Advertisement

Category: ಪುಸ್ತಕ ಸಂಪಿಗೆ

ನಡು ಮಧ್ಯಾಹ್ನದ ಕಣ್ಣಿನ ಹೊಳಪು…

ಸ್ತ್ರೀ ಬದುಕಿನ ಅಗಾಧತೆ ಮತ್ತು ಸ್ತ್ರೀಯ ಇತಿಮಿತಿಯೊಳಗಿನ ಬದುಕು ಅನಾವರಣಗೊಳ್ಳುವ ಕವಿತೆಗಳಾದ ಹೂವಿಡುವಷ್ಟೆ ನಿಧಾನವಾಗಿ, ನಾವು ಸ್ವಲ್ಪ ಹೀಗೆ, ಆಸೀಫಾ, ಅವಳು, ಅಡುಗೆಯಾಟದ ಹುಡುಗಿ ಮುಂತಾದ ಕವಿತೆಗಳು ಮಹಿಳೆಯ ಅಂತರಂಗವನ್ನು ಬಿಂಬಿಸುತ್ತವೆ. ಕವಯತ್ರಿ ಆಶಾ ಅಭಿಮಾನದಿಂದ ಅಭಿವ್ಯಕ್ತಿ ಪಡಿಸಿದ ಸ್ತ್ರೀಯ ಬಗೆಗಿನ ಈ ಸಾಲು ಪ್ರತಿ ಹೆಂಗಳೆಯರ ಹೆಮ್ಮೆ. “ಹೋಗಲಿ ಬಿಡಿ ನೀವವಳನ್ನು ಆಪಾದ ಮಸ್ತಕವೇ/ ನೋಡಿದುದು ಸರಿಯೇ ಏಕೆಂದರೆ/ ದೇವತೆಯನ್ನು ಹಾಗೆಯೇ ನೋಡಬೇಕಂತೆ”
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಎಲ್ಲ ಆಯಾಮಗಳಲ್ಲೂ ಸಮೃದ್ಧವಾದ “ಎತ್ತರ”

ಇವರೆಲ್ಲರೂ ಹಳೆಕಾಲದ ಟ್ರಂಕಿನೊಳಗೆ ಘಾತುಕ ರಹಸ್ಯವನ್ನು ತಣ್ಣಗೆ ಮಡಚಿಡಬಲ್ಲರು. ಹಾಗೆಯೇ ಮಡಿಲಿನಲ್ಲಿ ಮಲಗಿರುವ ಬೆಕ್ಕಿನ ಮರಿಯನ್ನು ಅತಿ ಅನೌಪಚಾರಿಕವಾಗಿ ಕೆಳಗಿಳಿಸುವಂತೆ ಗುಟ್ಟು ಬಿಟ್ಟುಕೊಡಬಲ್ಲವರು. ರಾಜಕಿಶೋರ, ಸರಳ, ಸುಗುಣೇಶ, ಮಾಧವ ಎಂಬ ಚುಕ್ಕಿಪಾತ್ರಗಳೆಲ್ಲ ಇವನನ್ನು ಸುಳಿಯ ಇನ್ನಷ್ಟು ಒಳಗೆ ಸೆಳೆಯಬಲ್ಲವರು. ಇವರೆಲ್ಲರಿಂದ ಸುತ್ತುವರೆದಿರುವ ಕಥಾನಾಯಕನಿಗೆ ಸಾವಯವ ಸಂಬಂಧದ ತಾದ್ಯಾತ್ಮ ಸಾಧ್ಯವಾಗುವುದು ‘ಒಂದು ಸುತ್ತು ಕಡಿಮೆ’ ಇರುವ ವಿಮಲಾಳೊಂದಿಗೆ. ನಾಣ್ಯ ಅವರ ನಡುವಿನ ಸಂವಾದದ ಭಾಷೆ.
ಇಂದ್ರಕುಮಾರ್ ಎಚ್.ಬಿ. ಯವರ “ಎತ್ತರ” ಕಾದಂಬರಿಯ ಕುರಿತು ಮಮತಾ ಆರ್. ಬರಹ

Read More

ಹೆಣ್ತನದ ಒಳಬೇಗುದಿಯನ್ನು ಬಿಂಬಿಸುವ ಪುಟ್ಟಮ್ಮಯ್ಯ

ಬಾಲಕಿಯಾಗಿ ಏನೊಂದನ್ನೂ ಅರಿಯುವ ಮುನ್ನವೇ ಚಿಕ್ಕಾವಲ್ಲಪ್ಪನನ್ನು ಮದುವೆಯಾಗಿ ಸ್ವಂತ ಅತ್ತೆಯ ಮನೆಗೆ ಬರುವ ಪುಟ್ಟಮ್ಮ ಮನೆ ಹಾಗೂ ಹೊಲದ ಕೆಲಸಗಳ ಜವಾಬ್ದಾರಿಯನ್ನು ನಿರ್ವಹಿಸುತ್ತ ಮುಂದೆ ಕನ್ಯೆಯಾಗಿಯೂ ಗಂಡನೊಂದಿಗೆ ಸೇರಲು ಅವಕಾಶವಿರದೆ ವಯೋಸಹಜ ಕಾಮನೆಗಳನ್ನು ಹತ್ತಿಕ್ಕಿಕೊಂಡು ಸುಮಾರು ಎರೆಡು ದಶಕಗಳ ಕಾಲ ಬಂಜೆ ಎಂಬ ಹಣೆಪಟ್ಟಿ ಹೊತ್ತು ಮುಂದೊಮ್ಮೆ ತಾಯಿಯಾಗುವುದು, ಕೆಳಜಾತಿಯ ಕೆಲಸಗಾರರೊಂದಿಗೆ ಸಲುಗೆಯಿಂದ ಬೆರೆತು ಅಂದಿನ ಆಚರಣೆಯಾದ ವರ್ಣಸಂಘರ್ಷವನ್ನು ನೈತಿಕವಾಗಿ ವಿರೋಧಿಸುವುದು. ಜವಾಬ್ದಾರಿಯುತ ಸೋದರಿಯಾಗಿ ತಮ್ಮನನ್ನು ವಿದ್ಯಾವಂತನನ್ನಾಗಿ ಮಾಡುವುದು.
ಪ್ರೊ. ಕಟಾವೀರನಹಳ್ಳಿ ನಾಗರಾಜು ಬರೆದ ಕಾದಂಬರಿ “ಪುಟ್ಟಮ್ಮಯ್ಯ” ಕುರಿತು ಪ.ನಾ. ಹಳ್ಳಿ ಹರೀಶ್‌ ಕುಮಾರ್‌ ಬರಹ

Read More

ಕನ್ನಡ ಶಾಲೆಯೊಂದರ ಸುಂದರ ಕಥಾನಕ

ಮಹಾತ್ಮಾ ಗಾಂಧೀಜಿಯವರು ಕೂಡಾ ಮಾತೃಭಾಷೆಯ ಶಿಕ್ಷಣವೇ ಹೆಚ್ಚು ಪರಿಣಾಮಕಾರಿ ಎಂಬುದನ್ನು ಒತ್ತಿ ಹೇಳಿದ್ದಾರೆ. ಆದರೆ ಸರಕಾರ ಕೂಡಾ ಒಂದೆಡೆಯಿಂದ ಕನ್ನಡದ ಉದ್ಧಾರದ ಮಾತುಗಳನ್ನಾಡುತ್ತಿದ್ದಂತೆ ಇನ್ನೊಂದು ಕಡೆಯಿಂದ ಆಂಗ್ಲಮಾಧ್ಯಮ ಶಾಲೆಗಳನ್ನು ಪ್ರೋತ್ಸಾಹಿಸುತ್ತಾ ಕನ್ನಡ ಶಾಲೆಗಳನ್ನು ಮುಚ್ಚುವಲ್ಲಿ ಪರೋಕ್ಷವಾಗಿ ಸಹಕರಿಸುತ್ತಿದೆ. ಇಂತಹ ದಿನಮಾನದಲ್ಲಿ ದಟ್ಟ ಕಾನನದ ಮಧ್ಯೆ ಇರುವ ಪುಟ್ಟ ಗ್ರಾಮದ ಸರಕಾರಿ ಶಾಲೆಯೊಂದರ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಅಕ್ಷತಾ ಕೃಷ್ಣಮೂರ್ತಿಯವರು ತನ್ನ ಶಾಲೆ ಮತ್ತು ಮಕ್ಕಳ ಕತೆಯನ್ನು ಹೇಳುವುದರ ಜೊತೆಗೆ ಆ ಪ್ರದೇಶದ ಪ್ರಕೃತಿಯ ಮನೋಹರ ನೋಟವನ್ನೂ, ಅಲ್ಲಿನ ಜನಜೀವನವನ್ನೂ ನಮ್ಮ ಕಣ್ಣಿಗೆ ಕಟ್ಟುವಂತೆ ತಮ್ಮ ‘ಇಸ್ಕೂಲು’ ಕೃತಿಯಲ್ಲಿ ಸೊಗಸಾಗಿ ಓದುಗರ ಮುಂದಿಟ್ಟಿದ್ದಾರೆ.
ಅಕ್ಷತಾ ಕೃಷ್ಣಮೂರ್ತಿಯವರ “ಇಸ್ಕೂಲು” ಕೃತಿಯ ಕುರಿತು ಸದಾನಂದ ನಾರಾವಿ ಬರಹ

Read More

ಕೊನೆ ಮೊದಲಿಲ್ಲದ ದಾರಿಗಳೊಳಗೆ

ಇಲ್ಲಿನ ಮುಖ್ಯ ಕವಿತೆಗಳೆಲ್ಲವೂ ಪ್ರಕೃತಿಯ ವರ್ಣ ರಂಜಿತ ನಿಲುವನ್ನು ಎತ್ತಿ ತೋರಿಸುತ್ತದೆ. ಹೆಣ್ಣಿನೆದೆಗೆ ಮೊದಲು ತಾಕುವುದೆ ಪ್ರಕೃತಿ ಪ್ರೇಮ ಎಂಬುದು ನಮಗಿಲ್ಲಿ ನಿರೂಪಿತವಾಗುತ್ತದೆ. ಪ್ರಕೃತಿಯೆಂದರೆ ಕೋಗಿಲೆ ಬೇಕು, ಚಂದಿರನಿರಬೇಕು, ನೀಲಿಯಾಕಾಶ, ಕರಿ ಮುಗಿಲು, ಆಷಾಡದ ಮೋಡ, ಸುಖದ ಮಳೆ, ನಿತ್ಯ ಪುಷ್ಪ, ಪಾರಿಜಾತ, ಕಲ್ಪವೃಕ್ಷ, ಸೂರ್ಯ, ಚಂದ್ರ, ನಕ್ಷತ್ರ ಎಲ್ಲವೂ ಇಲ್ಲಿನ ಕವಿತೆಗಳಲ್ಲಿದೆ. ಏನೋ ಒಂದು ತಿಳಿಯಲು ಆಗದಂತಹ ಆಧ್ಯಾತ್ಮಕತೆಯ ದಿವ್ಯ ಸಾನಿಧ್ಯದ ಸೆಳವು ಇಲ್ಲಿನ ಕವಿತೆಗಳು ಎದ್ದು ತೋರಿಸುತ್ತವೆ.
ಕೆ. ಎನ್. ಲಾವಣ್ಯಪ್ರಭ ಕವನ ಸಂಕಲನ “ಸ್ಪರ್ಶ ಶಿಲೆ”ಯ ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ