Advertisement

Category: ಪುಸ್ತಕ ಸಂಪಿಗೆ

ನಿಜವಾದ ಸೋದರಮಾವ: ಕೆ. ಸತ್ಯನಾರಾಯಣ ಕೃತಿಯ ಬರಹ

ಬೆಂಗಳೂರಿನಿಂದ ಗೌಹಾತಿಗೆ ಹೊರಟಿದ್ದ ರೈಲಿನಲ್ಲಿ ಒಬ್ಬ ಕನ್ನಡಿಗ ಪ್ರಯಾಣಿಕರ ಪರಿಚಯವಾಯಿತು. ಸದ್ಯದಲ್ಲೇ ಅವರು ನಿವೃತ್ತರಾಗಲಿದ್ದರು. ಬೆಂಗಳೂರಿಗೆ ಬಂದು ಬಂಧು-ಮಿತ್ರರ ಜೊತೆ ಬದುಕುತ್ತಾರೆ ಎಂಬುದು ನನ್ನ ನಿರೀಕ್ಷೆ. ಆದರೆ ಅವರು ಬೆಂಗಳೂರಿನಲ್ಲಿದ್ದ ಆಸ್ತಿಯನ್ನೆಲ್ಲ ಮಾರಿ, ಗೌಹಾತಿಯಲ್ಲೇ ಖಾಯಂ ಆಗಿ ನೆಲೆಸಲು ಹೊರಟಿದ್ದರು. ಈಗ ನಾವು ಅಲ್ಲಿ ಜೀವನ ಲಯಕ್ಕೆ ಹೊಂದುಕೊಂಡುಬಿಟ್ಟಿದ್ದೇವೆ. ನಮ್ಮ ತಂದೆ-ತಾಯಿ ಇಬ್ಬರೂ ಖಾಯಿಲೆ ಬಿದ್ದಾಗ ನಮಗಾಗಿ ಬಂದವರು ನೆಂಟರಿಷ್ಟರಲ್ಲ, ನಮ್ಮ ಕಾಲೊನಿಯ ಅಸ್ಸಾಮಿ ಬಂಧುಗಳು. ಅವರಿಗೆ ಕೃತಜ್ಞತೆ ಸಲ್ಲಿಸುವುದೆಂದರೆ, ಅವರೊಡನೆಯೇ ಮುಂದೆ ಬದುಕುವುದು ಎಂದುಬಿಟ್ಟರು.
ಕತೆಗಾರ ಕೆ. ಸತ್ಯನಾರಾಯಣ ಅವರ “ನನ್ನ ಪುಸ್ತಕಗಳ ಆತ್ಮಚರಿತ್ರೆ” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು ನನಗೆ ಕಾಣಿಸುತ್ತಿದೆ. ಸ್ಥಳೀಯ ಮಟ್ಟದಲ್ಲಿ ರೈತರು ಸಂಘಟಿತರಾದರೆ, ಸ್ಥಳೀಯ ಸಂಪನ್ಮೂಲವನ್ನೇ ಆದಷ್ಟೂ ಬಳಸಬೇಕೆಂಬ ಪ್ರೇರಣೆ ಅವರಲ್ಲಿ ಮೂಡಿತೆಂದರೆ, ಪ್ರಕೃತಿಯ ವಿನಿಮಯ ಪದ್ಧತಿಗಳನ್ನೂ ನಿಯಮಗಳನ್ನು ಗೌರವಿಸಿದಂತಾಗುತ್ತದೆ.
ಮಲ್ಲಿಕಾರ್ಜುನ ಹೊಸಪಾಳ್ಯ ಸಂಪಾದಿಸಿದ ವಿಜಯನಗರ ಜಿಲ್ಲೆಯ ಕೃಷಿ ಕಥನಗಳ “ಹಸಿರು ಮಾತುಕತೆ” ಕೃತಿಗೆ ನಾಗೇಶ ಹೆಗಡೆಯವರು ಬರೆದ ಮಾತುಗಳು

Read More

ಬಾಳ ನೌಕೆಯ ತಲ್ಲಣಗಳಿಗೆ ಬೆಳಕಿನ ದೀಪ: ಅನುಸೂಯ ಯತೀಶ್ ಬರಹ

ಕವಿ ಇಲ್ಲಿನ ಕವಿತೆಗಳನ್ನು ದೀರ್ಘವಾಗಿ ಬೆಳೆಸುತ್ತಾ ಹೋಗಿದ್ದಾರೆ ಎನ್ನುವುದಕ್ಕಿಂತ ಕವಿಯ ಧ್ಯಾನಸ್ಥ ಸ್ಥಿತಿ ಕವಿಯ ಪ್ರಜ್ಞಾಪೂರ್ವಕತೆಯನ್ನು ಮೀರಿ ಕವಿತೆಗಳನ್ನು ವಿಸ್ತಾರಗೊಳಿಸಿದೆ. ಸುಮಾರು ಮೂರು ಪುಟಗಳವರೆಗೂ ಚಾಚಿಕೊಂಡಿರುವ ಕವಿತೆಗಳ ಭಾವದೊನಲು ಎಲ್ಲೂ ಏಕತಾನತೆಗೆ ಎಡತಾಕುವುದಿಲ್ಲ. ತಾಜಾತನದ ರೂಪಕಗಳು, ಪ್ರತಿಮೆಗಳು ಕವಿತೆಗಳಿಗೆ ಗಟ್ಟಿತನ ತುಂಬಿ ಆಪ್ತತೆ ಕಾಯ್ದುಕೊಂಡಿವೆ. ಓದಿನ ಪ್ರೀತಿ ಗುಕ್ಕಿಗೂ ಬೇರೆ ಬೇರೆಯದೆ ಅರ್ಥ ಧ್ವನಿಸುವ ಕವಿತೆಗಳು ಚಿರಾಯುವಾಗಲು ಪ್ರಯತ್ನಿಸುತ್ತವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನದ ಕುರಿತು ಅನುಸೂಯ ಯತೀಶ್‌ ಬರಹ

Read More

ಇರುವುದೆಲ್ಲವ ಹೇಳಿಬಿಡು…: ಸುಶೀಲಾ ಡೋಣೂರ ಕಾದಂಬರಿಯ ಪುಟಗಳು

‘ಈ ಮಾತು ಚರ್ಚೆಗೆ ಬರದೆ ಹೋಗಿದ್ರ ನಾನು ಈ ಸುಳ್ಳು ಹೇಳಬಹುದಿತ್ತು ಪೂಣ, ಈಗ ಎಲ್ಲಾನೂ ಒಪ್ಗೊಂಡ ಮ್ಯಾಲ ಮತ್ತ ಅದೇ ಸುಳ್ಳನ್ನ ಆರಂಭದಿಂದ ಹೇಳು ಅಂದ್ರ ಹೇಳಾಕ ಆಗೂದಿಲ್ಲ. ಏನು ಶಿಕ್ಷೆ ಕೊಡ್ತೀಯೊ ಕೊಡು. ನಾ ನಿನ್ನ ಪ್ರೀತಿಸ್ತೀನಿ ಅನ್ನೂದು ಖರೆ, ಅದೇ ಅಂತಿಮ. ನೀ ಸಿಕ್ರೂ ಸರಿ, ಸಿಗಲಿಲ್ಲ ಅಂದ್ರೂ ಸರಿ. ಜೀವನಪೂರ್ತಿ ನಿನ್ನ ನೆನಪಿನ್ಯಾಗ ಸಾಗಿಸುವಷ್ಟು ಸುಂದರ ಕ್ಷಣಗಳನ್ನ ಕಳದೀನಿ ನಿನ್ನ ಜೋಡಿ, ಅವೇ ಸಾಕು’.
ಪತ್ರಕರ್ತೆ ಸುಶೀಲಾ ಡೋಣೂರ ಹೊಸ ಕಾದಂಬರಿ “ಪೀಜಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಚಪ್ಪಲಿ ಅಂಗಡಿಯಲ್ಲಿ ಕ್ಯಾಲೆಂಡರ್: ರಘುಪತಿ ತಾಮ್ಹನ್‌ಕರ್ ಅನುಭವ ಕಥನ

ಮೈಸೂರಿನ ರಘುಪತಿ ತಾಮ್ಹನ್‌ಕರ್ ಅವರ ಮೊದಲ ಕೃತಿ ‘ನೋಟಿನ ನಂಟು’ ಇದೇ ಭಾನುವಾರ ಅಂದರೆ ಜುಲೈ 7ರಂದು ಮೈಸೂರಿನ ಎಂಜಿನಿಯರುಗಳ ಸಂಸ್ಥೆಯಲ್ಲಿ ಬಿಡುಗಡೆಯಾಗಲಿದೆ. ಗಣೇಶ ಅಮೀನಗಡ ಅವರು ತಮ್ಮ ಕವಿತಾ ಪ್ರಕಾಶನದ ಮೂಲಕ ಇದನ್ನು ಪ್ರಕಟಿಸಿದ್ದಾರೆ. ಎಪ್ಪತ್ತು ವರ್ಷದ ರಘುಪತಿ ಅವರು ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಮ್ಯಾನೇಜರ್. ಅವರು ತಮ್ಮ ಅನುಭವಗಳನ್ನು ಕಟ್ಟಿಕೊಟ್ಟ ಕೃತಿಯ ಒಂದು ಅಧ್ಯಾಯ ನಿಮ್ಮ ಓದಿಗಾಗಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ