Advertisement

Category: ಪುಸ್ತಕ ಸಂಪಿಗೆ

“ದಿಟದ ದೀವಿಗೆ”: ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್‌ ಆತ್ಮಕಥನದ ಪುಟಗಳು

ನನ್ನ ಅಮ್ಮನ ಪ್ರಾಯದ ಊರಿನ ಹುಡುಗಿಯರಿಗಿಂತ ಹೆಚ್ಚು ಚಟುವಟಿಕೆ, ಸೂಕ್ಷ್ಮಬುದ್ಧಿ, ಇನ್ನೊಬ್ಬರ ಜತೆ ನಡೆದುಕೊಳ್ಳುವ ರೀತಿ ಅನೇಕರಿಗೆ ವಿಸ್ಮಯವನ್ನು ಉಂಟುಮಾಡುತ್ತಿತ್ತು. ಪ್ರತಿಯೊಂದು ಕೆಲಸದಲ್ಲೂ ಅಚ್ಚುಕಟ್ಟುತನ ಎದ್ದು ಕಾಣುತ್ತಿತ್ತು. ಅಮ್ಮನನ್ನು ನನ್ನ ಅಪ್ಪ ಕೂಡಿಕೆ ಮಾಡಿಕೊಂಡಾಗ ಮೂವತ್ತು ವರ್ಷಗಳ ಅಂತರವಿತ್ತು. ನನ್ನ ಅಪ್ಪ ಆರಡಿ ಎತ್ತರದ ಬೃಹದ್ದೇಹಿ! ಆದರೆ, ಅಮ್ಮ ಐದಡಿ ಎತ್ತರದ ಪೀಚಲು ಹೆಂಗಸು! ದೈಹಿಕವಾಗಿ ಇಬ್ಬರದೂ ಅಜ-ಗಜಾಂತರ. ಆದರೆ, ಆ ಕಾಲಕ್ಕೆ ಈ ಬಗೆಯ ಕೂಡಿಕೆಯೊ ವಿವಾಹವೊ ನಡೆಯುತ್ತಿದ್ದುದು ಸರ್ವೇ ಸಾಮಾನ್ಯವಾಗಿತ್ತು!
ವಿದ್ವಾಂಸರಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್‌ ಅವರ ಆತ್ಮಕಥನ “ದಿಟದ ದೀವಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ವಸಂತಸೇನೆ ಎಂಬ ನನ್ನ ಮುತ್ತಜ್ಜಿಯ ಕಥೆ: ಸತೀಶ್‌ ತಿಪಟೂರು ಬರಹ

ನಮ್ಮ ಅಜ್ಜಿಯರಿಂದ ಬಳುವಳಿಯಾಗಿ ಬಂದ ನಿವೇಶನದಲ್ಲಿ ಅರವತ್ತು ವರ್ಷಗಳ ಹಿಂದೆ ನಮ್ಮ ತಂದೆಯವರು ಕಟ್ಟಿದ್ದ ಈ ಮನೆಯಲ್ಲಿ ಇವರೆಲ್ಲರ ವೈವಿಧ್ಯಮಯ ಸ್ಮೃತಿ ಕಥನಗಳು ನೆಲೆಗೊಂಡಿವೆ. ಇಷ್ಟಲ್ಲದೇ ಈ ಮನೆಯೇ ಕೇಂದ್ರವಾಗಿ ಇಷ್ಟು ವರ್ಷಗಳಲ್ಲಿ ನಡೆಯುತ್ತಿರುವ ನೃತ್ಯಶಾಲೆ, ಸಂಗೀತ ಶಾಲೆ, ನಾಟಕ ಶಾಲೆಯ ನೂರಾರು ಹುಡುಗ ಹುಡುಗಿಯರು ಈ ಮನೆಯ ಒಡನಾಟದಲ್ಲಿ ಬೆಳೆದಿದ್ದಾರೆ. ಮತ್ತು ಹೋರಾಟ, ಚಳುವಳಿ, ಕ್ರಾಂತಿ ಎನ್ನುವ ಕಾಮ್ರೇಡ್‌ಗಳು, ಕವಿಗಳೂ, ಲೇಖಕರು, ಪತ್ರಕರ್ತರು, ಪ್ರಗತಿಪರ ರಾಜಕೀಯ ನೇತಾರರೂ ಅಟ್ಟದ ಮೇಲಿನ ಸಭೆಗಳಿಂದಾಗಿ ಈ ಮನೆಯ ಭಾಗವಾಗಿದ್ದಾರೆ. ಅಂದಿನ ದಿನಗಳ ಈ ಮನೆಯನ್ನು ಕೆಲವು ಸ್ನೇಹಿತರು ಜಾತ್ಯಾತೀತ ಮಠವೆಂದೂ; ಅಲ್ಲಿ ನಿತ್ಯ ದಾಸೋಹವೆಂದು ನೆನಪಿಸಿಕೊಂಡು ಮಾತನಾಡುತ್ತಿದ್ದುದುಂಟು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಅಧ್ಯಾಯ ನಿಮ್ಮ ಓದಿಗೆ

Read More

ಡಂಕಲ್‌ಪೇಟೆಯ ಒಳ-ಹೊರಗೆ: ಜಿ. ಪಿ.ಬಸವರಾಜು ಮಾತುಗಳು

ವೀರೇಂದ್ರ ವರ್ತಮಾನಕ್ಕೆ ಬೆನ್ನುಹಾಕುವ ಕಥೆಗಾರರಲ್ಲ; ಹಾಗೆಯೇ ಭೂತದ ವೈಭವದಲ್ಲಿ ಮೈಮರೆಯುವವರೂ ಅಲ್ಲ. ಭವಿಷ್ಯದ ಕನಸುಗಳಲ್ಲಿ, ಕಲ್ಪನೆಗಳಲ್ಲಿ ತೇಲುವ ಭಾವಜೀವಿಯೂ ಅಲ್ಲ. ಸುಡು ಸುಡು ವರ್ತಮಾನವೇ ಅವರ ಪ್ರಧಾನ ಅಖಾಡ. ಭೂತ-ಭವಿಷ್ಯತ್ತುಗಳಿಗೆ ಹೋಗಿ ಬಂದರೂ, ಅವರು ಸೆಣಸುವುದು, ಪಟ್ಟಿಗೆ ಪಟ್ಟು ಹಾಕುವುದು ಈ ಡಂಕಲ್‌ಪೇಟೆಯಲ್ಲಿಯೇ. ಕುಂವೀ ಅವರಂಥ ಸೃಜನಶೀಲರಲ್ಲಿ ಬಳ್ಳಾರಿ ಉಸಿರಾಡುವುದು ಒಂದು ಚೆಲುವಾದರೆ, ಇಲ್ಲಿ ಬಳ್ಳಾರಿ ಕೊಸರಾಡುವುದು ಇನ್ನೊಂದು ಸೊಗಸು. ನೆಲದಲ್ಲಿ ಬೇರಿಳಿಸಿದ ಮರವೇ ಆಕಾಶಕ್ಕೆ ರೆಂಬೆಕೊಂಬೆ ಚಾಚುವುದು ಸಾಧ್ಯ. ವೀರೇಂದ್ರರ ಕತೆಗಳಲ್ಲಿ ಈ ಸತ್ಯ ಗೋಚರವಾಗುತ್ತದೆ.
ವೀರೇಂದ್ರ ರಾವಿಹಾಳ್‌ ಕಥಾ ಸಂಕಲನ “ಡಂಕಲ್‌ಪೇಟೆ”ಗೆ ಜಿ.ಪಿ. ಬಸವರಾಜು ಬರೆದ ಮುನ್ನುಡಿ

Read More

ಪ್ರಪಂಚದಷ್ಟೇ ಪುರಾತನವಾದ ಪ್ರಶ್ನೆಗಳಿಗೆ ಉತ್ತರದ ಹುಡುಕಾಟ: ಸುಧಾ ಆಡುಕಳ ಮಾತುಗಳು

ಅನೇಕ ದಶಕಗಳ ಹಿಂದೆ ಹೀಗೆ ಬಿಸಿಲಲ್ಲಿ ಕುಳಿತು ಮಾತನಾಡಿದ ಬಸುರಿಯರ ಮಕ್ಕಳೀಗ ಸಮಾಜವೆಂಬ ಇರುವೆ ಸಾಲಿನ ಭಾಗವಾಗಿಯೂ, ತಮ್ಮದೇ ಸ್ವಾತಂತ್ರ್ಯದ ಹಾದಿಯನ್ನು ಹುಡುಕಿಕೊಂಡು, ತಾವಿರುವೆಡೆಯಲ್ಲೆಲ್ಲಾ ಪ್ರೀತಿಯ ಧಾರೆಯನ್ನೇ ಹಂಚುತ್ತಾ ಸಾಗಿದ್ದಾರೆ. ಒಡಲೊಳಗೆ ಮಗುವನ್ನು ಹೊತ್ತ ತಾಯಂದಿರ ಬೇಗೆ ಮಾತ್ರ ಎಷ್ಟೇ ಕಾಲ ಸರಿದರೂ ಹೀಗೆಯೇ ಮುಂದುವರೆಯುವುದೇನೋ ಎಂದು ಅನಿಸುತ್ತಲೇ ಇರುತ್ತದೆ. ಹಾಗೆ ನನ್ನ ಮಗುವಿಗೆ ನಾನೇನಾದರೂ ಕಥೆಯನ್ನು ಹೇಳುವಂತಿದ್ದರೆ ಮೇಲೆ ಬರೆದ ಕಥೆಯನ್ನು ಹೇಳುತ್ತಿದ್ದೆ ಮತ್ತು ಕೊನೆಯಲ್ಲಿ ಅವಳಂತೆಯೇ ಒಂದು ವಾಕ್ಯವನ್ನು ಸೇರಿಸುತ್ತಿದ್ದೆ, ಆ ಇಬ್ಬರಲ್ಲಿ ನಾನೂ ಒಬ್ಬಳಾಗಿದ್ದೆ ಎಂದು.
ಸುಧಾ ಆಡುಕಳ ಅನುವಾದಿಸಿದ ಒರಿಯಾನ ಫಲಾಚಿ ಕಾದಂಬರಿ “ಎಂದೂ ಹುಟ್ಟದ ಮಗುವಿಗೆ ಪತ್ರ”ಕ್ಕೆ ಬರೆದ ಅವರ ಮಾತುಗಳು ಇಲ್ಲಿವೆ

Read More

ಹಳ್ಳಿಗಾಡಿನ ಹೊಸ ಕತೆಗಳು: ಸಂಗೀತ ರವಿರಾಜ್ ಬರಹ

ಇಲ್ಲಿರುವ ನಾಲ್ಕು ಕಥೆಗಳು ಕಟ್ಟುಕಥೆಗಳೆಂದು ನಮಗನಿಸುವುದೇ ಇಲ್ಲ. ಗ್ರಾಮ ಜೀವನವೇ ಹೀಗೆ…. ನೀರಿಗೆಂದು ಮೈಲುದೂರ ಕೊಡಪಾನ ಹಿಡಿದು ಸಾಗಿ ಮನೆಗೆ ನೀರು ತುಂಬಬೇಕು. ಮತ್ತೆ ಮನೆಯಿಂದ ಚೆಂಬು ಹಿಡಿದುಕೊಂಡು ಇನ್ನೆಲ್ಲಿಗೋ ನಡೆದು ಹೋಗುವಂತಹ ವಿಪರ್ಯಾಸಗಳು ಹಳ್ಳಿಯಲ್ಲಿ ಮಾತ್ರವೇ ನಡೆಯುತ್ತಿತ್ತು. ಇದು ಹಳ್ಳಿ ಬದುಕಿನ ನೋವಿನ ಚಿತ್ರಣ. ಕಥೆಗಾರರ ಬಾಲ್ಯವೇ ಇಲ್ಲಿನ ಕಥೆಗಳಿಗೆ ಸ್ಪೂರ್ತಿ, ಪ್ರೇರಣೆ ಕೊಟ್ಟಿರಲೂಬಹುದು. ಏಕೆಂದರೆ ಹಳ್ಳಿಯ ಬಾಲ್ಯವೆಂಬುದು ಅನುಭವಗಳನ್ನು ಮೊಗೆ ಮೊಗೆದು ಕೊಡುವ ತಾಣ.
ಮಲ್ಲಿಕಾರ್ಜುನ ತೂಲಹಳ್ಳಿ ಕಥಾ ಸಂಕಲನ “ಅಗಸ್ತ್ಯ ನಕ್ಷತ್ರ” ಕುರಿತು ಸಂಗೀತಾ ರವಿರಾಜ್‌ ಚೆಂಬು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ