Advertisement

Category: ದಿನದ ಪುಸ್ತಕ

ಸಂತೆಯೊಳಗಣ ಮೌನಕ್ಕೆ ಶರಣಾಗುತ್ತ…

ನಂಜು ಕವಿತೆಯ ಒಳಗಿನ ಗಾಯಗಳನ್ನು ಕೆರೆದುಕೊಳ್ಳುವ ಪ್ರಕ್ರಿಯೆ, ಮತ್ತದರ ವಿಕೃತ ಫಲಾನುಭವ, ಫಲಾನುಭವಿಗಳು… ಸಂತೆಯೊಳಗಣ ಮೌನ ಕವಿತೆಯಲ್ಲಿ ಮಾತು ಹುಟ್ಟುವ ಬಗೆಯ ಮೂಲಕ ಕುಟುಂಬ ಮತ್ತು ಸಮಾಜ ಸ್ಥಾಪಿತವಾದ ಹಾದರ -ಆದರಗಳಿಗೆ ಇನ್ನೊಂದು ಕವಲು ನೋಟವನ್ನು ಆಸ್ಪರಿಯವರು ಕಾಣಿಸುತ್ತಾರೆ. ಜೀವದೊಳಗೊಂದು ಬ್ರೂಣಕಟ್ಟಿ, ಅದಕ್ಕೆ ನರ ಮೆದುಳು ಎಲುಬು ಹುಟ್ಟಿ ಇನ್ನೊಂದು ಜೀವವಾಗುವ ಅಚ್ಚರಿಯ ವಿಜ್ಞಾನವನ್ನು ಕವಿತೆ ಹಡೆವುದು ಹಗುರದ ಮಾತಲ್ಲ.
ಚನ್ನಬಸಪ್ಪ ಆಸ್ಪರಿಯವರ “ಸಂತೆಯೊಳಗಣ ಮೌನ” ಕವನ ಸಂಕಲನದ ಕುರಿತು ನಾದ ಮಣಿನಾಲ್ಕೂರು ಬರಹ

Read More

ಇರುವಿಕೆ ಮತ್ತು ಆಗುವಿಕೆ

ಸಾಹಿತ್ಯಲೋಕ ಸೃಷ್ಟಿಸುವ ಉತ್ಕೃಷ್ಟ ಕೃತಿಗಳಲ್ಲಿ ಬದುಕಿನ ಸಂಕಟ, ಪ್ರಕ್ಷುಬ್ದತೆಗಳ ಅನುಭವ ತೀವ್ರತೆಗಳಿಗೆ ಈಡಾದ ನಿಗೂಢ ಸತ್ಯದ ಶೋಧನೆಯ ಹುಡುಕಾಟದ ಚಿತ್ರಣವನ್ನು ಕಾಣಬಹುದು. ಪೊಳ್ಳು ಸತ್ಯವನ್ನು ನಿರಾಕರಿಸುವ ಆತ್ಮವಿಶ್ವಾಸ ಸಹಿಸುವ ಶಕ್ತಿ ಸಂಕಟವನ್ನು ಮೌನವಾಗಿ ಬೇಗುದಿಗಳ ಅನುಭವದ ನಿಗೂಢತೆಯ ಲೋಕದ ಅಂತರಂಗದೊಳಗೆ ಪ್ರವೇಶಿಸುವ ಮುಕ್ತತೆ, ಈ ಎಲ್ಲವೂ ಸತ್ಯವನ್ನು ಹುಡುಕುವ ದಾರಿಯ ಭಾಗಗಳೇ ಆಗಿವೆ. ಅಂತಿಮವಾಗಿ ಈ ನಿಜಗಳನ್ನು ಅನ್ವೇಷಕರು ಕಾಣದೆಯೇ ಇರಬಹುದು. ಅನೂಹ್ಯ, ನೋವು, ಮುಗಿಯದ ಸಂಘರ್ಷ, ತಾಕಲಾಟಗಳನ್ನು ಸಹಿಸಿಕೊಳ್ಳುವ ಸಾಮಥ್ರ್ಯವು ಈಗಾಗಲೇ ಅನನ್ಯ ಸತ್ಯದ ಅನ್ವೇಷಣೆಗೆ ಬಳಸುತ್ತಿರುವ ಸ್ವಾನುಕೂಲ ಸಿದ್ದಮಾದರಿಗಳನ್ನು ವರ್ಜಿಸುವಾಗ ಸೃಷ್ಟಿಯಾಗುವಂತಹದು.
ಕಲಾವಿದ ಡಾ. ಎಂ.ಎಸ್. ಮೂರ್ತಿಯವರ “ಬೌಲ್” ಕಾದಂಬರಿ‌ಗೆ – ಪ್ರೊ. ಎನ್. ಮನು ಚಕ್ರವರ್ತಿಬರೆದ ಮುನ್ನುಡಿ

Read More

ಬಾಳಿನ ಸಂತೆಯಲ್ಲಿ ಗಜಲ್ ಧ್ಯಾನ..

ಕಲೆ ಎಂಬುದು ನಿಸರ್ಗದ ಒಂದು ಅನುಪಮ ಅಭಿವ್ಯಕ್ತಿ. ಕಲೆಯ ಚಂದ್ರಚಾಪದ ಮುಖ್ಯ ಬಣ್ಣವೆಂದರೆ ಅದು ಸಾಹಿತ್ಯ. ಇದು ಓದು-ಬರಹಗಳ ಮಧುಚಂದ್ರ!! ಬರವಣಿಗೆ ಎನ್ನುವುದು ಖಾಲಿ ಹಾಳೆಯ ಮೇಲೆ ಬಿಡಿಸಿರುವ ಸುಂದರ ರಂಗೋಲಿ. ಆ ರಂಗೋಲಿಯೋ ಅನನ್ಯ ಭಾವನೆಗಳ ಕಾರವಾನ್. ಆ ಕಾರವಾನ್ ನ ಪ್ರವೇಶಿಸಿ ಓದುವುದೆಂದರೆ ಅದೊಂದು ರೀತಿಯ ಮಾಗಿದ ಕಾಯುವಿಕೆ. ಈ ಕಾಯುವಿಕೆ, ಕನವರಿಕೆ ಒಂದು ಸಾಲಿನಿಂದ ಮತ್ತೊಂದು ಸಾಲಿಗೆ ಸದಾ ಚಲಿಸುತ್ತಿರುತ್ತದೆ, ಚಲಿಸುತ್ತಿರಬೇಕು.
ಶ್ರೀದೇವಿ ಕೆರೆಮನೆಯವರ ಗಝಲ್‌ಗಳ ವಿಶ್ಲೇಷಣೆ ಸಂಕಲನ “ತೀರದ ಧ್ಯಾನ” ಕೃತಿಗೆ ಡಾ. ಮಲ್ಲಿನಾಥ ಶಿ. ತಳವಾರ ಅವರು ಬರೆದ ಮುನ್ನುಡಿ

Read More

ಇವಾನ್ ಬುನಿನ್: ಭೌತ ವಸ್ತುಗಳ ಭಾವಗೀತಕಾರ

ಬುನಿನ್ನನ ಗದ್ಯ ಅವನನ್ನು ಹತ್ತೊಂಭತ್ತನೇ ಶತಮಾನದ ರಷ್ಯನ್ ಸಾಹಿತಿಕ ಸಂಪ್ರದಾಯದ ಮುಖ್ಯವಾಹಿನಿಯಲ್ಲಿ ಸ್ಪಷ್ಟವಾಗಿ ಎದ್ದು ಕಾಣುವಂತೆ ಮಾಡಿದೆ. ಟಾಲ್‍ಸ್ಟಾಯ್, ಟರ್ಜೆನೇವ್, ಚೆಕಾಫ್ ಮತ್ತು ಗಂಚರೋಫ್ ನಿಸ್ಸಂದೇಹವಾಗಿ ಇವನ ಮೂಲಪುರುಷರಾಗಿದ್ದಾರೆ. `ಎ ಹಿಸ್ಟರಿ ಆಫ್ ರಷ್ಯನ್ ಲಿಟರೇಚರ್’ನಲ್ಲಿ ಮರ್‍ಸ್ಕೀ ಅನ್ನುವವನು ಹೇಳುವಂತೆ: ಬುನಿನ್ನನ ಭಾಷೆ `ಕ್ಲಾಸಿಕಲ್’, ಮಿತವಾದ್ದು, ಸಮಚಿತ್ತವಾದ್ದು, ಮೂರ್ತವಾದದ್ದು…
ರಷ್ಯಾದ ಹೆಸರಾಂತ ಲೇಖಕ ಇವಾನ್‌ ಬುನಿನ್‌ನ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದದ್ದು, ಈ ಸಂಕಲನಕ್ಕೆ ಬುನಿನ್‌ ಕುರಿತಾಗಿ ಬರೆದ ಅವರ ಮಾತುಗಳು ಇಲ್ಲಿವೆ

Read More

ಕನ್ನಡಕ್ಕೆ ಬಂದ ತೆಲುಗಿನ ಕತೆಗಳ ಮುನ್ನುಡಿಯಿದು

ಜಾಗತಿಕ ಮುಕ್ತ ಮಾರುಕಟ್ಟೆಯ ಕಬಂಧ ಬಾಹುಗಳು ದೇಶದ ಅಧಿಕಾರಶಾಹಿಗಳ ಸ್ವಾರ್ಥ ರಾಜಕಾರಣದ ಬೆಂಬಲದೊಂದಿಗೆ ಚಾಚಿಕೊಂಡದ್ದರಿಂದಾಗಿ ರೈತರ ಬದುಕು ಮೂರಾಬಟ್ಟೆಯಾದ ಕಥೆಯನ್ನು ಹೇಳುವ ‘ಕೈಗೊಂಬೆ’, ಬೆವರು ಸುರಿಸಿ ಪ್ರಾಮಾಣಿಕವಾಗಿ ದುಡಿಯುವ ಶ್ರಮಜೀವಿಗಳ ಕಷ್ಟದ ದುಡಿಮೆಯನ್ನು ಸೊಳ್ಳೆಗಳು ರಕ್ತ ಹೀರುವಂತೆ ದರೋಡೆಗೈದು ಅವರ ಬದುಕನ್ನು ನರಕಸದೃಶವಾಗಿಸುವ ಭ್ರಷ್ಟಾಚಾರಿ ಅಧಿಕಾರಿವರ್ಗದವರ ಅನ್ಯಾಯದ ಜಾಲವನ್ನೂ ಅಲ್ಲಿ ಸೃಷ್ಟಿಯಾಗುವ ಹೃದಯವಿದ್ರಾವಕ ಸನ್ನಿವೇಶಗಳನ್ನೂ ಕಣ್ಣಿಗೆ ಕಟ್ಟುವಂತೆ ಚಿತ್ರಿಸುವ ಕಥೆ ‘ನಿಗೂಢ ಹಸ್ತಗಳು’.
ತೆಲುಗು ಕತೆಗಾರ ಪೆದ್ದಿಂಟಿ ಅಶೋಕ್‌ ಕುಮಾರ್‌ ಅವರ ಒಂದಷ್ಟು ಕತೆಗಳನ್ನು “ಜಾಲ” ಎಂಬ ಸಂಕಲನದ ಮೂಲಕ ಎಂ.ಜಿ. ಶುಭಮಂಗಳ ಕನ್ನಡಕ್ಕೆ ತಂದಿದ್ದು, ಅದಕ್ಕೆ ಡಾ. ಪಾರ್ವತಿ ಜಿ. ಐತಾಳರು ಬರೆದ ಮುನ್ನುಡಿ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ