Advertisement

Category: ದಿನದ ಪುಸ್ತಕ

ಡಾ. ಗಜಾನನ ಶರ್ಮ ಬರೆದ ‘ಚೆನ್ನಭೈರಾದೇವಿʼ ಕಾದಂಬರಿಗೆ ಜೋಗಿ ಬರೆದ ಮಾತುಗಳು

“ಇದು ಕೇವಲ ಚೆನ್ನಭೈರಾದೇವಿಯ ಕಥೆಯಷ್ಟೇ ಅಲ್ಲ, ನೂರು ವರುಷಗಳ ಶರಾವತಿ ದಂಡೆಯ ಚರಿತ್ರೆ. ಕರಾವಳಿ-ಪಶ್ಚಿಮ ಮಲೆನಾಡಿನ ವೈವಿಧ್ಯಮಯ ಜೀವನ ಶೈಲಿಯ ಕಷ್ಟಕತೆ, ಜೈನಧರ್ಮೀಯರ ಸಾಹಸ ತ್ಯಾಗದ ಚಿತ್ರ, ಬಿಜಾಪುರದ ಸುಲ್ತಾನರು ಹಾಗೂ ವಿಜಯನಗರದ ಅರಸರೊಂದಿಗಿನ ಸಂಬಂಧ ಕಡಿದುಕೊಳ್ಳದೇ ಒತ್ತೊತ್ತಿ ಬಂದ ಪೋರ್ಚುಗೀಸರಿಂದ ಒಂದಿಡೀ ತಲೆಮಾರನ್ನು ಕಾಪಾಡಿದ ರಾಣಿಯ ಸಾಹಸ, ಪ್ರೇಮ, ತ್ಯಾಗ ಮತ್ತು ಧೀಮಂತ ವ್ಯಕ್ತಿತ್ವದ ಸಮಗ್ರ ಚಿತ್ರ.”
ಡಾ. ಗಜಾನನ ಶರ್ಮ ಬರೆದ ‘ಚೆನ್ನಭೈರಾದೇವಿʼ ಕಾದಂಬರಿಗೆ ಜೋಗಿ ಬರೆದ ಮಾತುಗಳು

Read More

ಅಕ್ಷಯ ಪಂಡಿತ್ ಕಥಾಸಂಕಲನಕ್ಕೆ ಡಾ. ನಾ. ಡಿಸೋಜ ಬರೆದ ಮಾತುಗಳು

“ಈ ಹುಡುಗನಿಗೆ ಈ ತೊಟ್ಟಿಲಿನದೇ ಆಕರ್ಷಣೆ. ಜಾತ್ರೆಯನ್ನು ನೋಡಲು ಅಲ್ಲಿ ವ್ಯಾಪಾರ ಮಾಡಲು ಬಂದ ಮಗ ಜಾತ್ರೆಯಲ್ಲಿಯ ಎಲ್ಲವನ್ನ ನೋಡಿ ಸಂತಸ ಪಡುತ್ತಾನೆ. ತಂದೆಯನ್ನ ಕೂಡ ತೊಟ್ಟಿಲಲ್ಲಿ ಕೂರಿಸಿ ಒಂದು ರೈಡ್ ಮಾಡಿಸುತ್ತಾನೆ. ಒಂದು ಹಂತದಲ್ಲಿ ತನ್ನ ಜೇಬಿನಲ್ಲಿ ಇರಿಸಿ ಕೊಂಡ ರೆಕ್ಕೆಯನ್ನ ಹಾರಿಸಿ ಬಿಡುತ್ತಾನೆ. ಆ ರೆಕ್ಕೆ ತಾನು ಕುಳಿತ ತೊಟ್ಟಿಲಿನಷ್ಟು ಎತ್ತರಕ್ಕೆ ಹಾರಿದಾಗ ಮಗ ‘ಅಪ್ಪ ಅಷ್ಟು ಎತ್ರ ಹೋಗೋದು ಹೇಗೆ ?ʼ ಎಂದು ಕೇಳುತ್ತಾನೆ.”
ಅಕ್ಷಯ ಪಂಡಿತ್ ಬರೆದ ‘ಬಯಲಲಿ ತೇಲುತ ತಾನುʼ ಕಥಾಸಂಕಲನಕ್ಕೆ ಡಾ. ನಾ. ಡಿಸೋಜ ಬರೆದ ಮಾತುಗಳು

Read More

ಏ.ಕೆ. ಕುಕ್ಕಿಲ ಪುಸ್ತಕಕ್ಕೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮುನ್ನುಡಿ

“ಇಂಥ ತೀವ್ರತರವಾದ ಕಷ್ಟದ ದಿನಗಳಲ್ಲಿ ಕೆಲವರು ತಮ್ಮ ಗುಪ್ತ ಕಾರ್ಯಸೂಚಿಗಳನ್ನು ಮುನ್ನೆಲೆಗೆ ತರಲು ಪ್ರಯತ್ನಿಸಿದ ಘಟನೆಗಳೂ ನಡೆದುವು. ಕೊರೋನಾ ಓಡಿಸಲು ಶಂಖ ಜಾಗಟೆಗಳನ್ನು ಬಳಸಲು ಸೂಚಿಸಿದಲ್ಲಿಂದ ಆರಂಭವಾದ ಅದು ದೆಹಲಿಯ ತಬ್ಲೀಗ್ ಜಮಾಅತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಂದ ಕೊರೋನಾ ಹರಡಿದೆ ಎಂದು ಹೇಳುತ್ತಾ ಮಹಾಮಾರಿಗೂ ಕೋಮುವಾದದ ಸೋಂಕು ತಗಲಿಸುವವರೆಗೆ ಮುಂದುವರೆಯಿತು. ಆದರೆ ಕೊರೋನಾಕ್ಕೆ ಹಿಂದು ಮುಸ್ಲಿಂ ವ್ಯತ್ಯಾಸ ಗೊತ್ತಾಗದೆ, ಎಲ್ಲರನ್ನೂ ಬಲಿ ತೆಗೆದುಕೊಳ್ಳಲಾರಂಭಿಸಿದ ಮೇಲೆ ಚಿತ್ರ ಸ್ವಲ್ಪ ಬದಲಾಯಿತು.”
ಏ.ಕೆ. ಕುಕ್ಕಿಲ ಬರೆದ ‘ವೈರಸ್‌ʼ ಕಾದಂಬರಿಗೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮುನ್ನುಡಿ

Read More

ಶಿವಶಂಕರ ಸೀಗೆಹಟ್ಟಿ ಕವನ ಸಂಕಲನಕ್ಕೆ ಡಾ. ಬಂಜಗೆರೆ ಜಯಪ್ರಕಾಶ ಬರೆದ ಮುನ್ನುಡಿ

“ಸಮಾಜವನ್ನು ಪ್ರಗತಿಪರ ಆಶಯಗಳ ಅನುಸಾರ, ಎಲ್ಲರ ಸಹಬಾಳ್ವೆ ಮತ್ತು ಸಾಮರಸ್ಯದ ದಿಕ್ಕಿನಲ್ಲಿ ಕಟ್ಟಬೇಕೆಂಬ ಕನಸು ಹೊತ್ತ ಕವಿಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ವ್ಯವಸ್ಥೆಯ ಪರವಾಗಿ ಮಾತನಾಡುವವರು ಇಲ್ಲವೆಂದಲ್ಲ. ಅವರು ದುಃಸ್ಥಿತಿಯನ್ನು ಸುಸ್ಥಿತಿಯೆಂದು ಬಿಂಬಿಸಲು ಹರಸಾಹಸಪಡುತ್ತಾರೆ. ಆದರೆ ಅಂತಹ ಮಾತುಗಳಿಗೆ ಆತ್ಮಸಾಕ್ಷಿಯ ಕೊರತೆ ಇರುತ್ತದೆ. ಅದರಲ್ಲಿ ಸತ್ಯದ ಶೋಧ ಇರುವುದಿಲ್ಲವಾದ್ದರಿಂದ ಅಂತಹ ಮಾತುಗಳು ಟೊಳ್ಳಾಗಿಹೋಗುತ್ತವೆ.”
ಶಿವಶಂಕರ ಸೀಗೆಹಟ್ಟಿ ಕವನ ಸಂಕಲನಕ್ಕೆ ಡಾ. ಬಂಜಗೆರೆ ಜಯಪ್ರಕಾಶ ಬರೆದ ಮುನ್ನುಡಿ

Read More

ಹಾಡುಗಬ್ಬದ ಸೊಗಸು ತೋರುವ ‘ವೃಷಭೇಂದ್ರ ವಿಳಾಸ’

 ‘ವೃಷಭೇಂದ್ರ ವಿಳಾಸ’ ಕೃತಿಯಲ್ಲಿ ಚಿತ್ರಭಾಗವೇ ಸಿಂಹಪಾಲು ಪಡೆದಿದೆ. ರಂಗಭೂಮಿಯ ಮೇಲೆ ಯಕ್ಷಗಾನವಾಗಲಿ, ನಾಟಕವಾಗಲಿ ಮಾಡಬೇಕಾದ ಕೆಲಸವನ್ನು ಚಿತ್ರಕಲಾವಿದ ಇಲ್ಲಿ ಅಚ್ಚುಕಟ್ಟಾಗಿ ಮಾಡಿದ್ದಾನೆ. ‘ಶ್ರವ್ಯ-ದೃಶ್ಯ’ ಮಾಧ್ಯಮಗಳೆರಡೂ ಇಲ್ಲಿ ಬೆಸೆದುಕೊಂಡಿವೆ. ಬಣ್ಣಗಳ ಬಳಕೆಯಲ್ಲಿ ಸಂಪ್ರದಾಯದ ನಿಲುವನ್ನೆ ಅನುಸರಿಸಿದ್ದಾರೆ. ಇದೊಂದು ಅಪೂರ್ವವಾದ ಗ್ರಂಥ. ಯಕ್ಷಗಾನ ಸಾಹಿತ್ಯದಲ್ಲಿ ವಿರಳ ಕೃತಿಯಾಗಿದೆ ಎಂಬುದಾಗಿ ಪುಸ್ತಕದ ಬಗ್ಗೆ ತಮ್ಮ ಅನಿಸಿಕೆ ಬರೆದಿದ್ದಾರೆ ಡಾ. ಸುಮಂಗಲಾ ಮೇಟಿ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ