Advertisement

Category: ದಿನದ ಪುಸ್ತಕ

ಅವ`ಲಕ್ಕಿ’ ಎಂಬ ಅದೃಷ್ಟಶಾಲಿ ತಿನಿಸು!

ತೌಳವನಾಡಿನಲ್ಲಿ ಅವಲಕ್ಕಿಗೆ ಬಜಿಲು ಎಂದು ಹೇಳುತ್ತಾರೆ. ಬೆಳಗ್ಗೆ ಅಥವಾ ಸಂಜೆಯ ತಿಂಡಿಗೆ ಸಜ್ಜಿಗೆ-ಬಜಿಲು ಕರಾವಳಿಯಲ್ಲಿ ಬಹಳ ಪ್ರಸಿದ್ಧ. ಸಜ್ಜಿಗೆ ಎಂದರೆ ಉಪ್ಪಿಟ್ಟು. ಇದು ಕರಾವಳಿಯ ಹೊರಗಿನವರಿಗೆ ತಿಳಿದಿರಲಿಕ್ಕಿಲ್ಲ. ಇನ್ನೊಂದು ಅಷ್ಟೇ ಪ್ರಸಿದ್ಧ ತಿಂಡಿಯೆಂದರೆ ಕಡ್ಳೆ-ಬಜಿಲು. ಇವು ಇಲ್ಲಿನ ಹೊಟೇಲುಗಳಲ್ಲೂ ಸಿಗುತ್ತವೆ. ಸಮಾರಂಭಗಳಲ್ಲಿ ಉಳಿದ ತಿಂಡಿಗಳಿಗಿಂತ ಅವಲಕ್ಕಿ-ಸಜ್ಜಿಗೆ ಮಾಡುವುದೇ ಹೆಚ್ಚು. ಏಕೆಂದರೆ, ಇದನ್ನು ತಯಾರಿಸಲು ಕಡಿಮೆ ಶ್ರಮ-ಸಮಯ-ಪರಿಕರ ಸಾಕು. ಮಧ್ಯಾಹ್ನವಾದರೂ ಹಸಿವೆಯಾಗುವುದಿಲ್ಲ. ಹೊಟ್ಟೆಯಲ್ಲಿ ಕಾಂಕ್ರೀಟ್ ಹಾಕಿದಂತೆ ಗಟ್ಟಿ!
ಸಹನಾ ಕಾಂತಬೈಲು ಬರೆದ ಲಲಿತ ಪ್ರಬಂಧಗಳ ಸಂಕಲನ ‘ಇದು ಬರಿ ಮಣ್ಣಲ್ಲ’ ಪುಸ್ತಕದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಗಿಣಿಬಿಸ್ಕತ್ತು ಕಾದಂಬರಿಯ ಒಂದೆಸಳು

ನಾವು ಮಕ್ಕಳು ಒಂದು ಕಡೆ ಆಡುತ್ತಿದ್ದೆವು. ಮೋಡ ಕಪ್ಪಾಯಿತು. ಮೀನು ಸಾರಿನ ಸಂಭ್ರಮದ ಮಧ್ಯ ಮಳೆ ಬರುವುದು ಚಿಂತೆಗೀಡು ಮಾಡಿತ್ತು. ಸಂದಿಗೊಂದಿಗಳಲ್ಲಿ, ಮೂಲೆಮುಡುಕುಗಳಲ್ಲಿ ಇದ್ದ ಪುಳ್ಳೆ ಸೌದೆಗಳನ್ನು ಅಜ್ಜಿ ಅದೇನೇನೋ ಗೊಣಗುತ್ತಾ ಎತ್ತಿ ತಂದು ಒಳಗೆ ಹಾಕುತ್ತಿದ್ದಳು. ಅಜ್ಜ ರಾತ್ರಿ ಕತ್ತಲಾದಾಗ ಬೆಳಕು ಮಾಡಲು ಸೀಮೆ ಎಣ್ಣೆ ದೀಪದ ಬತ್ತಿಗಳನ್ನು ಹಿಚುಕಿ ಸರಿಪಡಿಸುತ್ತಿದ್ದ. ಚಿಕ್ಕಪ್ಪ, ಅಪ್ಪ ಎಲ್ಲಿ ಮನೆ ಸೋರುತ್ತದೆಯೋ ಅಲ್ಲಿಗೆ ಕಾತಾಳೆ ಪಟ್ಟೆ, ಅಡಿಕೆ ಪಟ್ಟೆಗಳನ್ನು ತೂರಿಸುತ್ತ ಸೂರನ್ನು ಸರಿಪಡಿಸುತ್ತಿದ್ದರು. ಅಜ್ಜ ಮಾತ್ರ ‘ಈ ಹಾಳಾದ್ದು ಎಲ್ಲೋಯ್ತೋ ಕಾಣೆ… ಹೊತ್ನಂತೆ ಮನೆಗೆ ಬರಬ್ಯಾಡ್ವ’ ಅಂತ ಕೆಂಪಿಯನ್ನು ನೆನಪು ಮಾಡಿಕೊಳ್ಳುತ್ತಿದ್ದನು.
ಆಲೂರು ದೊಡ್ಡನಿಂಗಪ್ಪ ಬರೆದ ‘ಗಿಣಿ ಬಿಸ್ಕತ್ತು’ ಹೊಸ ಕಾದಂಬರಿಯ ಕೆಲ ಪುಟಗಳು ನಿಮ್ಮ ಓದಿಗೆ

Read More

ಅಣ್ಣ ನೆಟ್ಟ ದೇವರ ಮರ

ಅಪ್ಪನ ಕೆಮ್ಮುಗಳಲ್ಲಿ ಎರಡು ವಿಧಗಳಿದ್ದವು. ಒಂದು ಬೀಡಿ ದಮ್ಮಿನ ಕೆಮ್ಮು, ಇನ್ನೊಂದು ಎಚ್ಚರಿಕೆಯ ಕರಗಂಟೆಯ ಒಣಕೆಮ್ಮು. ಎರಡನೆಯ ಕೆಮ್ಮು ಒಂಥರ ನಮ್ಮಪ್ಪನ ಸಿಗ್ನಲ್ಲು ಕೂಡ ಆಗಿತ್ತು. ನಮಗೆಲ್ಲಾ ಆ ಕೆಮ್ಮಿನ ಧ್ವನಿಯ ಹಿಂದಿರುವ ಭಾಷೆ, ಭಾವಗಳು ತಕ್ಷಣಕ್ಕೆ ಗೊತ್ತಾಗಿ ಬಿಡುತ್ತಿದ್ದವು. ಅಪ್ಪ ಸಿಟ್ಟಿನಲ್ಲಿ ಇದ್ದಾರಾ? ಇಲ್ಲ ಒಳ್ಳೇ ಮೂಡ್ನಲ್ಲಿ ಬರ್ತಿದ್ದಾರಾ? ಎನ್ನುವುದು ತಿಳಿಯುತ್ತಿತ್ತು. ಜೊತೆಗೆ `ನಾನು ಬರುತ್ತಿದ್ದೇನೆ ಹೋಶಿಯಾರ್’ ಎಂಬ ಬೋಪರಾಕ್ ಕೂಡ ಆ ಕೆಮ್ಮಿನ ದನಿಯಲ್ಲಿ ಅಡಕವಾಗಿರುತ್ತಿತ್ತು. -ಕಲೀಮ್‌ಉಲ್ಲಾ ಬರೆದ “ಬಾಡೂಟದ ಮಹಿಮೆ” ಪ್ರಬಂಧ ಸಂಕಲನದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ರಾಗಿಕಾಳು ಕವನ ಸಂಕಲನ ಕುರಿತು ತಾರಿಣಿ ಶುಭದಾಯಿನಿ ಮಾತುಗಳು

ರಮೇಶಬಾಬು  ಕವನಗಳಲ್ಲಿ ಬರುವ ಪಾದದ ಬಳಕೆಯನ್ನು ಗಮನಿಸಬೇಕು. ಪಯಣಕ್ಕೆ ಪಾದಗಳು ಬೇಕು ಎನ್ನುವ ಹಾಗೆ ಅವು connect ಆಗುತ್ತವೆ. ನಾನು ಗಮನಿಸಿದಂತೆ ರಮೇಶಬಾಬು ಒಂದು ವಿಲೋಮ ಕ್ರಮ ಬಳಸಿ ಸಂಗತಿಗಳನ್ನು ನೋಡುತ್ತಾರೆ; ಅದಲು ಬದಲು ಜಾಗಗಳಲ್ಲಿ ದೃಷ್ಟಿಕೋನಗಳು ಬದಲಾಗುತ್ತವೆ ಅಲ್ಲವೆ? ಅದರಂತೆ ಪಾದಗಳು ತಲೆಯ ಇನ್ನೊಂದು ತುದಿಗಳು. ಶಿರವು ಉತ್ತರವಾದರೆ ಪಾದ ದಕ್ಷಿಣದಂತೆ. ಶಿರದಿಂದ ಇಳಿಯುವುದು, ಪಾದದಿಂದ ಹತ್ತಬೇಕಾಗುತ್ತದೆ. ಈ ಅರಿವಿನೊಂದಿಗೆ ರಮೇಶಬಾಬು ಆಟವಾಡುತ್ತಾರೆ. ಪಾದಗಳೆಂದರೆ ದಾರಿ ಅಳೆಯುವ ಮಾಪಕಗಳಲ್ಲ ಅಥವಾ ದೇಹ ಹೊತ್ತ ಭಾರಧಾರಕಗಳಲ್ಲ. ಪಾದದರಿವನ್ನು ಕವಿ ಇಲ್ಲಿ ವಿವರಿಸುವ ರೀತಿಯನ್ನು ಗಮನಿಸಬೇಕು.
ಚೀಮನಹಳ್ಳಿ ರಮೇಶಬಾಬು ಬರೆದ ‘ರಾಗಿಕಾಳು’ ಹೊಸ ಕವನ ಸಂಕಲನಕ್ಕೆ ಆರ್.ತಾರಿಣಿ ಶುಭದಾಯಿನಿ ಬರೆದ ಮಾತುಗಳು

Read More

ಚಿ.ಸು. ಚೆಲ್ಲಪ್ಪ ಬರೆದ ‘ವಾಡಿವಾಸಲ್‌’ಗೆ ಪೆರುಮಾಳ್ ಮುರುಗನ್ ಬರೆದ ಮುನ್ನುಡಿ

ಜಲ್ಲಿಕಟ್ಟು ಬೇರೆ ಕ್ರೀಡೆಗಳಿಗಿಂತ ಹೇಗೆ ವಿಭಿನ್ನವಾದದ್ದು ಎಂದು ಕೇಳಿದರೆ ಅದಕ್ಕೊಂದು ಉತ್ತರವಿದೆ. ಬೇರೆ ಆಟಗಳಲ್ಲಿ ಆಡುವ ಇಬ್ಬರೂ ಆಟಗಾರರಿಗೂ ಇದು ಆಟವೆಂದು ತಿಳಿದಿರುತ್ತದೆ. ಆದರೆ ಜಲ್ಲಿಕಟ್ಟುವಿನಲ್ಲಿ ಹಾಗಲ್ಲ. ಮನುಷ್ಯನಿಗೆ ಮಾತ್ರ ಇದು ಆಟ. ಮೃಗಕ್ಕೆ ಅದು ಗೊತ್ತಿಲ್ಲ. ಆಟವೆಂದು ತಿಳಿಯದ ಮೃಗವನ್ನು ಅಡಗಿಸಲು ಮನುಷ್ಯನಿಗೆ ಸಾಕಷ್ಟು ಯುಕ್ತಿಗಳಿವೆ. ಮೃಗವು ಅದನ್ನೆಲ್ಲಾ ಮೀರಿ ಆತನಿಂದ ತಪ್ಪಿಸಿಕೊಳ್ಳಬೇಕು. ಅದರ ಕೆಲವು ಅಂಶಗಳು ವಾಡಿವಾಸಲ್ ನಲ್ಲಿ ವಿವರವಾಗಿಯೇ ಬರೆಯಲಾಗಿದೆ. ಮನುಷ್ಯನೊಳಗೂ ಬಚ್ಚಿಟ್ಟುಕೊಂಡಿರುವ ಮೃಗತ್ವವನ್ನು ತೋರುವ ಕೃತಿಯಾಗಿದೆ ಈ ವಾಡಿವಾಸಲ್.
ಚಿ.ಸು. ಚೆಲ್ಲಪ್ಪ ಬರೆದ ‘ವಾಡಿವಾಸಲ್‌’ಗೆ ಪೆರುಮಾಳ್ ಮುರುಗನ್ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ