Advertisement

Category: ಪುಸ್ತಕ ಸಂಪಿಗೆ

ಕಲ್ಪನೆಯಿಂದ ವಾಸ್ತವಕ್ಕೆ…: ಗಿರೀಶ್‌ ಕಾಸರವಳ್ಳಿ ಕೃತಿಯ ಆಯ್ದ ಭಾಗ

ಪುಣೆಯ ಫಿಲ್ಮ್ ಇನ್‌ಸ್ಟಿಟ್ಯೂಟ್‌ನಲ್ಲಿ ನನ್ನ ಸಹಪಾಠಿಯಾಗಿದ್ದ ನಾಸೀರುದ್ದೀನ್ ಶಾ ಭಾರತ ಸಿನಿ ಉದ್ಯಮದಲ್ಲಿ ನಾನು ಮೆಚ್ಚುವ ನಟರಲ್ಲಿ ಒಬ್ಬರು. ಯಾವ ಪಾತ್ರವನ್ನು ಕೊಟ್ಟರೂ ಆ ಪಾತ್ರಕ್ಕೆ ವಿಶಿಷ್ಟತೆ ತರಬಲ್ಲ ಶಕ್ತಿ ಇರುವ ಅಪರೂಪದ ನಟ. ಆದರೆ ಈ ಸಿನಿಮಾದಲ್ಲಿ ನನ್ನ ಅನುಭವ ಅಷ್ಟು ಹಿತಕರವಾಗಿರಲಿಲ್ಲ. ಕನ್ನಡದ ಸಂಭಾಷಣೆ ನೆನಪಿಟ್ಟುಕೊಳ್ಳಲು ಅಸಾಧ್ಯವಾಗಿ ಅವರಿಗೆ ಇರುಸುಮುರುಸಾಗುತ್ತಿತ್ತು. ಅದರಿಂದ ಹುಟ್ಟಿದ ಅಸಹನೆ ಚಿತ್ರೀಕರಣದ ವೇಳೆಯಲ್ಲೂ ಪ್ರತಿಧ್ವನಿಸುತ್ತಿತ್ತು.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ದಿಂದ “ಮನೆ” ಚಿತ್ರದ ಕುರಿತ ಮಾತುಕತೆ ನಿಮ್ಮ ಓದಿಗೆ

Read More

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು, ಮಹಿಳೆಯು ಸಮಾಜದ ಒಂದು ಅಂಗ ಎಂಬುದು ಅಂಬೇಡ್ಕರ್ ಶಕೆ ಆರಂಭಗೊಂಡಾಗಿನಿಂದ ಅನೇಕರ ಕಣ್ಣು ತೆರೆಸಲು ಯತ್ನಿಸುತ್ತಲೇ ಬಂದಿದೆ. ಅದಕ್ಕೆ ಪೂರಕವಾಗಿ ಹಬ್ಬು ಸರ್, ಇಲ್ಲಿ ಆಚಾರ್ಯ ಕೃಪಲಾನಿ ಹೇಳಿದ ಹೀಗೊಂದು ಮಾತನ್ನು ನೆನೆಯುತ್ತಾರೆ, ‘ಹಕ್ಕಿಗೆ ಒಂದೇ ರೆಕ್ಕೆಯಿಂದ ಹೇಗೆ ಹಾರಲು ಸಾಧ್ಯವಿಲ್ಲವೋ ಹಾಗೆಯೇ ಮಹಿಳೆಯ ಅಭಿವೃದ್ಧಿಯಾಗದೇ ಇದ್ದಂತಹ ಸಮಾಜ ಕೂಡ ಅಂಥದೊಂದು ಅಂಗವಿಕಲತೆಯಿಂದ ಬಳಲುತ್ತದೆ’ ಈ ಮಾತು ಮಹಿಳೆಯರ ಸಮಾನ ಹಕ್ಕುಗಳನ್ನು ಪ್ರತಿಪಾದಿಸುತ್ತದೆ.
ಅರುಣಕುಮಾರ ಹಬ್ಬು ಅವರು ಬರೆದ “ಮಹಿಳೆ ಮತ್ತು ಮಾಧ್ಯಮ – ಒಂದು ಅವಲೋಕನ” ಕೃತಿಯ ಕುರಿತು ಸುನಂದಾ ಪ್ರಕಾಶ ಕಡಮೆ ಬರಹ

Read More

ಚಲನಚಿತ್ರ ಭಾಷೆಯ ಕಲಿಕೆ ಮತ್ತು ಘಟಶ್ರಾದ್ಧ…

ಸಿನಿಮಾ ಮಾಧ್ಯಮವನ್ನು ಸಶಕ್ತವಾಗಿ ದುಡಿಸಿಕೊಳ್ಳುವವರು ದೃಶ್ಯ ಬಿಂಬಗಳ ಜೊತೆಗೇ, ಶಾಬ್ದಿಕ ರೂಪದ ಬಿಂಬಗಳನ್ನೂ ಸೃಷ್ಟಿಮಾಡುತ್ತಿರುತ್ತಾರೆ. ಸಂಕಲನ ತಂತ್ರದ ಮೂಲಕವೂ ಬಿಂಬವನ್ನು ಸಂಶ್ಲೇಷಿಸುತ್ತಿರುತ್ತಾರೆ. ವಾಸ್ತು, ವೇಷಭೂಷ, ಸೂಕ್ತ ನಟ ನಟಿಯರ ಬಳಕೆ, ಇತ್ಯಾದಿ ಅಂಶಗಳು ಪರಿಣಾಮಕಾರಿಯಾದ ಬಿಂಬ ನಿರ್ಮಾಣಕ್ಕೆ ಎಷ್ಟು ಅಗತ್ಯವೋ ಸಮಯದ ನಿರ್ವಹಣೆಯಲ್ಲಿ ಕೈಗೋಲಾಗಿ ಬರುವ ಸಂಗೀತ, ಚಿತ್ರದ ಲಯ, ತಂತ್ರ ಸೌಷ್ಠವಗಳೂ ಬಿಂಬ ನಿರ್ಮಾಣದಲ್ಲಿ ಅಷ್ಟೇ ಮುಖ್ಯ ಪಾತ್ರ ವಹಿಸುತ್ತಿರುತ್ತವೆ.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ”  ನಾಳೆ ಬಿಡುಗಡೆಯಾಗಲಿದ್ದು, ಈ ಕೃತಿಗೆ ಅವರು ಬರೆದ ಮಾತುಗಳು ಹಾಗೂ ಘಟಶ್ರಾದ್ಧ ಚಲನಚಿತ್ರದ ಕುರಿತ ಮಾತುಕತೆಯ ಆಯ್ದ ಭಾಗ ನಿಮ್ಮ ಓದಿಗೆ

Read More

ಗಿರೀಶ್‌ ಕಾಸರವಳ್ಳಿ ಚಿತ್ರಗಳ ಸಂಕಥನ

ನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್‌ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು ಪಾತ್ರವಾಗಿ ಬಂದ ಉದಾಹರಣೆ ಕಡಿಮೆ. ಹಾಗೆ ಮಾಡಿದಾಗಲೂ ಮಳೆಯು ಸಿನಿಮಾಕ್ಕೆ ತರುವ ರಮ್ಯತೆಗೇ ಹೆಚ್ಚು ಒತ್ತು ಇರುತ್ತಿತ್ತು. ಹಾಗಾಗದೇ ಮಳೆ ಒಂದು ಪಾತ್ರವೇ ಆಗಬೇಕು ಎಂಬ ಉದ್ದೇಶ ನಮ್ಮದಾಗಿತ್ತು.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ದಿಂದ “ದ್ವೀಪ” ಚಿತ್ರದ ಕುರಿತ ಮಾತುಕತೆ ನಿಮ್ಮ ಓದಿಗೆ

Read More

ಮುಳುಗಡೆಯ ವಿದ್ಯಮಾನಗಳಿಗೆ ಹಿಡಿದ ಕೈಗನ್ನಡಿ: ಕೆ.ಆರ್.ಉಮಾದೇವಿ ಉರಾಳ ಬರಹ

ಪರಿಹಾರದ ಹಣ ಕೈಗೆ ಬರುತ್ತಲೇ ಕೆಲವರು ಕೃಷಿ ವಿಚಾರ ಕೈಬಿಟ್ಟು ಬಸ್ ಅಂಗಡಿ ಹೋಟೆಲ್ ತೆರೆದಿದ್ದು ಅಭ್ಯಾಸವಿಲ್ಲದ ಈ ಉದ್ಯಮಗಳಲ್ಲಿ ಕೈಸುಟ್ಟುಕೊಂಡಿದ್ದರು. ಬಡ್ಡಿ ಆಸೆಗೆ ಬಿದ್ದು ಇದ್ದ ಹಣವನ್ನೆಲ್ಲ ಕಳೆದುಕೊಂಡಿದ್ದರು. ಕೆಲವರು ಅಂದಾದುಂದಿ ವೆಚ್ಚಮಾಡಿ ಸಾಲಗಾರರಾಗಿ ಬರಿಗೈಯಾದರು. ಇಷ್ಟಾಗಿಯೂ ನಾಲ್ಕು ದಶಕಗಳ ನಂತರವೂ ಇನ್ನೂ ಪರಿಹಾರದ ಹಣ ಬರದಿರುವ ಪ್ರಸಂಗಗಳೆಷ್ಟೋ ಇವೆ ಎನ್ನುತ್ತಾರೆ ಲೇಖಕರು.
ಎಂ. ಎಂ. ಪ್ರಭಾಕರ ಕಾರಂತ್ ಬರೆದ “ಮುಳುಗಡೆ ಒಡಲಾಳ” ಕೃತಿಯ ಕುರಿತು ಕೆ.ಆರ್.ಉಮಾದೇವಿ ಉರಾಳ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ