Advertisement

Category: ಪುಸ್ತಕ ಸಂಪಿಗೆ

ಪರಿಸರ ಕಾಳಜಿಯ ಸಾಮಾಜಿಕ ಕಾದಂಬರಿ

ಹಿರೇಕಲ್ಲುಗುಡ್ಡ ಅನೇಕ ವಿಷಯಗಳನ್ನು ಸಾಕ್ಷೀಕರಿಸುವ ಸಾಕ್ಷಾತ್ ಸಾಕ್ಷಿಕಲ್ಲೆಂದರೂ ಆದೀತು. ದೇವಸ್ಥಾನ, ಜೀವವೈವಿಧ್ಯತೆ, ಪಾಳುಬಂಗಲೆ, ಸನ್ಯಾಸಿಗಳ ಆಶ್ರಮತಾಣ, ಮುಕುಂದೂರುಸ್ವಾಮಿಗಳು ಬಂದು ಹೋಗುವ ಸ್ಥಳ, ಹಣದ ವ್ಯಾಮೋಹಕ್ಕೆ ಬಿದ್ದು, ಯಾವುದರ ಬೆಲೆಯನ್ನೂ ಅರಿಯದೆ ಚಿಪ್ಪುಹಂದಿ, ಹಾವುಗಳು ಇನ್ನಿತರ ಪ್ರಾಣಿಗಳನ್ನು ಹಿಡಿದು ಕಳ್ಳಸಾಗಣೆ ಮಾಡುವ ಪೆದ್ದು ಮುಖವಾಡದ ನಿರ್ದಯೀ ಪ್ರವೃತ್ತಿಯ ಕೆಂಚಪ್ಪನ ಕಾರಸ್ಥಾನ…. ಹೀಗೆ ಹಿರೇಕಲ್ಲುಗುಡ್ಡ ಕೆಟ್ಟ ರಾಜಕೀಯ, ಅಧ್ಯಾತ್ಮ, ಐತಿಹ್ಯ, ದುರಾಸೆಗಳ ಪ್ರತೀಕವಾಗಿ ನಿಲ್ಲುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ಅಬ್ಬೆ” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ಅಪ್ಪ ಇಲ್ಲವಾಗಿ…

ದಾರಿ ಸಾಗುತ್ತಾ ನಾವು ಪೊಲೀಸ್ ಸ್ಟೇಷನ್‌ ಬಳಿ ಬಂದಾಗ “ಅದೋ ಅಲ್ಲಿ ಮುಂದೆ ಬಲಕ್ಕೆ ತಿರುಗಿ ಅಲ್ಲೇ ಮನೆ” ಅಂದೆ. ಡ್ರೈವರ್ “ಒಹ್ ಸಾರ್ ಆ ಜ್ಯೂಸು ಮಾಡ್ತಾರಲ್ಲ ಅವರ ಮನೆಹತ್ರನಾ?” ಅಂತ ಕೇಳಿದ್ದನ್ನು ಕಂಡು ನಾನು ಅವಾಕ್ಕಾದೆ! “ಹೌದು ಅವರೇ ಇವರು, ನಮ್ಮಪ್ಪ!” ಅಂದೆ. ಅವನು ಕೊಂಚ ಸುಮ್ಮನಾದಂತೆ ಕಂಡು ನಂತರ “ಹೌದು ಸಾರ್, ಅದೇ ಅನ್ಕೊಂಡೆ ಈಗ ಒಂದು ೨-೩ ವರ್ಷಗಳಿಂದ ಅಂಗಡಿ ತಗಿತಾ ಇಲ್ವಲ್ಲ ಅಂತ, ಪಾಪ ಸಾರ್” ಅಂದ.
ದರ್ಶನ್‌ ಜಯಣ್ಣ ಬರೆದ ಪ್ರಬಂಧಗಳ ಸಂಕಲನ “ಅಪ್ಪನ ರ್ಯಾಲೀಸ್‌ ಸೈಕಲ್‌” ನಿಂದ ಒಂದು ಪ್ರಬಂಧ

Read More

ನೆನಪಾಗಿ ಉಳಿದ ಟ್ರೂತನ್

ರಸ್ತೆಯುದ್ದಕ್ಕೂ ಮೊದಲು ಸಿಗುವ ಸುಧಾಳನ್ನು ಮನೆಗೆ ಸೇರಿಸಿ, ನಂತರ ಚಿತ್ರ, ಎಲ್ಲರನ್ನೂ ಬಿಟ್ಟು ನಾನು ಮತ್ತು ರೇವಿ ಕಾಲೆಳೆದುಕೊಂಡು ಇ. ಎಸ್. ಐ ಹತ್ತಿರವಿದ್ದ ಮನೆ ಸೇರುವುದರಲ್ಲಿ 6 ಕಳೆದಿರುತ್ತಿತ್ತು. ಅಷ್ಟು ಹೊತ್ತಿಗೆ ಅಮ್ಮನನ್ನೇ ತಿನ್ನುವ ಘರ್ಜಿಸುವ ಹೆಣ್ಣು ಹುಲಿಯಾಗಿರುತ್ತಿದ್ದೆ! ನಾನು ರಸ್ತೆಯ ಮೂಲೆಯಲ್ಲಿ ತಿರುಗಿದೊಡನೆ ಎಲ್ಲರೂ ಸಿನೆಮಾದಲ್ಲಿ ರೌಡಿ ಬಂದಾಗ ಗುಸುಗುಸು ಮಾತನಾಡುತ್ತ ಮೌನವಾಗುತ್ತಾರಲ್ಲ… ಹಾಗೆ ಸೈಲೆಂಟು! ಮತ್ತೆ ಜಗತ್ತಿನ ಮಕ್ಕಳೆಲ್ಲ ಶಾಲೆ ಮುಗಿಸಿದ ಎರಡು ಗಂಟೆಗಳ ನಂತರ ಮನೆ ಸೇರುತ್ತಿದ್ದ ಘೋರ ಅನ್ಯಾಯ ಅನುಭವಿಸುತ್ತಿರುವಾಗ ಅವರೆಲ್ಲ ಖುಷಿಯಾಗಿ ನಗುತ್ತ ಇರುವುದು ಏನು ಕಡಿಮೆ ಅಪರಾಧವಾ?!
ಭಾರತಿ ಬಿ.ವಿ.ಯವರ “ಈ ಪ್ರೀತಿ ಒಂಥರಾ” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಎಲ್ಲಾ ಊರು ಕಂಡಮೇಲೆ….

ಬರೀ ಅಲ್ಲಿನ ಆಡಂಬರ ಅಥವಾ ವೈಭವೋಪೇತ ನೋಟಗಳನ್ನಷ್ಟೇ ನಮಗೆ ಉಣಬಡಿಸಲು ಇಚ್ಚಿಸದ ಪ್ರಕಾಶ್‌ರವರು ತಮ್ಮ ಪ್ರವಾಸದುದ್ದಕ್ಕೂ ಆದ ಕೆಲವೊಂದು ಆಕಸ್ಮಿಕ ಅನುಭವಗಳನ್ನೂ ನಮಗೆ ತಿಳಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದು ಅವುಗಳಲ್ಲಿ ಪ್ರವಾಸಿಗಳಿಗೆ ವಸತಿ ಮಾಡಲು ಅನುಕೂಲವಾಗಿರುವ ಸ್ಟುಡಿಯೋ ಪ್ಲಾಟ್‌ಗಳ ಕುರಿತಾದ ಪರಿಚಯ ಬರಹ, ಬೆಲ್ಜಿಯಂನ ಬಸ್ಸುಗಳಲ್ಲಿನ ಶೌಚಾಲಯ ವ್ಯವಸ್ಥೆಯ ಬಗ್ಗೆ, ಚಾಕೊಲೇಟ್ ವಿಲೇಜ್‌ನಲ್ಲಿ ಸಿದ್ಧವಾಗುವ ಹೋಮ್ ಮೇಡ್ ಚಾಕೊಲೇಟ್‌ಗಳ ಸ್ವಾದದ ಬಗ್ಗೆ, ರುಚಿಯಾದ ಸಸ್ಯಾಹಾರಿ ತಿನಿಸು ಫಲಾಫೆಲ್ ಬಗ್ಗೆಯೂ ಬರೆಯುತ್ತಾರೆ.
ಪ್ರಕಾಶ್ ಕೆ ನಾಡಿಗ್ ಬರೆದ “ನಾ ಕಂಡ ಯೂರೋಪ್ ಖಂಡ” ಪ್ರವಾಸ ಕಥನದ ಕುರಿತು ಪ.ನಾ. ಹಳ್ಳಿ ಹರೀಶ್‌ ಕುಮಾರ್‌ ಬರಹ

Read More

ಇಷ್ಟುಕಾಲ ಒಟ್ಟಿಗಿದ್ದು….

ಅವಳು ಚಿಕ್ಕವಳಿದ್ದಾಗ ಎರಡು ಮೂರು ಸಲ ಈ ಕಥೆಯನ್ನು ಕೇಳಿದ್ದಳು. ಅವಳ ಅಜ್ಜನ ಅಜ್ಜನ ಅಜ್ಜನ ಅಜ್ಜನ ಮನೆಯಲ್ಲಿ ತಂದೆತಾಯಿ ಇಲ್ಲದ, ಸಂಬಂಧಿಕರ ಒಂದು ಹೆಣ್ಣು ಮಗಳಿದ್ದಳಂತೆ. ಆಶ್ರಯವಿಲ್ಲದೆ ಇವರ ಮನೆ ಸೇರಿದ್ದ ಹುಡುಗಿ ಅವಳು. ಆಗಿನ ಸಂಪ್ರದಾಯದಂತೆ ಮೈನೆರೆಯುವ ಮೊದಲು ಹೆಣ್ಣುಮಕ್ಕಳ ಮದುವೆ ಮಾಡಿಬಿಡಬೇಕು. ಹಾಗೊಂದು ವೇಳೆ ಮದುವೆಗೆ ಮೊದಲೇ ಹೆಣ್ಣು ಮಗು ನೆರೆದರೆ, ಮನೆತನಕ್ಕೆ ಕೆಟ್ಟದ್ದು ಎಂದು ಅವಳನ್ನು ಊರಾಚೆ, ಕಾಡಿನಲ್ಲಿ ಬಿಟ್ಟು ಬಂದುಬಿಡುತ್ತಿದ್ದರಂತೆ. ಆದರೆ ಅಷ್ಟು ಸುಲಭವೆ ಹೊಟ್ಟೆಯ ಕೂಸನ್ನು ಕಾಡಿನಲ್ಲಿ ಬಿಡುವುದು?
ಎನ್. ಸಂಧ್ಯಾ‌ ರಾಣಿ ಹೊಸ ಕಾದಂಬರಿ “ಇಷ್ಟುಕಾಲ ಒಟ್ಟಿಗಿದ್ದು” ಯಿಂದ ಆಯ್ದ ಭಾಗ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ