Advertisement

Category: ಪುಸ್ತಕ ಸಂಪಿಗೆ

‘ಮುಂಬಯಿ ಕನ್ನಡ ಲೋಕʼದ ಅನಾವರಣ

ಮುಂಬಯಿ ಬದುಕಿನ ವಿವಿಧ ವಿನ್ಯಾಸಗಳು ಕನ್ನಡ ಕಾವ್ಯದಲ್ಲಿ ಮೂಡಿ ಬಂದಿರುವ ಬಗೆಯನ್ನು ‘ಮುಂಬಯಿ ಕವಿಗಳು ಕಂಡ ಮುಂಬಯಿ’ ಭಾಗದಲ್ಲಿ ಕಟ್ಟಿಕೊಡಲಾಗಿದೆ. ಇಲ್ಲಿ ಲೇಖಕರು ಜಿ.ಎಸ್.ಎಸ್. ಅವರ ‘ಮುಂಬಯಿ ಜಾತಕ’ವನ್ನು ಮೊದಲ್ಗೊಂಡು, ಜಯಂತ ಕಾಯ್ಕಿಣಿ, ಕರುಣಾಕರ ಶೆಟ್ಟಿ, ಗಿರಿಜಾ ಶಾಸ್ತ್ರಿ, ಸಾ.ದಯಾ, ಅರವಿಂದ ನಾಡಕರ್ಣಿ, ಸನದಿ, ತುಳಸಿ ವೇಣುಗೋಪಾಲ್, ಕೆ.ವಿ. ಕಾರ್ನಾಡ್, ಗೋಪಾಲ್ ತ್ರಾಸಿ, ಜಿ.ಪಿ. ಕುಸುಮಾ ಮೊದಲಾದವರ ಕವಿತೆಗಳಲ್ಲಿ ಮುಂಬಯಿ ವಿಭಿನ್ನ ರೀತಿಯಲ್ಲಿ ಅನಾವರಣಗೊಂಡಿರುವುದನ್ನು ಲೇಖಕರು ಕಂಡು ಕೊಂಡಿದ್ದಾರೆ.
ಡಾ. ಕೆ. ರಘುನಾಥ್‌ ಬರೆದ ‘ಮುಂಬಯಿ ಕನ್ನಡ ಲೋಕʼ ಕೃತಿಯ ಕುರಿತು ದಯಾನಂದ ಸಾಲ್ಯಾನ್‌ ಬರಹ

Read More

ತೆರೆಮರೆಯ ಅಂತರಂಗದ ಕಥೆ…

ಅಪ್ಪ ಮೌನವಾಗಿ ಒಂದು ಓರೆಗೆ ಕೂತಿದ್ದರು. ಅರವಿಂದ ಅದೆಲ್ಲಿ ಅಲೆಯೋಕ್ಕೆ ಹೋಗಿದ್ದನೋ ಏನೋ… ಅವನೊಬ್ಬ ಶುದ್ಧ ಪೋಕರಿ ತಮ್ಮ. ಏನಾಯಿತೆಂದು ವಿಚಾರಿಸಿದರೆ, ಅಮ್ಮ, ‘ಚಿಕ್ಕಮ್ಮನಿಗೆ ಸ್ವಲ್ಪ ಹೊಟ್ಟೆನೋವು ಕಾಣಿಸಿಕೊಂಡಿತ್ತು ಅಷ್ಟೆ. ಈಗ ಹುಷಾರಾಗಿದ್ದಾಳೆ’ ಎಂದರು. ಹುಂ… ಮಕ್ಕಳಿಗೆ ಇದೆಲ್ಲಾ ಗೊತ್ತಾಗಬಾರದು ಅಂತ ದೊಡ್ಡವರು ಹೀಗೆ ಸುಳ್ಳು ಹೇಳೋದು ಸಹಜವಲ್ಲವೇ..? ಚಿಕ್ಕಮ್ಮನನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಮನೆಗೆ ಕರೆದುಕೊಂಡು ಬಂದ ಕೆಲದಿನಗಳಲ್ಲಿ, ಮನೆಯಲ್ಲಿ ನಡೀತಾ ಇದ್ದ ಮಾತುಕತೆಗಳಿಂದಲೇ ತಿಳಿಯಿತು ಚಿಕ್ಕಮ್ಮ ಆತ್ಮಹತ್ಯೆಗೆ ಯತ್ನಿಸಿದ್ದರು ಅಂತ! ಯಾರೋ ಬಸ್ ಕಂಡೆಕ್ಟರ್ ಅಂತೆ.. ಗಾಢವಾಗಿ ಪ್ರೀತಿಸಿದ್ರಂತೆ..
ಆಶಾ ರಘು ಹೊಸ ಕಾದಂಬರಿ “ಚಿತ್ತರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಬದುಕೆಂದರೆ ಹೀಗೇನೆ….

ಮನೆ ಭಾಗವಾದಾಗ ಮಧ್ಯಕ್ಕೆ ಪೂರ್ತಿ ಗೋಡೆ ಕಟ್ಟದೆ ಅಟ್ಟದವರೆಗೆ ಮಾತ್ರ ಕಟ್ಟಿದ್ದರಿಂದ‌ ಅಟ್ಟ ಎಲ್ಲರಿಗೂ ಒಂದೆ ಇತ್ತು ಹಾಗಾಗಿ ಪಕ್ಕದ ಮನೆಯಲ್ಲಿ ಮಾತಾಡುವುದೆಲ್ಲ ಪಕ್ಕದಲ್ಲೆ ಮಾತಾಡಿದಷ್ಟು ಸ್ಪಷ್ಟವಾಗೆ ಕೇಳುತ್ತಿತ್ತು. ಸಾವಿ ನಿದ್ದೆ ಬಾರದೆ ಗಂಡನನ್ನು ಹೇಗಾದರು ಮಾಡಿ ಸೂಳೆ ಸಹವಾಸ ಬಿಡಿಸಿ ನನ್ನ ಕಡೆ ಸೆಳೆಯಬೇಕೆಂದು ಯೋಚಿಸುತ್ತಿದ್ದಳು. ಪಕ್ಕದ ಮನೆಯಲ್ಲಿ ಮಾವ ಅಕ್ಕಂದಿರು ತನ್ನ ಗಂಡನ ಬಗ್ಗೆ ಪಿಸುಗುಡುವುದು ಗೊತ್ತಾಗುತಿತ್ತು. ಸಾವಿತ್ರಿ ತನಗರಿವಿಲ್ಲದೆ ಶೋಕಿಸುತ್ತ ಮಗಳು ಕನಕಳನ್ನು ತಬ್ಬಿ ಕಣ್ಣು ಮಿಟುಕಿಸಿದಾಗ ಕಣ್ತುಂಬಿದ್ದ ಅಶ್ರು ದಳದಳನೆ ಇಳಿದು ಎಣ್ಣೆ ಜಿಡ್ಡು ಮೆತ್ತಿ ಕೊಳಕಾಗಿದ್ದ ತಲೆದಿಂಬು ಸಹ ಅದನ್ನು ಹೀರದೆ ಕೆಳಕ್ಕೆ ಹರಿದವು.
ನಗೋಲತೆ ಬರೆದ “ಬೆದ್ಲು ಬದ್ಕು” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಸಿಕಾಡ- ಕೀಟಲೋಕದ ಸಂಗೀತಸಾಮ್ರಾಟ

ಸಾಮಾನ್ಯವಾಗಿ ಹಾಡುವುದು ಗಂಡು ಸಿಕಾಡಗಳೇ; ಇವು ಹಲವಾರು ಹೆಣ್ಣು ಸಿಕಾಡಗಳ ಮಧ್ಯೆ ಒಂದು ಹೆಣ್ಣು ಸಿಕಾಡವನ್ನು ಆರಿಸಿ, ಅದಕ್ಕೆ ಸಂಗಾತಿಯಾಗೆಂದು ಆಹ್ವಾನವೀಯುವಾಗ ಹಾಡುವ ಹಾಡೇ ಬೇರೆ; ಆ ಹೆಣ್ಣುಸಿಕಾಡವು ಈ ಆಹ್ವಾನವನ್ನು ಒಪ್ಪಿ ಬಳಿಬಂದರೆ ಆಗ ಗಂಡು ಸಿಕಾಡವು ಹಾಡುವ ಹಾಡೇ ಬೇರೆ, ಅಕಸ್ಮಾತ್ ಆ ಆಹ್ವಾನ ತಿರಸ್ಕೃತಗೊಂಡರೆ ಮತ್ತೊಂದು ಶೋಕರಾಗವನ್ನು ಹೊರಡಿಸುತ್ತದೆ ಗಂಡು ಸಿಕಾಡ.
ಕ್ಷಮಾ ವಿ. ಭಾನುಪ್ರಕಾಶ್‌ ಬರೆದ ವಿಜ್ಞಾನ ಲೇಖನಗಳ ಸಂಕಲನ “ಜೀವಿವಿಜ್ಞಾನ”ದಿಂದ ಆಯ್ದ ಲೇಖನ ನಿಮ್ಮ ಓದಿಗೆ

Read More

ಆ ಹೂವಿನಿಂದಲೆ ಇಷ್ಟೆಲ್ಲ ಆಯಿತು ಅನ್ನಬಹುದೆ. ಗೊತ್ತಿಲ್ಲ!

ಕೆಂಪುಹುಡಿಮಣ್ಣಿನ ಮೂರು ಸುತ್ತು ಎಡಕ್ಕೆ ಹೊರಳುವ ನಾಲ್ಕು ಸುತ್ತು ಬಲಕ್ಕೆ ಹೊರಳುವ ದಾರಿ ಮುಗಿಯಿತು. ಈಗ ಕಪ್ಪುಮಣ್ಣಿನ ಬೇರೆ ತರಹದ ಮರಗಳ ದಟ್ಟಕಾಡುದಾರಿ. ಕಾಲಿಗೋ ಪುಳಕ! ದಾರಿ ಹೊರಳಿದಂತೆ ಹೊರಳುತ್ತಾ ನಡೆದೆ. ಸಣ್ಣ ಸಣ್ಣ ತಿರುವುಗಳು. ಎಡಬಲ ಎದೆಮಟ್ಟದ ಪೊದೆಗಳು. ಸಣ್ಣಸಣ್ಣ ಕಾಡುಹೂಗಳು, ಸಣ್ಣಸಣ್ಣ ಕಾಡುಹಣ್ಣುಗಳು. ಹಾವಿನಂತೆ ಸುರುಳಿಸುರುಳಿ ಸುತ್ತಿಕೊಂಡು ಮರವನ್ನೇ ಬಗ್ಗಿಸಿದಂತೆ ಮೇಲಿಂದ ತೇಲಾಡುವ ಬಳ್ಳಿಗಳು. ದಪ್ಪನೆಯ ಕಾಂಡದ ಮರಗಳ ಮೇಲೆ ಬೇರೆ ತರಹದ ಸಣ್ಣಸಣ್ಣ ಎಲೆಯ ಸಸ್ಯಗಳು. ಜೀವವೈವಿಧ್ಯದ ಸ್ಪಷ್ಟ ಮಾದರಿ.
ಇಂದ್ರಕುಮಾರ್ ಎಚ್.ಬಿ. ಹೊಸ ಕಾದಂಬರಿ “ಎತ್ತರ”ದ ಕೆಲ ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ