Advertisement

Category: ದಿನದ ಪುಸ್ತಕ

ಆನೆಗಳ ಮನೋಲೋಕವನ್ನು ಸೆರೆಹಿಡಿಯುವ ವಿಸ್ಮಯಗಳು

ಈ ಕೃತಿಯಲ್ಲಿ’ರಾಜನ ಸಿಟ್ಟಿಗೆ ಪಟ್ಟದಾನೆಗಳು ಬಲಿ’ ಎಂಬ ಬರಹವಂತೂ ನನ್ನನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟಿತು.  ಪಾಕಿಸ್ತಾನದ ಮೃಗಾಲಯವೊಂದರಲ್ಲಿದ್ದ ಆನೆಯನ್ನು ಆನ್ಲೈನ್ ಅಭಿಯಾನ ಮಾಡಿ ಬಿಡಿಸಿದ್ದು,  ನಂತರ ಬಿಡುಗಡೆಗೊಂಡ ಕಾವಾನನ್ ಅನ್ನುವ ಆನೆ ಕಾಂಬೋಡಿಯಾದ ಆನೆಗಳ ಜೊತೆಗೆ ಸೊಂಡಿಲು ತಾಗಿಸಿ ಹರ್ಷ ವ್ಯಕ್ತಪಡಿಸಿದ್ದು ಇವೆಲ್ಲವೂ ಭಾವುಕ ಆನೆಗಳ ಮನೋಲೋಕವನ್ನೆ ಪರಿಚಯಿಸುತ್ತವೆ.   ಆನೆಗಳೇ ಮನುಷ್ಯರನ್ನು ಹೆಚ್ಚಾಗಿ ಹಚ್ಚಿಕೊಳ್ಳುತ್ತವೆ. 
ಐತಿಚಂಡ ರಮೇಶ್ ಉತ್ತಪ್ಪರ ‘ಆನೆ ಲೋಕದ ವಿಸ್ಮಯ’ ಕೃತಿಯ ಕುರಿತು ಸುಮಾವೀಣಾ ಬರಹ

Read More

ಪೂರ್ವಕ್ಕೆ ಒಂದು ಅಪೂರ್ವ ಪಯಣ

ನಿಡಿತವಾದ ಕತೆಯ ಹಂದರವಿರುವ ಈ ಕೃತಿಯು ಒಂದು ತಾತ್ವಿಕ ಪ್ರಬಂಧದ ಹಾಗೆಯೆ ಇದೆ. ಅದು ಎತ್ತುವ ಬಹುಮುಖ್ಯ ಪ್ರಶ್ನೆಗಳು ಚರಿತ್ರೆ, ಬರಹ, ಆತ್ಮ ಜಿಜ್ಞಾಸೆ ಇವುಗಳಿಗೆ ಸಂಬಂಧಪಟ್ಟಿವೆ. ಸಂಘ, ಪಯಣ ಇವೆಲ್ಲವು ನಾವು ಕಟ್ಟಿಕೊಳ್ಳುವ ರಚನೆಗಳಲ್ಲವೆ? ಎಲ್ಲರಿಗೂ ಸ್ವಂತದ ಉದ್ದೇಶವಿರುವುದಾದರೆ ಪಯಣಕ್ಕೆ ಇರುವ ಉದ್ದೇಶವೇನು? ಸಂಘವೆಂದರೆ ಏನು? ಕಟ್ಟಳೆಗಳು ಹೇಗೆ ರಚನೆಯಾಗುತ್ತವೆ? ನಿರೂಪಕನು ಸಂಘದ ನಿಯಮಗಳನ್ನು ಮುರಿದರೂ ಅವನಿಗೆ ಶಿಕ್ಷೆ ಇಲ್ಲ. ಅವನು ಹೇಳಲು ಹೊರಟಿರುವ ಕತೆಗೆ ಎಷ್ಟೊಂದು ಎಳೆಗಳಿವೆಯಲ್ಲ?
ಕೆ. ಪ್ರಭಾಕರನ್‌ ಅನುವಾದಿಸಿದ ಜರ್ಮನಿಯ ಹರ್ಮನ್‌ ಹೇಸ್‌ ಬರೆದ ಕಾದಂಬರಿ ‘ಪೂರ್ವದೆಡೆಗಿನ ಪಯಣ’ ಕೃತಿಗೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ಶಿಶಿರ ಮಾಸದಲ್ಲಿ ಕವಿತೆಯ ಓದು

ನೆರೂಡನ ಪ್ರಸಿದ್ಧ ಮಾತುಗಳು ಇಲ್ಲಿ ನೆನಪಾಗುತ್ತಿವೆ ‘ವಾಸ್ತವವಾದಿಯಲ್ಲದ ಕವಿ ಸತ್ತಿರುತ್ತಾನೆ. ಕೇವಲ ವಾಸ್ತವವಾದಿಯಾದ ಕವಿಯೂ ಸತ್ತಿರುತ್ತಾನೆ. ಕೇವಲ ವಿಚಾರ ಮಾತ್ರವೇ ಆಗಿರುವ ಕವಿಯನ್ನು ಮೂರ್ಖರು ಮಾತ್ರ ಅರ್ಥಮಾಡಿಕೊಳ್ಳುತ್ತಾರೆ! ಇದೂ ಕೂಡ ವಿಷಾದದ ಸಂಗತಿ’. ಡಾ. ಅರುಂಧತಿ ಅವರ ಕವಿತೆಗಳೂ ಇಂತಹ ತೊಡಕುಗಳನ್ನು ದಾಟಿ, ಜಟಿಲತೆ, ಆರ್ಭಟ, ರೊಚ್ಚು ಹಾಗೂ ಪ್ರತೀಕಾರದ ಸೋಂಕಿಲ್ಲದೆ, ಸರಳತೆಯಲ್ಲಿ ಅರಳಿವೆ. ಇಲ್ಲಿ ‘ಸರಳತೆ’ ಎಂದರೆ ಸರಳೀಕರಿಸಿದ್ದು ಎನ್ನುವ ಅರ್ಥದಲ್ಲಿ ಅಲ್ಲ! ಅನುಕಂಪ-ಕ್ರೌರ್ಯ, ನಂಬಿಕೆ-ದ್ರೋಹ ಇವುಗಳೆಲ್ಲದರ ಸಂಘರ್ಷ.
ಡಾ. ಅರುಂಧತಿಯವರ ಚೊಚ್ಚಲ ಕವನ ಸಂಕಲನ ‘ಜೀವ ಜಾಲದ ಸಗ್ಗ’ಕ್ಕೆ ಜಿ ವಿ ಆನಂದಮೂರ್ತಿ ಬರೆದ ಮುನ್ನುಡಿನೆರೂಡನ ಪ್ರಸಿದ್ಧ ಮಾತುಗಳು ಇಲ್ಲಿ ನೆನಪಾಗುತ್ತಿವೆ ‘ವಾಸ್ತವವಾದಿಯಲ್ಲದ ಕವಿ ಸತ್ತಿರುತ್ತಾನೆ. ಕೇವಲ ವಾಸ್ತವವಾದಿಯಾದ ಕವಿಯೂ ಸತ್ತಿರುತ್ತಾನೆ. ಕೇವಲ ವಿಚಾರ ಮಾತ್ರವೇ ಆಗಿರುವ ಕವಿಯನ್ನು ಮೂರ್ಖರು ಮಾತ್ರ ಅರ್ಥಮಾಡಿಕೊಳ್ಳುತ್ತಾರೆ! ಇದೂ ಕೂಡ ವಿಷಾದದ ಸಂಗತಿ’. ಡಾ. ಅರುಂಧತಿ ಅವರ ಕವಿತೆಗಳೂ ಇಂತಹ ತೊಡಕುಗಳನ್ನು ದಾಟಿ, ಜಟಿಲತೆ, ಆರ್ಭಟ, ರೊಚ್ಚು ಹಾಗೂ ಪ್ರತೀಕಾರದ ಸೋಂಕಿಲ್ಲದೆ, ಸರಳತೆಯಲ್ಲಿ ಅರಳಿವೆ. ಇಲ್ಲಿ ‘ಸರಳತೆ’ ಎಂದರೆ ಸರಳೀಕರಿಸಿದ್ದು ಎನ್ನುವ ಅರ್ಥದಲ್ಲಿ ಅಲ್ಲ! ಅನುಕಂಪ-ಕ್ರೌರ್ಯ, ನಂಬಿಕೆ-ದ್ರೋಹ ಇವುಗಳೆಲ್ಲದರ ಸಂಘರ್ಷ.
ಡಾ. ಅರುಂಧತಿಯವರ ಚೊಚ್ಚಲ ಕವನ ಸಂಕಲನ ‘ಜೀವಜಾಲದ ಸಗ್ಗ’ಕ್ಕೆ ಜಿ ವಿ ಆನಂದಮೂರ್ತಿ ಬರೆದ ಮುನ್ನುಡಿ

Read More

ಸಂಕಟ, ಸಂಘರ್ಷದ ಕಥೆ ಹೆಣೆಯುವ ಗೈರಸಮಜೂತಿ

 ಒಂದು ಕಾಲದ ನಮ್ಮ ಹಿಂದಿ ಕವಿಗಳಾದ ಬಚ್ಚನ್, ನಿರಾಲಾ, ಸುಮಿತ್ರಾನಂದನ್ ಪಂತರಂತಹ ಲೇಖಕರು ರೂಪಿಸಿಕೊಂಡಿದ್ದ ಆಜ್ಞೆಯತಾವಾದದ ಇನ್ನೊಂದು ಉದಾರೀಕೃತ ತಾತ್ವಿಕ ಸುಕುಮಾರ ರೂಪವೇ ಈ ಕಾದಂಬರಿಯ ಅಡಿಪಾಯದಲ್ಲೂ ಇದೆ ಎನ್ನಿಸುತ್ತದೆ. ಹಾಗೆಂದ ಮಾತ್ರಕ್ಕೆ ಈ ಬಗೆಯಲ್ಲಿ ರಸರಮ್ಯಲೋಕವೊಂದನ್ನು ಕಟ್ಟಿಕೊಡುವ ಕಥನಗಳು ಇಲ್ಲಿವೆ.  ರಾಘವೇಂದ್ರ ಪಾಟೀಲರ “ಗೈರ ಸಮಜೂತಿ” ಕಾದಂಬರಿಯ ಕುರಿತು ಮಾಲಿನಿ ಗುರುಪ್ರಸನ್ನ ಬರಹ

Read More

ಮಧ್ಯಮಾವತಿಯ ಅಂತರಂಗದಲ್ಲಿ ‘ಅವನು’

ಈ ಕವನಸಂಕಲನದಲ್ಲಿ , ಪೂರ್ಣಿಮಾ ಸುರೇಶ್ ಕಟ್ಟಿಕೊಡುವ ಅಂತರಂಗದ ಈ “ಅವನು” ಅನ್ನುವ ಪಾತ್ರ ಬಹಳ ಕಾಡುತ್ತದೆ. ಅದು ‘ಅವಳು’ ಎಂಬುದಾಗಿ ಬದಲಾಗಲೂ ಆಗಬಹುದು. ಅಂತರಂಗದ ‘ಅವನು’  ಬಹಳಷ್ಟು ಪ್ರಶ್ನೆ ಕೇಳುತ್ತಾನೆ. ಯಾವುದೋ ನಮ್ಮ ಸಮಸ್ಯೆಗಳಿಗೆ ಪರಿಹಾರವಾಗುತ್ತಾನೆ. ಎಷ್ಟೋ ಸಲ ಅರ್ಥವಾಗದೇ ಸತಾಯಿಸುತ್ತಾನೆ. ಯಾವುದೋ ಅರ್ಥವಾಗದ ಅಚ್ಚರಿಯನ್ನು ನಮ್ಮಲ್ಲಿ ಉಳಿಸುತ್ತಾನೆ. ಅಕಾಲದ ಮಳೆಯ ಹಾಗೆ. ಹಾಗೆಂದು ಇಲ್ಲಿ ರೂಪಕಗಳ ಮೂಲಕ ಮಾತನಾಡುವ ಕವಿತೆಗಳು ಎಲ್ಲವನ್ನೂ ಬಿಟ್ಟುಕೊಡಲೂ ತಯಾರಿಲ್ಲ.   ಪೂರ್ಣಿಮಾ ಸುರೇಶ್‍ ಹೊಸಕವನ ಸಂಕಲನ ‘ಮಧ್ಯಮಾವತಿ’ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅವರ ಅನಿಸಿಕೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ