Advertisement

Category: ಪುಸ್ತಕ ಸಂಪಿಗೆ

ವರ್ತಮಾನದ ತಲ್ಲಣಗಳಿಗೆ ಪ್ರತಿಕ್ರಿಯೆ: ಮೊಗಳ್ಳಿ ಗಣೇಶ್‌ ಬರಹ

ಚಂದನ್ ಮತೊಂದು ಭಾರತವನ್ನು ಅವಲೋಕಿಸುತ್ತಿರುವುದೇ ದಮನಿತರ ದೃಷ್ಟಿಕೋನದಿಂದ. ಅಂಚಿನ ಸಂಗತಿಗಳನ್ನು ಮುಖ್ಯ ವಾಹಿನಿಗೆ ತಂದಿರಿಸಿ ನಿರೂಪಿಸುವುದೇ ಸಾಂಸ್ಕೃತವಾಗಿ ಮಹತ್ವದ್ದು. ದಲಿತ ಕವಿ ಸಿದ್ದಲಿಂಗಯ್ಯನವರ ಆತ್ಮಕಥನವ ಕಂಡಂತೆಯೆ, ಸರ್.ಎಂ.ವಿಶ್ವೇಶ್ವರಯ್ಯ ಅವರ ಬಗೆಗೂ, ನಾಲ್ವಡಿ ಕೃಷ್ಣ ರಾಜೇಂದ್ರ ಅವರ ಬಗೆಗೂ ಟಿಪ್ಪು ಸುಲ್ತಾನ್ ಬಗೆಗೂ ಸಮಾನವಾಗಿ ನೋಡುವ ಪರಿಯು ಗಮನಾರ್ಹವಾಗಿದೆ. ಯು.ಆರ್. ಅನಂತಮೂರ್ತಿ ಅವರು ಆತ್ಯಂತಿಕ ಪ್ರಭೆಯ ಲೇಖಕರು. ಅವರ ಮೂಲಕ ಭಾರತವನ್ನು ಚಂದನ್ ಭಾವಿಸುತ್ತಾರೆ.
ಚಂದನ್‌ ಗೌಡ ಹೊಸ ಕೃತಿ “ಅನದರ್‌ ಇಂಡಿಯಾ” ಕೃತಿಯ ಕುರಿತು ಮೊಗಳ್ಳಿ ಗಣೇಶ್‌ ಬರಹ

Read More

ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು: ಡಾ. ವಿನತೆ ಶರ್ಮ

ಮೊದಲನೇ ಪ್ರಾಪಂಚಿಕ ಮಹಾಯುದ್ಧದಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯನ್ ಸೈನಿಕರಲ್ಲಿ ಮೂಲನಿವಾಸಿಗಳೂ ಇದ್ದರು. ಆದರೆ ಯುದ್ಧದ ನಂತರ ದೇಶದ ಸರಕಾರಗಳು ಅವರ ಹೆಸರನ್ನು ನೆನಪಿಸಿಕೊಳ್ಳುವ ಪ್ರಯತ್ನವನ್ನು ಮಾಡಲಿಲ್ಲ. ಆಸ್ಟ್ರೇಲಿಯನ್ ಬಿಳಿ ಸೈನಿಕರಿಗೆ ಮತ್ತು ಅವರ ಕುಟುಂಬಗಳಿಗೆ ಎಲ್ಲಾ ರೀತಿಯ ಬಿರುದುಗಳು ಮತ್ತು ಸೌಲಭ್ಯ, ಸೌಕರ್ಯಗಳು ಲಭಿಸಿದವು. ಎರಡನೇ ಮಹಾಯುದ್ಧದ ನಂತರವೂ ಇದೇ ಕತೆಯಾಗಿದ್ದು ಈ ಬಾರಿ ಯುದ್ಧದಲ್ಲಿ ಭಾಗವಹಿಸಿದ್ದ ಮೂಲನಿವಾಸಿಗಳ ಹೆಸರುಗಳನ್ನೂ ಮಾತ್ರ ದಾಖಲಿಸಲಾಗಿತ್ತು.
ಡಾ. ವಿನತೆ ಶರ್ಮ ಹೊಸ ಕೃತಿ “ಅಬೊರಿಜಿನಲ್‌ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್‌”ಯಿಂದ ಒಂದು ಬರಹ ನಿಮ್ಮ ಓದಿಗೆ

Read More

ಯಾರು ದೊಡ್ಡೋರು?: ರಹಮತ್ ತರೀಕೆರೆ ಕಥಾ ಸಂಕಲನದ ಒಂದು ಕತೆ

“ಹಿಂಗ್ ಬಂದು ಸಮುದ್ರದಾಗೆ ತೇಲ್ತಾ ಇರುವಾಗ ಒಂದು ಕುಲ್ಡುಗೊಕ್ಕರೆ ಮೇಲ್ಗಡೆ ಹರ‍್ತಾ ನೀರ್ ಮೇಲಿರೋ ಕುಂಬಳ್‌ಕಾಯೀನಾ ನೋಡ್ತು. ಯಲಾ ಯಲಾ! ಒಂದ್ ವಾರಕ್ಕೆ ಆಗೋವಷ್ಟು ತಿನ್ನಕೆ ಸಿಕ್ತು ಕಣಲೆ ಅಂದ್ಕೊಂಡು ಕೊಕ್ನಾಗೆ ಕಚ್ಕೊಂಡ್ ಬಂದು ಒಂದು ದೊಡ್ಡ ಆಲದಮರದ ಮ್ಯಾಲೆ ಬಂದು ಕುತ್ಕೊಂಡ್ತು. ಕುತ್ಕಂಡು ಎಲ್ಡ್ ಕಾಲಾಗೆ ಕಾಯಿನ ಅಮುಕ್ಕೊಂಡು ಚಂದರ್ಕಿಗೆ ಬಾಯಿಹಾಕಿ ಮುಚ್ಚಳ ತಗೀತು. ಆಗ ಒಳಗಿದ್ದೋರೆಲ್ಲ ಅಲೆಲೆಲೆ, ಏಳ್ರಲಾ ಬೆಳಕ್ ಹರೀತು.”
ರಹಮತ್‌ ತರೀಕೆರೆ ಕಥಾ ಸಂಕಲನ “ಗೇರಮರಡಿ ಕತೆಗಳು”ದಿಂದ ಒಂದು ಕತೆ ನಿಮ್ಮ ಓದಿಗೆ

Read More

ಎರೆನೆತ್ತಿ ಎಂಬ ಬಾಲ್ಯಕಾಲದ ನಿಗೂಢಗಳು….: ಎಸ್.ಗಂಗಾಧರಯ್ಯ

ಹಿಂಗೆ ಪ್ರಾಣಿಗಳ ಕಾಟದ ಜೊತೆಗೆ ಎರೆನೆತ್ತಿಯ ಕಾಡಿನೊಳಕ್ಕೆ ಆಗಾಗ ದೂರದ ಊರುಗಳಿಂದ ದರೋಡೆಕೋರರು ಬಂದು ಸೇರಿಕೊಂಡುಬಿಡುತ್ತಿದ್ದರಂತೆ. ಆಗ ಅಪ್ಪಿತಪ್ಪಿಯೂ ಸುತ್ತಲ ಹಳ್ಳಿಗಳ ಜನರು ಅತ್ತ ಸುಳಿಯುತ್ತಿರಲಿಲ್ಲವಂತೆ. ಪೊಲೀಸರಿಗೆ ದೂರು ಕೊಟ್ಟರೂ ಅತ್ತ ಹೋಗಲು ಅವರೂ ಹಿಂಜರಿಯುತ್ತಿದ್ದರಂತೆ. ಸುತ್ತಮುತ್ತಲ ಹಳ್ಳಿಗಳಲ್ಲಿ ಸಾಕಷ್ಟು ಕಳ್ಳತನ ಮಾಡಿದ ಮೇಲೆ ಆ ದರೋಡೆಕೋರರು ಅವರಾಗಿಯೇ ಜಾಗ ಖಾಲಿ ಮಾಡುತ್ತಿದ್ದರಂತೆ. ಎರೆನೆತ್ತಿಯ ಬಗ್ಗೆ ಇಂಥ ಪುಕಾರುಗಳನ್ನು ನನ್ನ ಅಜ್ಜನಷ್ಟೇ ಅಲ್ಲ ಊರಿನ ಹಲವು ಹಿರಿಯ ತಲೆಗಳು ಹೇಳುತ್ತಿದ್ದುದರಿಂದ ಅದು ನನ್ನಂಥವರೊಳಗೆ ಒಂದು ನಿಗೂಢ ಲೋಕವಾಗಿ ಉಳಿದುಬಿಟ್ಟಿತ್ತು.
ಕಥೆಗಾರ ಎಸ್.‌ ಗಂಗಾಧರಯ್ಯ ಅವರ ಈತನಕದ ಕತೆಗಳ ಸಂಕಲನ “ಎರೆನೆತ್ತಿ”ಗೆ ಅವರೇ ಬರೆದ ಮಾತುಗಳು ಇಲ್ಲಿವೆ

Read More

ಕಲ್ಯಾಣಕ್ರಾಂತಿ: ಡಾ. ಲತಾ ಗುತ್ತಿ ಕಾದಂಬರಿಯ ಪುಟಗಳು

ಬೆಳಗಿನ ಜಾವ ಕಣ್ಣುಬಿಟ್ಟಾಗ ಎಲ್ಲೆಲ್ಲೂ ಜಾತ್ರೆಯದೇ ಆದ ಒಂದು ಬೆಡಗಿನ ಸೊಬಗು. ತಣ್ಣನೆಯ ಗಾಳಿ-ಪಕ್ಷಿಗಳ ಕಲರವ. ಸೂರ್ಯೋದಯ. ದೇವಸ್ಥಾನದ ಆವರಣದಿಂದ ಕೇಳಿಬರುವ ಶರಣರ ವಚನಗಳ ಹಾಡುಗಳು. ಸುತ್ತೆಲ್ಲ ಹಸಿರು ಗಿಡಮರಗಳಿಂದ ತುಂಬಿದ ತಂಪಾದ ಸ್ಥಳದಲ್ಲಿ ಚೆನ್ನಬಸವಣ್ಣನ ದೇವಸ್ಥಾನ ದೂರ ದಿಂದಲೇ ಕಂಗೊಳಿಸುತ್ತದೆ. ಎತ್ತರದ ಗೋಪುರದಲ್ಲಿ ಶಿವಶರಣರ ಶಿಲ್ಪ ಕೃತಿಗಳು. ಅವರವರ ವೃತ್ತಿಗೆ ತಕ್ಕಂತೆ ಕೆತ್ತನೆಗಳಿವೆ. ೧೨ನೆಯ ಶತಮಾನದ ಶರಣರೆಲ್ಲ ಕಣ್ಣಿಗೆ ಕಟ್ಟುವಂತೆ ಕಾಣುತ್ತಾರೆ. ದೇವಸ್ಥಾನ ತಳಿರು ತೋರಣಗಳಿಂದ ಶೋಭಿತಗೊಂಡಿದೆ.
ಡಾ. ಲತಾ ಗುತ್ತಿ ಹೊಸ ಕಾದಂಬರಿ “ಚದುರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ