Advertisement

Category: ದಿನದ ಪುಸ್ತಕ

ಕಳ್ಳಿಗಾಡಿನ ಇತಿಹಾಸ: ಕರಾಳ ವಾಸ್ತವದ ಜೀವಂತ ಚಿತ್ರಣ

‘ಕಳ್ಳಿಗಾಡಿನ ಇತಿಹಾಸ’ ಎಂಬ ಶೀರ್ಷಿಕೆಯಿದ್ದರೂ, ಇದು ಪ್ರಪಂಚದ ಯಾವುದೇ ಅಭಿವೃದ್ಧಿ ಹೊಂದದ ಅಥವಾ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ನಡೆಯುವ ಶೋಷಿತ ಸಮುದಾಯದ ಇತಿಹಾಸವೇ ಆಗಿದೆ. ಯಾವುದೇ ರಾಜಕೀಯ ವ್ಯವಸ್ಥೆಯಾದರೂ ಶೋಷಿತವರ್ಗದ ನೋವು ನಲಿವುಗಳನ್ನು ಅರ್ಥ ಮಾಡಿಕೊಳ್ಳದೇ ಹೋದಾಗ, ಆ ಜನರು ಅನುಭವಿಸುವ ಕಷ್ಟಕಾರ್ಪಣ್ಯಗಳನ್ನು ಹೇಳತೀರದು. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆದಂಥ ಇಂಥ ಅನೇಕ ಕಥೆಗಳು ಕರ್ನಾಟಕದ ಮಣ್ಣಿನಲ್ಲೂ ದಾಖಲಾಗಿರುತ್ತವೆ. 
ತಮಿಳಿನ ವೈರಮುತ್ತು ಬರೆದಿರುವ “ಕಳ್ಳಿಕಾಟ್ಟು ಇತಿಹಾಸಂ” ಕಾದಂಬರಿಯನ್ನು ಡಾ. ಮಲರ್‌ವಿಳಿ ‘ಕಳ್ಳಿಗಾಡಿನ ಇತಿಹಾಸ’ ಎಂಬ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದು, ಈ ಕೃತಿಯ ಕುರಿತು ಕೆ. ಪ್ರಭಾಕರನ್ ಬರಹ

Read More

ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ಧರ್ಮಗಳಲ್ಲಿ ಸಣ್ಣತನ ಮತ್ತು ಮನುಷ್ಯ ಧರ್ಮದೊಳಗಿನ ದೊಡ್ಡತನಗಳ ಸಣ್ಣ ಗೆರೆಯನ್ನು ಮುಗ್ಧ ಮಗುವಿನ ಹಾಗೆ ನೋಡುವಂತೆ ಮಾಡುವ ಇಮ್ರಾನ್ ಎಂಬ ಕೂಸು, ‘ಪ್ರೀತಿಯಿಂದ ಗೆಲ್ಲಬಹುದು’ ಎಂಬುದನ್ನು ಕಲಿಸಿಕೊಡುವ ಗೆಳತಿಯ ಸ್ಟೇಟಸ್ ಪಾಠವು, ‘ಬಾಯಾರಿಕೆ ಆದಾಗ ನೀರು ಕುಡಿಯೋದು ತಪ್ಪಾ?’ ಎಂದು ಸ್ತ್ರೀಯ ಲೈಂಗಿಕ ಸ್ವಾತಂತ್ರ್ಯದ ಹಕ್ಕನ್ನು ಕೇಳುವ ಅಜ್ಜಿಯೂ, ಸಂಬಂಧಗಳ ಸಂಕೋಲೆಯಲ್ಲಿ ಸತ್ತು ಬದುಕುವ ಮತ್ತು ಬದುಕಿಯೂ ಸಾಯುವ ‘ಕೊನೆಯ ಮಳೆ’ ಯ ಹನಿಯೂ ಮನುಷ್ಯನ ಒದ್ದಾಟಗಳ ಯಥಾವತ್ತಾಗಿ ಅನುವಾದ ಮಾಡಿದ ಹಾಗಿವೆ.
ದಾದಾಪೀರ್‌ ಜೈಮನ್‌ ಅವರ “ನೀಲಕುರಿಂಜಿ” ಕಥಾಸಂಕಲನದ ಕುರಿತು ಚಾಂದ್ ಪಾಷ ಎನ್. ಎಸ್. ಬರಹ

Read More

ಮಂಜುಳ ಡಿ. ಪುಸ್ತಕದ ಕುರಿತು ಎಂ.ಎನ್. ಸುಂದರ್ ರಾಜ್ ಬರಹ

ಲತಾ ಅವರ ಕಂಠದಿಂದ ಹೊರಹೊಮ್ಮಿದ ಮಧುರಗೀತೆಗಳು ಅವರನ್ನು ಸದಾ ಸ್ಮರಣೆಯಲ್ಲಿ ಹೊಂದಿರುವಂತಹದ್ದಾಗಿದ್ದು, ಅವರ ಬಗೆಗಿನ ಗೌರವವನ್ನು ಹೆಚ್ಚಿಸುತ್ತದೆ. ಇನ್ನು ಹಿತ್ತಲ ಗಿಡ ಮದ್ದಲ್ಲ ಎಂಬ ಶೀರ್ಷಿಕೆಯ ಲೇಖನವೂ ಸಹ ಸೊಗಸಾಗಿದೆ. ಒಂದು ಸಾಧಾರಣ ಕಾಯಿಲೆಯನ್ನು ಗುಣಪಡಿಸಲು ನಮ್ಮ ಹೈಟೆಕ್ ಆಸ್ಪತ್ರೆಗಳು ಅದೆಷ್ಟು ಹಣ ಪೀಕಿಸುತ್ತವೆ, ಅದೇ ನಾಟಿವೈದ್ಯರು ಪರಂಪರಾಗತವಾಗಿ ತಮ್ಮ ಕೈಚಳಕದಿಂದ ಮತ್ತು ಅಪಾರ ಅನುಭವದಿಂದ ಕಾಯಿಲೆಯ ಮೂಲಕ್ಕೇ ಹೋಗಿ ರೋಗ ನಿವಾರಣೆ ಮಾಡುವ ಪರಿ ನಿಜಕ್ಕೂ ಅಚ್ಚರಿ ಮೂಡಿಸುವಂತಹದ್ದು.
ಮಂಜುಳ ಡಿ. ಅವರ “ಕೇದಿಗೆ ಗರಿ” ಅಂಕಣ ಬರಹಗಳ ಸಂಕಲನದ ಕುರಿತು ಎಂ.ಎನ್.ಸುಂದರ್ ರಾಜ್ ಬರೆದ ಲೇಖನ

Read More

ಅನ್ವೇಷಣೆ ನಿರತ ಅನವರತ ಚಿತ್ತಪಥದ ಕವಿತೆಗಳತ್ತ…

ನಿಜಾರ್ಥದ ಕವಿ ಗೊತ್ತಿರುವುದನ್ನು ವಿವರಿಸುವುದಿಲ್ಲ, ಅರ್ಥಮಾಡಿಕೊಂಡಿದ್ದನ್ನು ಅರ್ಥಮಾಡಿಸುತ್ತಾನೆ. ಅಸ್ತಿತ್ವದ ಹುಡುಕಾಟ ವ್ಯಸನವಾಗುತ್ತ ಪ್ರೇಮ ಕಾಮ ಕೊನೆಗೆ ಸ್ವಾರ್ಥದೊಂದಿಗೂ ತಾದ್ಯಾತ್ಮ ಸ್ಥಾಪಿತವಾಗದ ಸ್ಥಿತಿಯಲ್ಲಿ ಪದರು ಪದರಾಗಿ ವಿಕಸನಗೊಂಡ ಪ್ರಜ್ಞೆ ಕಣ್ಣಾಮುಚ್ಚಾಲೆಯ ದೈನಿಕಗಳಲ್ಲಿ ಲೀನವಾಗುವ ಕ್ರಮವನ್ನು ಕಾಣಿಸುವ ವಿಶಿಷ್ಟ ಕವನಗಳಿವು. ನಾವೇ ಸೃಷ್ಟಿಸಿಕೊಂಡ ನರಕದಲ್ಲಿ ದೂರುಗಳು ತಪ್ಪೊಪ್ಪಿಗೆಯನ್ನು ಧ್ವನಿಸುತ್ತವೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಇಂದ್ರಕುಮಾರ್ ಎಚ್.ಬಿ. ಅವರ “ಬಾವಿಗ್ಯಾನವ ಮರೆತು” ಕವನ ಸಂಕಲನಕ್ಕೆ ಮಮತಾ ಆರ್. ಬರೆದ ಮುನ್ನುಡಿ

Read More

ಬೆಳದಿಂಗಳಂತೆ ತಾಗುವ ಕಥೆಗಳು

ಇಲ್ಲಿ, ಮಧ್ಯಮ ವರ್ಗದ ಕುಟುಂಬಗಳಲ್ಲಿನ ಹೆಣ್ಣು ಮಕ್ಕಳನ್ನು ಪ್ರತಿನಿಧಿಸುವ ಮತ್ತು ಬದುಕಿನ ಬಗ್ಗೆ ಭವ್ಯ ಕನಸುಗಳನ್ನು ಕಟ್ಟಿಕೊಂಡಿರುವ ‘ಪೂರ್ವಿ’ ಎಂಬ ಮಗುವಿನ ತಾಯಿಯಾದ ನಳಿನಿಯು, ತನ್ನ ಗಂಡ ಅರವಿಂದನ ದೇಹ ಬಯಕೆಯನ್ನು ಈಡೇರಿಸಲು ಪ್ರತಿ ರಾತ್ರಿಯೂ ಹಿಂದೇಟು ಹಾಕುವುದಕ್ಕೆ ಅವರ ಬದುಕನ್ನು ಮುತ್ತಿಕೊಂಡಿರುವ ಆರ್ಥಿಕ ಸಮಸ್ಯೆಗಳೇ ಕಾರಣವಾಗಿರುವುದು ಪರಿಸ್ಥಿತಿಯ ವ್ಯಂಗ್ಯದಂತಿದೆ. ಆದರೆ ಕಡೆಗೂ ನಳಿನಿಯು ಆತನ ದೇಹ ಬಯಕೆಯನ್ನು ಈಡೇರಿಸಲು ಮುಂದಾಗುವ ಸಂದರ್ಭದಲ್ಲಿ ಎದುರಿಸುವ ಸಂದಿಗ್ಧಗಳೇ ಆಕೆ ಗುಲ್ ಮೊಹರ್ ಹುಡುಗನ ಕರಾಳ ಬದುಕಿನೊಂದಿಗೆ ಮುಖಾಮುಖಿಯಾಗುವುದಕ್ಕೆ ಕಾರಣವಾಗುತ್ತದೆ!
ಕಥೆಗಾರ ಅನಿಲ್‌ ಗುನ್ನಾಪೂರ ಬರೆದ “ಕಲ್ಲು ಹೂವಿನ ನೆರಳು” ಕಥಾ ಸಂಕಲನದ ಕುರಿತು ಕಲ್ಲೇಶ್ ಕುಂಬಾರ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ