Advertisement

Category: ದಿನದ ಪುಸ್ತಕ

ತಿಪಟೂರು ಸೀಮೆಯ ಘಮಲು

ಕೇವಲ ನಿರೂಪಕಿ ಆಗದೆ ಕತೆಗಳ ಒಳಗಿನಿಂದ ಬಂದು ಮಾತನಾಡುವ ಕತೆಗಾರ್ತಿಗೆ ಆ ಕಾರಣಕ್ಕೆ ಒಂದು ರೀತಿಯ ಸಹಜ ಯಜಮಾನಿಕೆ ಪ್ರಾಪ್ತವಾಗಿದೆ. ಭಾರತದ ಮಹಾವ್ಯಾಖ್ಯಾನಗಳನ್ನು ನೀಡಿದ ವಾಲ್ಮೀಕಿ ವ್ಯಾಸರು ಕತೆಯ ಒಳಗಿನವರು. ತಾವೂ ತಮ್ಮ ಕತೆಯಲ್ಲಿ ಪಾತ್ರಧಾರಿಗಳು ಅಥವಾ ತಮ್ಮಿಂದಲೇ ಕತೆಗಳನ್ನು ಆರಂಭಿಸಿದವರು. ಕತೆಗಾರಿಕೆಗೆ ಇದೊಂದು ಅತ್ಯುತ್ತಮ ಮಾದರಿ. ತಾನೇ ಊರಾಡಿ ಎತ್ತಿಕೊಂಡು ಬಂದ ಕತೆಗಳಂತಿರುವ ಸಮೂಹ ಪ್ರಜ್ಞೆ ಈ ಕತೆಗಳ ಸತ್ವ. ಕತೆಗಳು ಸಮೂಹದ ಸ್ವತ್ತು. ಸಮೂಹ ಕೊಡುತ್ತಿರುವ ಸಮಸ್ತ ಬೈಗುಳಗಳಾದಿಯಾಗಿ ಯಾವುದನ್ನೂ ಸೋಸದೆ ಇಡಿಯಾಗಿ ನಮಗೆ ತಲುಪಿಸಲಾಗಿದೆ.
ದಯಾ ಗಂಗನಘಟ್ಟ ಕಥಾ ಸಂಕಲನ “ಉಪ್ಪುಚ್ಚಿ ಮುಳ್ಳು”ಗೆ ನಟರಾಜ್‌ ಬೂದಾಳು ಬರೆದ ಮುನ್ನುಡಿ

Read More

ವಾಸ್ತವವಾದಿ ನೆಲೆಯಲ್ಲಿ ಮೈತಳೆದ ಕತೆಗಳು

ಸಿನಿಕತನದಲ್ಲಾಗಲೀ, ಅಸಹಾಯಕತೆಯಲ್ಲಾಗಲೀ ಇವರು ಅಳುತ್ತಾ, ಹಣೆಬರೆಹವನ್ನು ಹಳಿಯುತ್ತಾ ಕೂಡುವುದಿಲ್ಲ. ಹೀಗಿದ್ದಾಗಲೂ ಬಿಗಿಹುಬ್ಬಿನ ಕಾರ್ಪಣ್ಯದ, ಶಠತ್ವದ ಬದುಕನ್ನೂ ಇವರು ನಡೆಸುವುದಿಲ್ಲ. ಬದಲಿಗೆ ಅದೇ ಜೀವನೋತ್ಸಾಹದ, ಲವಲವಿಕೆಯ ವ್ಯಕ್ತಿತ್ವವನ್ನು ಕೊನೆಯವರೆಗೂ ಉಳಿಸಿಕೊಳ್ಳುತ್ತಾರೆ. ತಿಳಿಗೇಡಿಯನ್ನು ಕಟ್ಟಿಕೊಂಡೇ ಬದುಕನ್ನು ಗೆಲ್ಲುತ್ತಾ ಹೋಗುವ ಈ ಹೆಣ್ಣು ಮಕ್ಕಳು ಇವರಿಬ್ಬರೂ ಮನೆಯಲ್ಲಿಲ್ಲದ ಹೊತ್ತಿನಲ್ಲಿ ಆತ ಮಿತಿಮೀರಿ ತಿಂದ ಜಾಮೂನಿನ ಕಾರಣಕ್ಕೆ ಕಳೆದುಕೊಳ್ಳುವುದು ವಿಕಟ ವ್ಯಂಗ್ಯದಂತೆ ನಮಗೆ ಕಾಣಿಸುತ್ತದೆ.
ಶೋಭಾ ಗುನ್ನಾಪೂರ ಕಥಾ ಸಂಕಲನ “ಭೂಮಿಯ ಋಣ”ಕ್ಕೆ ಎಂ.ಎಸ್. ಆಶಾದೇವಿ ಬರೆದ ಮುನ್ನುಡಿ

Read More

‘ಬೇಕಿತ್ತು ನಿಮ್ಮದೊಂದೆರೆಡು ಕವಿತೆಗಳು ಸಾಲವಾಗಿ…ʼ

ಮೂಲ ಲೇಖಕರ ಒಪ್ಪಿಗೆಯಿರಲಿ, ಅವರ ಗಮನಕ್ಕೂ ತಾರದೇ ನೇರವಾಗಿ ಕವಿತೆಯ ಸಾಲುಗಳನ್ನು ನಕಲು ಮಾಡಿ ಅಲ್ಪ ಸ್ವಲ್ಪ ಬದಲಾವಣೆಯೊಂದಿಗೆ ತಾವೇ ರಚಿಸಿದ್ದೆಂದು ಪ್ರಚಾರ ಪಡೆಯುವ ಕಪಟ ಸಾಹಿತಿಗಳನ್ನು ಕೆಣಕಿದ್ದಾರೆ. ‘ಇರಬೇಕು, ಇದ್ದೇ ಇರುತ್ತಾರೆ, ಒಬ್ಬಿಬ್ಬರಲ್ಲ ಒಂದಷ್ಟು ಜನ, ಇರುವಿಕೆಯ ಅರಿವನ್ನಷ್ಟೇ ಉಳಿಸಿ, ಎಲ್ಲರೊಳಗೂ ಸಾಲವಾಗಿಯೇ ಉಳಿಯುವವರು..’ ಎಂದೆನ್ನುತ್ತಾ ಪ್ರತಿಯೊಂದರಲ್ಲೂ ಮೂಗು ತೋರಿಸುವವರ ಸಂಖ್ಯೆ ಈಗ ಅಧಿಕ. ಅದರ ಬಗ್ಗೆ ಪರಿಜ್ಞಾನ ಇದೆಯೋ ಇಲ್ಲವೋ ಗೊತ್ತಿಲ್ಲ ಆದರೆ ತನ್ನದೂ ಒಂದು ಅಭಿಪ್ರಾಯವಿರಲಿ ಎನ್ನುವವರೇ ಹೆಚ್ಚಾಗಿದ್ದಾರೆ.
ಸೌಜನ್ಯ ದತ್ತರಾಜ ಕವನ ಸಂಕಲನ “ಭಾವನೌಕೆಯನೇರಿ” ಕುರಿತು ಪ ನಾ ಹಳ್ಳಿ ಹರೀಶ್ ಕುಮಾರ್ ಬರಹ

Read More

ಬದುಕಿನ ಪಾಠ ಕಲಿಸುವ ಜೋತಯ್ಯನ ಕತೆ…

ಇಲ್ಲಿರುವ ಕಥೆಗಳ ಕಥಾವಸ್ತು ಬಹುತೇಕ ಮನುಷ್ಯರ ಕಷ್ಟ ಸುಖ ನೋವು ನಲಿವಿನದೇ ಆಗಿದ್ದರೂ, ಕಥೆಗಳ ಮೂಲಕ ಹೊರಬರುವ ವ್ಯಾಕುಲತೆ ಸ್ಪಂದನೆ ಲೇಖಕರಿಗೆ ಇರುವ ಬದುಕಿನ ಅನುಭವಗಳಿಂದಲೇ ಮೂಡಿರಬಹುದು, ಹಾಗಾಗಿ ಅವುಗಳು ಗಟ್ಟಿ ಕಥೆಗಳಾಗಿ ರೂಪುಗೊಂಡಿವೆ. ಇನ್ನು ನಿರೂಪಣೆಗೆ ಬಂದರೆ ಬಹುಶಃ ಮಾಸ್ತಿಯವರಂತೆ ಲೇಖಕಿಯು ಕವಯಿತ್ರಿಯೂ ಆಗಿರುವುದರಿಂದ ಇರಬೇಕು ಕಥೆಗಳನ್ನು ನಿರೂಪಿಸುವುದಕ್ಕೆ ಬಳಸುವ ಉಪಮೆಗಳು ಸಂದರ್ಭೋಚಿತವಾಗಿದ್ದು ಇವುಗಳಿಂದ ಹೊರಹೊಮ್ಮುವ ಭಾವನೆಗಳು ನೇರವಾಗಿ ಓದುಗರನ್ನು ತಟ್ಟುತ್ತವೆ.
ತೇಜಸ್ವಿನಿ ಹೆಗಡೆ ಕಥಾ ಸಂಕಲನ “ಜೋತಯ್ಯನ ಬಿದಿರು ಬುಟ್ಟಿ”ಯ ಕುರಿತು ಸಿಂಧು ಜಗನ್ನಾಥ್‌ ಬರಹ

Read More

ಹೂ ಅರಳುವ ಸಮಯ…

ʻನಿಮ್ಮ ಕಾವ್ಯದಲ್ಲಿ ನೀವು ಬರೆಯಲೇಬೇಕೆಂಬ ಮಾತುಗಳು ಇರುವಂತೆಯೇ ನೀವು ಬರೆದೂ ಬರೆದೂ ಜಾಳಾಗಬಹುದಾದ ಕೆಲವು ಸಂವೇದನೆಗಳು ಸಹ ಜಾಗ ಪಡೆದಿವೆ. ಇದು ಪ್ರತಿ ಕವಿಗೂ ಇರುವ ತೊಡಕು. ನೀವು ಬರೆಯಲಾರಂಭಿಸಿದ ತಕ್ಷಣ ನಿಮಗೆ ಒಂದು ಶೈಲಿಯು ಸಿದ್ಧಿಸುತ್ತದೆ. ಅದನ್ನು ಬಳಕೆ ಮಾಡುತ್ತಾ ಹೋದಂತೆ ಅದರ ಸಾರ ಕಡಿಮೆಯಾದಂತೆ ಅನ್ನಿಸುತ್ತದೆ. ಪ್ರಾಯಶಃ ನೀವು ಆವಾಹಿಸಿಕೊಳ್ಳುವ ಪ್ರೀತಿಯ ವ್ಯಾಮೋಹ ಅನೇಕ ಕವಿತೆಗಳಲ್ಲಿ ಪುನಾರಾವರ್ತನೆ ಆಗುವ ಅಪಾಯದಲ್ಲಿವೆ. ಒಂದು ವಿಷಯವನ್ನು ವೃತ್ತಾಕಾರವಾಗಿ ನಿಧನಿಧಾನವಾಗಿ ಪ್ರವೇಶಿಸಿ ಅದರ ಗಾಢತೆಯನ್ನು ಅರಿಯುವುದು ಒಂದು ತಂತ್ರʼ.
ಚೈತ್ರ ಶಿವಯೋಗಿಮಠ ಕವನ ಸಂಕಲನ “ಪೆಟ್ರಿಕೋರ್‌”ಗೆ ತಾರಿಣಿ ಶುಭದಾಯಿನಿ ಬರೆದ ಮಾತುಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ