Advertisement

Category: ದಿನದ ಪುಸ್ತಕ

“ಕಾನನ ಜನಾರ್ದನ” ಕಾದಂಬರಿಯ ಒಂದೆರಡು ಪುಟಗಳು

ಹತ್ತು ದಿನಗಳಿಂದ ಅವರು ಹೆಚ್ಚು ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಕಲೆಹಾಕಿ ನಮ್ಮದೇ ರೀತಿಯಲ್ಲಿ ಅವಲೋಕಿಸುತ್ತಿದ್ದೆವು. ನಮಗೆ ಇಬ್ಬರು ಮಾತ್ರವೆ ಕೆ. ನಾಗಯ್ಯ ಅವರ ಈಗಿನ ಸ್ಥಿತಿಗೆ ಸಂಬಂಧ ಹೊಂದಿರಲು ಸಾಧ್ಯ ಎಂಬ ಸಂಶಯ ಮೂಡಿತು. ಇಬ್ಬರೂ ಕೂಡ ಇತ್ತೀಚೆಗೆ ಅವರು ತೊಡಗಿಸಿಕೊಂಡಿದ್ದ ಚಟುವಟಿಕೆಗೆ ಸಂಬಂಧ ಪಟ್ಟವರು: ಒಬ್ಬರು ನಾಗಯ್ಯ ಇತ್ತೀಚೆಗೆ ಬರೆದ ಕಾದಂಬರಿಯ ಪ್ರಕಾಶಕರು.
ಡಾ. ಕೆ. ಎನ್. ಗಣೇಶಯ್ಯ ಬರೆದ “ಕಾನನ ಜನಾರ್ದನ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುರಿತೋದದ ಚಿತ್ತಾರಗಿತ್ತಿಯರು ಎಳೆವ ಗೆರೆಗಳು

ಮಲೆಕರ್ನಾಟಕದ ದೀವರರ ಜನಾಂಗದ ಮಹಿಳೆಯರು ಹಸೆಚಿತ್ತಾರವನ್ನು ಗೋಡೆಯ ಮೇಲೆ, ಬುಟ್ಟಿಗಳು, ಬಾಗಿಲು, ಕಿಟಕಿ, ಇಡುಕಲು, ಮಡಕೆ ಇವುಗಳ ಮೇಲೆ ಸಸ್ಯಜನ್ಯ ಮೂಲದ ಬಣ್ಣಗಳಿಂದ ಶುಭ ಸಂದರ್ಭಗಳಲ್ಲಿ ಆಕರ್ಷಕ ರೀತಿಯಲ್ಲಿ ಚಿತ್ತಾರ ಬಿಡಿಸುತ್ತಾರೆ. ಚಿತ್ರಿಸಲು ಬೇಕಾದ ಬಣ್ಣಗಳನ್ನು ಅವರೇ ತಯಾರಿಸಿಕೊಳ್ಳುವರು. ಈ ಕಲೆಯನ್ನು ದೀವರ  ಮಹಿಳೆಯರ ಹಸೆ ಚಿತ್ತಾರವೆಂದೇ ಗುರುತಿಸಲಾಗಿದೆ
ರವಿರಾಜ್ ಸಾಗರ್ ಬರೆದ ಸಂಶೋಧನಾ ಕೃತಿ “ಕರ್ನಾಟಕ ದೇಶಿ ಚಿತ್ರಕಲೆ ಹಸೆ ಚಿತ್ತಾರ” ಕುರಿತು ಮಧು ಗಣಪತಿರಾವ್ ಮಡೆನೂರು ಬರಹ .

Read More

ಕಾಲನ ಮಹಿಮೆಗೆ ಶರಣಾದ ಕತೆಗಳ ಗುಚ್ಛ

ಮಲೆನಾಡಿನ ಮಡಿಲಲ್ಲಿರುವ ಸಕ್ರೆಬೈಲಿನಲ್ಲಿ ಬಹುತೇಕ ನಡೆಯುವ ಕತೆಗಳು ಮನುಷ್ಯ ಸಂಬಂಧಗಳಲ್ಲಿನ ತಾಕಲಾಟಗಳನ್ನು ಬಿಂಬಿಸುತ್ತವೆ. ಸಮಾಜದ ಅಧೋಮುಖಿ ಬೆಳವಣಿಗೆಗಳನ್ನು, ಸೋಗಲಾಡಿತನವನ್ನು, ಮುಖವಾಡದ ಹಂಗನ್ನು, ಸುಖದ ಹಪಾಹಪಿಯನ್ನು, ಆಧುನಿಕತೆ ತಂದೊಡ್ಡಿರುವ ಅಪಾಯಗಳನ್ನು, ವ್ಯಕ್ತಿತ್ವದ ವಿಕಾಸವನ್ನು, ಬದುಕಿನ ಸಂಕೀರ್ಣತೆಗಳನ್ನು ಕತೆಗಳು ಹದವಾಗಿ ಮೈಗೂಡಿಸಿಕೊಂಡು ಬೆಳೆದಿವೆ.
ಅಲಕಾ ಕಟ್ಟೆಮನೆಯವರ ʻಹೊರಳು ಹಾದಿಯ ನೋಟʼ ಕಥಾಸಂಕಲನದ ಕುರಿತು ನಿವೇದಿತಾ ಎಚ್. ಬರಹ

Read More

ಮುಸ್ಲಿಮರ ಆತಂಕ ಮತ್ತು ಅನಿಶ್ಚಿತ ಭವಿಷ್ಯ

ಗಜಾಲಾ ವಹಾಬ್ ಬರೆದ ಈ ಪುಸ್ತಕದಲ್ಲಿ ಚಿಂತನಶೀಲ ಬರಹಗಳಿವೆ.  ಇಸ್ಲಾಮಿನ ಧಾರ್ಮಿಕ ರಚನೆ-ನೀತಿನಿಯಮಗಳ ಇತಿಹಾಸವನ್ನು ಆಳವಾಗಿ ಶೋಧಿಸುತ್ತ ಪ್ರವಾದಿಯವರ ಮರಣಾನಂತರ ಖಲೀಫರ ಕಾಲದಿಂದ ಧಾರ್ಮಿಕ ಏಕಸ್ವಾಮ್ಯಕ್ಕಾಗಿ   ಶಿಯಾ ಸುನ್ನಿಗಳ ನಡುವಿನ ಮತಬೇಧಗಳು, ಕುಲೀನ ಆಶ್ರಫ್, ಸೈಯದ್ ಮತ್ತು ಪಠಾಣರ ನಡುವಿನ ಶ್ರೇಣೀಕರಣಗಳು ಮುಸ್ಲಿಮ್ ಸಮಾಜವನ್ನು ಒಳಗಿನಿಂದಲೇ ಹೇಗೆ ಶಿಥಿಲಗೊಳಿಸಿದವು ಎಂದು ದಾಖಲಿಸುತ್ತಾರೆ. ಡಾ. ಎಸ್. ಸಿರಾಜ್ ಅಹ್ಮದ್‍ ಲೇಖನ ಇಲ್ಲಿದೆ. 

Read More

ದೇವಕಿ ಜೈನ್ ಆತ್ಮಕತೆಯ ಕೆಲವು ಪುಟಗಳು

ಮೈಸೂರು ನಾಗರಿಕ ಸೇವೆಯ ಪ್ರೊಬೇಷನರಿ ಕಲಿಕೆಯಲಿದ್ದಾಗ, ಅಪ್ಪ ಕುದುರೆ ಸವಾರಿ ಕಲಿತಿದ್ದರು. ಈ ಕತೆಯನ್ನು ಹೇಳುತ್ತ ಹೇಳುತ್ತ ಅಮ್ಮ ನಗುತ್ತಿದ್ದಳು. ‘ನೋಡು, ನಾನು ಅವರನ್ನು ಮೊದಲು ಹರಿವಾಣದಲ್ಲಿ ತುಂಬಿದ್ದ ನೀರಿನಲ್ಲಿ ನೋಡಿದ್ದೆ’. ಸಾಮಾನ್ಯವಾಗಿ ಆ ಕಾಲದಲ್ಲಿ ಸಾಂಪ್ರದಾಯಿಕ ಮದುವೆಗಳಲ್ಲಿ ಸಂಬಂಧಗಳು ಮಧುರವಾಗಿರುವುದು ಅಪರೂಪ. ಆದರೆ ನನ್ನ ಅಪ್ಪ ಅಮ್ಮನ ಸಂಬಂಧ ಬಹಳ ಮಧುರವಾಗಿ ಆರಂಭವಾಗಿ, ಅವರ ಬದುಕಿನುದ್ದಕ್ಕೂ ಮಧುರವಾಗಿಯೇ ಸಾಗಿತು. ದೇವಕಿ ಜೈನ್ ಅವರ ಆತ್ಮಕತೆ ‘ದ ಬ್ರಾಸ್ ನೋಟ್‍ ಬುಕ್’ ಅನ್ನು ಕೋಡಿಬೆಟ್ಟು ರಾಜಲಕ್ಷ್ಮಿ ‘ಹಿತ್ತಾಳೆ ಬಣ್ಣದ ಪುಸ್ತಕ’ ಎಂಬ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದು, ಆ ಪುಸ್ತಕದ ಕೆಲವು ಪುಟಗಳು ಇಲ್ಲಿವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ