ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯ ಅಕಳಂಕ ಚರಿತ್ರೆ: ಸುಭದ್ರಾ ಹೆಗಡೆ ಬರಹ
ಕಾದಂಬರಿಯನ್ನು ಓದುತ್ತಾ ಹೋದಂತೆ ಶೌರ್ಯ, ಸಾಹಸಕ್ಕೆ ಹೆಸರಾಗಿ ನಿಂತ ವೀರವನಿತೆ ಜೀವ ತಳೆದು ನಮ್ಮೆದುರು ನಿಲ್ಲುವಂತೆ ರಾಣಿಯ ಪಾತ್ರವನ್ನು ಅಷ್ಟು ಸೂಕ್ಷ್ಮವಾಗಿ ಹೆಣೆಯಲಾಗಿದೆ. ಜೈನ ಧರ್ಮದವಳಾದ ರಾಣಿ ಸಾಳುವ ವಂಶದ ಕೊನೆಯ ಕುಡಿ, ಸರ್ವಧರ್ಮ ಸಮನ್ವಯವನ್ನು ಸಾರಿದವಳು. ಇಲ್ಲಿ ಬರುವ ಪ್ರತಿಯೊಂದು ಪಾತ್ರವೂ, ಗುರುಗಳಾದ ಭಟ್ಟಾಕಳಂಕರು, ಪ್ರಧಾನಿಯಾದ ಸಭಾಹಿತರು, ಶಬಲೆ, ಜಿನದತ್ತ, ಸತ್ಯಾಶ್ರಯ ಇವರೆಲ್ಲರೂ ಕಳೆದುಹೋದ ಸಮೃದ್ಧವಾದ ಸಾಮ್ರಾಜ್ಯವೊಂದರ ಸಾಕ್ಷಿಯಾಗಿ ನಿಲ್ಲುತ್ತಾರೆ. ರಾಣಿಗೆ ಬೆಂಗಾವಲಾಗಿ ನಿಂತು ನಾಡ ಪ್ರೇಮವನ್ನು ತೋರಿಸುತ್ತಾರೆ.
ಗಜಾನನ ಶರ್ಮಾ ಬರೆದಿರುವ ಐತಿಹಾಸಿಕ ಕಾದಂಬರಿ ‘ಚೆನ್ನಭೈರಾದೇವಿʼ ಕುರಿತು ಸುಭದ್ರಾ ಹೆಗಡೆ ಬರಹ
