Advertisement

Category: ಪುಸ್ತಕ ಸಂಪಿಗೆ

ನಮ್ಮೊಳಗೂ ಒಂದು “ಬೌಲ್” ಇದೆಯೇ?: ಬಿ.ಕೆ. ಸುಮತಿ ಬರಹ

ಮನುಷ್ಯ ಬದುಕಿನ ಎಲ್ಲ ಹೋರಾಟಗಳನ್ನೂ ಆರಂಭದ ಬಿಕು ಮತ್ತು ಮಾಲಿಂಗನ ಯುದ್ಧದಲ್ಲಿಯೇ ಕಾಣಬಹುದು. ಆ ಯುದ್ಧ ಒಂದು ಚಿತ್ರಮಾಲಿಕೆಯ ಹಾಗಿದೆ. ವಸ್ತುವನ್ನು ಅಪ್ಪಿಕೊಳ್ಳುವುದು, ಬಿಟ್ಟು ಕೊಡಲು ಹೆಣಗಾಡುವುದು, ಕಿತ್ತುಕೊಳ್ಳುವುದು, ಇದೇ ಅಲ್ಲವೇ ನಮ್ಮ ಹೋರಾಟ? ಶಬ್ದ ನಿಶ್ಶಬ್ದದ ಹೋರಾಟ. ಕೊಟ್ಟು ಬಿಟ್ಟಿದ್ದರೆ ಏನಾಗುತ್ತಿತ್ತು? ಮಾಲಿಂಗನಿಗೆ ಅದನ್ನು ಪಡೆಯುವ ಅರ್ಹತೆ ಇತ್ತೇ? ಬಿಕು ಆನಂದನ ಅಗಲಿಕೆಯಿಂದ ವಿಚಲಿತನಾಗಿ ಬಳಲಿ ನಿತ್ರಾಣನಾಗುವುದು ಏಕೆ? ಬಿಕುವಿನ ಆರೈಕೆಯಲ್ಲಿ ಅರಳಿದ ಸುಮಲತೆ ಆತನನ್ನು ಬಿಟ್ಟು ಹೊರಡಲು ಮನಸ್ಸು ಮಾಡಿದ್ದಾದರೂ ಹೇಗೆ?
ಡಾ. ಎಂ.ಎಸ್.‌ ಮೂರ್ತಿಯವರ “ಬೌಲ್‌” ಕಾದಂಬರಿಯ ಕುರಿತು ಬಿ.ಕೆ. ಸುಮತಿ ಬರಹ

Read More

ಮುಳ್ಳಿನ ಮೇಲಿನ ಹೂವು: ವೇದಾ ಮನೋಹರ ಜೀವನ ಪಯಣದ ಕತೆ

ಈ ಹೋರಾಟಗಳಲ್ಲೆಲ್ಲಿಯೂ ನನಗೆ ಪಶ್ಚಾತ್ತಾಪವಿರಲಿಲ್ಲ. ಹಾಗೆ ನೋಡಿದರೆ ಇದು ನಾನೇ ಆಯ್ದುಕೊಂಡ ಬದುಕು. ನನ್ನ ಬದುಕನ್ನು ಅಪ್ಪ ಅಮ್ಮನ ಮಡಿಲಿಗೆ ಹಾಕಲಿಲ್ಲ. ಪ್ರೇಮಿಸಿ ಮದುವೆಯಾಗಿ ನನ್ನ ಹಾದಿಯನ್ನು ನಾನೇ ಕಂಡುಕೊಂಡೆ. ಮನೋಹರ್ ಅವರನ್ನು ಮದುವೆಯಾದ ಮೇಲೂ ಸಂಪೂರ್ಣವಾಗಿ ಅವರನ್ನು ಅವಲಂಬಿಸಕೂಡದು ಎಂಬ ತತ್ವ ನನ್ನದಿತ್ತು. ಅದಕ್ಕೆ ನೀರೆರೆದವರು ಮನೋಹರ್. ಅದೀಗ ಫಲ ಕೊಟ್ಟಿದೆ. ಯಾಕೆಂದರೆ ನಮ್ಮನ್ನು ನಾವು ನಂಬಿ ಮುನ್ನಡೆದಾಗ ಮಾತ್ರ ನಮಗೆ ಯಶಸ್ಸು ಸಿದ್ಧ ಎಂಬ ತತ್ವದಡಿ ಬದುಕಿದವಳು ನಾನು.
ಭಾರತಿ ಹೆಗಡೆ ನಿರೂಪಣೆಯ ವೇದಾ ಮನೋಹರ ಜೀವನ ಪಯಣದ ಕೃತಿ “ಪಂಚಮವೇದ”ದ ಒಂದು ಅಧ್ಯಾಯ ನಿಮ್ಮ ಓದಿಗೆ

Read More

“ಜಿನ್ನ್‌ ಮತ್ತು ಪರ್ಷಿಯನ್‌ ಕ್ಯಾಟ್‌” ಕಥೆಗಳು….

ಈ ಕಥೆಗಳ ಗಮನ ಸೆಳೆಯುವ ಇನ್ನೂ ಕೆಲವು ಅಂಶಗಳೆಂದರೆ, ನಾಟಕೀಯತೆ, ಕಥಾವರಣದಲ್ಲಿ ಬಿಚ್ಚಿಕೊಳ್ಳುವ ಒಂದು ಬಗೆಯ ನಿಗೂಢತೆ ಮತ್ತು ಜನಪ್ರಿಯ ಕಥನ ಪರಂಪರೆಯಿಂದ ಪಡೆದ ಪ್ರಭಾವ. ಬೆಳೆಯುತ್ತಿರುವ ಲೇಖಕನೊಬ್ಬನಿಗೆ ಯಾವ ಅಂಶವೂ ವರ್ಜ್ಯವಲ್ಲ. ಮಾತ್ರವಲ್ಲ, ತನ್ನ ಕಥನ ಸಾಮರ್ಥ್ಯವನ್ನು ಕಂಡುಕೊಳ್ಳಲು ನಡೆಸುವ ಪ್ರಯೋಗ ಕೂಡ ಮುಖ್ಯ. ಮುನವ್ವರ್ ಅಂತಹ ಕಂಡುಕೊಳ್ಳುವಿಕೆಯ ಪ್ರಯತ್ನದಲ್ಲಿದ್ದಾರೆ.
ಮುನವ್ವರ್‌ ಜೋಗಿಬೆಟ್ಟು ಕಥಾಸಂಕಲನ”ಜಿನ್ನ್‌ ಮತ್ತು ಪರ್ಷಿಯನ್‌ ಕ್ಯಾಟ್‌”ಗೆ ಕೇಶವ ಮಳಗಿ ಬರೆದ ಪ್ರವೇಶಿಕೆ

Read More

ಇಲ್ಲಿ ಬಳ್ಳಿ, ಹೂವು, ಮೋಡ ಕೂಡ ಮಾತನಾಡುತ್ತವೆ: ಡಾ. ವಿಜಯಾ ಬರಹ

‘ಹೊರದಾರಿ’ಯಲ್ಲಿ ಬರುವ ದತ್ತು ಮಗುವಿನ ಸಮಸ್ಯೆ ಅನೇಕ ಸತ್ಯ ಘಟನೆಗಳನ್ನು ನೆನಪಿಸಿತು. ಇಂಥ ಸಮಸ್ಯೆಗಳಿಂದಲೇ ಇರಬೇಕು. ಈಗ ನಿಯಮಗಳು ತುಂಬಾ ಬಿಗಿಯಾಗಿವೆ. ಸುಲಭವಿಲ್ಲ ಮಗುವೊಂದನ್ನು ಪಡೆಯುವುದು. ಅದೇನೇ ಇರಲಿ ವಾಚ್ಯವಾಗಿ ಹೇಳದಿದ್ದರೂ ಹೆಣ್ಣು ಮಗುವೊಂದು ಮಾತ್ರ ಇನ್ನೊಂದು ಕರುಳಿನ ಕೂಗನ್ನು ಗ್ರಹಿಸಬಲ್ಲದು ಎಂದು ತೋರಿದ್ದೀರಿ. ಎಲ್ಲಕ್ಕಿಂತ ಮಿಗಿಲಾಗಿ ನನಗೆ ನೀವು ಕೊಡುವ ವಿವರಗಳು ಆಪ್ತವಾದವು. ಗಿಡ ಮರ ಬಳ್ಳಿಗಳ ಜೊತೆ ಮಾತಾಡಿಬಿಡುತ್ತೀರಿ!
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ” ಕುರಿತು ಡಾ. ವಿಜಯಾ ಬರಹ

Read More

ಒಳದನಿಗೆ ಕಿವಿಯಾಗುವ ಕವಿತೆಗಳು: ಆನಂದ ವಿ. ಪಾಟೀಲ ಬರಹ

“ಮಹಾಶೂನ್ಯದ ಮಹಾಶೂನ್ಯತ್ವ ಮಹಾಸಾಗರದಲಿ/ಪ್ರತಿಯೊಬ್ಬರೂ ಒಂಟಿ!’ ಎನ್ನುವ ಅಖೈರು ಸತ್ಯ ಇಷ್ಟು ಬೇಗನೆ ಕೈಗೆ ಬಂತೆ ಅಚ್ಚರಿಯನ್ನುಂಟು ಮಾಡುತ್ತದೆ. ಬಹಳಷ್ಟು ಸಲ ಇಲ್ಲಿನ ಕವಿತೆ ಆಂತರ್ಯಕ್ಕೆ ಲಗ್ಗೆ ಇಟ್ಟುದೇ ಆಗಿದೆ ಅನ್ನಿಸಿತು. ಹಾಗಿರುವಾಗ ಅದು ಗುಂಗಾಗಿ ಕಾಡುತ್ತಿದೆಯಾ ಎಂತಲೂ ಗುಮಾನಿಯಾಗಿ ಕಾಡುವಂತೆ ಇಲ್ಲಿನ ಸಾಲುಗಳು ಕಾಣುತ್ತವೆ.
ಸುಮಿತ್‌ ಮೇತ್ರಿ ಕವನ ಸಂಕಲನ “ಈ ಕಣ್ಣುಗಳಿಗೆ ಸದಾ ನೀರಡಿಕೆ” ಕುರಿತು ಆನಂದ ವಿ. ಪಾಟೀಲ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ