Advertisement

Category: ದಿನದ ಪುಸ್ತಕ

ಭಾಗ್ಯರೇಖಾ ದೇಶಪಾಂಡೆ ಕಥಾಸಂಕಲನಕ್ಕೆ ಡಾ. ವಸುಂಧರಾ ಭೂಪತಿ ಬರೆದ ಮುನ್ನುಡಿ

“ಕನ್ನಡದಲ್ಲಿ ಇಪ್ಪತ್ತನೆಯ ಶತಮಾನದ ಮೊದಲ ದಶಕದಲ್ಲಿ ಪಂಜೆ ಮಂಗೇಶರಾಯರು ತಮ್ಮ ಸಣ್ಣಕಥೆಗಳನ್ನು ಸುವಾಸಿನಿ ಪತ್ರಿಕೆಯಲ್ಲಿ ಪ್ರಕಟಿಸುವ ಮೂಲಕ ಕಥಾಸಾಹಿತ್ಯ ಪರಂಪರೆಗೆ ನಾಂದಿ ಹಾಡಿದರು. ಪಂಜೆಯವರ ಸಮಕಾಲೀನರಾಗಿ ಸಣ್ಣಕಥೆ ಮತ್ತು ಕಾದಂಬರಿಗಳನ್ನು ರಚಿಸಿದವರು ನಂಜನಗೂಡು ತಿರುಮಲಾಂಬಾ ಮತ್ತು ಆರ್. ಕಮಲಮ್ಮನವರು, ತಿರುಮಲಾಂಬ ಅವರ ಸಚ್ಚರಿತ ಸುಧಾರ್ಣವ ಪೌರಾಣಿಕ ಕಥಾಸಂಕಲನದಿಂದ ಪ್ರಾರಂಭವಾಗುವ ಕನ್ವರೆ ಮಹಿಳಾ ಕಥಾಸಂಕಲನಕ್ಕೆ ಶತಮಾನ ಪೂರೈಸಿರುವುದು ಸ್ಮರಣೀಯ.”
ಭಾಗ್ಯರೇಖಾ ದೇಶಪಾಂಡೆ ಬರೆದ ‘ಪಾನಿಪೂರಿʼ ಹೊಸ ಕಥಾ ಸಂಕಲನಕ್ಕೆ ಡಾ. ವಸುಂಧರಾ ಭೂಪತಿ ಬರೆದ ಮುನ್ನುಡಿ

Read More

ಸುಧಾ ಆಡುಕಳ ಕಥಾಸಂಕಲನಕ್ಕೆ ಡಾ. ಎಲ್.ಸಿ. ಸುಮಿತ್ರಾ ಮಾತುಗಳು

“‘ಹೊಳೆ’ ಕಥೆಯಲ್ಲಿ ಕಾಡುನಾಶದಿಂದ ಹೊಳೆ ಬತ್ತಿಹೋಗುವ ಪರಿಸರದ ಚಿಂತನೆಯಿದೆ. ‘ಸತ್ಯದ ಬದುಕು’ ವ್ಯಕ್ತಿ ಸ್ವಾತಂತ್ರ್ಯವನ್ನು ಕೌಟುಂಬಿಕ ಸಂಬಂಧಗಳು ಮೊಟಕು ಮಾಡುವ, ನಿಯಂತ್ರಿಸುವ ರೀತಿಯನ್ನು ಹೇಳುತ್ತಲೇ ಅಲಕಾ ಎಂಬ ಹುಡುಗಿ ಮನೆಯಲ್ಲೂ, ಕೆಲಸ ಮಾಡುವ ಜಾಗೆಯಲ್ಲೂ ಹೇಗೆ ಒಂದು ಪರಿಕರವಾಗಿ ಬಳಸಲ್ಪಡುತ್ತಾಳೆ… ಕೊನೆಗೆ ಹೇಗೆ ಅವಳು ಭಾವನಾತ್ಮಕ ಬಂಧಗಳಿಂದ ಹೊರಬರುವ ಬಗೆಯನ್ನು ಚಿತ್ರಿಸುತ್ತದೆ. ‘ಕಥೆಯನ್ನರಸುತ್ತಾ’ ಎಂಬ ಕಥೆ ಹೊಸಬಗೆಯ ನಿರೂಪಣೆಯನ್ನು ಹೊಂದಿದೆ.”
ಸುಧಾ ಆಡುಕಳ ಅವರ ಚೊಚ್ಚಲ ಕಥಾಸಂಕಲನ ‘ಒಂದು ಇಡಿಯ ಬಳಪʼದ ಕುರಿತು ಡಾ. ಎಲ್.ಸಿ. ಸುಮಿತ್ರಾ ಅಭಿಪ್ರಾಯ

Read More

ವೈ.ಎಸ್. ಹರಗಿ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

“ಕಾದಂಬರಿಯ ಬಹುಮುಖ್ಯ ಗುರಿಯಿರುವುದು ದೇವದಾಸಿ ಪದ್ಧತಿಯ ಅನಿಷ್ಟವನ್ನು ಚರ್ಚೆಯ ಮುನ್ನೆಲೆಗೆ ತರುವುದು. ಕೆಳಜಾತಿಗಳ ದೇವಳ ಪ್ರವೇಶ ಹಾಗೂ ಕೆರೆ ನೀರ ಬಳಕೆಯಂತಹ ಮೂಲಭೂತ ಹಕ್ಕುಗಳ ವಿಷಯವನ್ನು ಪ್ರಸ್ತಾಪಿಸುವುದು. ಇಂತಹ ಜಟಿಲ ವಿಷಯಗಳ ಪ್ರಸ್ತಾಪನೆ ಮಾತ್ರ ಸಾಕಾಗುವುದಿಲ್ಲವೆಂಬ ಅರಿವಿನ ಕಾದಂಬರಿಕಾರ ಪರಿವರ್ತನೆಯ ಮುನ್ನೆಲೆ ನಾಯಕರನ್ನೂ ಅದನ್ನು ಬಯಸುವ ಸಮಾಜದಿಂದಲೇ ಸೃಷ್ಟಿಸಿದ್ದಾರೆ.”
ವೈ.ಎಸ್. ಹರಗಿಯವರ ‘ಕೆಂಡದ ನೆರಳು’ ಕಾದಂಬರಿಗೆ ಕೇಶವ ಮಳಗಿ ಬರೆದ ಮುನ್ನುಡಿ

Read More

ಶೋಭಾ ನಾಯಕ ಅನುವಾದಿಸಿದ ಕವನ ಸಂಕಲನಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು

“ವರ್ತಮಾನ ಕಾಲದ ಭಾರತವು ಬಗೆ ಬಗೆಯ ಬಿಕ್ಕಟ್ಟುಗಳಿಂದ ನರಳುತ್ತಿದೆ. ದ್ವೇಷ, ನಿರಾಶೆ, ಸಿನಿಕತನ, ಕೋಮುವಾದ, ಜಾತೀಯತೆ, ಮತಾಂಧತೆ, ಹೋರಾಟ ಮತ್ತಿತರ ಸಮಸ್ಯೆಗಳ ನಡುವೆ ಭಾರತೀಯರು ನಲುಗಿ ಹೋಗುತ್ತಿದ್ದಾರೆ. ಇಂಥ ಸಂಕೀರ್ಣ ಪರಿಸ್ಥಿತಿಯಲ್ಲಿ ಗೋಬಿಂದ ಪ್ರಸಾದರ ಕವಿತೆಗಳು ಆಶಾವಾದ, ನಂಬುಗೆ, ಆಪ್ತತೆ ಮತ್ತು ಪ್ರೀತಿಯನ್ನು ಸೃಷ್ಟಿಸಲು ನೆರವಾಗುತ್ತವೆ. ನಮ್ಮನ್ನು ಆವರಿಸಿಕೊಂಡಿರುವ ಮಡಿ ಮತ್ತು ಮೈಲಿಗೆಗಳೆರಡನ್ನೂ ಕಳೆದು ಹಾಕಲು ಅವರ ಕವಿತೆಗಳು ತವಕಿಸುತ್ತವೆ.”
ಶೋಭಾ ನಾಯಕ ಅನುವಾದಿಸಿದ ಹಿಂದಿ ಕವಿ ಗೋಬಿಂದ ಪ್ರಸಾದರ ಆಯ್ದ ಪದ್ಯಗಳ ‘ವರ್ತಮಾನದ ಧೂಳುʼ ಸಂಕಲನಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು

Read More

ಕೇಶವ ಮಳಗಿ ಬರೆದ ‘ಗುಂಡಿಗೆಯ ಬಿಸಿರಕ್ತʼ ಪುಸ್ತಕದ ಪ್ರವೇಶಿಕೆ…

“ದೇಶಭ್ರಷ್ಟತೆಯನ್ನು ಆಯ್ದುಕೊಂಡ ಲೇಖಕರು ದಕ್ಷಿಣ ಆಫ್ರಿಕದ ಕುರಿತು ವಿಫುಲವಾಗಿ ಬರೆಯತೊಡಗಿದರು. ಅದಕ್ಕಾಗಿ ವಿವಿಧ ಪ್ರಕಾರಗಳನ್ನುಆಯ್ದುಕೊಂಡರು. ಅವುಗಳಲ್ಲಿ ಆತ್ಮಚರಿತ್ರೆ ಅತ್ಯಂತ ಪ್ರಿಯವಾದ ಪ್ರಕಾರವಾಯಿತು. ಅನುಭವ ಕಥನವು ಆತ್ಮಚರಿತ್ರೆಯ ರೂಪದಲ್ಲಿ, ಹೊಸ ಪದವಿನ್ಯಾಸದಲ್ಲಿ ಗೋಚರಿಸತೊಡಗಿತು. ಪರದೇಸಿಗರಾದ ದಕ್ಷಿಣ ಆಫ್ರಿಕನ್ ಬುದ್ಧಿಜೀವಿಗಳಿಗೆ ಆತ್ಮಕಥೆ ಹೊಸ ಅಸ್ತಿತ್ವವನ್ನು ನೀಡಿದ ಪ್ರಕಾರವಾಯಿತು. ಇತ್ತ, ತಾಯ್ನೆಲದಲ್ಲಿ ಭಾವಗೀತೆ ಅರಳತೊಡಗಿತ್ತು. ಕಾವ್ಯಾಭಿವ್ಯಕ್ತಿಗೆ ಹೊಸಬರು ಸೇರಿಕೊಂಡಂತೆಲ್ಲ ಅಭಿವ್ಯಕ್ತಿ ರೂಕ್ಷವಾಗತೊಡಗಿತು.”
ಕೇಶವ ಮಳಗಿ ಬರೆದ ‘ಗುಂಡಿಗೆಯ ಬಿಸಿರಕ್ತ: ಆಫ್ರಿಕನ್‌ ಸಂಕಥನ’ ಪುಸ್ತಕದ ಪ್ರವೇಶಿಕೆ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ