Advertisement

Category: ಪುಸ್ತಕ ಸಂಪಿಗೆ

ಸರಳ ವಡ್ಡಾರಧನೆ ಎಂಬೊಂದು ಕೈದೀವಿಗೆ

ವಡ್ಡಾರಾಧನೆಯಲ್ಲಿ ಬರುವ ಜನಜೀವನ, ಜಾತಿವ್ಯವಸ್ಥೆ, ಸಮಾಜದಲ್ಲಿ ಸ್ತ್ರೀಯರ ಸ್ಥಾನಮಾನ, ಗ್ರಾಮ ಮತ್ತು ಪಟ್ಟಣದ ವರ್ಣನೆ, ತಿಂಡಿತಿನಿಸುಗಳು, ಬಹು ಮಹಡಿ ಕಟ್ಟಡದ ಬೀದಿಗಳು, ವೇಶ್ಯೆಯರ ಬೀದಿಯವರ್ಣನೆ, ಅಂಗಡಿ ಮುಂಗಟ್ಟುಗಳು ಇವೆಲ್ಲಾ ಆ ಕಾಲದ ಒಂದು ವ್ಯವಸ್ಥೆಯನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸುತ್ತವೆ. ಇವುಗಳನ್ನೆಲ್ಲಾ ಅನುವಾದಿಸಿರುವಲ್ಲಿ ಮೂಲದ ಶಬ್ಧದ ಮಿತಿಯನ್ನು ದಾಟದಿರುವದನ್ನು ಕಾಣಬಹುದಾಗಿದೆ. ಡಾ. ಕಬ್ಬಿನಾಲೆ ವಸಂತ ಭಾರದ್ವಾಜರು ಇಲ್ಲಿ ಭಾಷೆಯನ್ನು ದುಡಿಸಿಕೊಳ್ಳುವ ರೀತಿ ಮನೋಜ್ಞವಾಗಿದೆ ಎನ್ನುತ್ತ ಸರಳ ವಡ್ಡಾರಧನೆ ಕುರಿತ ಅನಿಸಿಕೆಯನ್ನು ನಾರಾಯಣ ಯಾಜಿ ಅವರು ಇಲ್ಲಿ ಪ್ರಸ್ತುತಪಡಿಸಿದ್ದಾರೆ.

Read More

ಹೊಸ ತಲೆಮಾರಿನ ಕಥೆಗಳು

‘ಕೊನೇ ಊಟ’ ಈ ಸಂಕಲನದ ಅತ್ಯಂತ ಮುಖ್ಯವಾದ ಅಷ್ಟೇ ಹೃದಯಸ್ಪರ್ಶಿ ಕಥೆ. ಸಂಯುಕ್ತ ಸಂಸ್ಥಾನಗಳ ನೇವಾರ್ಡ ರಾಜ್ಯದಲ್ಲಿ ಪೂರ್ವಕ್ಕಿರುವ ಕುಪ್ರಸಿದ್ಧ ಕಾರಾಗೃಹ ಈಲಿಯ ಜೈಲು. ಜೈಲಿನ ಸುತ್ತಲಿನ ಗೋಡೆಯನ್ನು ಹರಿತವಾದ ರೇಜರ್ ಬ್ಲೇಡುಗಳಿಂದ ನಿರ್ಮಿಸಿದ್ದಾರೆಂದರೆ ಒಳಗಡೆ ಇನ್ನೆಷ್ಟು ಭಯಾನಕ ಯಾತನಾಮಯ ದಬ್ಬಾಳಿಕೆ ನಡೆದಿರುತ್ತದೆಯೆಂಬುದು ಕೇವಲ ಊಹೆಗೆ ಬಿಟ್ಟ ವಿಷಯ, ಯಾವ ಕೈದಿಯೂ ಇಲ್ಲಿಂದ ಜೀವಂತ ಬಿಡುಗಡೆಯಾಗಿ ಹೊರಗೆ ಬಂದಿಲ್ಲ ಅಥವಾ ಗೋಡೆ ಜಿಗಿದು ಪಾರಾಗಿ ಓಡಿಹೋಗಿಲ್ಲ..
ಕಾವ್ಯಾ ಕಡಮೆ ಕಥಾ ಸಂಕಲನ “ಮಾಕೋನ ಏಕಾಂತ”ದ ಕುರಿತು ವಿಶ್ಲೇಷಣೆ ಬರೆದಿದ್ದಾರೆ ವ್ಯಾಸ ದೇಶಪಾಂಡೆ 

Read More

ಪ್ರಗತಿಶೀಲತೆಯ ಪ್ರಬಲ ಧ್ವನಿ ‘ಕಾರಾವಾನ್’

ರೈಲಿನಲ್ಲಿ ಪ್ರಯಾಣಿಸುವಾಗ ನಿರೂಪಕನ ಕಣ್ಣಿಗೆ ಬಿದ್ದ ಸಂಸಾರವನ್ನು ‘ಕಣ್ಣೀರ ಸಂಸಾರ’ ಎಂದೇ ಬಿಂಬಿಸುವುದರ ಮೂಲಕ ಅಂದಿನ ವಾಸ್ತವ ಪ್ರಪಂಚವನ್ನು ಓದುಗರಿಗೆ ಅರ್ಥೈಸಲು ಈ ಕೃತಿಯು ಪ್ರಯತ್ನಿಸುತ್ತದೆ. ಸ್ವಾತಂತ್ರ್ಯ ಚಳವಳಿಯ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬ್ರಿಟಿಷರಿಂದ ಶಿಕ್ಷೆಗೊಳಗಾಗಿ, ಆರು ತಿಂಗಳುಗಳನ್ನು ಹಿಂಡಲಗ ಸೆರೆಮನೆಯಲ್ಲಿ ಕಳೆದು, ಅಲ್ಲಿಂದ ತಿರುಗಿ ರೈಲಿನಲ್ಲಿ ತಮ್ಮೂರಿಗೆ ಬರುವ ಹಾದಿಯನ್ನೇ ಲೇಖಕರು ‘ಕಾರವಾನ್’ ಕಥನದ ಅನಾವರಣಕ್ಕೆ ಬಳಸಿಕೊಂಡಿದ್ದಾರೆ. ಬಸವರಾಜ ಕಟ್ಟೀಮನಿಯವರ ಕಾರವಾನ್ ಕತೆಯ ಕುರಿತು ಸುಮಾವೀಣಾ ಅವರ ಬರಹ ಇಲ್ಲಿದೆ.

Read More

ಮಹಿಳಾ ಜನಪದ ಸಾಹಿತ್ಯ: ಚರಿತ್ರೀಕರಣದ ಸವಾಲು

ಜನಪದ ಸಾಹಿತ್ಯ ಅಧ್ಯಯನಗಳು ನಡೆದದ್ದು ಮೌಖಿಕ ಮೂಲದಲ್ಲಿದ್ದ ಜನಪದ ಸಾಹಿತ್ಯ ಬರವಣಿಗೆಯಲ್ಲಿ ಘನೀಕರಿಸಿದಾಗಿನಿಂದ, ಜನಪದ ಸಾಹಿತ್ಯವು ಹೀಗೆ ಬರವಣಿಗೆಯಲ್ಲಿ ಘನೀಕರಿಸುವಾಗ ಅದು ಅನೇಕ ಮಾರ್ಪಾಡುಗಳಿಗೆ ಒಳಗಾಗುತ್ತದೆ. ಜನಪದ ಸಾಹಿತ್ಯದಲ್ಲಿ ಉಂಟಾಗುವ ಇಂತಹ ಮಾರ್ಪಾಡುಗಳನ್ನು ನಾರಾಯಣ ಕೆ.ವಿ. ಅವರು ನಾಲ್ಕು ಮಾದರಿಗಳಲ್ಲಿ ಗುರುತಿಸುತ್ತಾರೆ. ಅವುಗಳಲ್ಲಿ ಮೊದಲನೆಯದು “ಇಲ್ಲದ ಮೌಖಿಕ ಸಂಕಥನವನ್ನು ಇದೆ ಎಂದು ಭ್ರಮೆ ಹುಟ್ಟಿಸುವ ರೀತಿಯಲ್ಲಿ ರಚಿಸಿಕೊಟ್ಟ ದಾಖಲೆಗಳು ನಮಗೆ ಸಿಗುತ್ತವೆ.
ಡಾ.ಶೈಲಜ ಇಂ.ಹಿರೇಮಠ ಬರೆದ “ನಿರೂಪಣೆಯಾಚೆಗೆ (ಜನಪದ ಸಾಹಿತ್ಯ ಮತ್ತು ಮಹಿಳೆ)” ಪುಸ್ತಕದ ಒಂದು ಬರಹ ನಿಮ್ಮ ಓದಿಗೆ

Read More

ಈ ಮಳೆಗಾಲ ನಮ್ಮದಲ್ಲ…

ಚಲಂ ಕವಿತೆಗಳ ಸಾಂಗತ್ಯ  ಕಡಲ ಮೇಲಿನ ಹಾದಿ. ಅನುಭಾವವನ್ನು ಹುಟ್ಟುಹಾಕುವ ನೀರ ಮೇಲಿನ ಪಯಣ. ಒಮ್ಮೆ ಇದು ಆರಂಭವಾದರೆ ದಿಕ್ಸೂಚಿಯಿಂದ ದಿಕ್ಕನ್ನು ತಿಳಿಯಬೇಕೆ ಹೊರತು ಕಣ್ಣಳತೆಗೆ ನಮಗೆ ಯಾವ ಮಾಹಿತಿಯೂ ದಕ್ಕುವುದಿಲ್ಲ. ಸ್ವಭಾವತಃ ವಾಚಾಳಿಯಲ್ಲದ ಚಲಂ ಅಷ್ಟೇನೂ ಔಟ್ಗೋಯಿಂಗ್ ಅಲ್ಲದ ಅಂತರ್ಮುಖಿ‌. ಅಂತೆಯೇ ಅವರ ಕವಿತೆಗಳೂ.ಕಡಲು ದಡಕ್ಕನೆ ತಂದು ಅಪ್ಪಳಿಸಿದ ಕಪ್ಪೆಚಿಪ್ಪುಗಳಲ್ಲ ಇಲ್ಲಿನ ಕವಿತೆಗಳು. ತಣ್ಣಗೆ ಹರಿವ ನದಿಯೊಳಗೆ ನುರಿದು ಅವಾಗೇ ನುಣ್ಣಗಾದ ನಯಸ್ಸು ಕಲ್ಲಿನಂತವು.
ಚಲಂ ಹಾಡ್ಲಹಳ್ಳಿಯವರ “ಈ ಮಳೆಗಾಲ ನಮ್ಮದಲ್ಲ” ಕವನ ಸಂಕಲನದ ಕುರಿತು ದಯಾ ಗಂಗನಘಟ್ಟ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ