ಎದೆಗೆ ಬಿದ್ದ ಕಲ್ಲು!: ಮಧು ವೈ.ಎನ್. ಹೊಸ ಕಾದಂಬರಿಯ ಪುಟಗಳು
ಅವತ್ತು ಎಗ್ಸಿಬಿಶನ್ ಇತ್ತು. ನಾವೆಲ್ಲ ಕ್ಲಾಸ್ ರೂಮಲ್ಲಿ ಮಾಡೆಲ್ ಜೋಡಿಸ್ಕೊಂಡು ನಿಂತಿದ್ವಿ. ನನ್ ಪಕ್ಕ ಹಾಸನದೋನು ಇದ್ದ. ಯೂಕಲಿಪ್ಟಸ್ ಆಯಿಲ್ನಿಂದ ಸೊಳ್ಳೆ ಓಡಿಸ್ತೀನಿ ಅನ್ನೊ ಪ್ರಾಜೆಕ್ಟ್ ಮಾಡ್ಕಂಡ್ ಬಂದಿದ್ದ. ಹೆದರಬೇಡಿ ಅಂಗಂದ್ರೆ ನೀಲಗಿರಿ ಎಣ್ಣೆ ಆಟೆಯಾ. ನಾನು ಇಂಗ್ಲೀಷಲ್ಲಿ ಏನೇನು ಒದರಬೇಕು ಅಂತ ಮನ್ಸಲ್ಲೆ ಮಗ್ ಹೊಡಿತಿದ್ದೆ. ಬರಂಗಿಲ್ವಲ್ಲ. ಆ ಕ್ಷಣಕ್ಕೆ ಒಳ್ಳೆ ಸಿನಿಮಾ ಸೀನ್ ತರಹ ಈ ಹುಡುಗಿ ಬಂದ್ ಬಿಡ್ತು. ಎಗ್ಸಿಬಿಶನ್ ಇದ್ದಾಗ ಸ್ಪೋರ್ಟ್ಸ್ ಇರಲ್ಲ. ಹಂಗಾಗಿ ನಾನು ಯುನಿಫಾರ್ಮಲ್ಲಿದ್ರೆ ಅದು ಟ್ರ್ಯಾಕ್ ಸೂಟಲ್ಲಿ ಮಿಂಚ್ತಾ ಇತ್ತು.
ಮಧು ವೈ.ಎನ್. ಬರೆದ ಹೊಸ ಕಾದಂಬರಿ “ಕನಸೇ ಕಾಡುಮಲ್ಲಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ
