Advertisement

Category: ಪುಸ್ತಕ ಸಂಪಿಗೆ

ಬಾಳಿನ ಸಂತೆಯಲ್ಲಿ ಗಜಲ್ ಧ್ಯಾನ..

ಕಲೆ ಎಂಬುದು ನಿಸರ್ಗದ ಒಂದು ಅನುಪಮ ಅಭಿವ್ಯಕ್ತಿ. ಕಲೆಯ ಚಂದ್ರಚಾಪದ ಮುಖ್ಯ ಬಣ್ಣವೆಂದರೆ ಅದು ಸಾಹಿತ್ಯ. ಇದು ಓದು-ಬರಹಗಳ ಮಧುಚಂದ್ರ!! ಬರವಣಿಗೆ ಎನ್ನುವುದು ಖಾಲಿ ಹಾಳೆಯ ಮೇಲೆ ಬಿಡಿಸಿರುವ ಸುಂದರ ರಂಗೋಲಿ. ಆ ರಂಗೋಲಿಯೋ ಅನನ್ಯ ಭಾವನೆಗಳ ಕಾರವಾನ್. ಆ ಕಾರವಾನ್ ನ ಪ್ರವೇಶಿಸಿ ಓದುವುದೆಂದರೆ ಅದೊಂದು ರೀತಿಯ ಮಾಗಿದ ಕಾಯುವಿಕೆ. ಈ ಕಾಯುವಿಕೆ, ಕನವರಿಕೆ ಒಂದು ಸಾಲಿನಿಂದ ಮತ್ತೊಂದು ಸಾಲಿಗೆ ಸದಾ ಚಲಿಸುತ್ತಿರುತ್ತದೆ, ಚಲಿಸುತ್ತಿರಬೇಕು.
ಶ್ರೀದೇವಿ ಕೆರೆಮನೆಯವರ ಗಝಲ್‌ಗಳ ವಿಶ್ಲೇಷಣೆ ಸಂಕಲನ “ತೀರದ ಧ್ಯಾನ” ಕೃತಿಗೆ ಡಾ. ಮಲ್ಲಿನಾಥ ಶಿ. ತಳವಾರ ಅವರು ಬರೆದ ಮುನ್ನುಡಿ

Read More

ಇವಾನ್ ಬುನಿನ್: ಭೌತ ವಸ್ತುಗಳ ಭಾವಗೀತಕಾರ

ಬುನಿನ್ನನ ಗದ್ಯ ಅವನನ್ನು ಹತ್ತೊಂಭತ್ತನೇ ಶತಮಾನದ ರಷ್ಯನ್ ಸಾಹಿತಿಕ ಸಂಪ್ರದಾಯದ ಮುಖ್ಯವಾಹಿನಿಯಲ್ಲಿ ಸ್ಪಷ್ಟವಾಗಿ ಎದ್ದು ಕಾಣುವಂತೆ ಮಾಡಿದೆ. ಟಾಲ್‍ಸ್ಟಾಯ್, ಟರ್ಜೆನೇವ್, ಚೆಕಾಫ್ ಮತ್ತು ಗಂಚರೋಫ್ ನಿಸ್ಸಂದೇಹವಾಗಿ ಇವನ ಮೂಲಪುರುಷರಾಗಿದ್ದಾರೆ. `ಎ ಹಿಸ್ಟರಿ ಆಫ್ ರಷ್ಯನ್ ಲಿಟರೇಚರ್’ನಲ್ಲಿ ಮರ್‍ಸ್ಕೀ ಅನ್ನುವವನು ಹೇಳುವಂತೆ: ಬುನಿನ್ನನ ಭಾಷೆ `ಕ್ಲಾಸಿಕಲ್’, ಮಿತವಾದ್ದು, ಸಮಚಿತ್ತವಾದ್ದು, ಮೂರ್ತವಾದದ್ದು…
ರಷ್ಯಾದ ಹೆಸರಾಂತ ಲೇಖಕ ಇವಾನ್‌ ಬುನಿನ್‌ನ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದದ್ದು, ಈ ಸಂಕಲನಕ್ಕೆ ಬುನಿನ್‌ ಕುರಿತಾಗಿ ಬರೆದ ಅವರ ಮಾತುಗಳು ಇಲ್ಲಿವೆ

Read More

ಕೃಷ್ಣ ಸಾಕ್ಷಾತ್ಕಾರ ಮಾಡಿಸುವ ಅಪರೂಪದ ಖಂಡಕಾವ್ಯ

ಭಾಗವತದ ವಿಷಯ ಬಂದಾಗ ನೆನಪಾಗುವದು ಕೃಷ್ಣ ಮತ್ತು ಗೋಪಿಕೆಯರ ರಾಸಲೀಲೆ. ಯಮುನಾ ನದಿಯ ತಟದಲ್ಲಿರುವ ಬೃಂದಾವನ, ಗೋಪಿಕಾ ಸ್ತ್ರೀಯರು ಮತ್ತು ಕೃಷ್ಣ ಇವೆಲ್ಲವೂ ಅವಿನಾಭಾವ ಸಂಬಂಧವನ್ನು ಹೊಂದಿರುವಂತವು. ಇಲ್ಲಿ ದಾಸ ದಾಸಿಯ ಭೇದಗಳಿಲ್ಲ. ಯಾರದೋ ಮಗಳು, ಮತ್ಯಾರದೋ ಹೆಂಡತಿ, ಇನ್ಯಾರದೋ ಸಹೋದರಿಯೋ ಆಗಿರುವವರೆಲ್ಲ ತಮ್ಮ ಅಸ್ತಿತ್ವವನ್ನು ಮರೆತು ಕೃಷ್ಣನಲ್ಲಿ ಒಂದಾಗುವ ಅದ್ವೈತೀ ಭಾವ. ಕೃಷ್ಣನೂ ಸಹ ತಾನು ದೇವನೆನ್ನುವದನ್ನು ಮರೆತು ರಾಸಲೀಲೆಯಲ್ಲಿ ಮುಳುಗಿಬಿಡುತ್ತಾನೆ.
ಪ್ರೊ. ಕೆ.ಇ. ರಾಧಾಕೃಷ್ಣ ಅವರ “ಗೋಪಿಕೋನ್ಮಾದ” ಕೃತಿಯ ಕುರಿತು ನಾರಾಯಣ ಯಾಜಿ ಬರಹ

Read More

ಕನ್ನಡಕ್ಕೆ ಬಂದ ತೆಲುಗಿನ ಕತೆಗಳ ಮುನ್ನುಡಿಯಿದು

ಜಾಗತಿಕ ಮುಕ್ತ ಮಾರುಕಟ್ಟೆಯ ಕಬಂಧ ಬಾಹುಗಳು ದೇಶದ ಅಧಿಕಾರಶಾಹಿಗಳ ಸ್ವಾರ್ಥ ರಾಜಕಾರಣದ ಬೆಂಬಲದೊಂದಿಗೆ ಚಾಚಿಕೊಂಡದ್ದರಿಂದಾಗಿ ರೈತರ ಬದುಕು ಮೂರಾಬಟ್ಟೆಯಾದ ಕಥೆಯನ್ನು ಹೇಳುವ ‘ಕೈಗೊಂಬೆ’, ಬೆವರು ಸುರಿಸಿ ಪ್ರಾಮಾಣಿಕವಾಗಿ ದುಡಿಯುವ ಶ್ರಮಜೀವಿಗಳ ಕಷ್ಟದ ದುಡಿಮೆಯನ್ನು ಸೊಳ್ಳೆಗಳು ರಕ್ತ ಹೀರುವಂತೆ ದರೋಡೆಗೈದು ಅವರ ಬದುಕನ್ನು ನರಕಸದೃಶವಾಗಿಸುವ ಭ್ರಷ್ಟಾಚಾರಿ ಅಧಿಕಾರಿವರ್ಗದವರ ಅನ್ಯಾಯದ ಜಾಲವನ್ನೂ ಅಲ್ಲಿ ಸೃಷ್ಟಿಯಾಗುವ ಹೃದಯವಿದ್ರಾವಕ ಸನ್ನಿವೇಶಗಳನ್ನೂ ಕಣ್ಣಿಗೆ ಕಟ್ಟುವಂತೆ ಚಿತ್ರಿಸುವ ಕಥೆ ‘ನಿಗೂಢ ಹಸ್ತಗಳು’.
ತೆಲುಗು ಕತೆಗಾರ ಪೆದ್ದಿಂಟಿ ಅಶೋಕ್‌ ಕುಮಾರ್‌ ಅವರ ಒಂದಷ್ಟು ಕತೆಗಳನ್ನು “ಜಾಲ” ಎಂಬ ಸಂಕಲನದ ಮೂಲಕ ಎಂ.ಜಿ. ಶುಭಮಂಗಳ ಕನ್ನಡಕ್ಕೆ ತಂದಿದ್ದು, ಅದಕ್ಕೆ ಡಾ. ಪಾರ್ವತಿ ಜಿ. ಐತಾಳರು ಬರೆದ ಮುನ್ನುಡಿ ಇಲ್ಲಿದೆ.

Read More

ಸುಮ್ಮನಿರುವುದು ಸಾಧ್ಯವಿಲ್ಲ ಎನ್ನುವ ಮಹಾಭಾರತ ಕತೆ

ಮನುಷ್ಯರು ಒಳ್ಳೆಯ ವಿಚಾರಗಳನ್ನೇ ಆಯ್ಕೆ ಮಾಡಿ ಅದೇ ದಾರಿಯಲ್ಲಿ ನಡೆಯಲು ಸಾಯುಜ್ಯ, ಮೋಕ್ಷ ಎಂಬ ಪರಿಕಲ್ಪನೆಗಳನ್ನು ಹಿರಿಯರು ಪ್ರತಿಪಾದಿಸಿದ್ದಾರೆ. ದೇವರು ಎಂಬ ಪರಿಕಲ್ಪನೆಯೂ ಇದೇ ಮಾದರಿಯದು ಎಂದೇ ಇಟ್ಟುಕೊಳ್ಳುವುದಾರೆ, ದೇವರನ್ನು ತಲುಪಲು ಎರಡು ದಾರಿಗಳನ್ನು ಆಯ್ಕೆ ಮಾಡಿಕೊಂಡಿರುವುದು ಪ್ರಧಾನವಾಗಿ ತೋರುತ್ತದೆ. ತಪಸ್ಸು, ಅಧ್ಯಯನ ಅನುಶಾಸನದಂತಹ ವಿಧಾನಗಳು ಒಂದು ದಾರಿ. ಹಾಡು, ನೃತ್ಯ, ಚಿತ್ರ ಮುಂತಾದ ಲಲಿತಕಲೆಗಳ ಮೂಲಕ ನಡೆಯುವ ದೇವರ ಆರಾಧನೆಯು ಇನ್ನೊಂದು ದಾರಿ. ಎರಡೂ ದಾರಿಯನ್ನು ಸದೃಢಗೊಳಿಸಲು ಆಧಾರವಾಗಿ ನಿಲ್ಲುವುದು ಭಾರತ ಕತೆ. ಅದು ಸರಳವಾದ ಓದಿಗೆ ದಕ್ಕುವುದು ವಚನ ಭಾರತ ವೆಂಬ ಕೃತಿಯಲ್ಲಿ. ‘ವಚನ ಭಾರತ’ ಪುಸ್ತಕದ ಓದಿನ ನೆನಪುಗಳನ್ನು ಉಲ್ಲೇಖಿಸಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ