Advertisement

Category: ಪುಸ್ತಕ ಸಂಪಿಗೆ

ನೀಲಾಕಾಶದ ನಿಹಾರಿಕೆಗಳ ನೋವು ತಿಳಿದಿರಲಿ…

ಚಾಂದ್ ಪಾಷಾರಿಗೆ ಇರುವ ಸವಾಲೆಂದರೆ ಒಂದು mood ಅಥವಾ ಒಂದು ಹೊಳಹನ್ನು ಎಷ್ಟು ಸಶಕ್ತವಾಗಿ ಹೇಳಬಲ್ಲರೋ ಅದೇ ಸಾಮರ್ಥ್ಯವನ್ನು ಸಂಕೀರ್ಣ ವಸ್ತುವಿನ ನಿರ್ವಹಣೆಯಲ್ಲಿಯೂ ಸಾಧಿಸಬೇಕಾಗುತ್ತದೆ. ಹೇಳಿದ್ದನ್ನು ಚುರುಕಾಗಿ, ಪ್ರಭಾವಿಯಾಗಿ ಹೇಳುವುದು ಎಷ್ಟು ಮುಖ್ಯವೋ ಕಾವ್ಯದಲ್ಲಿ ಒಂದು ಅನುಭವವನ್ನು ಸಾಂದ್ರವಾಗಿ ಗಂಭೀರ ಚಿಂತನೆಯೊಂದಿಗೆ ಅಭಿವ್ಯಕ್ತಿಸುವುದು ಅಷ್ಟೇ ಮುಖ್ಯ. ಈ ಹಿಂದಿನ ಸಂಕಲನಗಳಲ್ಲಿ ಮತ್ತು ಪ್ರಸ್ತುತ ಕೃತಿಯಲ್ಲಿ ಈ ಸಾಮರ್ಥ್ಯದ ಝಲಕುಗಳನ್ನು ಚಾಂದ್‌ ಪಾಷಾ ತೋರಿದ್ದಾರೆ.
ಚಾಂದ್‌ ಪಾಷ ಎನ್.ಎಸ್. ಕವನ ಸಂಕಲನ “ಒದ್ದೆಗಣ್ಣಿನ ದೀಪ”ಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ಸದಾ ಉಳಿಯುವ ಚಡಪಡಿಕೆಯ ಕಥೆಗಳು…

ಕೊನೆಯಾಗದ ಕಷ್ಟಗಳು, ಮರೆಯಲಾಗದ ನೋವು, ಸದಾ ಉಳಿಯುವ ಚಡಪಡಿಕೆ, ಹೆದರಿಸುವ ಒಂಟಿತನ- ಈ ಸಂಕಲನದ ಎಲ್ಲಾ ಕಥೆಗಳಲ್ಲೂ ಕಾಣುತ್ತವೆ. ಎದೆಯೊಳಗಿನ ನೋವನ್ನು ಅಂಗೈಲಿ ಹಿಡಿದುಕೊಂಡೇ ವಿನಾಯಕ ಇಲ್ಲಿನ ಕಥೆಗಳಿಗೆ ಅಕ್ಷರ ರೂಪ ನೀಡಿರಬಹುದೇನೋ ಎಂದು ಪದೇ ಪದೇ ಅನಿಸುವಷ್ಟರಮಟ್ಟಿಗೆ ಇಲ್ಲಿನ ಕಥೆಗಳು ಸಂಕಟವನ್ನು ಉಸಿರಾಡಿದೆ. ಒಬ್ಬೊಬ್ಬರ ಬದುಕೂ ಸಂಕಟದ ಸಾಗರವೇ ಆಗಿರುತ್ತದೆ ಎಂಬುದನ್ನು ಎದೆ ಬಗೆದು ತೋರುವಂಥ ಹುಮ್ಮಸ್ಸಿನಲ್ಲಿ ವಿನಾಯಕ ಕಥೆ ಹೇಳಿದ್ದಾರೆ. ತಮ್ಮ ಪ್ರಯತ್ನದಲ್ಲಿ ತಕ್ಕಮಟ್ಟಿನ ಗೆಲುವನ್ನು ಕಂಡಿದ್ದಾರೆ.
ವಿನಾಯಕ ಅರಳಸುರಳಿ ಕಥಾಸಂಕಲನ “ಮರ ಹತ್ತದ ಮೀನು”ಕ್ಕೆ ಎ.ಆರ್‌. ಮಣಿಕಾಂತ್ ಬರೆದ ಮುನ್ನುಡಿ

Read More

ತಳಮಳಗಳ `ಮೌನದೊಡಲ ಮಾತು’

ಗಜಲ್ ಮೂಲತಃ ಮನುಷ್ಯ ಸಹಜ ಪ್ರೀತಿ, ಪ್ರೇಮ, ಪ್ರಣಯ, ವಿರಹ, ವೇದನೆ, ಏಕಾಂಗಿತನ, ನೋವು, ಹತಾಶೆ, ವಿಪ್ರಲಂಭನ, ಬೇಗುದಿ, ತಳಮಳಗಳನ್ನು ಅಭಿವ್ಯಕ್ತಿಗೊಳಿಸುವ ಕಾವ್ಯವಾದರೂ, ಅದರಾಚೆಯ ವರ್ತಮಾನದ ಸಂಗತಿಗಳನ್ನೂ ಅದು ಪ್ರತಿಧ್ವನಿಸುತ್ತದೆ. ಇಂತಹ ಹಲವು ದೃಷ್ಟಿಕೋನಗಳನ್ನಿಟ್ಟುಕೊಂಡು ಇಲ್ಲಿ ಕೆಲ ಗಜಲ್‌ಗಳು ಮೈದಾಳಿವೆ. ಅಂಬಮ್ಮ ಅವರ ಗಜಲ್‌ಗಳಲ್ಲಿ ಪ್ರೇಮ ನಿವೇದನೆ ಇದೆ, ನೋವುಂಡ ಹೃದಯಾಂತರಾಳದ ಯಾತನೆ ಇದೆ. ಜೊತೆಗೆ ಕೆಲವೆಡೆ ಚಡಪಡಿಕೆ, ಕಾತರತೆ, ಆರ್ದ್ರತೆ, ಮನದ ತಾಕಲಾಟಗಳ ತಳಮಳವೂ ಇದೆ.
ಅಂಬಮ್ಮ ಪ್ರತಾಪ್‌ ಸಿಂಗ್‌ ಗಜಲ್‌ ಸಂಕಲನ “ಮೌನದೊಡಲ ಮಾತು” ಕುರಿತು ಮಂಡಲಗಿರಿ ಪ್ರಸನ್ನ ಬರಹ

Read More

ಅಪೂರ್ಣವಲ್ಲ… ಪೂರ್ಣತೆಯೆಡೆಗೆ ಸಾಗುವ ದಾರಿ

ಕೊನೆಗೌಡ ಮತ್ತು ಪ್ರೀತಿ ಎಂಬ ಕಥೆ ವಿಶಿಷ್ಟವಾದದ್ದು. ಪ್ರೀತಿ ಎನ್ನುವುದು ಕೇವಲ ಮೇಲ್ವರ್ಗದ ಸೊತ್ತಲ್ಲ, ಪ್ರೀತಿಯ ನಿಜವಾದ ರೂಪ ಕಾಣಿಸುವುದು ಸಂಸಾರ ಆರಂಭವಾದ ಮೇಲೆ ಎಂಬುದನ್ನು ಸುಂದರವಾಗಿ ತಿಳಿಸಿಕೊಡುವ ಕಥೆ. ಅನಾಥನಾಗಿದ್ದ ಕಥಾನಾಯಕ ಹೆಂಡತಿಯನ್ನೇ ಸರ್ವಸ್ವವೆಂದು ಬಗೆದು ಅವಳಿಗೆ ಪ್ರೀತಿಯನ್ನು ಧಾರೆಯೆರೆಯುವ ಪರಿ ಮನೋಜ್ಞವಾಗಿ ಚಿತ್ರಿತವಾಗಿದೆ. ವೃದ್ಧಾಪ್ಯದಲ್ಲೂ ಪ್ರೀತಿ ಬಾಡದೆ ಮಾಗುತ್ತದೆ ಎಂಬುದನ್ನು ಲೇಖಕಿ ಸಮರ್ಥವಾಗಿ ನಿರೂಪಿಸಿದ್ದಾರೆ. ಕಾಲವು ಬರುವುದು ಒಂದು ದಿನ ಎಂಬ ಕೊನೆಯ ಕಥೆ ಸಾಮಾಜಿಕ ಸುಧಾರಣೆಯನ್ನು ಮಾಡಹೋಗಿ ಬಹಿಷ್ಕಾರಕ್ಕೆ ಒಳಗಾದವನ ಕಥೆ.
ಸುಧಾ ಎಂ. ಚೊಚ್ಚಲ ಕಥಾ ಸಂಕಲನ “ಅಪೂರ್ಣವಲ್ಲ” ಕುರಿತು ಮಹಾಬಲ ಭಟ್‌ ಅವರ ಬರಹ

Read More

ಉತ್ತಮ ಪೂರ್ವಜರಾಗುವುದು ಹೇಗೆ?

ನಮ್ಮಲ್ಲಿ ಅರಣ್ಯ ವಿಸ್ತೀರ್ಣ ಹೆಚ್ಚಾಗಿದೆ ಎಂದು ಉಪಗ್ರಹ ಚಿತ್ರಗಳ ಆಧರಿಸಿ ಸರಕಾರಿ ಅಂಕಿ ಅಂಶಗಳ ಘೋಷಣೆಯಾಗುತ್ತದೆ. ಅಂಥ ಅರಣ್ಯದಲ್ಲಿ ಜೀವಾವಾಸ ನಿಜಕ್ಕೂ ಹೆಚ್ಚಾಗಿದೆಯೆ, ಪಶುಪಕ್ಷಿಗಳ ಸಂಖ್ಯೆ, ದುಂಬಿ-ಜೇನ್ನೊಣಗಳ ಸಾಂದ್ರತೆ ಹೆಚ್ಚಿದೆಯೆ, ನದಿ ಕೊಳ್ಳಗಳಲ್ಲಿ ಜಲಚರಗಳ ಸಂಖ್ಯೆ ಹೆಚ್ಚಾಗಿದೆಯೆ, ಅದು ಗೊತ್ತಿರುವುದಿಲ್ಲ. ಮಳೆ ಚೆನ್ನಾಗಿ ಸುರಿದಾಗ ಎಲ್ಲ ಕೆರೆಕಟ್ಟೆಗಳಲ್ಲೂ ನೀರು ತುಂಬಿ ಹೊರಕ್ಕೆ ಹರಿಯುತ್ತದೆ; ಆದರೆ ಅಂಥ ಕೆರೆಗಳಲ್ಲಿ ಹೂಳು ಎಷ್ಟು ತುಂಬಿದೆ ಎಂಬುದು ಲೆಕ್ಕಕ್ಕೆ ಬರುವುದೇ ಇಲ್ಲ.
ಪರಿಸರವಾದಿ ನಾಗೇಶ ಹೆಗಡೆಯವರ ಹೊಸ ಕೃತಿ “ಅಪಾಯ ಬಂದಿದೆ: ಅಡಗಲು ಸ್ಥಳವೆಲ್ಲಿ?”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ