Advertisement

Category: ದಿನದ ಪುಸ್ತಕ

ಭಿನ್ನ ನೋಟದ ಪ್ರವಾಸ ಕಥನ: ಡಾ. ಪ್ರೇಮಲತ ಕೃತಿಗೆ ಎಸ್‌. ದಿವಾಕರ್‌ ಬರೆದ ಮುನ್ನುಡಿ

ನಮ್ಮ ಲೇಖಕರಲ್ಲಿ ವಿ.ಕೃ. ಗೋಕಾಕರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಓದಿ ಫಸ್ಟ್ ರ್ಯಾಂಕ್ ಗಳಿಸಿದರಷ್ಟೆ. ಯು.ಆರ್. ಅನಂತಮೂರ್ತಿಯವರೂ ಕವಿ ರಾಮಚಂದ್ರ ಶರ್ಮರೂ ಕೆಲವು ವರ್ಷ ಇಂಗ್ಲೆಂಡಿನಲ್ಲಿ ವಿದ್ಯಾಭ್ಯಾಸ ಮಾಡಿದ್ದುಂಟು. ತರುಣ ಲೇಖಕರಲ್ಲಿ ಮುಖ್ಯವಾಗಿ ವಿವೇಕ ಶಾನಭಾಗರು ಉದ್ಯೋಗನಿಮಿತ್ತ ನಾಲ್ಕಾರು ವರ್ಷ ಲಂಡನ್ನಿನಲ್ಲಿದ್ದರು. ಇವರು ಯಾರೂ ಅಪ್ಪಿತಪ್ಪಿ ಕೂಡ ಯುನೈಟೆಡ್ ಕಿಂಗ್ಡಮ್ಮನ್ನು ಭಾರತದೊಡನೆ ತುಲನೆ ಮಾಡಲಿಲ್ಲವೆನ್ನುವುದು ಗಮನಾರ್ಹ. ಆದರೂ ಹಾಗೆ ತುಲನೆ ಮಾಡಿ ಬರೆಯುವುದರಿಂದ ಕೆಲವರು ಓದುಗರಾದರೂ ನಮ್ಮ ದೇಶದ ಹೀನಾಯ ಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ಯೋಚಿಸಬಹುದು. ಅವರಲ್ಲಿ ಇದಕ್ಕೇನು ಪರಿಹಾರವಿದ್ದೀತು ಎಂಬೊಂದು ಜಿಜ್ಞಾಸೆಯೇ ಉಂಟಾಗಬಹುದು. ಒಟ್ಟಿನಲ್ಲಿ ಅದೊಂದು ಒಳ್ಳೆಯ ಆಶಯವೇ.
ಡಾ. ಪ್ರೇಮಲತ ಬಿ. ಬರೆದ “ವಿದೇಶ ಪ್ರಯಾಣ… ಕೈತುಂಬ ಕಾಂಚಾಣ” ಕೃತಿಗೆ ಎಸ್‌. ದಿವಾಕರ್‌ ಬರೆದ ಮುನ್ನುಡಿ

Read More

ಜೀವಂತಿಕೆ ಒಸರುವ ಕವಿತೆಗಳು: ಸ್ಮಿತಾ ಅಮೃತರಾಜ್ ಬರಹ

ನಾವು ಬದುಕುವ ರೀತಿ ನೀತಿ‌ ನಮ್ಮ ಪ್ರತಿಷ್ಟೆ ಪರಾಕಾಷ್ಟೆಗಳು ಅದೆಷ್ಟಿದ್ದರೂ ನಾವೆಲ್ಲರೂ ಮನುಷ್ಯರು. ಆಳದಲ್ಲಿ ನಾವೆಲ್ಲರೂ ಅನುಭವಿಸುವ ಭಾವಗಳು ಒಂದೇ. ನಾನಾ ಸ್ತರಗಳಲ್ಲಿ‌ ಪ್ರಕಟಗೊಳ್ಳುವ ನಮ್ಮ ನೋವು ನಲಿವು ಗೆಲುವು ಸೋಲು ಅಪಮಾನ ಎಲ್ಲವೂ ಇಲ್ಲಿ ಕವಿತೆಯಾಗಿ ನಿಸೂರಾಗುತ್ತವೆ. ನಾಗರೇಖಾ ತನ್ನದೇ ರೀತಿಯಲ್ಲಿ ಕವಿತೆ ಕಟ್ಟುವ ಕೌಶಲ್ಯವನ್ನು‌‌ ಸಿದ್ಧಿಸಿಕೊಂಡಿದ್ದಾರೆ. ತಾನು ಬದುಕಿದ, ತಾನು ಕಾಣುವ ಸುತ್ತ ಮುತ್ತಲಿನ ಸಹಜ ಸಂಗತಿಗಳನ್ನು ಕವಿತೆಯ ಮೂಲಕ‌ ತರುತ್ತಾ ಅದನ್ನು ಮತ್ಯಾವುದೋ‌ ಸಂದರ್ಭಕ್ಕೆ, ಸಂಗತಿಗಳಿಗೆ ಕೊಂಡಿ ಕೂಡಿಸುತ್ತಾರೆ. ಒಂದು ವಸ್ತುವನ್ನು ತೆರೆದಿಡುತ್ತಾ ಮತ್ಯಾವುದೋ ಹೊಳಹನ್ನು ಕಾಣಿಸುವುದು ನಾಗರೇಖರ ಕವಿತೆ ವೈಶಿಷ್ಟ್ಯತೆ.
ನಾಗರೇಖಾ ಗಾಂವಕರ ಕವನ ಸಂಕಲನ “ಪಾದಕ್ಕೊಂದು ಕಣ್ಣು” ಕುರಿತು ಸ್ಮಿತಾ ಅಮೃತರಾಜ್‌ ಬರಹ

Read More

“ಬಿಗಿ ಹಿಡಿದ ಮುಷ್ಟಿಯಲಿ ನವಿರು ಪ್ರೇಮದ ಘಮಲು”: ಎಂ. ತರುಣ್‌ ಕೃತಿಗೆ ಮೋದೂರು ತೇಜ ಮುನ್ನುಡಿ

ನಿಜವಾದ ಕವಿಗೆ ಒಳಗಣ್ಣು ತೆರೆದಿದ್ದಾಗ ಮಾತ್ರ ತನ್ನ ಸುತ್ತಲಿನ ವಸ್ತುಗಳಾಗಲಿ, ವ್ಯಕ್ತಿಗಳಾಗಲಿ ವಿಶೇಷವಾಗಿ ಕಾಣಿಸುತ್ತಾರೆ. ಅಂತಹ ಕಾಣುವ ಕಾಣ್ಕೆ ಈ ಯುವ ಕವಿ ದಕ್ಕಿಸಿಕೊಂಡಿದ್ದಾರೆ. ಆದರೆ ಅವಸರದ ಬೆನ್ನೇರಿ ಕುಳಿತಿರುವ ನಮಗೆ ಯಾವುದನ್ನೂ ಸಾವಧಾನವಾಗಿ ನೋಡುವ, ಕಾಣುವ ತಾಳ್ಮೆ, ತುಡಿತ ಇಲ್ಲದಂತಾಗಿದೆ. ಮೊಬೈಲ್‌ ಎಂಬ ಮಾಯಾಲೋಕ ಅಂಗೈಗೆ ಬಂದ ಮೇಲೆ ಎಲ್ಲವನ್ನೂ ಮೈಮರೆಯುವಂತೆ ಮಾಡುತ್ತಿರುವಾಗ, ಅದರಲ್ಲೂ ತಾನು ಬರೆದಿದ್ದೆಲ್ಲವೂ ಪ್ರಕಟಿಸಲು ಸಾಮಾಜಿಕ ಜಾಲತಾಣಗಳ ವೇದಿಕೆಗಳಿರುವಾಗ ಕಾಯುವ ಗುಣ ಯಾರಿಗೂ ಇಲ್ಲಂತಾಗಿದೆ. ಹಾಗಂತ ಎಲ್ಲರೂ ಸಂತೆಗೆ ಮೂರು ಮೊಳ ಕಂಬಳಿ ನೇಯುವಂತೆ ಕಾವ್ಯ ರಚನೆಯಲ್ಲಿ ತೊಡಗಿದ್ದಾರೆಂದು ಹೇಳಿದರೆ ತಪ್ಪಾಗುತ್ತದೆ.
ಎಂ. ತರುಣ್‌ ಕವನ ಸಂಕಲನ “ಬಿಗಿ ಹಿಡಿದ ಮುಷ್ಟಿಯಲಿ”ಕ್ಕೆ ಮೋದೂರು ತೇಜ ಬರೆದ ಮುನ್ನುಡಿ

Read More

ನೀರ ಮೇಲಣ ಗುಳ್ಳೆ-ಡಾಟರ್ ಆಫ್ ಪರ್ಷಿಯ: ದೇವಿಕಾ ನಾಗೇಶ್ ಬರಹ

ಈಕೆ ತನ್ನ ನೆಲದ ಸ್ಥಿತಿವಂತರು ಇಲ್ಲದವರ ಜೀವನ ಮಟ್ಟ ಸುಧಾರಣೆಗೆ ಕೈಜೋಡಿಸಿದರೆ ಸಾಮಾಜಿಕ, ರಾಜಕೀಯ, ಆಡಳಿತಾತ್ಮಕ ಬದಲಾವಣೆಗಳನ್ನು ತರಲು ಸಾಧ್ಯವಿದೆ… ಎನ್ನುವ ನಂಬಿಕೆ ಇದ್ದವರಾಗಿದ್ದಳು. ಈ ಹಿನ್ನೆಲೆಯಲ್ಲಿ ಅದ್ಭುತ ಯೋಜನೆಗಳನ್ನು ಹಾಕಿಕೊಂಡಿದ್ದಳು.. ಆಗ ಸ್ಪಂದಿಸಿದ ಹಲವರು ಈ ಸಾಧ್ಯತೆಯ ಪರಿಧಿಗಳನ್ನು ವಿಸ್ತರಿಸಿಕೊಂಡು ಆ ದೆಸೆಯಲ್ಲಿ ಸಕ್ರಿಯವಾದರು… ಇವಳ ಯೋಜನೆಗೆ ಕೈಜೋಡಿಸಿದರು.
ಸಟ್ಟರೆಹ್ ಫಾರ್ಮನ್ ಫರ್ಮ ಆತ್ಮಕಥೆ “ಡಾಟರ್ ಆಫ್ ಪರ್ಷಿಯಾ” ಕುರಿತು ದೇವಿಕಾ ನಾಗೇಶ್‌ ಬರಹ

Read More

ಗೃಹ ತಪಸ್ವಿನಿಯ ಮೌನದ ಮಾತು: “ಊರ್ಮಿಳಾ” ಕಾದಂಬರಿಯ ಕುರಿತು ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರಹ

ನಿದ್ರೆಯನ್ನು ಯಾರಾದರು ಸ್ವಿಕರಿಸಿದರೆ ಮಾತ್ರ ನಾನು ಒಪ್ಪುವೆ ಎಂದಾಗ ಲಕ್ಷ್ಮಣ ನನ್ನ ನೆನಪಲ್ಲೆ ವಿರಹದಲ್ಲಿರುವೆ ಪತ್ನಿ ಊರ್ಮಿಳೆಗೆ ನನ್ನ ಪರವಾದ ನಿದ್ರೆ ಕರುಣಿಸು. ವನವಾಸದ ಅವಧಿ ಮುಗಿಯುವರೆಗೂ ಎಂದಾಗ ನಿದ್ರಾ ದೇವತೆ ಹಾಗೆ ಆಗಲಿ ತಥಾಸ್ತು ಎಂದು ಊರ್ಮಿಳೆ ಬಳಿ ಬಂದ ದೇವಿ ಊರ್ಮಿಳೆ ನಿನ್ನ ಪತಿ ನಿನಗೆ ಅವನ ಪರವಾದ ನಿದ್ರೆಯನ್ನು ಸ್ವಿಕರಿಸಲು ಹೇಳಿರುವನು.
ವಿಜಯಾ ವಿಷ್ಣುಭಟ್ ಬರೆದ “ಊರ್ಮಿಳಾ” ಕಾದಂಬರಿಯ ಕುರಿತು ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ