Advertisement

Category: ಪುಸ್ತಕ ಸಂಪಿಗೆ

ಕಾಲವೇ ಕಾಪಾಡಿ ಪೋಷಿಸಿದ ತಲೆಮಾರಿನ ಕಥೆ: ನಾರಾಯಣ ಯಾಜಿ ಬರಹ

ಕಾದಂಬರಿಯ ಪಾತ್ರಗಳು ಎರಡನೆಯ ಭಾಗದಲ್ಲಿ ಮುಖಾಮುಖಿಯಾಗುತ್ತವೆಯಾದರೂ ಅದು ತೀವ್ರತೆಗೆ ಎಡೆಮಾಡುವುದಿಲ್ಲ. ಅಲ್ಲೆಲ್ಲ ಒಂದು ಪಾತ್ರ ಸುಮ್ಮನೆ ಆ ಸ್ಥಳವನ್ನು ಬಿಟ್ಟು ದೂರಸರಿಯುತ್ತದೆ. ಚಿದಂಬರನ ಕಾಲಘಟ್ಟದಲ್ಲಿ ಅರವತ್ತರ ನಂತರದ ಸಾಮಾಜಿಕ ನಡವಳಿಕೆಯನ್ನು ಕಾಣಬಹುದು. ಮೊದಲ ಹಂತದಲ್ಲಿ ಗೋವಿಂದ ಮತ್ತು ಸವಿತಾ ದಂಪತಿಗಳ ಶ್ರಮ ಎದ್ದು ಕಾಣಿಸಿದರೆ ಎರಡನೆಯ ಭಾಗದಲ್ಲಿ ಚಿದಂಬರ ಮತ್ತು ಗಿರಿಜಾ ದಂಪತಿಗಳು ಆ ಪಾತ್ರವನ್ನು ನಿರ್ವಹಿಸಿದ್ದಾರೆ. ಇಬ್ಬರದ್ದೂ ಹೋರಾಟದ ಬದುಕು.
ರಾಜಶೇಖರ ಜೋಗಿನ್ಮನೆ ಕಾದಂಬರಿ “ಕೇಳು ಧನಂಜಯ..” ಕುರಿತು ನಾರಾಯಣ ಯಾಜಿ ಬರಹ

Read More

ಮಹಿಳಾ ಕಾವ್ಯ- ಅಲಕ್ಷಿತ ಮಹಿಳಾ ಸಾಹಿತ್ಯ ಚರಿತ್ರೆಯ ಆಕರ: ಸಬಿಹಾ ಭೂಮಿಗೌಡ

ಕವಯಿತ್ರಿಯರ ಸ್ಮೃತಿಯಲ್ಲಿ ಮತ್ತು ಅನುಭವದಲ್ಲಿ ಅಮ್ಮನ ಪಾತ್ರ, ಕಾರ್ಯ, ಲೋಕದೃಷ್ಟಿಗಳು ವಿಶಿಷ್ಟವಾಗಿವೆ. ಅಮ್ಮನನ್ನು ಅರ್ಥ ಮಾಡಿಕೊಳ್ಳಬೇಕೆಂದರೆ ಮೊದಲು ಅವಳು ಮನೆಯಿಂದ ಹೊರಹಾಕುವ ಕಸವನ್ನು ಅರ್ಥ ಮಾಡಿಕೊಳ್ಳಬೇಕು ಎನ್ನುತ್ತಾರೆ ಹಿರಿಯ ಕವಯಿತ್ರಿ! ಅಮ್ಮ ತನ್ನ ಮನೆಯ, ಮನದ, ಸಂಬಂಧದ ಯಾವ ವಸ್ತು ವಿಚಾರಗಳನ್ನೂ ಅವುಗಳಿಂದ ಪುನರ್ ಬಳಕೆ ಸಾಧ್ಯವಿಲ್ಲ ಎನಿಸುವವರೆಗೂ ಹೊರಹಾಕುವುದಿಲ್ಲ, ಅನಂತರವೇ ವಿವಿಧ ಲಕೋಟೆಗಳಲ್ಲಿ ಹಾಕಿ ಮನೆ, ಮನದಿಂದ ಹೊರ ಅಟ್ಟುತ್ತಾಳೆ ಎಂಬ ಚಿಂತನೆಯು ಹೊಸ ಒಳನೋಟವನ್ನು ನೀಡುತ್ತದೆ.
ಪ್ರೊ. ಸಬಿಹಾ ಭೂಮಿಗೌಡ ಸಂಪಾದಿಸಿದ “ಕನ್ನಡ ಮಹಿಳಾ ಕಾವ್ಯ” ಕೃತಿಗೆ ಬರೆದ ಅವರ ಮಾತುಗಳು ಇಲ್ಲಿವೆ…

Read More

ಸಹಜತೆಯ ಚೆಲುವಿನ ಕಥೆಗಳು: ಅನುಪಮಾ ಪ್ರಸಾದ್‌ ಕೃತಿಗೆ ಕೇಶವ ಮಳಗಿ ಮಾತುಗಳು

ಸಂಕಲನದ ಕಥೆಗಳು ವಿಷಯ, ವ್ಯಾಪ್ತಿ ಹಾಗೂ ಹರಹುಗಳ ದೃಷ್ಟಿಯಿಂದಲೂ ಗಮನಾರ್ಹ. ಅನುಭವದಿಂದ ಮಾಗಿದ ಕಥೆಗಾರ್ತಿಯ ಈ ಬಗೆಯ ಸೂಕ್ಷ್ಮ ಆಯ್ಕೆಯಿಂದಾಗಿ ಸಂಕಲನಕ್ಕೊಂದು ಸಹಜ ವೈವಿಧ್ಯತೆ ದೊರಕಿ ಓದುಗರು ಪ್ರತಿ ಕಥೆಯ ವಾಚನದಲ್ಲಿಯೂ ಹೊಸ ಅನುಭವವನ್ನು ಪಡೆಯಬಲ್ಲರು. ಯಾವುದೇ ಸಂವೇದನಾಶೀಲ ಲೇಖಕ ಇಂಥದ್ದನ್ನು ಸಾಧಿಸುವುದು ಗರಿಮೆಯ ಸಂಗತಿಯೇ. ಇಲ್ಲಿನ ಹದಿಮೂರು ಕಥೆಗಳು ಓದುಗರಿಗೆ ನೀಡುವ ಅನುಭವ, ಲೋಕದೃಷ್ಟಿ, ಆರ್ದ್ರತೆಯ ಸ್ಪರ್ಶದಿಂದಾಗಿ ಅವರು ನಮ್ಯವಾಗಬಲ್ಲರು. ಅರೆಚಣ ಚಿಂತಿತರಾಗಬಲ್ಲರು.
ಅನುಪಮಾ ಪ್ರಸಾದ್‌ ಕಥಾ ಸಂಕಲನ “ಚೋದ್ಯ”ಕ್ಕೆ ಕೇಶವ ಮಳಗಿ ಬರೆದ ಮಾತುಗಳು

Read More

ಹೊನ್ನೆಯ ಹಾಡಿನಂಥಾ ಆತ್ಮಕಥನ: ಕೆ.ಎನ್.ಲಾವಣ್ಯ ಪ್ರಭಾ ಬರಹ

ಕರ್ನಾಟಕ ಸಂಗೀತವನ್ನು ಶಾಸ್ತ್ರೀಯವಾಗಿ ಕಲಿತು ಆಕಾಶವಾಣಿ ಗಾಯಕಿಯಾಗಿ ಭಾವಗೀತೆಯನ್ನು ಪಿ. ಕಾಳಿಂಗರಾವ್ ಅವರ ಜೊತೆಯಲ್ಲಿ ಹಾಡಿ ಪ್ರಚಾರ ನೀಡಿದ್ದು ಮೊದಲಿಗೆ ಲೀಲಾವತಿಯವರೇ. ಭಾವಗೀತೆ ಭಕ್ತಿಗೀತೆ ಕೀರ್ತನೆಗಳು ವಚನಗಳು ಗಜಲ್‌ಗಳು ಜನಪದಗೀತೆಗಳು, ರವೀಂದ್ರ ಸಂಗೀತ ಹೀಗೆ ಬೇರೆ ಭಾಷೆಯ ಇತರ ಪ್ರಾಕಾರಗಳನ್ನೂ ಕಲಿತು ಹಾಡಿರುವುದಲ್ಲದೇ ಮಕ್ಕಳ ಕತೆಗಳು ರಂಗರೂಪಕಗಳು ಎಲ್ಲಾ ರೀತಿಯಲ್ಲಿ ಅವರು ಆಕಾಶವಾಣಿಯಲ್ಲಿ ಕೆಲಸ ನಿರ್ವಹಿಸುತ್ತಲೇ ಮುಂದೆ ಆಕಾಶವಾಯ ಸಂಗೀತ ಸಂಯೋಜಕಿಯೂ ಆಗುತ್ತಾರೆ.
ಎಚ್. ಆರ್. ಲೀಲಾವತಿ ಆತ್ಮಕಥನ “ಹಾಡಾಗಿ ಹರಿದಾಳೆ” ಕೃತಿಯ ಕುರಿತು ಕೆ.ಎನ್.ಲಾವಣ್ಯ ಪ್ರಭಾ ಬರಹ

Read More

ನವಿರು ಪ್ರೇಮದ ಆಲಾಪ: ಅನಸೂಯ ಯತೀಶ್ ಬರಹ

ಇಲ್ಲಿ ನಲವತ್ತೊಂಬತ್ತು ಪುಟ್ಟ ಪುಟ್ಟ ಅಧ್ಯಾಯಗಳು ಇಡೀ ಕಾದಂಬರಿಯ ಸಾರಸತ್ವವನ್ನು ಉಣಬಡಿಸುತ್ತವೆ. ಹದವರಿತ ಭಾಷೆಯಲ್ಲಿ ಮೈನವಿರೇಳಿಸುವ ಸಂಭಾಷಣೆಗಳು ಓದುಗರಿಗೆ ಕಚಗುಳಿ ಇಡುತ್ತವೆ. ಲೇಖಕರ ಬಾಲ್ಯದ ಅನುಭವಗಳ ಒಟ್ಟು ಮೊತ್ತ ಈ ಕನಸೇ ಕಾಡು ಮಲ್ಲಿಗೆ. ಇಲ್ಲಿ ಬಹುತೇಕ ನೈಜ ಅನುಭವಗಳೆ ಕಾದಂಬರಿಯ ಜೀವ ದ್ರವ್ಯವಾಗಿದ್ದರೂ ಲೇಖಕರು ತಮ್ಮ ಬರಹದ ಸ್ವಾತಂತ್ರ್ಯವನ್ನು ಬಳಸಿಕೊಂಡು ಸಂದರ್ಭೋಚಿತವಾಗಿ ಪೂರಕ ಪಾತ್ರಗಳನ್ನ ಕಲ್ಪಿಸಿಕೊಂಡು ಆ ಕಥೆಗೆ ವಿಭಿನ್ನ ಆಯಾಮಗಳನ್ನು ಕಲ್ಪಿಸಿದ್ದಾರೆ.
ಮಧು ವೈ.ಎನ್.‌ ಕಾದಂಬರಿ “ಕನಸೇ ಕಾಡುಮಲ್ಲಿಗೆ” ಕುರಿತು ಅನಸೂಯ ಯತೀಶ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ