Advertisement

Category: ದಿನದ ಪುಸ್ತಕ

ಕಲ್ಯಾಣಕ್ರಾಂತಿ: ಡಾ. ಲತಾ ಗುತ್ತಿ ಕಾದಂಬರಿಯ ಪುಟಗಳು

ಬೆಳಗಿನ ಜಾವ ಕಣ್ಣುಬಿಟ್ಟಾಗ ಎಲ್ಲೆಲ್ಲೂ ಜಾತ್ರೆಯದೇ ಆದ ಒಂದು ಬೆಡಗಿನ ಸೊಬಗು. ತಣ್ಣನೆಯ ಗಾಳಿ-ಪಕ್ಷಿಗಳ ಕಲರವ. ಸೂರ್ಯೋದಯ. ದೇವಸ್ಥಾನದ ಆವರಣದಿಂದ ಕೇಳಿಬರುವ ಶರಣರ ವಚನಗಳ ಹಾಡುಗಳು. ಸುತ್ತೆಲ್ಲ ಹಸಿರು ಗಿಡಮರಗಳಿಂದ ತುಂಬಿದ ತಂಪಾದ ಸ್ಥಳದಲ್ಲಿ ಚೆನ್ನಬಸವಣ್ಣನ ದೇವಸ್ಥಾನ ದೂರ ದಿಂದಲೇ ಕಂಗೊಳಿಸುತ್ತದೆ. ಎತ್ತರದ ಗೋಪುರದಲ್ಲಿ ಶಿವಶರಣರ ಶಿಲ್ಪ ಕೃತಿಗಳು. ಅವರವರ ವೃತ್ತಿಗೆ ತಕ್ಕಂತೆ ಕೆತ್ತನೆಗಳಿವೆ. ೧೨ನೆಯ ಶತಮಾನದ ಶರಣರೆಲ್ಲ ಕಣ್ಣಿಗೆ ಕಟ್ಟುವಂತೆ ಕಾಣುತ್ತಾರೆ. ದೇವಸ್ಥಾನ ತಳಿರು ತೋರಣಗಳಿಂದ ಶೋಭಿತಗೊಂಡಿದೆ.
ಡಾ. ಲತಾ ಗುತ್ತಿ ಹೊಸ ಕಾದಂಬರಿ “ಚದುರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ವಿಫಲಪ್ರೇಮಿಯ ತಪ್ಪೊಪ್ಪಿಗೆಗಳು: ರಹಮತ್ ತರೀಕೆರೆ

ವಿದ್ಯಾರ್ಥಿನಿಯರಲ್ಲಿ ಒಬ್ಬಾಕೆ ಕವಿತೆ ಬರೆಯುತ್ತಿದ್ದಳು. ಸರಳವಾದ ಪದದ ಅರ್ಥ-ಅದನ್ನು ತರಗತಿಯಲ್ಲೂ ಕೇಳಬಹುದಿತ್ತು- ಕೇಳಿಕೊಂಡು ಸ್ಟಾಫ್‌ರೂಮಿಗೆ ಬರುತ್ತಿದ್ದಳು. ಸಹೋದ್ಯೋಗಿಗಳು `ನೀನೇ ಹುಡುಗಿ ತರಹ ನಾಚ್ಕೊತೀ ಯಲ್ಲೋ’ ಎಂದು ಛೇಡಿಸುತ್ತಿದ್ದರು. ಬದುಕಿನ ಬಗ್ಗೆ ಭವಿಷ್ಯದ ಬಗ್ಗೆ ಚಿಂತನೆ ಹೊಣೆಗಾರಿಕೆ ಇಲ್ಲದೆ ಹುಟ್ಟಿದ ಎಳಸು ಆಕರ್ಷಣೆಗಳವು. ಆದರೂ ಒಬ್ಬಾಕೆಯ ದೊಡ್ಡ ಕಣ್ಣುಗಳ ಮುಖ ಚಿತ್ತದಲ್ಲಿ ಉಳಿದುಬಿಟ್ಟಿದೆ. ಚೆಲ್ಲು ವರ್ತನೆಯ ಆಕೆ, ಕನ್ನಡದಲ್ಲಿ ಭಯಂಕರ ಕಾಗುಣಿತ ತಪ್ಪು ಮಾಡುತ್ತಿದ್ದಳು. ಚೆಲುವನ್ನು ಕೊಟ್ಟು ಬುದ್ಧಿಯನ್ನು ಕೊಡದ ವಿಧಿಯನ್ನು ಬೈದುಕೊಂಡು, ಭಾಷಾ ದೋಷಗಳನ್ನು ಉದಾರವಾಗಿ ತಿದ್ದುತ್ತಿದ್ದೆ.
ಡಾ. ರಹಮತ್‌ ತರೀಕೆರೆಯವರ ಆತ್ಮಕಥನ “ಕುಲುಮೆ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಗಾಯಗೊಂಡ ಸಾಲುಗಳು… : ದೀಪಾ ಗೋನಾಳ ಬರಹ

ಕವಿಯಾದವನಿಗೆ ತನ್ನ ಪದಗಳ ಗೊಡವೆ ಬೇಡ, ಅದು ಯಾರದ್ದೊ ನೋವು, ಆರ್ತನಾದ ಮಾತ್ರ ನನ್ನದು ಎನ್ನುವ ದೈನ್ಯತೆ ಎಂದಿಗೂ ಬೇಕು. ಅದು ನನ್ನ ಮಿತ್ರನ ಕವಿತೆಗಳಲಿ ತುಂಬಿ ಹೋಗಿದೆ. ಹೀಗಾಗಿಯೇ ಈ ಸಂಕಲನ ‘ಗಾಯಗೊಂಡ ಸಾಲುಗಳು‌’ ಎಂಬ ಹಣೆಪಟ್ಟಿ ಹೊತ್ತು ಹೊರಬಂದಿವೆ. ಗಾಯಗೊಂಡ ಪದಗಳನೇ ಹೆಣೆದು ಬ್ಯಾಂಡೇಜು ಕಟ್ಟಿದ ಪದಗಳಿವು. ಯಾರೂ ಮೂಸದ ಸರ್ಕಾರಿ ಆಸ್ಪತ್ರೆಯ ಕಟ್ಟೆಯ ಮೇಲೆ ಕೂತ ಅನಾಥ ವೃದ್ಧನಂತೆ ಇಲ್ಲಿನ ಕವಿತೆಗಳು ಕಾಣಿಸತೊಡಗುತ್ತವೆ.
ಸದಾಶಿವ ಸೊರಟೂರು ಕವನ ಸಂಕಲನ “ಗಾಯಗೊಂಡ ಸಾಲುಗಳು” ಕುರಿತು ದೀಪಾ ಗೋನಾಳ ಬರಹ

Read More

ಬೆರಳಿಗಂಟಿದ ರಕ್ತ ಹಾಗೇ ಇತ್ತು..: “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

ತಹಸಿಲ್ದಾರರು ಹೊರಟ ನಂತರ ದಲಿತರ ಮೇಲೆ ಹಲ್ಲೆ ಮಾಡಿದ ಮುನಿಪಾಪಣ್ಣನ ಕಡೆಯವರು, ಅವನಿಗೆದುರಾಗಿ ಯಾರ್ಯಾರು ಅರ್ಜಿಯಲ್ಲಿ ಎಡ ಹೆಬ್ಬೆಟ್ಟು ಒತ್ತಿದ್ದಾರೆ ಎಂದು ಖಾತ್ರಿ ಪಡಿಸಿಕೊಂಡಿದ್ದಾರೆ. ನಂತರ ಆತ ಮತ್ತು ಆತನ ಮಕ್ಕಳು ಆ ಐದು ಜನರನ್ನೂ ಹಿಡಿದು, ಅವರೆಲ್ಲರ ಹೆಬ್ಬೆಟ್ಟುಗಳನ್ನೂ ಕತ್ತರಿಸಿ, ‘ಈಗ ಡಿಸಿ ಸಾಹೇಬರಿಗೆ ಹೇಗೆ ಅರ್ಜಿ ಕೊಡುತ್ತೀರೋ ನೋಡೋಣ!’ ಎಂದು ಕೂಗಾಡಿದ್ದಾರೆ. ಆ ಐದೂ ದಲಿತರೂ ಬ್ಯಾಂಡೇಜ್ ತೆಗೆದು, ನನ್ನ ಮುಂದೆ ತಮ್ಮ ಎಡಗೈ ಚಾಚಿದರು.
ಎನ್.‌ ಸಂಧ್ಯಾರಾಣಿ ಅನುವಾದಿಸಿರುವ ರೆಬೆಲ್‌ ಐಎಎಸ್ ಅಧಿಕಾರಿ ವಿ. ಬಾಲಸುಬ್ರಮಣಿಯನ್‌ ಅವರ ಆತ್ಮಕಥನ “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

Read More

ಸುತ್ತಾಡಿದ ದೇಶಗಳ ಒಳಗೂ-ಹೊರಗೂ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಒಮ್ಮೆ ಎಸ್ಕಲೇಟರಿನಲ್ಲಿ ಲೇಖಕಿ ಹೋಗುವಾಗ ಅಕಸ್ಮಾತ್ತಾಗಿ ಅವರ ಸೀರೆ ಸಿಕ್ಕಿಕೊಂಡು ಮೊಣಕಾಲಿನವರೆಗೂ ಹರಿದುಹೋಗುತ್ತಿದ್ದರೂ ಅಕ್ಕಪಕ್ಕದ ಜನ ತಮಗೆ ಸಂಬಂಧವೇ ಇಲ್ಲದವರಂತೆ ತಮ್ಮ ಪಾಡಿಗೆ ಹೋಗುವುದು, ಬಸ್‌ನಲ್ಲಿ ಕೂತಾಗ ಸಿಂಗಪುರದ ವಿದ್ಯಾರ್ಥಿನಿಯಿಂದಾದ ವರ್ಣಭೇದದ ಅನುಭವದಿಂದ ಲೇಖಕಿಯ ಮನಸ್ಸು ಮುದುಡುವುದು, ಹದಿನಾಲ್ಕು ಅಂತಸ್ತಿನ ತಮ್ಮ ಮಗನ ಮನೆಯಲ್ಲಿ ಲೇಖಕಿ ಒಬ್ಬರೇ ಇರುವಾಗ ಅದೇ ಕಟ್ಟಡದ ಒಂದು ಮಹಡಿಯ ಮನೆಗೆ ಬೆಂಕಿ ಬಿದ್ದು ಫೈರ್ ಇಂಜಿನ್ ಬಂದು ಬೆಂಕಿ ಆರಿಸುವಾಗಲೂ ಸುತ್ತಮುತ್ತಲಿನ ಜನ ಕಿಂಚಿತ್ತೂ ಗಮನ ಹರಿಸದೆ ಕಣ್ಣೆತ್ತಿಯೂ ನೋಡದೆ ಹೋಗುವುದು…. ಇದೆಂಥಾ ಮುಂದುವರಿದ ದೇಶ ಮಾರ್ರೆ?
ಶಾಂತಾ ನಾಗರಾಜ್‌ ಪ್ರವಾಸ ಕಥನ “ಯಾನ ಸಂಸ್ಕೃತಿ” ಕೃತಿಯ ಕುರಿತು ಕೆ.ಎನ್.‌ ಲಾವಣ್ಯ ಪ್ರಭಾ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ