“ಬಿಗಿ ಹಿಡಿದ ಮುಷ್ಟಿಯಲಿ ನವಿರು ಪ್ರೇಮದ ಘಮಲು”: ಎಂ. ತರುಣ್ ಕೃತಿಗೆ ಮೋದೂರು ತೇಜ ಮುನ್ನುಡಿ
ನಿಜವಾದ ಕವಿಗೆ ಒಳಗಣ್ಣು ತೆರೆದಿದ್ದಾಗ ಮಾತ್ರ ತನ್ನ ಸುತ್ತಲಿನ ವಸ್ತುಗಳಾಗಲಿ, ವ್ಯಕ್ತಿಗಳಾಗಲಿ ವಿಶೇಷವಾಗಿ ಕಾಣಿಸುತ್ತಾರೆ. ಅಂತಹ ಕಾಣುವ ಕಾಣ್ಕೆ ಈ ಯುವ ಕವಿ ದಕ್ಕಿಸಿಕೊಂಡಿದ್ದಾರೆ. ಆದರೆ ಅವಸರದ ಬೆನ್ನೇರಿ ಕುಳಿತಿರುವ ನಮಗೆ ಯಾವುದನ್ನೂ ಸಾವಧಾನವಾಗಿ ನೋಡುವ, ಕಾಣುವ ತಾಳ್ಮೆ, ತುಡಿತ ಇಲ್ಲದಂತಾಗಿದೆ. ಮೊಬೈಲ್ ಎಂಬ ಮಾಯಾಲೋಕ ಅಂಗೈಗೆ ಬಂದ ಮೇಲೆ ಎಲ್ಲವನ್ನೂ ಮೈಮರೆಯುವಂತೆ ಮಾಡುತ್ತಿರುವಾಗ, ಅದರಲ್ಲೂ ತಾನು ಬರೆದಿದ್ದೆಲ್ಲವೂ ಪ್ರಕಟಿಸಲು ಸಾಮಾಜಿಕ ಜಾಲತಾಣಗಳ ವೇದಿಕೆಗಳಿರುವಾಗ ಕಾಯುವ ಗುಣ ಯಾರಿಗೂ ಇಲ್ಲಂತಾಗಿದೆ. ಹಾಗಂತ ಎಲ್ಲರೂ ಸಂತೆಗೆ ಮೂರು ಮೊಳ ಕಂಬಳಿ ನೇಯುವಂತೆ ಕಾವ್ಯ ರಚನೆಯಲ್ಲಿ ತೊಡಗಿದ್ದಾರೆಂದು ಹೇಳಿದರೆ ತಪ್ಪಾಗುತ್ತದೆ.
ಎಂ. ತರುಣ್ ಕವನ ಸಂಕಲನ “ಬಿಗಿ ಹಿಡಿದ ಮುಷ್ಟಿಯಲಿ”ಕ್ಕೆ ಮೋದೂರು ತೇಜ ಬರೆದ ಮುನ್ನುಡಿ
