Advertisement

Category: ದಿನದ ಪುಸ್ತಕ

ಮಿಂಚುಹುಳಗಳ ದೊಂದಿ: ಶಿವಪ್ರಕಾಶರ ಕಾವ್ಯ

ಶಿವಪ್ರಕಾಶರು ತಮ್ಮ ಕವಿತೆಗಳಲ್ಲಿ ನಡೆಸಿರುವ ಭಾಷಿಕ ಪ್ರಯೋಗಗಳು ಅವರನ್ನು ನಿಸ್ಸಂದೇಹವಾಗಿ ಕನ್ನಡದ ವರ್ತಮಾನದ ದೊಡ್ಡಕವಿಯನ್ನಾಗಿ ಮಾಡಿವೆ. ಅನೇಕ ಜನ ಕವಿಗಳು ಒಂದೇ ಬಗೆಯ ಭಾಷಾ ಪ್ರಯೋಗದಸಿದ್ಧ ಏಕತಾನತೆಗೆ ಸಿಕ್ಕಿಕೊಂಡುಬಿಟ್ಟಿರುತ್ತಾರೆ. ವೈವಿಧ್ಯಮಯವಾದ ವಸ್ತುಗಳನ್ನು ಕುರಿತು ಕವಿತೆ ಬರೆಯುತ್ತಿದ್ದರೂ ಅವರ ಕಾವ್ಯಶಿಲ್ಪದ ಕಟ್ಟೋಣದಲ್ಲಿ ಮಾತ್ರ ಏಕರೂಪಕಾತ್ಮಕತೆಯು ಉಳಿದುಬಿಟ್ಟಿರುತ್ತದೆ. ಆದರೆ ಸಮರ್ಥ ಕವಿ ಮಾತ್ರ ಈ ಸಮಸ್ಯೆಯನ್ನುತಮ್ಮ ಭಾಷರೂಢಿಗಳನ್ನು ತಾವೇ ಮುರಿಯುವ ಮೂಲಕ ಮೀರುತ್ತಿರುತ್ತಾರೆ.
ಎಚ್.ಎಸ್. ಶಿವಪ್ರಕಾಶರ ನಾಲ್ಕುದಶಕದ ಕವಿತೆಗಳನ್ನು ಒಟ್ಟಾಗಿ ‘ಹೋಗಿ ಬನ್ನಿ ಋತುಗಳೇ’ ಎಂಬ ಪುಸ್ತಕದಲ್ಲಿ ಕೆ ವೈ ನಾರಾಯಣಸ್ವಾಮಿ ಅವರು ಸಮಗ್ರವಾಗಿ ಸಂಪಾದಿಸಿದ್ದು ಅವರ ಮಾತುಗಳು ಇಲ್ಲಿವೆ.

Read More

ಅಬ್ದುಲ್ ರಶೀದ್ ಕಥಾಸಂಕಲನಕ್ಕೆ ವಿವೇಕ ಶಾನಭಾಗ ಬರೆದ ಮುನ್ನುಡಿ

ಕತೆ ಜರುಗುವ ಆವರಣವು ಅನುಭವದ ಅವಿಭಾಜ್ಯ ಎಂಬುದನ್ನು ಅರಿತು ಅದನ್ನು ಸಹಜ ಸರಾಗತೆಯಲ್ಲಿ ಸಿದ್ಧಿಸಿಕೊಂಡವರು ರಶೀದ್. ಅವರ ಮೊದಲ ಕತೆಯಿಂದಲೂ ಇದನ್ನು ಕಾಣಬಹುದು. ಇಲ್ಲಿಯ ‘ಮೋಹಕ ದ್ವೀಪದ ಮೂಗಿನ ತುದಿ’ ಕತೆಯೊಳಗೆ ಬರುವ ವಿವರಗಳು, ಘಟನೆಗಳು, ಮಾತುಗಳು ಆ ಆವರಣದಲ್ಲಿ ಅಲ್ಲದೇ ಬೇರೆಲ್ಲೂ ಘಟಿಸಲು ಅಸಾಧ್ಯವೆನ್ನುವ ಹಾಗೆ ಸಂಯೋಜನೆಗೊಂಡಿವೆ.
ಕತೆಗಾರ ಅಬ್ದುಲ್‌ ರಶೀದ್‌ ಹೊಸ ಕಥಾ ಸಂಕಲನ “ಲಾರ್ಡ್ ಕಾರ್ನ್‌ವಾಲೀಸ್ ಮತ್ತು ಕ್ವೀನ್‌ ಎಲಿಜಬೆತ್‌” ಗೆ ವಿವೇಕ ಶಾನಭಾಗ ಬರೆದ ಮಾತುಗಳು

Read More

ಬದುಕಿನ ಪಥದಲ್ಲಿ ಮೂಡಿದ ನೆನಪಿನ ಪ್ರಬಂಧ

ಆ ಕಾಲದ ಓದುವ ವರ್ಣನೆ ಚನ್ನಾಗಿ ಮೂಡಿಬಂದಿದೆ. ಶಾಲೆ ಕಾಲೇಜಿಗೆ ನಡೆದುಕೊಂಡು ಹೋಗುತ್ತಲೇ ಶರಾವತಿ ದಾಟುವ ಕಾಲೇಜಿನಲ್ಲಿ ವಿಜ್ಞಾನವನ್ನು ತೆಗೆದುಕೊಂಡರೂ ಸಂಗೀತವನ್ನು ಒಂದು ವಿಷಯವನ್ನಾಗಿ ತೆಗೆದುಕೊಂಡು ಕಲಿತದ್ದು ನೋಡಿದರೆ ಸಂಗೀತದ ಮೇಲೆ ಇವರಿಗಿದ್ದ ಆಸಕ್ತಿಯ ಅರಿವಾಗುತ್ತದೆ. ಕಾಲೇಜಿನ ಪ್ರಿನ್ಸಿಪಾಲರಾಗಿದ್ದವರು ಖ್ಯಾತ ಕವಿ ವೀಸಿ, ತಮ್ಮ ಶಿಕ್ಷಕರುಗಳು, ಆ ಕಾಲದ ಕಾಲೇಜಿನ ಬದುಕು ಎಲ್ಲವೂ ಒಂದು ನೆನಪಿನ ಸುರುಳಿಯಂತೆ ಪ್ರಬಂಧದೋಪಾದಿಯಲ್ಲಿ ಹರಿದು ಬಂದಿದೆ. ಅದರಲ್ಲಿಯೂ ಇವರ ಮದುವೆಯ ಸ್ವಾರಸ್ಯ ತಪ್ಪದೇ ಓದಬೇಕು.
ಜಿ. ಎಸ್. ಹೆಗಡೆ ಜೀವನಾಧಾರಿತ “ಜೀವನ ಪಥ ನೆನಪಿನ ರಥ” ಪುಸ್ತಕದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ

Read More

ಮಾತು ಮೀರಿದ ಕ್ರಿಯಾರೂಪ: ಬರಗೂರು ರಾಮಚಂದ್ರಪ್ಪ

ಪ್ರಜಾಸತ್ತಾತ್ಮಕ ಸಮಾಜವೊಂದರಲ್ಲಿ ನಡೆಯುತ್ತಿರುವ ಸ್ಥಿತ್ಯಂತರದ ಸಂಕಟಗಳನ್ನು, ಅಲ್ಲೀವರೆಗೆ ಅಜ್ಞಾತವಾಗಿದ್ದ ಸಮುದಾಯಗಳ ಬದುಕಿನ ಮೂಲಕ ಪರಿಶೀಲಿಸುವ ಪ್ರತಿಭಟನಾ ಪ್ರತೀಕಗಳನ್ನೂ ಕಾಣಬಹುದು. ಈ ಮಾದರಿಯ ರಚನೆಗಳಲ್ಲಿ ಚಲನಶೀಲತೆಯ ಒರತೆ ಉಕ್ಕುವುದುಂಟು. ಈ ಒರತೆಯನ್ನು ಕೃತಿಕಾರರು ತಂತಮ್ಮ ಬೊಗಸೆಯಲ್ಲಿ ಎಷ್ಟೆಷ್ಟು ಮತ್ತು ಹೇಗೆ ಹೇಗೆ ತುಂಬಿಕೊಳ್ಳುತ್ತಾರೆಂಬ ಆಧಾರದಲ್ಲಿ ಕೃತಿಯ ವಸ್ತು-ವಿನ್ಯಾಸಗಳು ಕಟ್ಟಿಕೊಳ್ಳುತ್ತವೆ. ಬದಲಾವಣೆಯ ಬೊಗಸೆಯನ್ನು ತನ್ನದಾಗಿಸಿಕೊಳ್ಳುವ ವಿಧಾನದಲ್ಲೇ ನೆಲೆ-ನಿಲುವುಗಳು ರೂಪುಗೊಳ್ಳುತ್ತವೆ; ಸಮಕಾಲೀನವಾಗುತ್ತವೆ.

Read More

ಎ.ಎನ್. ಪ್ರಸನ್ನ ಅವರ ಕಥನ ಕಲೆ ಮತ್ತು ಕಥಾ ಜಗತ್ತು

ಇಲ್ಲಿನ ಎಲ್ಲಾ ಕಥೆಗಳಲ್ಲಿ ಪಾತ್ರಗಳ ದಿನನಿತ್ಯದ ಬದುಕಿನ ಲಯಗಳನ್ನು ಸೂಕ್ತ ವಿವರಗಳ ಮೂಲಕ ನಿರೂಪಿಸಲಾಗಿದೆ. ಪ್ರಸನ್ನ ಅವರದೇ ಆದ ಒಂದು ನಿರೂಪಣಾ ವಿಶೇಷತೆ ಎಂದರೆ, ಅವರು ಪಾತ್ರಗಳನ್ನು ಸುತ್ತುವರಿದಿರುವ ಗಾಳಿ, ಬೆಳಕು ಮತ್ತು ಪೀಠೋಪಕರಣಗಳು ಹಾಗೂ ಇತರ ವಸ್ತುವಿಶೇಷಗಳ ಮೂಲಕವೂ ಪಾತ್ರಗಳ ಮಾನಸಿಕ ಏರುಪೇರುಗಳನ್ನು ಪ್ರತಿಫಲಿಸುವುದು. ಈ ಮಾತುಗಳಿಗೆ `ಹುಡುಕಾಟ’ ಕಥೆಯ ನಾಯಕಿ ಸುಕೃತಾಳ ಬಗೆಗೆ ದಿನದ ವಿವಿಧ ಹಂತಗಳಲ್ಲಿ, ವಿವಿಧ ಆವರಣಗಳಲ್ಲಿ ಅವಳ ವಿವಿಧ ಮಾನಸಿಕ ಸ್ಥಿತಿಗಳನ್ನು ಕಟ್ಟಿಕೊಟ್ಟಿರುವ ಈ ನಿರೂಪಣೆಗಳನ್ನು ಗಮನಿಸಬಹುದು.
ಎ.ಎನ್. ಪ್ರಸನ್ನ ಹೊಸ ಕಥಾ ಸಂಕಲನ ‘ಬಿಡುಗಡೆ’ಗೆ ಗಿರೀಶ್ ವಿ. ವಾಘ್ ಬರೆದ ಮುನ್ನುಡಿ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ