Advertisement

Category: ದಿನದ ಪುಸ್ತಕ

ಎಚ್.ಎಸ್. ಅನುಪಮಾ ಕಾದಂಬರಿಯಲ್ಲಿ “ಅಕ್ಕ”

ಅಕ್ಕಮಹಾದೇವಿಯದು ಅಭಾವ ವೈರಾಗ್ಯಅಲ್ಲ. ಅವಳದು ಸ್ವಭಾವ ವೈರಾಗ್ಯ ಎಲ್ಲ ಇದ್ದು ಅದರ ಕುರಿತು ಆಕರ್ಷಣೆ ಇಲ್ಲದಿರುವುದು ಅವಳ ವ್ಯಕ್ತಿತ್ವವೇ ವಿಶಿಷ್ಟ ಚೈತನ್ಯ ಉಳ್ಳದ್ದು. ಮಠದ ಗುರು ಲಿಂಗ ಶರಣರು ಅವಳಿಗೆ ಲಿಂಗ ದೀಕ್ಷೆ ನೀಡುತ್ತಾರೆ. ದಿಗಂಬರ ಸನ್ಯಾಸಿಗಳನ್ನು ನೋಡಿ ಎಲ್ಲವನ್ನು ಕಳಚಿ ಇರುವುದರ ಕುರಿತು ಯೋಚಿಸುತ್ತಾಳೆ. ಲಿಂಗ ಶರಣರು ಕಲ್ಯಾಣಕ್ಕೆ ಹೋಗಿ ಬಂದು ಬಸವಣ್ಣನ ಮಹಾಮನೆಯ ವಿಷಯ ಹೇಳುತ್ತಾರೆ. ಕಸಪಯ್ಯ ರಾಯ ಇವನ ಗುಡಿ ಕಟ್ಟಿಸುವಾಗ ಅವನ ಸತಿಗೂ ಗುಡಿ ಕಟ್ಟಲು ಹೇಳುತ್ತಾಳೆ.
ಡಾ. ಎಚ್.ಎಸ್. ಅನುಪಮಾ ಅವರ ಹೊಸ ಕಾದಂಬರಿ “ಬೆಳಗಿನೊಳಗು” ಕುರಿತು ಡಾ. ಎಲ್.ಸಿ. ಸುಮಿತ್ರಾ ಬರಹ

Read More

ಕಾದಂಬರಿಗಳಲ್ಲಿ ತಿರುಮಲೇಶರ ಅನನ್ಯತೆ

ಕಾದಂಬರಿಯ ನಿಜ ಸತ್ವ ಅಡಗಿರುವುದು ಕಾದಂಬರಿಯ ಮೂವತ್ತಮೂರನೆ ಅಧ್ಯಾಯದಲ್ಲಿಯೇ. ಕಾದಂಬರಿಯ ಆರಂಭಕ್ಕೆ ಬಂದ ಕಮಲ ಕಡೆಗೂ ಬರುತ್ತಾಳೆ. ಬೀಡಿ ಹೊಸೆದೂ ಹೊಸೆದೂ ಕುಟುಂಬ ನಿಭಾಯಿಸಿದಷ್ಟೂ ತನ್ನ ಖುಷಿಗಳನ್ನು ಹೊಸಕಿ ಹಾಕುತ್ತಿರುತ್ತಾಳೆ. ಕೈಯಲ್ಲಿ ಕೆಲವೇ ರುಪಾಯಿಗಳನ್ನು ಹಿಡಿದು ಪೇಟೆಗೆ ಹೋಗುವ ಆಕೆ ರಿಸ್ಟ್ ವಾಚನ್ನು ನೋಡುತ್ತಾಳೆ. ತೆಗೆದುಕೊಳ್ಳುವುದಿಲ್ಲ. ಬಣ್ಣ ಬಣ್ಣದ ಸೀರೆಯನ್ನು ನೋಡುತ್ತಾಳೆ ಅದಕ್ಕೆ ಹೊಂದಿಕೆಯಾಗುವ ರವಿಕೆಯನ್ನೂ ನೋಡುತ್ತಾಳೆ. ಇನ್ನೊಮ್ಮೆ ಇನ್ನೊಮ್ಮೆ ಎಂದು ತನ್ನ ಬಯಕೆಗಳನ್ನು ಮುಂದೆ ಹಾಕುತ್ತಲೇ ಅಂಗಡಿಯವನು ಬೇರೆ ಗಿರಾಕಿಗಳ ಕಡೆ ಗಮನ ಕೊಟ್ಟಾಗ ತಾನು ಸದ್ದಿಲ್ಲದೆ ಅಂಗಡಿಯಿಂದ ಹೊರಬರುತ್ತಾಳೆ.
ಕೆ.ವಿ. ತಿರುಮಲೇಶರ “ಆರೋಪ” ಕಾದಂಬರಿಯ ಕುರಿತು ಸುಮಾವೀಣಾ ಬರಹ

Read More

ಕನಸು ಸಾಕಿಕೊಂಡವರ ಕಣ್ಣ ದೀಪದೆದುರು…

ಕನ್ನಡದ ಪ್ರಮುಖ ಬರಹಗಾರ ಪಿ.ಲಂಕೇಶ್ ಹೇಳುವಂತೆ ಒಬ್ಬ ಬರಹಗಾರನ ಭಾಷೆಯೇ ಆತನ ಅಸಲಿ ಮತ್ತು ಖೊಟ್ಟಿತನವನ್ನು ಬಯಲು ಮಾಡುವ ಸಾಧನ. ಬರಹದಲ್ಲಿ ಹೆಚ್ಚು ಹೊತ್ತು ಅದನ್ನು ಅವಿತಿಟ್ಟು ಆಟ ಆಡಲಾಗದು. ಇಲ್ಲಿ ಗೆದ್ದ ಮಾತಿವೆ, ಸೋತ ಮಾತಿವೆ. `ಕವಿಯ ಜೀವನಾನುಭವ ಮತ್ತೆ ಮತ್ತೆ ಕಸಿಗೊಂಡಾಗ ಆತನ ಕಾವ್ಯದಲ್ಲಿ ಹೊಸಕಳೆ ಕಾಣಬಹುದು. ಆ ಕಸುವು ಹೊಂದಿರುವ ಮಂಡಲಗಿರಿ ಪ್ರಸನ್ನ ಅವರ ಮುಂದಿನ ಬರಹಗಳು ಮತ್ತಷ್ಟು ಹೊಸತನದೊಂದಿಗೆ ಓದುಗ ವಲಯಕ್ಕೆ ತಲುಪಲಿ.
ಮಂಡಲಗಿರಿ ಪ್ರಸನ್ನ ಅವರ “ನಿದಿರೆ ಇರದ ಇರುಳು” ಗಜಲ್‌ ಸಂಕಲನಕ್ಕೆ ಡಾ. ರಮೇಶ ಅರೋಲಿ ಬರೆದ ಮುನ್ನುಡಿ

Read More

ನಿಷೇಧಿತ ಗಿರಿ ನೆತ್ತಿಯಲ್ಲಿ

ಹೀಗೆ ಕಡುಹಿಂಸೆಯಲ್ಲೇ ಹದಿನೈದು ದಿನ ಕಳೆದ ಮೇಲೆ ಕೊನೆಗೊಂದು ದಿನ ಸ್ವತಃ ಮಾಂಟ್ಗೊಮರಿ ಸಾಹೇಬರು, `ಕಾರಕೋರಂ ಶ್ರೇಣಿಯ ಎರಡು ಶಿಖರಗಳ ಅನ್ವೇಷಣೆ ದೊಡ್ಡ ಸಾಧನೆ. ನಂಗಾ ಪರ್ವತದ ವಿವರಗಳನ್ನು ಕಲೆ ಹಾಕಿದ್ದೂ ಸಾರ್ಥಕವಾಯಿತು. ಕಾರಕೋರಂ ಶ್ರೇಣಿಯ ದ್ವಿತೀಯ ಶಿಖರ, ಪೀಕ್ ಹದಿನೈದನ್ನೂ ಮೀರಿಸುವಷ್ಟು ಎತ್ತರ ಇರುವಂತಿದೆ’ ಎಂದು ಹೆಮ್ಮೆಯಿಂದ ಹೇಳಿದ್ದರು. ಉಳಿದವರೂ ತಲೆಯಾಡಿಸಿ ಸಮ್ಮತಿಸಿದ್ದರು. ಅವರ ಸಂಭಾಷಣೆ ಕೇಳಿ, `ಕಾರಕೋರಂ ಕಾಶ್ಮೀರದ ಉತ್ತರದಲ್ಲಿರುವ ಪರ್ವತಶ್ರೇಣಿ ಎಂಬುದು ಯಾರಿಗೆ ಗೊತ್ತಿಲ್ಲ. ಅದರಲ್ಲಿರುವ ಎರಡು ಎತ್ತರದ ಶಿಖರಗಳನ್ನು ಇವರೇ ಶೋಧಿಸಿದರಂತೆ!
ಡಾ. ಗಜಾನನ ಶರ್ಮ ಹೊಸ ಕಾದಂಬರಿ “ಪ್ರಮೇಯ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಗಾಂಧೀಜಿ ಬದುಕಿನ ಹರಿವುಗಳ ಒಳಾರ್ಥವನ್ನು ತೆರೆದಿಟ್ಟ ಕೃತಿ

ಗಾಂಧೀಜಿಯವರ ಕುರಿತು ಆಕ್ಷೇಪಗಳು ಬಂದಾಗ ಇದರಲ್ಲಿ ಅವರ ನಡೆ ಆ ಕಾಲದಲ್ಲಿ ಎಷ್ಟು ಸೂಕ್ತವಾಗಿತ್ತು ಎನ್ನುವದನ್ನು ಇಲ್ಲಿ ವಿವರಿಸಲಾಗಿದೆ. ಖಿಲಾಪತ್ ಚಳುವಳಿಯನ್ನು ಗಾಂಧಿ ಸಂಪೂರ್ಣವಾಗಿ ಒಪ್ಪಿಲ್ಲ; ಆದರೆ ಆ ಧರ್ಮದ ಬಗೆಗೆ ಅವರಿಗಿರುವ ಆಳ ದೃಷ್ಟಿಕೋನದಿಂದ ಮುಸಲ್ಮಾನರ ಭಾವನೆಗಳನ್ನು ಗಾಂಧಿ ಅರ್ಥಮಾಡಿಕೊಂಡಿದ್ದರು ಎನ್ನುತ್ತಾರೆ. ಹಾಗೇ ನೋಡಿದರೆ ಖಿಲಾಪತ್ ಚಳುವಳಿಯನ್ನು ಗಾಂಧಿ ಬೆಂಬಲಿಸಿದ ಕಾರಣದಿಂದಲೇ ಗಾಂಧಿ ರಾಷ್ಟ್ರೀಯ ನಾಯಕರಾಗಿ ಹೊಮ್ಮಿದ್ದು ಮತ್ತು 1920ರ ನಾಗಪುರ ಅಧಿವೇಶನದ ನಂತರ ತೀವ್ರವಾದಿಗಳನ್ನು ಬದಿಗೆ ಸರಿಸಿ ಅನಭಿಷಕ್ತ ನಾಯಕರಾಗಿರುವುದು.
ರಾಮಚಂದ್ರ ಹಬ್ಬು ಅನುವಾದಿಸಿರುವ “ಮಹಾತ್ಮ ಗಾಂಧಿ ಜೀವನ ಚರಿತೆ” ಕೃತಿಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ