Advertisement

Category: ಪುಸ್ತಕ ಸಂಪಿಗೆ

ಸಂರಚನೆಯಲ್ಲಿ ಹೊಸತನ ಹುಡುಕುವ ಕಥೆಗಳು: ಎನ್.ಎಸ್.ಶ್ರೀಧರ ಮೂರ್ತಿ ಬರಹ

‘ಅಂತರ್ಗತ’ ದಲ್ಲಿ ಕಥೆಯಲ್ಲಿದ್ದಾತ ಎದುರಿಗೂ ಬರುತ್ತಾನೆ, ಚಿತ್ತಾಲರ ಕಥೆಯಂತೆ ಸೃಜನಶೀಲತೆಯ ನೆಲೆಗಳನ್ನು ಪರಿವೀಕ್ಷಿಸುವ ಇದು ಆ ಮೂಲಕ ಬದುಕಿನ ಮೂಲ ಆತಂಕಗಳನ್ನೂ ಗುರುತಿಸುತ್ತದೆ. ‘ತಾರೆ’ಕತೆಯಲ್ಲಿ ಕೂಡ ಇಂತಹ ಸೂಕ್ಷ್ಮಗಳನ್ನು ಗಮನಿಸ ಬಹುದು. ಅಜಿತ್ ಅವರ ಕಥನದ ಹಿರಿಮೆಯೆಂದರೆ ಅವರಿಗೆ ಓದುಗರ ಗ್ರಹಿಕೆಯ ಕುರಿತು ಇರುವ ನಂಬಿಕೆ. ಕಥನದ ಹಲವು ನೆಲೆಗಳನ್ನು ಅವರು ಮುಕ್ತವಾಗಿರಿಸಿ ಅವು ಓದುಗರ ಮನೋಭೂಮಿಕೆಯಲ್ಲಿ ಬೆಳೆಯಲು ಬಿಡುತ್ತಾರೆ. ‘ತುಂಬೀತೆ ಒಲವು’ ಈ ನೆಲೆಯಲ್ಲಿ ಬಹು ಯಶಸ್ವಿಯಾದ ಕಥೆ.
ಡಾ. ಅಜಿತ್‌ ಹರೀಶಿ ಹೊಸ ಕಥಾ ಸಂಕಲನ “ಉಪರಿ”ಯ ಕುರಿತು ಎನ್.ಎಸ್.ಶ್ರೀಧರ ಮೂರ್ತಿ ಬರಹ

Read More

ಪೌರಾಣಿಕ ಚೌಕಟ್ಟಿನಲ್ಲಿ ವರ್ತಮಾನದ ಕರ್ಣನನ್ನು ದರ್ಶಿಸಿದ ಕಾದಂಬರಿ ‘ಕವಚ’: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

‘ಕವಚ’ ಕಾದಂಬರಿಯು ಸಮಕಾಲೀನ ಬದುಕಿಗೆ ಅನ್ವಯವಾಗಬಲ್ಲ ಅನೇಕ ಸಂಗತಿಗಳನ್ನು ಪ್ರಸ್ತಾಪಿಸಿದೆ. ಗುರು ಪರಶುರಾಮರು ಅಸ್ತ್ರಗಳ ಪ್ರಯೋಗಕ್ಕೆ ಸಂಬಂಧಪಟ್ಟಂತೆ ಬೋಧನೆಯನ್ನು ನೀಡುವ ಸಂದರ್ಭದಲ್ಲಿ, ಆಕ್ರಮಣಗಳು ಸ್ವ-ರಕ್ಷಣೆಗಾಗಿಯೇ ಹೊರತು ಆಕ್ರಮಣಕ್ಕಲ್ಲ. ದುರ್ಗುಣಗಳಿಗೆ ಈಡಾದರೆ ಸಿದ್ಧಿಯಾದ ಮಂತ್ರಾಸ್ತ್ರಗಳೂ ಪ್ರಯೋಜನಕ್ಕೆ ಬರುವುದಿಲ್ಲ ಮೊದಲಾದ ವಿಚಾರಗಳನ್ನು ತಿಳಿಸಿಕೊಡುತ್ತಾರೆ. ಅರ್ಜುನನ ಚಾಪವಿದ್ಯಾ ಚಾತುರ್ಯದ ಸಮಯದಲ್ಲಿ ಕರ್ಣ ಅರ್ಜುನನ ವಿರುದ್ಧ ಹೋರಾಡಲು ನಿರ್ಧರಿಸಿದಾಗ ಜನರಿಗೆ ಅವನ ಬೆಂಬಲ ದೊರಕುತ್ತದೆ.
ರಾಧಾಕೃಷ್ಣ ಕಲ್ಚಾರ್ ಬರೆದ “ಕವಚ” ಕಾದಂಬರಿಯ ಕುರಿತು ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರಹ

Read More

ಜರ್ಮನಿಯಿಂದ ಕನ್ನಡಕ್ಕೆ ಬಂದ ‘ಈಡಾ’

ಕ್ಷಣ ಮೌನ. ಉರ್ಸುಲಾಳ ಜೊತೆ ಮಾತನಾಡದೆಯೇ ಹಾಯಾಗಿ ಕುಳಿತಿರಬಹುದು. ಅವಳು ಪೆದ್ದುಪೆದ್ದಾಗಿ ಏನೇನೋ ಪ್ರಶ್ನೆಗಳನ್ನು ಕೇಳುವುದಿಲ್ಲ. ತನ್ನ ಮೇಲೆ ಹುಡುಗನೊಬ್ಬ ಬಂದೆರಗಿದ ಘನವಾದ ವಿಷಯವನ್ನು ಹಂಚಿಕೊಳ್ಳಲು ಮಾತ್ರ ಬಾಯಿ ತೆರೆಯುವಳು. ಕೆಲವೊಮ್ಮೆ ನಾವಿಬ್ಬರೂ ಒಂದೇ ಬೆಂಚಿನ ಮೇಲೆ ಪಕ್ಕಪಕ್ಕದಲ್ಲೇ ಸುಮಾರು ಹೊತ್ತು ಕುಳಿತು ಒಂದೇ ಒಂದು ಶಬ್ದವನ್ನೂ ಉಸುರದೆ ಹೋದಂತಹ ದಿನಗಳಿವೆ. ನೀರಿನಿಂದ ಹೊರಬಂದು ಕಣ್ಣುಗಳನ್ನು ಮುಚ್ಚಿಕೊಂಡು ಬಿಸಿಲಿನ ಶಾಖಕ್ಕೆ ಮೌನವಾಗಿ ಮೈಯೊಡ್ಡಿ ಕುಳಿತಂತಹ ದಿನಗಳಿವೆ.
ಜರ್ಮನಿಯ ಕಾರೊಲೀನ ವಾಲ್‌ ಬರೆದ ‘22 ಬಾನೆನ್‌ʼ ಕಾದಂಬರಿಯನ್ನು ಹರ್ಷ ರಘುರಾಮ್‌ ಜರ್ಮನ್‌ ಭಾಷೆಯಿಂದ ನೇರವಾಗಿ ಕನ್ನಡಕ್ಕೆ ಅನುವಾದಿಸಿದ್ದು, ಈ ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಂಬಳೆಯೆಂಬ ನಿಲ್ದಾಣದಲ್ಲಿ ತಿರುಮಲೇಶರು: ಸುಮಾವೀಣಾ ಬರಹ

‘ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ಡದೇನಲ್ಲ’ ಎನ್ನುವ ಮೂಲಕ ಕಾಲ ನಿರಂತತೆಯಿಂದ ಕೂಡಿರುತ್ತದೆ. ಆದರೆ ಕಾಲದ ತೆಕ್ಕೆಯಲ್ಲಿ ಜೀವಿಸುವ ಜೀವಿ ನಿರಂತರವಾಗಿ ಇರಲು ಸಾಧ್ಯವಿಲ್ಲ. ಆತ ಅಲ್ಪ ಎನ್ನುತ್ತಾರೆ. ‘ಕಾಲ’ ಎನ್ನುವುದೇ ನಿಲ್ದಾಣವಾದರೆ ಅಲ್ಲಿ ಚರಿತ್ರೆ, ಸಂಸ್ಕೃತಿ, ನಾಗರಿಕತೆ ಇತ್ಯಾದಿಗಳು ಬಂದು ಹೋಗುತ್ತಿರುತ್ತವೆ. ಹೇಗೆ ಕುಂಬಳೆಯ ರೈಲು ನಿಲ್ದಾಣದಲ್ಲಿ ಮದರಾಸು ಮೇಲ್, ಜನತಾ, ಜಯಂತಿ ಮೊದಲಾದ ವೇಗಧೂತ ರೈಲುಗಳು ನಿಲ್ಲುವುದಿಲ್ಲವೋ ಹಾಗೆ ಅನುಸರಿಸಲಾಗದ, ಹೊಂದಿಕೊಳ್ಳಲಾರದವು ಸರ್ರನೆ ಸರಿದು ಹೋಗುತ್ತವೆ.
ಇಂದು ಕೆ.ವಿ. ತಿರುಮಲೇಶರ ಹುಟ್ಟುಹಬ್ಬ. ಕಳೆದ ವರ್ಷ ತೀರಿಹೋದ ಅವರ ನೆನಪಿಗೆ ಅವರ ‘ಅವಧ’ ಕವನ ಸಂಕಲನದ ಕುರಿತ ಸುಮಾವೀಣಾ ಬರಹ ಇಲ್ಲಿದೆ

Read More

ಚಕ್ರವ್ಯೂಹದೊಳಗಿನ ಮಾಯಾಲೋಕ…: ಗೊರೂರು ಶಿವೇಶ್‌ ಬರಹ

ಕಾದಂಬರಿಯ ಕೊನೆಯಲ್ಲಿ ಆ ಕಡತ ಮುಸುಕುಧಾರಿಗಳ ಕೈಗೆಸಿಕ್ಕು ಅದರ ಮಹತ್ವ ತಿಳಿಯದ ಅವರು ನದಿನೀರಿಗೆ ಎಸೆದು ಅದು ಬಿಡಿಬಿಡಿಯಾಗಿ ಬಿದ್ದು ನೀರುಪಾಲಾಗುತ್ತದೆ. ಇದ್ದ ಒಂದು ಪ್ರತಿಯೂ ಮಾಯವಾದರೂ ಎಲ್ಲಿಯಾದರೂ ಮತ್ತೊಂದು ಪ್ರತಿಯನ್ನು ಹುಡುಕಿಯೆ ತೀರುತ್ತೇನೆ ಮತ್ತು ಅದರ ಸಹಾಯದಿಂದ ರತ್ನಮಾಲಾ ವಜ್ರವನ್ನು ಪಡೆದೆ ತೀರಬೇಕೆಂದು, ಮುಂದೆ ಅದನ್ನು ಹಂಚಿಕೊಳ್ಳಬಹುದೆಂದು ರಾಜಪ್ಪ ತಿಳಿಸಿ, ಅದಕ್ಕೆ ಮೂವರು ಒಪ್ಪಿ ಜುಗಾರಿಕ್ರಾಸ್‍ನ ಬಸ್ ಹತ್ತುವುದರೊಂದಿಗೆ ಕಾದಂಬರಿ ಮುಕ್ತಾಯವಾಗುತ್ತದೆ.
ನೆನ್ನೆ ಪೂರ್ಣಚಂದ್ರ ತೇಜಸ್ವಿಯವರ ಜನ್ಮದಿನ, ಅದರ ನಿಮಿತ್ತ ತೇಜಸ್ವಿಯವರ “ಜುಗಾರಿ ಕ್ರಾಸ್” ಕೃತಿಯ ಕುರಿತು ಗೊರೂರು ಶಿವೇಶ್‌ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ