Advertisement

Category: ದಿನದ ಪುಸ್ತಕ

ಮ.ಸು. ಕೃಷ್ಣಮೂರ್ತಿ ಅನುವಾದಿಸಿದ “ಅನಾಮದಾಸನ ಕಡತ” ಕಾದಂಬರಿಯ ಒಂದು ಅಧ್ಯಾಯ

ಅನಾಮದಾಸ ತುಂಬ ಹಿಂದಿನಿಂದ ಬರೆಯುತ್ತಾ ಬಂದಿದ್ದಾನೆ. ಆತನ ಕಡತದ ಒಂದು ಮನೋರಂಜಕ ಅಂಶ ರೈಕ್ವ ಆಖ್ಯಾನ. ಸುಮಾರು ನಲವತ್ತು ವರ್ಷಗಳ ಹಿಂದೆ ಆತ ಛಾಂದೋಗ್ಯ ಉಪನಿಷತ್ತಿನ ರೈಕ್ವ ಆಖ್ಯಾನದ ಮೇಲೆ ಒಂದು ಕಥೆ ಬರೆದಿದ್ದ. ಅದರ ಶೀರ್ಷಿಕೆ – ‘ಎಲ್ಲವೂ ಗಾಳಿ’ ಎಂದು. ಅದು ಎಲ್ಲೂ ಬೆಳಕು ಕಾಣಲಿಲ್ಲ. ಆತ ಕಥೆಯನ್ನು ತುಂಬ ಲಘು ಮನೋಭಾವದಿಂದ ಬರೆದಿದ್ದ. ಈಗ ಅದರ ಮತ್ತೊಂದು ರೂಪ ಅವನಿಗೆ ದೊರೆತಿದೆ. ತಾನು ಲಘುವಾದೆನಲ್ಲ ಎಂದು ಆತನಿಗೆ ಖೇದ. ಅದರ ಕೊನೆಗೆ ಆತ ಕೆಲವು ಹೊಸ ಪಂಕ್ತಿಗಳನ್ನು ಸೇರಿಸಿದನೆಂದು ಕಾಣುತ್ತದೆ.
ಡಾ. ಹಜಾರೀಪ್ರಸಾದ ದ್ವಿವೇದಿ ರಚಿಸಿರುವ “ಅನಾಮದಾಸನ ಕಡತ” ಕಾದಂಬರಿಯಯನ್ನು ಮ.ಸು. ಕೃಷ್ಣಮೂರ್ತಿ ಕನ್ನಡಕ್ಕೆ ಅನುವಾದಿಸಿದ್ದು ಅದರ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಸ್ವಾನುಭವದ ಸುಂದರ ಹೆಣಿಗೆ

ಕಾವ್ಯವನ್ನು ಸ್ಮಿತಾ ಭಾವಾಭಿವ್ಯಕ್ತಿಗೆ ಮಾಧ್ಯಮವಾಗಿ ಮಾತ್ರ ಬಳಸಿಕೊಂಡಿಲ್ಲ. ಬದುಕಿನ ಎಲ್ಲ ವಿಷಮತೆಗಳ ನಡುವೆಯೂ ಜೀವಚೈತನ್ಯದ ರಸವನ್ನಾಗಿ ಉಳಿಸಿಕೊಂಡಿದ್ದಾರೆ. ಇಲ್ಲಿಯ ಬಹುತೇಕ ಕವಿತೆಗಳು ಹೆಣ್ತನದ ಸೀಮಿತ ನೆಲೆಯಲ್ಲೇ ಮೂಡಿದೆ. ಜಗತ್ತಿನ ಅರ್ಧದಷ್ಟಿರುವ ಸ್ತ್ರೀ ಸಮೂಹದ ಅನುಭವಗಳಿಗೆ ಸೀಮಿತದ ಚೌಕಟ್ಟು ಹಾಕುವುದುಂಟು.  ಆದರೆ ಸ್ತ್ರೀ ಲೋಕ  ಈ ಎಲ್ಲ ಚೌಕಟ್ಟಿಗೂ ಮೀರಿ ಬೃಹತ್ ಆಲದ ಮರದಂತೆ ಬೀಳಲು ಬಿಟ್ಟು ತನ್ನೊಡಲೊಳಗೆ ಚಿಗುರುವ ಆಶ್ರಯ ಬಯಸುವ ಚೈತನ್ಯಗಳಿಗೆ ಆವಾಸವಾಗುತ್ತದೆ. ಸ್ಮಿತಾ ಅಮೃತರಾಜ್ ಅವರ ‘ಮಾತು ಮೀಟಿ ಹೋಗುವ ಹೊತ್ತು’ ಕವನ ಸಂಕಲನದ ಕುರಿತು ನಾಗರೇಖಾ ಗಾಂವಕರ ಬರಹ. 

Read More

“ಉಡದಾರ” ಪ್ರಬಂಧ ಸಂಕಲನದ ಒಂದು ಪ್ರಬಂಧ…

ಶನಿವಾರ ಬಂದರೆ ಸಾಕು ಚೌಕದ ಮೂಗು ಅರಳುತ್ತಿತ್ತು ಒಂದು ಕಾಲಕ್ಕೆ! ಮಸೀದಿಯ ಮೂಲೆಗೆ ಸುತ್ತಲಿನ ಹಳ್ಳಿಗಳಿಂದ ಬಂದ ಹೆಣ್ಮಕ್ಕಳು ಒಲೆ ಹೂಡಿ ತುಪ್ಪ ಕಾಯಿಸುತ್ತಿದ್ದರು. ಚೌಕದಿಂದಾಚೆ ಸುಮಾರು ದೂರದವರೆಗೆ ತುಪ್ಪದ ವಾಸನೆ ಗಮ್ಮಂತ ಬರುತ್ತಿತ್ತು. ಹದವಾಗಿ ಕಾಯುತ್ತಿದ್ದ ತುಪ್ಪಕ್ಕೆ ವೀಳ್ಯದೆಲೆ ಹಾಕಿ ತುಪ್ಪದ ವಾಸನೆಗೊಂದು ಅಪ್ಯಾಯತೆ ತರುತ್ತಿದ್ದರು. ಘಮ ಘಮಿಸುವ ತುಪ್ಪ ಕಾಯಿಸಿದ ಸ್ವಲ್ಪ ಹೊತ್ತಿಗೆ ಖಾಲಿಯಾಗುತ್ತಿತ್ತು. ತುಪ್ಪ ಮಾರುವವರಿಗೆ ಚೌಕ ಖಾಯಂ ವಿಳಾಸವಾಗಿತ್ತು.
ಶರಣಬಸವ ಕೆ. ಗುಡದಿನ್ನಿ ಬರೆದ ಹೊಸ ಪ್ರಬಂಧಗಳ ಸಂಕಲನ “ಉಡದಾರ” ಪುಸ್ತಕದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

‘ಮೋಡದೊಡನೆ ಮಾತುಕತೆ’ಯ ಒಂದೆರಡು ಪುಟಗಳು

‘ಒಂದು ನಾಡಿನ ಸಂಕಥನಗಳನ್ನು ತಳಮಟ್ಟ ವಿಶ್ಲೇಷಿಸುತ್ತ ಆ ನಾಡಿನ ಮನಸ್ಸನ್ನು ತಿಳಿಯಬೇಕೆಂದೂ, ಹಾಗೂ ಆ ಮೂಲಕ ಆ ಭೂಭಾಗವನ್ನು ಆಕ್ರಮಿಸಿ ಆಳುವ ಸಾಮರ್ಥ್ಯ ಪಡೆಯಬೇಕೆಂದೂ ಬಯಸುವ ಜಾಗತಿಕ ಮಹತ್ತ್ವಾಕಾಂಕ್ಷೆಯ ಕಾಲದಲ್ಲಿ ನಾವಿದ್ದೇವೆ. ತತ್ಫಲವಾಗಿ ಈಗ ಬಾಳುವ ದಾರಿಗಳನ್ನೆಲ್ಲ ಆಳುವ ಮಾರ್ಗಗಳನ್ನಾಗಿ ಮಾರ್ಪಡಿಸುವ ಅಪಾಯಕಾರಿ ಸನ್ನಿವೇಶ ನಿರ್ಮಾಣಗೊಳ್ಳುತ್ತಿದೆ; ಈ ಸನ್ನಿವೇಶದೊಳಗೆ ಸಾಹಿತ್ಯ-ಕಲೆಗಳೂ ಅಂಥ ಆಳುವ ಸಾಧನಗಳಾಗಿ ರೂಪಾಂತರಗೊಳ್ಳುತ್ತಿರುವವೋ ಎಂಬ ಸಂಶಯ ಮೂಡುತ್ತದೆ’ ಎಂಬ ಮಾತುಗಳನ್ನು ಲೇಖಕ ಕೆ.ವಿ. ಅಕ್ಷರ ಅವರು ‘ಮೋಡದೊಡನೆ ಮಾತುಕತೆ’ ಎಂಬ ತಮ್ಮ ಹೊಸ ಕೃತಿಯಲ್ಲಿ ಉಲ್ಲೇಖಿಸಿದ್ದಾರೆ. ಆ ಕೃತಿಯ ಒಂದು ಅಧ್ಯಾಯ ಇಲ್ಲಿದೆ. 

Read More

ನಿರೂಪಣೆಯ ಹೊಸತನವನ್ನು ಮೆರೆಯುವ ‘ಫೀ ಫೋ’

ಸಮಕಾಲೀನತೆಯ ಬಿಕ್ಕಟ್ಟುಗಳಿಗೆ ಯುವ ತಲೆಮಾರು ತಮ್ಮನ್ನು ತಾವು ಒಡ್ಡಿಕೊಳ್ಳುತ್ತ ಮುಂದೆ ಸಾಗಿರುವುದರಿಂದ ಹೊಸತಲೆಮಾರಿನ ಕತೆಗಾರರ ಜೀವನಾನುಭವದ ಸ್ವರೂಪ ಈಗ ಬೇರೆಯಾಗಿದೆ. ಅದಕ್ಕೆ ಇವರು ಇಲ್ಲಿ ಪುಸ್ತಕಕ್ಕೆ ಬಳಸಿದ ಶಿರೋನಾಮೆ ‘ಫೀಫೋ’ನೂ ಒಂದು ಸಣ್ಣ ಸಾಕ್ಷಿ. ಫೀಫೋ ಇದು ಕಂಪ್ಯೂಟರಿನ ಭಾಷೆ, ಫಸ್ಟ್ ಇನ್ ಫಸ್ಟ್ ಔಟ್. ನಮ್ಮ ನೆನಪುಗಳು ಮತ್ತು ಅನುಭವಗಳು ಸ್ಮೃತಿ ಪಟಲದಲ್ಲಿ ಸರತಿ ಸಾಲಿನಲ್ಲಿ ನಿಂತಿರುತ್ತವೆ, ಮೊದಲು ನಿಂತದ್ದು ಮೊದಲು ಹೊರಬರಲೇ ಬೇಕು.
ಮಧುಸೂದನ್ ವೈ.ಎನ್.‌ ಬರೆದ ‘ಫಿಫೋ’ ಕಥಾಸಂಕಲನದ ಕುರಿತು ಸುನಂದಾ ಪ್ರಕಾಶ್ ಕಡಮೆ ಬರೆದ ಬರಹ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ