Advertisement

Category: ದಿನದ ಪುಸ್ತಕ

ಹಳ್ಳಿಯ ಅಂತರಾತ್ಮದ ಆರ್ದ್ರ ಕಥನ

ಇಡೀ ಕಥೆಗಳ ಅಂತರಾಳದಲ್ಲಿ ವಿಷಾದದ ದನಿಯೊಂದು ಲಘು ಹಾಸ್ಯದ ಲೇಪನದೊಂದಿಗೆ ಅನಾವರಣಗೊಂಡಿದೆ. ಯಾವುದೇ ʻಇಸಂʼನಿಂದ ಮುಕ್ತಗೊಂಡಂತೆ ಕಾಣುವ ಇಲ್ಲಿನ ಲೋಕದಲ್ಲಿ ಮನಕುಲದ ಒಳಿತು ಹಾಗೂ ಜೀವಪರ ತುಡಿತವೇ ಮೇಲುಗೈಯ್ಯಾಗಿದೆ. ಈ ಸಂಕಲನದ ಬಹು ಮುಖ್ಯ ಸಂಗತಿ ಅಂದರೆ, ಇದುಅಪ್ಪಟ ಪ್ರಾದೇಶಿಕ ಸೊಗಡಿನಿಂದ ಲಕಲಕಿಸುತ್ತದೆ. ಅಂತೆಯೇ ಯಾವುದೇ ಮಡಿವಂತಿಕೆಯ ಸೋಗಿಲ್ಲದೆ ಪ್ರಾಮಾಣಿಕವಾಗಿ ಅನಿಸಿದ್ದನ್ನು ನೇರವಾಗಿ ಹೇಳುತ್ತದೆ.
ಮಂಜಯ್ಯ ದೇವರಮನಿ ಕಥಾ ಸಂಕಲನ “ದೇವರ ಹೊಲ”ಕ್ಕೆ ಎಸ್. ಗಂಗಾಧರಯ್ಯ ಬರೆದ ಮುನ್ನುಡಿ

Read More

ದೈನಿಕತೆಯಲ್ಲೆ ದೈವಿಕತೆ..

ಕಾಯ್ಕಿಣಿಯವರ ಕಾವ್ಯಗಳಲ್ಲಿ ದಂತಗೋಪುರದ ವಾಸಿ, ವಿಲಾಸಿ, ಪ್ರವಾಸಿಗರು ಕಾಣಸಿಗಲಾರರು; ಏಕೆಂದರೆ, ನಮ್ಮ-ನಿಮ್ಮ ನಡುವೆ, ಆಚೆ-ಈಚೆ, ಕಣ್ಣಿಗೆ ಬಿದ್ದರೂ ಬೀಳದಂತಿರುವ, ಅಥವಾ ನಾವು ನೋಡಿದರೂ ನೋಡದಂತೆ ಮುಂದೆ ಸಾಗುವುದಕ್ಕೆ ಯಾವ ಆಕ್ಷೇಪಣೆಯನ್ನೂ ಮಾಡದ- ಕಷ್ಟವೋ-ಕಾರ‍್ಪಣ್ಯವೋ ಎಲ್ಲಕ್ಕೂ ಎದೆಗೊಡುತ್ತ ಕಾಲ್ಪನಿಕ ರೇಖೆಗಳನ್ನು ಧಿಕ್ಕರಿಸುತ್ತ, ಅಲ್ಲಗಳೆಯುತ್ತ, ತಮ್ಮದೇ ಜೀವನಚಿತ್ರವ ಮೂಡಿಸುವ ಜೀವಭಂಡಾರಿಗಳು- ಕಾಯ್ಕಿಣಿಯವರ ಕಾವ್ಯಪ್ರಪಂಚವನ್ನು ನಿರಾಯಾಸ, ನಿರಪೇಕ್ಷ್ಯವಾಗಿ ಧರಿಸುತ್ತಾರೆ; ಭರಿಸುತ್ತಾರೆ.
ಜಯಂತ ಕಾಯ್ಕಿಣಿಯವರ “ವಿಚಿತ್ರಸೇನನ ವೈಖರಿ” ಕವನ ಸಂಕಲನದ ಕುರಿತು ಗೀತಾ ಹೆಗಡೆ ಬರಹ

Read More

ಇದ್ದಂತೆ ಇರುವ ಪದ್ಯಸದ್ಯ

ಕವಿತೆ ಪ್ರಣಾಳಿಕೆಯೋ ವಾಗ್ವಾದವೋ ಉತ್ತರವೋ ಪ್ರತಿಭಟನೆಯೋ ಆಗಿ ಮೆರೆಯುತ್ತಿರುವ ದಿನಗಳಲ್ಲಿ ರಾಜು ಹೆಗಡೆ ಬರೆಯುತ್ತಿರುವ ಪದ್ಯಗಳಿಗೆ ವಿಶಿಷ್ಟವಾದ ಸ್ಥಾನವಿದೆ ಎಂದು ಹೇಳಲು ಅಂಜಿಕೆಯಾಗುತ್ತದೆ. ನಮ್ಮ ಕಾವ್ಯದ ಓದನ್ನು ರಾಜಕೀಯ ನಿಲುವು, ಸೈದ್ಧಾಂತಿಕತೆ ಮತ್ತು ಸಾಮಾಜಿಕನಿಲುವುಗಳು ನಿರ್ಧರಿಸುವ ಕಾಲ ಇದು. ಶುದ್ಧಕವಿತೆ ಎಂಬ ಮಾತನ್ನು ಗೇಲಿ ಮಾಡಲಾಗುತ್ತದೆ ಮತ್ತು ಶುದ್ಧ ಸಾಹಿತ್ಯವನ್ನು ಅಪರಾಧವೆಂಬಂತೆ ನೋಡಲಾಗುತ್ತಿದೆ. ಯಾವುದಾದರೊಂದು ರಾಜಕೀಯ ಪಕ್ಷದ ಅಘೋಷಿತ ಗೊತ್ತುವಳಿಯಂಥ ಸಾಲುಗಳನ್ನು ಪದ್ಯಗಳೆಂದು ಕರೆಯಲಾಗುತ್ತಿದೆ.
ರಾಜು ಹೆಗಡೆ ಕವನ ಸಂಕಲನ “ಕಣ್ಣಿನಲಿ ನಿಂತ ಗಾಳಿ” ಗೆ ಜೋಗಿ ಬರೆದ ಮುನ್ನುಡಿ

Read More

ಹೊಸ ಕಾಲವು ಕೊಟ್ಟ ದಿಟ್ಟತೆಯ ಕವಿತೆಗಳಿವೆಯಿಲ್ಲಿ!

ಆಶಾ ತೀರಾ ವಾಚ್ಯವಾಗಿಸಿ ಯಾವುದನ್ನೂ ಹೇಳುವುದಿಲ್ಲ. ಬಹುಶಃ ಬಂಡಾಯ, ದಲಿತ, ಸ್ತ್ರೀವಾದದ ಘೋಷಣಾ ಸಾಹಿತ್ಯ ಮುಗಿದಂತೆ ಕಾಣುತ್ತಿದೆ. ಆ ಎಲ್ಲ ಚಳುವಳಿಗಳು ಕನ್ನಡದ ಒಟ್ಟೂ ಸಮಾಜದ ಮೇಲೆ, ಸಾಹಿತ್ಯದ ಮೇಲೆ ಉಂಟುಮಾಡಿದ ಅದ್ಭುತ ಚಾಲನಾ ಪ್ರಭಾವವನ್ನು ಅರ್ಥೈಸಿಕೊಂಡು, ಮನದಲ್ಲೂ ಇಟ್ಟುಕೊಂಡು, ಅದೇ ಕಾಲಕ್ಕೆ ಘೋಷಣೆಯ ಕಾಲ್ತೊಡಕುಗಳನ್ನೂ ಕಳಚಿ ಬರೆಯುವ ಹೊಸ ಯುವ ಸಮೂಹವೊಂದು ಕನ್ನಡದಲ್ಲಿ ತಯಾರಾಗಿದೆ. ನಿರ್ವಿವಾದವಾಗಿ ಆಶಾ ಕೂಡಾ ಆ ಪಡೆಯ ಉತ್ತಮ ಸದಸ್ಯೆ.
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕೃತಿಗೆ ಲಲಿತಾ ಸಿದ್ಧಬಸವಯ್ಯ ಬರೆದ ಮುನ್ನುಡಿ

Read More

“ಪಲಾಯನ”ದ ಕತೆಗಳು…

ನಿರರ್ಗಳ ನಿರೂಪಣೆ ಕರಗತವಾಗಿರುವ ಲೇಖಕಿಯ ಕತೆಗಳು ಅನಾಯಾಸವಾಗಿ ಓದಿಸಿಕೊಂಡು ಹೋಗುತ್ತವೆ. ಈ ನಿರೂಪಣೆಯ ಉತ್ಸಾಹದಿಂದ ಮುಂದುವರಿಯುವ ಲೇಖಕಿ ಕೆಲವು ಕತೆಗಳ ಅಂತ್ಯದಲ್ಲಿ ತೀರ್ಪುಗಾರಿಕೆ ಕೈಗೆತ್ತಿಕೊಳ್ಳುತ್ತಾರೆ. ಉದಾಹರಣೆಗೆ “ಸಿಂಗಾರಳ್ಳಿ ಗಣಪತಿ” “ಕಾಣೆ” ಕತೆಗಳ ಅಂತ್ಯದಲ್ಲಿ ಪಾತ್ರಗಳ ಕುರಿತ ವ್ಯಾಖ್ಯೆ. ಈ ವಾಚ್ಯತೆ ಅದುವರೆಗಿನ ಕಥನ ಶೈಲಿಯ ನವಿರುಗಾರಿಕೆಯನ್ನು ಮೊಂಡಾಗಿಸಿ ವರದಿಯ ಸ್ವರೂಪ ತಳೆಯುತ್ತದೆ. ಹಾಗೆಯೇ ಕಥನ ಪ್ರಸ್ತುತಪಡಿಸುವಲ್ಲಿ ವಿಭಿನ್ನ ತಂತ್ರಗಳನ್ನು ಅಳವಡಿಸಿಕೊಂಡಲ್ಲಿ ವೈವಿಧ್ಯತೆ ಲಭಿಸುತ್ತದೆ.
ಶಾರದಾ ಮೂರ್ತಿ ಬರೆದ “ ಪಲಾಯನ ಮತ್ತು ಇತರೆ ಕಥೆಗಳು” ಕಥಾಸಂಕಲನದ ಕುರಿತು ಕೆ.ಆರ್. ಉಮಾದೇವಿ ಉರಾಳ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ