಳನ್ನೂ ಕಲಿತು ಹಾಡಿರುವುದಲ್ಲದೇ ಮಕ್ಕಳ ಕತೆಗಳು ರಂಗರೂಪಕಗಳು ಎಲ್ಲಾ ರೀತಿಯಲ್ಲಿ ಅವರು ಆಕಾಶವಾಣಿಯಲ್ಲಿ ಕೆಲಸ ನಿರ್ವಹಿಸುತ್ತಲೇ ಮುಂದೆ ಆಕಾಶವಾಯ ಸಂಗೀತ ಸಂಯೋಜಕಿಯೂ ಆಗುತ್ತಾರೆ.
ಎಚ್. ಆರ್. ಲೀಲಾವತಿ ಆತ್ಮಕಥನ “ಹಾಡಾಗಿ ಹರಿದಾಳೆ” ಕೃತಿಯ ಕುರಿತು ಕೆ.ಎನ್.ಲಾವಣ್ಯ ಪ್ರಭಾ ಬರಹ

Read More

ನವಿರು ಪ್ರೇಮದ ಆಲಾಪ: ಅನಸೂಯ ಯತೀಶ್ ಬರಹ

ಇಲ್ಲಿ ನಲವತ್ತೊಂಬತ್ತು ಪುಟ್ಟ ಪುಟ್ಟ ಅಧ್ಯಾಯಗಳು ಇಡೀ ಕಾದಂಬರಿಯ ಸಾರಸತ್ವವನ್ನು ಉಣಬಡಿಸುತ್ತವೆ. ಹದವರಿತ ಭಾಷೆಯಲ್ಲಿ ಮೈನವಿರೇಳಿಸುವ ಸಂಭಾಷಣೆಗಳು ಓದುಗರಿಗೆ ಕಚಗುಳಿ ಇಡುತ್ತವೆ. ಲೇಖಕರ ಬಾಲ್ಯದ ಅನುಭವಗಳ ಒಟ್ಟು ಮೊತ್ತ ಈ ಕನಸೇ ಕಾಡು ಮಲ್ಲಿಗೆ. ಇಲ್ಲಿ ಬಹುತೇಕ ನೈಜ ಅನುಭವಗಳೆ ಕಾದಂಬರಿಯ ಜೀವ ದ್ರವ್ಯವಾಗಿದ್ದರೂ ಲೇಖಕರು ತಮ್ಮ ಬರಹದ ಸ್ವಾತಂತ್ರ್ಯವನ್ನು ಬಳಸಿಕೊಂಡು ಸಂದರ್ಭೋಚಿತವಾಗಿ ಪೂರಕ ಪಾತ್ರಗಳನ್ನ ಕಲ್ಪಿಸಿಕೊಂಡು ಆ ಕಥೆಗೆ ವಿಭಿನ್ನ ಆಯಾಮಗಳನ್ನು ಕಲ್ಪಿಸಿದ್ದಾರೆ.
ಮಧು ವೈ.ಎನ್.‌ ಕಾದಂಬರಿ “ಕನಸೇ ಕಾಡುಮಲ್ಲಿಗೆ” ಕುರಿತು ಅನಸೂಯ ಯತೀಶ್‌ ಬರಹ

Read More

‘ದಾರಿ ತಪ್ಪಿಸುವ ಗಿಡʼಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ ಮುನ್ನುಡಿ

ಆಚಾರ ಕೆಟ್ಟರೂ ಆಕಾರ ಕೆಡಬಾರದು ಅನ್ನುವ ಗಾದೆಯನ್ನು ನಾನು ಚಿಕ್ಕಂದಿನಲ್ಲಿ ಕೇಳುತ್ತಿದ್ದೆ. ಸಂಸ್ಕೃತಿ ಅನ್ನುತ್ತೇವಲ್ಲ ಅದರ ಆಕಾರ, ವ್ಯವಸ್ಥೆಗೆ ಇರುವ ಆಕಾರ ಇವು ಕೆಡದೆ ಮುಂದುವರೆಯಬೇಕು, ವರ್ತನೆ ಕೆಟ್ಟರೂ ಗೊತ್ತಾಗದ ಹಾಗೆ ಗುಟ್ಟು ಕಾಪಾಡಬೇಕು ಅನ್ನುವ ಮನೋಧರ್ಮವೇ ನಮ್ಮನ್ನು ‘ದಾರಿ ತಪ್ಪಿಸುವ ಗಿಡʼ ಆಗಿರಬಹುದು. ಈ ಆಕಾರವನ್ನು ಕಾಪಾಡಿಕೊಳ್ಳುವ ಒತ್ತಡವೇ ವ್ಯಕ್ತಿಗಳನ್ನು ದುರ್ಬಲರನ್ನಾಗಿಸಿ ರಾಜಿಗೆ ಒಲಿಯುವಂತೆ ಮಾಡುತ್ತದೆ ಅನಿಸುತ್ತದೆ. ಹಾಗೆ ನೋಡಿದರೆ ಆಳು ಕೂಗಿನ ಹಕ್ಕಿಗಿಂತ ದಾರಿ ತಪ್ಪಿಸುವ ಗಿಡ ಹೆಚ್ಚು ಅರ್ಥವ್ಯಾಪ್ತಿ ಇರುವ ರೂಪಕ.
ಕತೆಗಾರ ಸ್ವಾಮಿ ಪೊನ್ನಾಚಿ ಹೊಸ ಕಥಾ ಸಂಕಲನ “ದಾರಿ ತಪ್ಪಿಸುವ ಗಿಡ”ಕ್ಕೆ ಓ ಎಲ್‌ ನಾಗಭೂಷಣ ಸ್ವಾಮಿ ಬರೆದ ಮುನ್ನುಡಿ

Read More

ಹೆಗ್ಗೋಡಿನ ಪ್ರಾಣೇಶಾಚಾರ್ಯ, ನಾರಣಪ್ಪ: ಟಿ.ಎನ್.‌ ಸೀತಾರಾಮ್‌ ಬದುಕಿನ ಪುಟಗಳು

ಆಗ ಎನ್‌ಎಸ್‌ಡಿಯಲ್ಲಿ ಅಲ್ಕಾಜೀ ಎನ್ನುವವರು ಮುಖ್ಯಸ್ಥರಾಗದ್ದಿರು. ಶ್ರೀರಂಗರ ಕಾಗದದಿಂದಾಗಿ ಪ್ರಸನ್ನನಿಗೆ ಎನ್‌ಎಸ್‌ಡಿಯಲ್ಲಿ ಪ್ರವೇಶ ಸಿಕ್ಕಿತು. ಎನ್‌ಎಸ್‌ಡಿ ಎಂದರೆ ನ್ಯಾಷನಲ್‌ ಸ್ಕೂಲ್‌ ಆಫ್‌ ಡ್ರಾಮ. ದೆಹಲಿಯಲ್ಲಿರುವ ಅತಿ ಪ್ರತಿಷ್ಠಿತ ನಾಟಕ ಕಲಿಸುವ ಶಾಲೆ. ಅದಕ್ಕೆ ಸೀಟುಗಳು ಬಹಳ ಕಡಿಮೆ ಇರುತ್ತದ್ದಿವು. ಇಡಿಯ ಭಾರತಕ್ಕೆ 8-10 ಸೀಟುಗಳು ಮಾತ್ರ ಇರುತ್ತದ್ದಿವು. ನಮ್ಮ ಈಗಿನ ಕಾಲದ ಅನೇಕ ಹೊಸ ಬಗೆಯ ಚಿತ್ರಗಳನ್ನು ಮಾಡುವ ನಿರ್ದೇಶಕರು ಮತ್ತು ನಟರು ಅಲ್ಲಿಂದಲೇ ಬಂದವರು. ಈಗ ಎನ್‌ಎಸ್‌ಡಿಯ ಬ್ರಾಂಚ್‌ಗಳು ದೇಶದ ನಾನಾ ಕಡೆ ಇವೆ. ಬೆಂಗಳೂರಿನಲ್ಲೂ ಒಂದಿದೆ.
ಟಿ.ಎನ್.‌ ಸೀತಾರಾಮ್‌ ಅವರ ಆತ್ಮಕಥನ “ಬದುಕಿನ ಪುಟಗಳು” ಕೃತಿಯ ಕೆಲವು ಪುಟಗಳು

Read More

ಜೀವಜಾಲದ ಪ್ರೋಗ್ರಾಮಿಂಗ್‌ನ ವಿಸ್ಮಯ: ಸತೀಶ್‌ ತಿಪಟೂರು ಬರಹ

ವ್ಯಕ್ತಿ ಪ್ರಕೃತಿಯು ತನ್ನ ಪರಿಸರದ ಪ್ರಭಾವದ ವಿರುದ್ಧ ಪ್ರತಿಭಟಿಸಿ, ಸೆಣೆಸಿ ತನ್ನದೇ ನಡೆಗಳ ದಾರಿಯಲ್ಲಿ ಚಲಿಸಲು ಯಾವುದೋ ಒಂದು ಆಂತರಿಕ ಸೆಳೆತವಿರಬೇಕು. ಈ ಸೆಳೆತ ಇಂದು ನೆನ್ನೆಯದಲ್ಲ; ಇನ್ನೂ ಹಿಂದಿನದು, ಬಹುದೂರ ಕಾಲ ಹಿಂದಿನದು. ಎಂದೋ ಯಾವ ಕಾಲದಲ್ಲೋ ಯರ‍್ಯಾರ ಕಾಲ-ದೇಶ-ಪ್ರಭಾವ-ಪ್ರವಾಹಗಳ ಹರಿವಿನಲ್ಲೋ ಮೊಳೆತಿದ್ದಿರಬೇಕು. ಹೀಗೆ ಕಾಲಾಂತರ ಕಾದು ಕಾದು ತನ್ನನ್ನು ತಾನು ಅರಿವಿನಲ್ಲಿ ಕಂಡುಕೊಂಡುದುದು. ಇದು ಮೊಳೆತು ಬೆಳೆದು ವಿಕಾಸವಾಗಬಹುದಾದ ಬೀಜರೂಪ ಮಾತ್ರ. ಇದು ಬೆಳೆದು ಬೃಹತ್ ವೃಕ್ಷವಾಗಲು ಏನೆಲ್ಲಾ ಒದಗಿ ಬರಬೇಕೋ?
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿ ಸರಣಿಯ ಕೊನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ