Advertisement

Category: ದಿನದ ಪುಸ್ತಕ

ಸ್ತ್ರೀ ಸಂವೇದನೆಯ ಸರಳ ನಿರೂಪಣೆ

ಮಹಾಭಾರತದ ಪ್ರಮುಖ ಪಾತ್ರವಾದ ಗಾಂಧಾರಿಯ ದುಗುಡ, ಯಾತನೆ, ಮನದ ಅಂತರಂಗವನ್ನು ಸುಂದರವಾಗಿ ಅಭಿವ್ಯಕ್ತಿಸುವ ಅದ್ಭುತ ಪುಸ್ತಕವನ್ನು ಹೊರತರುತ್ತಿದ್ದಾರೆ. ಪುರಾಣಪ್ರಿಯರಾದವರಿಗೆ “ಗಾಂಧಾರಿ “ಎಂಬ ಆ ವಿಶಿಷ್ಟ ಭೂಮಿಕೆಯನ್ನು ಲೇಖಕಿ ದಿವ್ಯಾ ಹೇಗೆ ಪ್ರಸ್ತುತಪಡಿಸಿರಬಹುದು ಎಂಬ ಕುತೂಹಲವಿದೆ. ಅವರ ಕುತೂಹಲಕ್ಕೆ ತಣ್ಣೀರೆರಚದೇ ಅದ್ಭುತವಾಗಿ “ಮಿಂಚದ ಮಿಂಚು ” ಮೂಡಿ ಬಂದಿದೆ. ಸಾಮಾನ್ಯವಾಗಿ ಗಾಂಧಾರಿ ಮಹಾಭಾರತದಲ್ಲಿ ದುರಂತ ನಾಯಕಿಯಾಗಿ, ನಿಸ್ಸಹಾಯಕ ಮತ್ತು ಹತಾಶ ವ್ಯಕ್ತಿತ್ವದವಳಾಗಿ ಕಾಣಸಿಗುತ್ತಾಳೆ. ಅದನ್ನು ದಿವ್ಯಾ ತೆರಿದಿರಿಸಿದ ಬಗೆ ಅನನ್ಯ. ದಿವ್ಯಾಶ್ರೀಧರ್  ರಾವ್ ಅವರ ಹೊಸ ಕಿರುಕಾದಂಬರಿಗೆ ಜಗದೀಶ್ ಶೆಟ್ಟಿ ಬರೆದ ಮುನ್ನುಡಿ ಇಲ್ಲಿದೆ.

Read More

ಮಣ್ಣಿಗೆ ಮರಳಿದ ನೆಮ್ಮದಿ ವೀರರು

ಚೀನಾದಲ್ಲಿ ಬಿಂಗ್ ಲಾಂಗ್ ಹುಡುಕುತ್ತಾ ಕ್ಷಿಯಾಂಗ್ಟನ್ ತಲುಪಿದ್ದೆ. ಆದರೆ ಅದು ಬಿಂಗ್‌ಲಾಂಗ್ ಮಾರಾಟದ ಪ್ರದೇಶ ಮಾತ್ರವಾಗಿತ್ತು. ಯಾರನ್ನು ಕೇಳಿದರೂ ‘ಅಡಿಕೆ ಬೆಳೆಯುವ ಪ್ರದೇಶ ಹೈನಾನ್; ಹೆಚ್ಚಿನ ಮಾಹಿತಿಗೆ ನೀವು ಅಲ್ಲಿಗೇ ಹೋಗಬೇಕು’ ಎನ್ನುತ್ತಿದ್ದರು. ಹಾಗಾಗಿ ಚೀನಾದಲ್ಲಿ ಅಡಿಕೆಯ ಮಾಹಿತಿ ಸಂಗ್ರಹದ ಸಾಹಸ ಅರ್ಧದಲ್ಲಿಯೇ ನಿಂತಿತ್ತು. ಪರಿಸ್ಥಿತಿ ಹೀಗಿದ್ದಾಗ ಅಚಾನಕ್ಕಾಗಿ ಸಿಕ್ಕ ಅವಕಾಶವನ್ನು ತಪ್ಪಿಸಿಕೊಳ್ಳುವುದಿದೆಯೇ?
ಬಾಲಚಂದ್ರ ಸಾಯಿಮನೆ ಬಿಂಗ್‌ಲಾಂಗ್‌ ಮತ್ತು ಲಂಬನಾಗ್‌’ ಕೃಷಿ ಪ್ರವಾಸ ಕಥನಗಳ ಪುಸ್ತಕದ ಒಂದು ಲೇಖನ ನಿಮ್ಮ ಓದಿಗೆ

Read More

ಸರಳ ವಡ್ಡಾರಧನೆ ಎಂಬೊಂದು ಕೈದೀವಿಗೆ

ವಡ್ಡಾರಾಧನೆಯಲ್ಲಿ ಬರುವ ಜನಜೀವನ, ಜಾತಿವ್ಯವಸ್ಥೆ, ಸಮಾಜದಲ್ಲಿ ಸ್ತ್ರೀಯರ ಸ್ಥಾನಮಾನ, ಗ್ರಾಮ ಮತ್ತು ಪಟ್ಟಣದ ವರ್ಣನೆ, ತಿಂಡಿತಿನಿಸುಗಳು, ಬಹು ಮಹಡಿ ಕಟ್ಟಡದ ಬೀದಿಗಳು, ವೇಶ್ಯೆಯರ ಬೀದಿಯವರ್ಣನೆ, ಅಂಗಡಿ ಮುಂಗಟ್ಟುಗಳು ಇವೆಲ್ಲಾ ಆ ಕಾಲದ ಒಂದು ವ್ಯವಸ್ಥೆಯನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸುತ್ತವೆ. ಇವುಗಳನ್ನೆಲ್ಲಾ ಅನುವಾದಿಸಿರುವಲ್ಲಿ ಮೂಲದ ಶಬ್ಧದ ಮಿತಿಯನ್ನು ದಾಟದಿರುವದನ್ನು ಕಾಣಬಹುದಾಗಿದೆ. ಡಾ. ಕಬ್ಬಿನಾಲೆ ವಸಂತ ಭಾರದ್ವಾಜರು ಇಲ್ಲಿ ಭಾಷೆಯನ್ನು ದುಡಿಸಿಕೊಳ್ಳುವ ರೀತಿ ಮನೋಜ್ಞವಾಗಿದೆ ಎನ್ನುತ್ತ ಸರಳ ವಡ್ಡಾರಧನೆ ಕುರಿತ ಅನಿಸಿಕೆಯನ್ನು ನಾರಾಯಣ ಯಾಜಿ ಅವರು ಇಲ್ಲಿ ಪ್ರಸ್ತುತಪಡಿಸಿದ್ದಾರೆ.

Read More

ಹೊಸ ತಲೆಮಾರಿನ ಕಥೆಗಳು

‘ಕೊನೇ ಊಟ’ ಈ ಸಂಕಲನದ ಅತ್ಯಂತ ಮುಖ್ಯವಾದ ಅಷ್ಟೇ ಹೃದಯಸ್ಪರ್ಶಿ ಕಥೆ. ಸಂಯುಕ್ತ ಸಂಸ್ಥಾನಗಳ ನೇವಾರ್ಡ ರಾಜ್ಯದಲ್ಲಿ ಪೂರ್ವಕ್ಕಿರುವ ಕುಪ್ರಸಿದ್ಧ ಕಾರಾಗೃಹ ಈಲಿಯ ಜೈಲು. ಜೈಲಿನ ಸುತ್ತಲಿನ ಗೋಡೆಯನ್ನು ಹರಿತವಾದ ರೇಜರ್ ಬ್ಲೇಡುಗಳಿಂದ ನಿರ್ಮಿಸಿದ್ದಾರೆಂದರೆ ಒಳಗಡೆ ಇನ್ನೆಷ್ಟು ಭಯಾನಕ ಯಾತನಾಮಯ ದಬ್ಬಾಳಿಕೆ ನಡೆದಿರುತ್ತದೆಯೆಂಬುದು ಕೇವಲ ಊಹೆಗೆ ಬಿಟ್ಟ ವಿಷಯ, ಯಾವ ಕೈದಿಯೂ ಇಲ್ಲಿಂದ ಜೀವಂತ ಬಿಡುಗಡೆಯಾಗಿ ಹೊರಗೆ ಬಂದಿಲ್ಲ ಅಥವಾ ಗೋಡೆ ಜಿಗಿದು ಪಾರಾಗಿ ಓಡಿಹೋಗಿಲ್ಲ..
ಕಾವ್ಯಾ ಕಡಮೆ ಕಥಾ ಸಂಕಲನ “ಮಾಕೋನ ಏಕಾಂತ”ದ ಕುರಿತು ವಿಶ್ಲೇಷಣೆ ಬರೆದಿದ್ದಾರೆ ವ್ಯಾಸ ದೇಶಪಾಂಡೆ 

Read More

ಪ್ರಗತಿಶೀಲತೆಯ ಪ್ರಬಲ ಧ್ವನಿ ‘ಕಾರಾವಾನ್’

ರೈಲಿನಲ್ಲಿ ಪ್ರಯಾಣಿಸುವಾಗ ನಿರೂಪಕನ ಕಣ್ಣಿಗೆ ಬಿದ್ದ ಸಂಸಾರವನ್ನು ‘ಕಣ್ಣೀರ ಸಂಸಾರ’ ಎಂದೇ ಬಿಂಬಿಸುವುದರ ಮೂಲಕ ಅಂದಿನ ವಾಸ್ತವ ಪ್ರಪಂಚವನ್ನು ಓದುಗರಿಗೆ ಅರ್ಥೈಸಲು ಈ ಕೃತಿಯು ಪ್ರಯತ್ನಿಸುತ್ತದೆ. ಸ್ವಾತಂತ್ರ್ಯ ಚಳವಳಿಯ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬ್ರಿಟಿಷರಿಂದ ಶಿಕ್ಷೆಗೊಳಗಾಗಿ, ಆರು ತಿಂಗಳುಗಳನ್ನು ಹಿಂಡಲಗ ಸೆರೆಮನೆಯಲ್ಲಿ ಕಳೆದು, ಅಲ್ಲಿಂದ ತಿರುಗಿ ರೈಲಿನಲ್ಲಿ ತಮ್ಮೂರಿಗೆ ಬರುವ ಹಾದಿಯನ್ನೇ ಲೇಖಕರು ‘ಕಾರವಾನ್’ ಕಥನದ ಅನಾವರಣಕ್ಕೆ ಬಳಸಿಕೊಂಡಿದ್ದಾರೆ. ಬಸವರಾಜ ಕಟ್ಟೀಮನಿಯವರ ಕಾರವಾನ್ ಕತೆಯ ಕುರಿತು ಸುಮಾವೀಣಾ ಅವರ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ