Advertisement

Category: ಪುಸ್ತಕ ಸಂಪಿಗೆ

ಮಹಾದೇವಿಯಕ್ಕನೆಂಬ ಬೆಳಕು…: ಸುಭದ್ರಾ ಹೆಗಡೆ ಬರಹ

ಅಕ್ಕನ ವಚನಗಳನ್ನು ಉದಾರಿಸುತ್ತ, ಆ ಘಟನೆಗಳಿಗೆ ಪೂರಕವಾಗುವಂತೆ ಕತೆಗಳನ್ನು ಹೇಳುವುದು ಈ ಕೃತಿಯ ಮತ್ತೊಂದು ವಿಶೇಷತೆ. ರಾಜ ಮನೆತನದ ರೀತಿ-ರಿವಾಜುಗಳನ್ನು ಸ್ವತಂತ್ರ ಮನೋಭಾವದ ಅಕ್ಕನಿಗೆ ಸಹಿಸುವುದು ಸಹಜವಾಗಿಯೇ ಕಷ್ಟವಾಗಿ, ಆ ರಾಜ ವೈಭೋಗವನ್ನೆಲ್ಲ ಧಿಕ್ಕರಿಸಿ ಹೊರ ನಡೆಯುತ್ತಾಳೆ. ಅಲ್ಲಿಂದ ಅಕ್ಕನ ಅಪರಿಮಿತ ಹುಡುಕಾಟ ನಿರಂತರವಾಗಿ ಸಾಗುತ್ತದೆ. ಒಂಟಿ ಹೆಣ್ಣು ಅರೆವಸ್ತ್ರ ಧರಿಸಿ ನಡೆವ ದಾರಿಯಲ್ಲಿ ಬರುವ ಅನೇಕ ಸಂಕಷ್ಟಗಳನ್ನು ಮೆಟ್ಟಿ ನಿಲ್ಲುವ ಧೀರೋದ್ಧಾತ ಮನಸ್ಸುಳ್ಳ ಛಲಗಾತಿ ಅಕ್ಕನ ಮೇರು ವ್ಯಕ್ತಿತ್ವವನ್ನು ಅದ್ಭುತವಾಗಿ ಕೆತ್ತಿದ್ದಾರೆ ಲೇಖಕಿಯವರು. ಅಕ್ಕನ ವ್ಯಕ್ತಿತ್ವದ ಅನಾವರಣವಾದ ರೀತಿ ಅಸದೃಶ್ಯವಾಗಿದೆ.
ಡಾ. ಎಚ್.ಎಸ್. ಅನುಪಮಾ ಅವರ “ಬೆಳಗಿನೊಳಗು ಮಹಾದೇವಿಯಕ್ಕ” ಕಾದಂಬರಿಯ ಕುರಿತು ಸುಭದ್ರಾ ಹೆಗಡೆ ಬರಹ

Read More

ಕನಸಾಗೇ ಉಳಿದ ಕನಸು: ಫಾತಿಮಾ ರಲಿಯಾ ಅನುಭವ ಕಥನದ ಕೆಲವು ಪುಟಗಳು

ನನ್ನ ಮಾತಲ್ಲಿ ಆತ್ಮವಿಶ್ವಾಸ, ಸತ್ಯ ಇಲ್ಲ ಅನ್ನುವುದು ತುಂಬಾ ಸ್ಪಷ್ಟವಾಗಿ ನನಗೇ ಗೊತ್ತಾಗುತ್ತಿತ್ತು, ಬಹುಶಃ ಅಮ್ಮನಿಗೂ ಗೊತ್ತಾಗಿದೆ. ನಾನು ಮಾತು ಮುಂದುವರೆಸಲಿಲ್ಲ, ಅಮ್ಮನೂ ಮುಂದುವರೆಸಲಿಲ್ಲ. ಇಬ್ಬರ ಮನದೊಳಗೂ ದುಃಖವೊಂದು ಹೊಯ್ದಾಡುತ್ತಿತ್ತು.‌ ಅಲ್ಲಿ ನೆಲೆ ನಿಂತಿದ್ದ ಮೌನ ನಮ್ಮಬ್ಬರಲ್ಲೂ ಉಸಿರುಗಟ್ಟಿಸುವ ಭಾವ ಹುಟ್ಟಿಸುತ್ತಿತ್ತು. ಅಮ್ಮನ ಕಣ್ಣು ತುಂಬಿಕೊಳ್ಳುತ್ತಿತ್ತು. ನಾನು ತೀರಾ ನಿರ್ಭಾವುಕಳಂತೆ ಅಲ್ಲಿಂದ ಎದ್ದು ಹೋದೆ, ನನಗೆ ಹಾಗೆ ಹೋಗದೆ ಬೇರೆ ದಾರಿಯೇ ಇರಲಿಲ್ಲ. ಯಾಕೆಂದರೆ ಇನ್ನೆರಡೇ ಎರಡು ನಿಮಿಷ ನಾನಲ್ಲಿ ನಿಂತಿದ್ದರೂ ಅಳು ಭೋರ್ಗರೆಯುತ್ತಿತ್ತು.
ಫಾತಿಮಾ ರಲಿಯಾ ಅನುಭವ ಕಥನ “ಕೀಮೋ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ನೇತಾಜಿ ಸುಭಾಷರ ಲೋಕದಲ್ಲಿ ನಮ್ಮದೊಂದು ಹೆಜ್ಜೆ: ನಾರಾಯಣ ಯಾಜಿ ಬರಹ

ರಾಮಾಯಣವನ್ನು ಹೊಸ ಇತಿಹಾಸದೊಂದಿಗೆ ನೇತಾಜಿ ಸುಭಾಶ್‌ಚಂದ್ರ ಬೋಸ್ ಅವರು ಇಂಗ್ಲೀಷಿನಲ್ಲಿ ಬರೆದ ಆತ್ಮಕಥೆಯನ್ನು “ಭಾರತೀಯ ಹೋರಾಟ” ಎನ್ನುವ ಹೆಸರಿನಲ್ಲಿ ಹೊರತಂದಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ, ಗಾಂಧಿ ಒಂದು ಕಡೆ, ಅದಕ್ಕೆ ಪ್ರತಿಯಾಗಿ ನೇತಾಜಿ ಸುಭಾಶ್ ಬಾಬು ಎನ್ನುವ ಸುದ್ದಿ ಯಾವತ್ತಿನಿಂದಲೂ ಕೇಳುತ್ತಲೇ ಇದ್ದೇವೆ. ಸ್ವಾತಂತ್ರ್ಯ ಹೋರಾಟದಲ್ಲಿ 1915 ರಿಂದ 1921ರ ತನಕ ಮಹತ್ವದ ತಿರುವು ಕಂಡ ದಿನಗಳು.
ಪ್ರೊ. ಕೆ.ಇ. ರಾಧಾಕೃಷ್ಣ ಅನುವಾದಿಸಿರುವ ಸುಭಾಶ್‌ಚಂದ್ರ ಬೋಸರ ಕೃತಿ “ಭಾರತೀಯ ಹೋರಾಟ”ದ ಕುರಿತು ನಾರಾಯಣ ಯಾಜಿ ಬರಹ, ನಿಮ್ಮ ಓದಿಗೆ

Read More

ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ

ಅಡಿಗೆಮನೆಯಲ್ಲಿ ಇದ್ದ ಕಾಶಿಬಾಯಿ ಒಮ್ಮೆ ಸೂಕ್ಷ್ಮವಾಗಿ ಲಂಕ್ಯಾನನ್ನು ದಿಟ್ಟಿಸಿದಳು. ಆ ನೋಟಕ್ಕೆ ವಶೀಕರಣಗೊಂಡವನಂತೆ ಎದ್ದವನೇ ಮಗ ಹಾಗೂ ಮಗಳನ್ನು ಎಳೆದೆಳೆದು ಸಿಕ್ಕಸಿಕ್ಕಲ್ಲಿ ಮೈಮೇಲೆ ದೆವ್ವ ಬಂದವನಂತೆ ಬಡಿಯತೊಡಗಿದ. ಆ ಇಬ್ಬರೂ ಮಕ್ಕಳು ಬೆನ್ನನ್ನು ಸವರಿಕೊಳ್ಳುತ್ತ ತನ್ನ ತಂದೆ ಯಾಕೆ ಹೊಡೆಯುತ್ತಿದ್ದಾನೆ ಅನ್ನುವ ಅರಿವಿಲ್ಲದೆ ಅಳುತ್ತ ದಿಕ್ಕಿಗೊಂದು ಓಡತೊಡಗಿದರೆ ಹಿಂದೆ ಹಿಂದೆ ಹೋಗಿ ಮನಸ್ಸೋ ಇಚ್ಛೆ ಬೈಯುತ್ತ ಹೊಡೆಯತೊಡಗಿದ. ತಮ್ಮ ಅಜ್ಜಿಯಾಗಲಿ ಇಲ್ಲ ತಮ್ಮ ತಾಯಿಯಾಗಲಿ ಆ ಮಕ್ಕಳ ಸಹಾಯಕ್ಕೆ ಬರದೆ ಸುಮ್ಮನೆ ತಮ್ಮ ಪಾಡಿಗೆ ತಾವಿದ್ದದು, ತಂದೆಯ ಕೈಯಲ್ಲಿ ಅನಾಮತ್ತಾಗಿ ಸಿಕ್ಕಿ ಹೊಡೆಸಿಕೊಂಡಿದ್ದು ನೆನೆಸಿಕೊಂಡು ದುಃಖಿಸುತ್ತ ಮತ್ತಷ್ಟೂ ಅಳತೊಡಗಿದವು.
ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ನವೀನ ತಂತ್ರಜ್ಞಾನದ ಕುರಿತ ನವೀನ ಮಾದರಿ ಕತೆಗಳು: ಗುರುರಾಜ ಕುಲಕರ್ಣಿ ಕೃತಿಯ ಕುರಿತು ವಸುಮತಿ ಉಡುಪ ಮಾತುಗಳು

ಈ ಕಥಾಸಂಕಲನದ ಕತೆಗಳು ಸಿದ್ಧ ಮಾದರಿಯ ಕತೆಗಳಿಗಿಂತ ವಿಭಿನ್ನವಾಗಿ ಚಿತ್ರಿತಗೊಂಡಿವೆ. ನವೀನ ತಂತ್ರಜ್ಞಾನದ ಕುರಿತು ಹೆಚ್ಚಿನ ಅರಿವಿಲ್ಲದವರಿಗೂ ತಿಳಿಯುವಂತೆ ಸರಳ ಭಾಷೆಯಲ್ಲಿ, ಸರಾಗವಾಗಿ ಕತೆ ಹೇಳಿದ್ದಾರೆ ಕುಲಕರ್ಣಿ, ಕತೆಗಳ ವೈವಿಧ್ಯ, ಭಾಷೆಯನ್ನು ಸಮರ್ಥವಾಗಿ, ಸುಲಲಿತವಾಗಿ ಬಳಸಿಕೊಂಡ ರೀತಿ, ಕತೆ ಹೇಳುವಲ್ಲಿನ ಲವಲವಿಕೆಯ ಗುಣದಿಂದಾಗಿ ಈ ಸಂಕಲನ ಛಂದ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ. ಕನ್ನಡ ಸಾಹಿತ್ಯದ ಮಟ್ಟಿಗೆ ಅಪರೂಪ ಎನಿಸುವಂತಹ ಹಲವು ಕತೆಗಳು ಸಂಕಲನದಲ್ಲಿ ಗಮನ ಸೆಳೆಯುವಂತಿವೆ.
ಗುರುರಾಜ ಕುಲಕರ್ಣಿ ಕಥಾಸಂಕಲನ “ಹ್ಯಾಷ್‌ ಟ್ಯಾಗ್”ಗೆ ಛಂದ ಪುಸ್ತಕದ ಬಹುಮಾನ ಲಭಿಸಿದ್ದು, ಈ ಕೃತಿಯ ಕುರಿತು‌ ವಸುಮತಿ ಉಡುಪ ಮಾತುಗಳು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ