Advertisement

Category: ದಿನದ ಪುಸ್ತಕ

ಗಾಂಧಿ ಎಂಬ ಕಾಡುವ ನೆನಪು…ಕತೆಗಳಲ್ಲಿ ಮರುಹುಟ್ಟು ಪಡೆದಾಗ…

ಇಲ್ಲಿನ ಇತರ ಕತೆಗಳಲ್ಲೂ ಗಾಂಧಿಯ ಪ್ರತಿರೂಪಗಳು ಬರುತ್ತವೆ. ಇದು ಕುತೂಹಲಕಾರಿ. ಗಾಂಧಿ ಬಯಸಿದ, ಅನ್ವೇಶಿಸಿದ ಆಯಾಮಗಳಲ್ಲೆಲ್ಲಾ ಗಾಂಧಿಯನ್ನೇ ಕಾಣುವ ಒಂದು ತಾಂತ್ರಿಕ ಕೌಶಲ್ಯ ಈ ಕತೆಗಳಲ್ಲಿದೆ. ಇದೇ ಜಾಡಿನಲ್ಲಿರುವ ಗಾಂಧಿಯೊಂದಿಗೆ ಮಾತಾಡುವೆ ಮತ್ತು ಆಲದ ಮರದಲ್ಲಿ ಒಂದು ಹಕ್ಕಿ ಕತೆಗಳು ಕಥಾವಸ್ತುವಿನ ಸ್ವರೂಪ ಮತ್ತು ಶೈಲಿಯಲ್ಲಿ ಕೊಂಚ ಭಿನ್ನ. ಗಾಂಧಿ ಅನುಯಾಯಿಯ ಮಕ್ಕಳು ತಮ್ಮ ತಾಯಿ/ತಂದೆ ಪ್ರಭಾವಕ್ಕೊಳಗಾದ ಶಕ್ತಿಯನ್ನು ಮರುಭೇಟಿಮಾಡುವ, ಆ ಮೂಲಕ ಗಾಂಧಿಯನ್ನು ಮುಖಾಮುಖಿಯಾಗುವ ಪರಿಯನ್ನು ಅನಾವರಣಮಾಡುತ್ತವೆ.
ಕೆ. ನಲ್ಲತಂಬಿ ಅನುವಾದಿಸಿದ ಮಹಾತ್ಮನ ಬದುಕಿನ ಕೆಲವು ಆಯ್ದ ಕತೆಗಳ ಸಂಕಲನ “ಮತ್ತೊಂದು ರಾತ್ರಿ” ಕೃತಿಗೆ ಕೆ.ಪಿ. ಸುರೇಶ ಬರೆದ ಮುನ್ನುಡಿ

Read More

ದಟ್ಟ ಅನುಭವಗಳ ಬೆನ್ನ ಹಿಡಿದು 

ಇಡೀ ಸಂಕಲನ ಜನಪ್ರಿಯತೆಯ ಮಾರ್ಗ ಹಾಗೂ ಮಹತ್ವಾಕಾಂಕ್ಷಿ ರಚನಾ ಸೆಳೆತ.. ನಡುವೆ ತುಯ್ಯುತ್ತಿದೆ. ‘ಮಾರ್ಗೀ ಅಂಗಿ’ ‘ಕರ್ಮಣ್ಯೇವಾಧಿಕಾರಸ್ಥೆ..’ ‘ಅವ್ವ ಮತ್ತು ರೊಟ್ಟಿ’ ಹಾಗೂ ‘ದ್ಯಾಮಿ’ ಈ ನಾಲ್ಕು ಮಹತ್ವಾಕಾಂಕ್ಷಿ ಕತೆಗಳು ಸಂಕಲನದ ತೂಕ ಹೆಚ್ಚಿಸಿವೆ. ಎಲ್ಲರಿಗೂ ಬೇಕಾದ ಮನುಷ್ಯನಾದರೂ ಸಹ ಅಲ್ಪಸಂಖ್ಯಾತ ಸಿಂಪಿಗನೊಬ್ಬ ಹೇಗೆ ಗ್ರಾಮ ರಾಜಕಾರಣಕ್ಕೆ ಈಡಾಗಿ ಬೇಡವಾಗುತ್ತಾನೆ ಎಂಬುದನ್ನು ಮಾರ್ಗೀ ಅಂಗಿ-ಕತೆ ಮನೋಜ್ಞವಾಗಿ ನಿರೂಪಿಸುತ್ತದೆ. ವೈದ್ಯಲೋಕದ ವೈರುಧ್ಯಗಳ ಚಿತ್ರಣದ ‘ಕರ್ಮಣ್ಯೆ ವಾಧಿಕಾರಸ್ಥೆ’ ಕತೆ ಮಾನವೀಯ ಸೂಕ್ಷ್ಮ ಎಳೆಯೊಂದರ ಮೂಲಕ ನಮ್ಮೆದೆಯನ್ನು ತಟ್ಟುತ್ತದೆ.
ಲಿಂಗರಾಜ ಸೊಟ್ಟಪ್ಪನವರ ಚೊಚ್ಚಲ ಕಥಾ ಸಂಕಲನ “ಮಾರ್ಗಿ”ಗೆ ಡಾ. ಪ್ರಹ್ಲಾದ ಅಗಸನಕಟ್ಟೆ‌ ಬರೆದ ಮುನ್ನುಡಿಇಡೀ ಸಂಕಲನ ಜನಪ್ರಿಯತೆಯ ಮಾರ್ಗ ಹಾಗೂ ಮಹತ್ವಾಕಾಂಕ್ಷಿ ರಚನಾ ಸೆಳೆತ.. ನಡುವೆ ತುಯ್ಯುತ್ತಿದೆ. ‘ಮಾರ್ಗೀ ಅಂಗಿ’ ‘ಕರ್ಮಣ್ಯೆ ವಾಧಿಕಾರಸ್ಥೆ..’ ‘ಅವ್ವ ಮತ್ತು ರೊಟ್ಟಿ’ ಹಾಗೂ ‘ದ್ಯಾಮಿ’ ಈ ನಾಲ್ಕು ಮಹತ್ವಾಕಾಂಕ್ಷಿ ಕತೆಗಳು ಸಂಕಲನದ ತೂಕ ಹೆಚ್ಚಿಸಿವೆ. ಎಲ್ಲರಿಗೂ ಬೇಕಾದ ಮನುಷ್ಯನಾದರೂ ಸಹ ಅಲ್ಪಸಂಖ್ಯಾತ ಸಿಂಪಿಗನೊಬ್ಬ ಹೇಗೆ ಗ್ರಾಮ ರಾಜಕಾರಣಕ್ಕೆ ಈಡಾಗಿ ಬೇಡವಾಗುತ್ತಾನೆ ಎಂಬುದನ್ನು ಮಾರ್ಗೀ ಅಂಗಿ-ಕತೆ ಮನೋಜ್ಞವಾಗಿ ನಿರೂಪಿಸುತ್ತದೆ. ವೈದ್ಯಲೋಕದ ವೈರುಧ್ಯಗಳ ಚಿತ್ರಣದ ‘ಕರ್ಮಣ್ಯೆ ವಾಧಿಕಾರಸ್ಥೆ’ ಕತೆ ಮಾನವೀಯ ಸೂಕ್ಷ್ಮ ಎಳೆಯೊಂದರ ಮೂಲಕ ನಮ್ಮೆದೆಯನ್ನು ತಟ್ಟುತ್ತದೆ.
ಲಿಂಗರಾಜ ಸೊಟ್ಟಪ್ಪನವರ ಚೊಚ್ಚಲ ಕಥಾ ಸಂಕಲನ “ಮಾರ್ಗಿ”ಗೆ ಡಾ. ಪ್ರಹ್ಲಾದ ಅಗಸನಕಟ್ಟೆ‌ ಬರೆದ ಮುನ್ನುಡಿ

Read More

ಒಲೆ ಬದಲಾದರೂ ಉರಿ ಬದಲಾಗದು!

ಇದು ಅವಳ ಒಬ್ಬಳ ಕತೆಯಲ್ಲ ಮನೆ ಮನೆ ಕತೆ. ಹೊರಗೆ ಹೋಗಬೇಕಾದರೆ ಹೆಚ್ಚಿನ ಎಲ್ಲ ಹೆಂಗಸರಿಗೂ ಈ ಜವಾಬ್ದಾರಿ ಹೆಗಲಿಗೇರಿರುತ್ತದೆ. ನನ್ನಂಥ ಜಮೀನ್ದಾರ ಮಹಿಳೆಯರಿಗೆ ಇನ್ನೂ ಕಷ್ಟ. ಅವಳಿಗೆ ಗಂಡ, ಮಕ್ಕಳಿಗೆ ಮಾತ್ರ ಅಲ್ಲ ತೋಟದ ಕೆಲಸಕ್ಕೆ ಬರುವ ಕಾರ್ಮಿಕರಿಗೂ ಅಡುಗೆ ಮಾಡಬೇಕಾದ ಪರಿಸ್ಥಿತಿ. ನಾನು ನಾಳೆ ಹೊರಗೆ ಹೋಗಲು ಇದೆಯೆಂದಾದರೆ ಇಂದೇ ರಾತ್ರಿ ಉಗಿಯಲ್ಲಿ ಬೇಯಿಸಿ ಮಾಡುವ ಪುಂಡಿ, ಕಡುಬು, ಪತ್ರೊಡೆಯಂತಹ ತಿಂಡಿಯನ್ನು ಮಾಡಿ ಇಡುತ್ತೇನೆ. ಯಾಕೆ ಹೀಗೆ? ಒಂದು ದಿನದ ಮಟ್ಟಿಗಾದರೂ ಅಡುಗೆ ಮನೆ ಹೊಣೆಯನ್ನು ಗಂಡಿಗೆ ಹೊತ್ತುಕೊಳ್ಳಲು ಆಗುವುದಿಲ್ಲವಾ?
ಸಹನಾ ಕಾಂತಬೈಲು ಅವರು ಬರೆದ ‘ಆನೆ ಸಾಕಲು ಹೊರಟವಳು’ ಪುಸ್ತಕದ ಮತ್ತೊಂದು ಅಧ್ಯಾಯ ಇಲ್ಲಿದೆ.

Read More

ಎಲ್ಲರವ…. ಈ ಲೆಬನಾನಿನವ…

ಗಿಬ್ರಾನ್‌ನಂತವರ ಬದುಕು ಉರಿವ ಮೇಣದ ಬತ್ತಿಯಂತೆ ಬೆಳಕನ್ನು ಕೊಡುತ್ತಲೇ ತನ್ನನ್ನು ತಾನು ಸುಟ್ಟುಕೊಳ್ಳುವ ನೋವನ್ನು ಒಡಲುಗೊಂಡಿರುವ ಜೀವನವಾಗಿದೆ. ಬದುಕು ಎಂದರೆ ಪ್ರೀತಿಯನ್ನು ಹುಡುಕಲು ಸಿಕ್ಕಿರುವ ಅಪರೂಪದ ಅವಕಾಶವೆಂಬುದು ಗಿಬ್ರಾನನ ನಂಬಿಕೆಯಾಗಿರುವಂತಿದೆ. ಆತ ಬರೆದಿರುವ ಆದಿಮವೂ ನಿತ್ಯ ನೂತನವೂ ಆಗಿರುವ ಪ್ರಾಫೆಟ್‌ ಕಾವ್ಯದ ಕಲ್ಪನೆಯು ಆತನ ಹದಿನಾಲ್ಕನೇ ವಯಸ್ಸಿಗೆ ಆರಂಭವಾಯಿತು ಎಂಬ ಸಂಗತಿ ಮಹದ್‌ಅಚ್ಚರಿಯ ವಿಷಯವಾಗಿದೆ.
ಸಂಧ್ಯಾರಾಣಿ ಅನುವಾದಿಸಿರುವ ಬಾರ್ಬರಾ ಯಂಗ್‌ ಬರೆದ ಖಲಿಲ್‌ ಗಿಬ್ರಾನ್‌ ಕುರಿತ ಪುಸ್ತಕ “ಇವ ಲೆಬನಾನಿನವ”ಕ್ಕೆ ಕೆ.ವೈ. ನಾರಾಯಣಸ್ವಾಮಿ ಬರೆದ ಮುನ್ನುಡಿ

Read More

ಹೋರಿಕರುವಿನ ವಿದಾಯ ಪ್ರಸಂಗ

ಇಂದು ಬೇಸಾಯ ಮಾಡುವುದನ್ನು ಎಲ್ಲರೂ ನಿಲ್ಲಿಸಿದ್ದರಿಂದ ಹೋರಿ ಯಾರಿಗೂಬೇಡ. ಗದ್ದೆ ಮಾಡುವವರೂ ಯಂತ್ರಕ್ಕೆ ಶರಣಾಗಿದ್ದಾರೆ. ಗೊಬ್ಬರಕ್ಕಾಗಿ ಸಾಕುವುದೂ ವ್ಯರ್ಥ. ಏಕೆಂದರೆ, ಇರುವ ಹಸುಗಳ ಗೊಬ್ಬರವನ್ನೇ ತೆಗೆಯಲು ಕೂಲಿಯಾಳುಗಳ ಕೊರತೆ ಇದೆ. ಕೂಲಿಯವರು ಸಿಕ್ಕಿದರೂ ಸಂಬಳ ಕೊಡಲು ಪೂರೈಸಬೇಕಲ್ಲ? ವೆಚ್ಚ ಹೆಚ್ಚಾಗಿ ಉಳಿತಾಯ ಇಲ್ಲದ ಹೋರಿ ಸಾಕುವ ಕೆಲಸ ಯಾರಿಗೆ ಬೇಕು? ಎಲ್ಲ ಹೈನುಗಾರರ ಮನೆಗೆ ಹೋಗಿ ನೋಡಿದರೆ ಅಲ್ಲಿ ಹಸು ಮತ್ತು ಹೆಣ್ಣು ಕರುಗಳು ಮಾತ್ರ ಇರುತ್ತವೆ!  ಹಾಗಾದರೆ, ಅವರಲ್ಲಿ ಗಂಡು ಕರು ಹುಟ್ಟುವುದೇ ಇಲ್ಲವೇ? ಹುಟ್ಟಿದರೆ ಅವರು ಏನು ಮಾಡುತ್ತಾರೆ ? ಸಹನಾ ಕಾಂತಬೈಲು ಅವರು ಬರೆದ ಆನೆ ಸಾಕಲು ಹೊರಟವಳು ಪುಸ್ತಕದ  ಕೆಲವು ಅಧ್ಯಾಯಗಳು ಪ್ರತೀ ಮಂಗಳವಾರ ಪ್ರಕಟವಾಗಲಿದೆ. ಮೊದಲ ಅಧ್ಯಾಯ ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ