Advertisement

Category: ಪುಸ್ತಕ ಸಂಪಿಗೆ

ಹೆಣ್ತನದ ಒಳಬೇಗುದಿಯನ್ನು ಬಿಂಬಿಸುವ ಪುಟ್ಟಮ್ಮಯ್ಯ

ಬಾಲಕಿಯಾಗಿ ಏನೊಂದನ್ನೂ ಅರಿಯುವ ಮುನ್ನವೇ ಚಿಕ್ಕಾವಲ್ಲಪ್ಪನನ್ನು ಮದುವೆಯಾಗಿ ಸ್ವಂತ ಅತ್ತೆಯ ಮನೆಗೆ ಬರುವ ಪುಟ್ಟಮ್ಮ ಮನೆ ಹಾಗೂ ಹೊಲದ ಕೆಲಸಗಳ ಜವಾಬ್ದಾರಿಯನ್ನು ನಿರ್ವಹಿಸುತ್ತ ಮುಂದೆ ಕನ್ಯೆಯಾಗಿಯೂ ಗಂಡನೊಂದಿಗೆ ಸೇರಲು ಅವಕಾಶವಿರದೆ ವಯೋಸಹಜ ಕಾಮನೆಗಳನ್ನು ಹತ್ತಿಕ್ಕಿಕೊಂಡು ಸುಮಾರು ಎರೆಡು ದಶಕಗಳ ಕಾಲ ಬಂಜೆ ಎಂಬ ಹಣೆಪಟ್ಟಿ ಹೊತ್ತು ಮುಂದೊಮ್ಮೆ ತಾಯಿಯಾಗುವುದು, ಕೆಳಜಾತಿಯ ಕೆಲಸಗಾರರೊಂದಿಗೆ ಸಲುಗೆಯಿಂದ ಬೆರೆತು ಅಂದಿನ ಆಚರಣೆಯಾದ ವರ್ಣಸಂಘರ್ಷವನ್ನು ನೈತಿಕವಾಗಿ ವಿರೋಧಿಸುವುದು. ಜವಾಬ್ದಾರಿಯುತ ಸೋದರಿಯಾಗಿ ತಮ್ಮನನ್ನು ವಿದ್ಯಾವಂತನನ್ನಾಗಿ ಮಾಡುವುದು.
ಪ್ರೊ. ಕಟಾವೀರನಹಳ್ಳಿ ನಾಗರಾಜು ಬರೆದ ಕಾದಂಬರಿ “ಪುಟ್ಟಮ್ಮಯ್ಯ” ಕುರಿತು ಪ.ನಾ. ಹಳ್ಳಿ ಹರೀಶ್‌ ಕುಮಾರ್‌ ಬರಹ

Read More

ಕನ್ನಡ ಶಾಲೆಯೊಂದರ ಸುಂದರ ಕಥಾನಕ

ಮಹಾತ್ಮಾ ಗಾಂಧೀಜಿಯವರು ಕೂಡಾ ಮಾತೃಭಾಷೆಯ ಶಿಕ್ಷಣವೇ ಹೆಚ್ಚು ಪರಿಣಾಮಕಾರಿ ಎಂಬುದನ್ನು ಒತ್ತಿ ಹೇಳಿದ್ದಾರೆ. ಆದರೆ ಸರಕಾರ ಕೂಡಾ ಒಂದೆಡೆಯಿಂದ ಕನ್ನಡದ ಉದ್ಧಾರದ ಮಾತುಗಳನ್ನಾಡುತ್ತಿದ್ದಂತೆ ಇನ್ನೊಂದು ಕಡೆಯಿಂದ ಆಂಗ್ಲಮಾಧ್ಯಮ ಶಾಲೆಗಳನ್ನು ಪ್ರೋತ್ಸಾಹಿಸುತ್ತಾ ಕನ್ನಡ ಶಾಲೆಗಳನ್ನು ಮುಚ್ಚುವಲ್ಲಿ ಪರೋಕ್ಷವಾಗಿ ಸಹಕರಿಸುತ್ತಿದೆ. ಇಂತಹ ದಿನಮಾನದಲ್ಲಿ ದಟ್ಟ ಕಾನನದ ಮಧ್ಯೆ ಇರುವ ಪುಟ್ಟ ಗ್ರಾಮದ ಸರಕಾರಿ ಶಾಲೆಯೊಂದರ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಅಕ್ಷತಾ ಕೃಷ್ಣಮೂರ್ತಿಯವರು ತನ್ನ ಶಾಲೆ ಮತ್ತು ಮಕ್ಕಳ ಕತೆಯನ್ನು ಹೇಳುವುದರ ಜೊತೆಗೆ ಆ ಪ್ರದೇಶದ ಪ್ರಕೃತಿಯ ಮನೋಹರ ನೋಟವನ್ನೂ, ಅಲ್ಲಿನ ಜನಜೀವನವನ್ನೂ ನಮ್ಮ ಕಣ್ಣಿಗೆ ಕಟ್ಟುವಂತೆ ತಮ್ಮ ‘ಇಸ್ಕೂಲು’ ಕೃತಿಯಲ್ಲಿ ಸೊಗಸಾಗಿ ಓದುಗರ ಮುಂದಿಟ್ಟಿದ್ದಾರೆ.
ಅಕ್ಷತಾ ಕೃಷ್ಣಮೂರ್ತಿಯವರ “ಇಸ್ಕೂಲು” ಕೃತಿಯ ಕುರಿತು ಸದಾನಂದ ನಾರಾವಿ ಬರಹ

Read More

ಕೊನೆ ಮೊದಲಿಲ್ಲದ ದಾರಿಗಳೊಳಗೆ

ಇಲ್ಲಿನ ಮುಖ್ಯ ಕವಿತೆಗಳೆಲ್ಲವೂ ಪ್ರಕೃತಿಯ ವರ್ಣ ರಂಜಿತ ನಿಲುವನ್ನು ಎತ್ತಿ ತೋರಿಸುತ್ತದೆ. ಹೆಣ್ಣಿನೆದೆಗೆ ಮೊದಲು ತಾಕುವುದೆ ಪ್ರಕೃತಿ ಪ್ರೇಮ ಎಂಬುದು ನಮಗಿಲ್ಲಿ ನಿರೂಪಿತವಾಗುತ್ತದೆ. ಪ್ರಕೃತಿಯೆಂದರೆ ಕೋಗಿಲೆ ಬೇಕು, ಚಂದಿರನಿರಬೇಕು, ನೀಲಿಯಾಕಾಶ, ಕರಿ ಮುಗಿಲು, ಆಷಾಡದ ಮೋಡ, ಸುಖದ ಮಳೆ, ನಿತ್ಯ ಪುಷ್ಪ, ಪಾರಿಜಾತ, ಕಲ್ಪವೃಕ್ಷ, ಸೂರ್ಯ, ಚಂದ್ರ, ನಕ್ಷತ್ರ ಎಲ್ಲವೂ ಇಲ್ಲಿನ ಕವಿತೆಗಳಲ್ಲಿದೆ. ಏನೋ ಒಂದು ತಿಳಿಯಲು ಆಗದಂತಹ ಆಧ್ಯಾತ್ಮಕತೆಯ ದಿವ್ಯ ಸಾನಿಧ್ಯದ ಸೆಳವು ಇಲ್ಲಿನ ಕವಿತೆಗಳು ಎದ್ದು ತೋರಿಸುತ್ತವೆ.
ಕೆ. ಎನ್. ಲಾವಣ್ಯಪ್ರಭ ಕವನ ಸಂಕಲನ “ಸ್ಪರ್ಶ ಶಿಲೆ”ಯ ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

‘ಮುಂಬಯಿ ಕನ್ನಡ ಲೋಕʼದ ಅನಾವರಣ

ಮುಂಬಯಿ ಬದುಕಿನ ವಿವಿಧ ವಿನ್ಯಾಸಗಳು ಕನ್ನಡ ಕಾವ್ಯದಲ್ಲಿ ಮೂಡಿ ಬಂದಿರುವ ಬಗೆಯನ್ನು ‘ಮುಂಬಯಿ ಕವಿಗಳು ಕಂಡ ಮುಂಬಯಿ’ ಭಾಗದಲ್ಲಿ ಕಟ್ಟಿಕೊಡಲಾಗಿದೆ. ಇಲ್ಲಿ ಲೇಖಕರು ಜಿ.ಎಸ್.ಎಸ್. ಅವರ ‘ಮುಂಬಯಿ ಜಾತಕ’ವನ್ನು ಮೊದಲ್ಗೊಂಡು, ಜಯಂತ ಕಾಯ್ಕಿಣಿ, ಕರುಣಾಕರ ಶೆಟ್ಟಿ, ಗಿರಿಜಾ ಶಾಸ್ತ್ರಿ, ಸಾ.ದಯಾ, ಅರವಿಂದ ನಾಡಕರ್ಣಿ, ಸನದಿ, ತುಳಸಿ ವೇಣುಗೋಪಾಲ್, ಕೆ.ವಿ. ಕಾರ್ನಾಡ್, ಗೋಪಾಲ್ ತ್ರಾಸಿ, ಜಿ.ಪಿ. ಕುಸುಮಾ ಮೊದಲಾದವರ ಕವಿತೆಗಳಲ್ಲಿ ಮುಂಬಯಿ ವಿಭಿನ್ನ ರೀತಿಯಲ್ಲಿ ಅನಾವರಣಗೊಂಡಿರುವುದನ್ನು ಲೇಖಕರು ಕಂಡು ಕೊಂಡಿದ್ದಾರೆ.
ಡಾ. ಕೆ. ರಘುನಾಥ್‌ ಬರೆದ ‘ಮುಂಬಯಿ ಕನ್ನಡ ಲೋಕʼ ಕೃತಿಯ ಕುರಿತು ದಯಾನಂದ ಸಾಲ್ಯಾನ್‌ ಬರಹ

Read More

ತೆರೆಮರೆಯ ಅಂತರಂಗದ ಕಥೆ…

ಅಪ್ಪ ಮೌನವಾಗಿ ಒಂದು ಓರೆಗೆ ಕೂತಿದ್ದರು. ಅರವಿಂದ ಅದೆಲ್ಲಿ ಅಲೆಯೋಕ್ಕೆ ಹೋಗಿದ್ದನೋ ಏನೋ… ಅವನೊಬ್ಬ ಶುದ್ಧ ಪೋಕರಿ ತಮ್ಮ. ಏನಾಯಿತೆಂದು ವಿಚಾರಿಸಿದರೆ, ಅಮ್ಮ, ‘ಚಿಕ್ಕಮ್ಮನಿಗೆ ಸ್ವಲ್ಪ ಹೊಟ್ಟೆನೋವು ಕಾಣಿಸಿಕೊಂಡಿತ್ತು ಅಷ್ಟೆ. ಈಗ ಹುಷಾರಾಗಿದ್ದಾಳೆ’ ಎಂದರು. ಹುಂ… ಮಕ್ಕಳಿಗೆ ಇದೆಲ್ಲಾ ಗೊತ್ತಾಗಬಾರದು ಅಂತ ದೊಡ್ಡವರು ಹೀಗೆ ಸುಳ್ಳು ಹೇಳೋದು ಸಹಜವಲ್ಲವೇ..? ಚಿಕ್ಕಮ್ಮನನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಮನೆಗೆ ಕರೆದುಕೊಂಡು ಬಂದ ಕೆಲದಿನಗಳಲ್ಲಿ, ಮನೆಯಲ್ಲಿ ನಡೀತಾ ಇದ್ದ ಮಾತುಕತೆಗಳಿಂದಲೇ ತಿಳಿಯಿತು ಚಿಕ್ಕಮ್ಮ ಆತ್ಮಹತ್ಯೆಗೆ ಯತ್ನಿಸಿದ್ದರು ಅಂತ! ಯಾರೋ ಬಸ್ ಕಂಡೆಕ್ಟರ್ ಅಂತೆ.. ಗಾಢವಾಗಿ ಪ್ರೀತಿಸಿದ್ರಂತೆ..
ಆಶಾ ರಘು ಹೊಸ ಕಾದಂಬರಿ “ಚಿತ್ತರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ