Advertisement

Category: ಪುಸ್ತಕ ಸಂಪಿಗೆ

‘ಅಮ್ಮನ್ ಮನೆ ಅಪೀ. ಹೆದರ್ಕ್ಯಳಡʼ…: ಜಯರಾಮ ಹೆಗಡೆ ಜೀವನ ಕಥನದ ಆಯ್ದ ಭಾಗ

ಜಯರಾಮ ಹೊರಗೆ ಬಂದು ಮಡಿ ಬಿಚ್ಚಿ ಅಂಗಿ ಚಡ್ಡಿ ಹಾಕಿಕೊಳ್ಳುವಾಗಲೂ ಕೈ ಕಾಲು ನಡುಕ ಹೋಗಿಲ್ಲ. ಹೊರಬಂದ ಮೇಲೆ ಹೊರಾಂಗಣದಿಂದಲೇ ಒಂದು ಸುತ್ತು ಪ್ರದಕ್ಷಿಣಿ ಹಾಕಿ ದೇವರಿಗೆ ಒಂದು ಸಲ ಕೈಮುಗಿದು ಹೋಗುವುದು ರೂಢಿ. ಹಾಗೇ ಇವನೂ ಆಚೀಚೆ ನೋಡದೆ ಸುತ್ತು ಪ್ರದಕ್ಷಿಣೆ ಬರುತ್ತಿದ್ದಾನೆ. ಏಕಾಏಕಿ ದೇವಾಲಯದ ಮೇಲ್ಛಾವಣಿಯ ಕಡೆ ದೃಷ್ಟಿ ಹೋದಾಗ ಏನನ್ನು ಕಾಣುತ್ತಾನೆ? ನಾನಾ ವಿಧದ ಹಾವುಗಳು ನೇತಾಡುತ್ತಿವೆ. ಅವವುಗಳೇ ಜೊತೆಯಾಟ ಆಡುತ್ತಿವೆ.
ಜಯರಾಮ ಹೆಗಡೆ ಜೀವನ ಕಥನ ‘ಬೀದಿಯ ಬದುಕು’ ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಖಂಡಕಾವ್ಯಕ್ಕೊಂದು ಪ್ರವೇಶ: ಯು.ಆರ್.ಅನಂತಮೂರ್ತಿ ಮುನ್ನುಡಿ

ಆತ್ಮ ಸಫಲತೆಗಾಗಿ ಆತ್ಮಾರ್ಪಣೆ ಮಾಡಿಕೊಳ್ಳುವ ಹೆಣ್ಣು ಪ್ರಣಯಿನಿಯಾಗಿಯೂ, ಹೆಂಡತಿಯಾಗಿಯೂ, ಮಗಳಾಗಿಯೂ, ತಾಯಿಯಾಗಿಯೂ, ‘ಬಜಾರಿ’ಯಾಗಿಯೂ ಅವನಿಗೆ ಒದಗುತ್ತಾಳೆ. ಇದನ್ನು ನಟಿಸಿ ತೋರಲು ತೇಜಶ್ರೀ ಕವನದಲ್ಲಿ ಒಂದು ಅಪರೂಪದ ಕಾವ್ಯ ಪ್ರಯೋಗವಿದೆ. ಇಲ್ಲಿ ಬರುವ ಅವನು ಪುರಾಣದ ಕೃಷ್ಣನೂ ಹೌದು, ನಿಜದ ಅವನೂ ಹೌದು. ಹಾಗೆಯೇ ರಾಧೆ ಪುರಾಣದ ರಾಧೆಯೂ ಹೌದು, ನಿಜದ ಅವಳೂ ಹೌದು. ಈ ಎರಡು ಸತ್ಯಗಳೂ ಒಟ್ಟಾಗಿ ನಮಗೆ ಭಾಸವಾಗುವುದರಿಂದ ಸಾಮಾಜಿಕ ಸಾಂಸಾರಿಕ ನೀತಿ ಅನೀತಿಗಳನ್ನು ಈ ಕವನ ಮೀರುತ್ತದೆ.
ಜ.ನಾ. ತೇಜಶ್ರೀ ಖಂಡಕಾವ್ಯ “ಅವನರಿವಲ್ಲಿ” ಕೃತಿಗೆ ಯು.ಆರ್.‌ ಅನಂತಮೂರ್ತಿ ಮುನ್ನುಡಿ

Read More

ದುಃಖಾಂತ ಪಾತ್ರಗಳ ಬಿಕ್ಕುಗಳ ಸಂಕಲನ: ಶುಭಶ್ರೀ ಕಥಾಸಂಕಲನಕ್ಕೆ ವಿಕಾಸ ನೇಗಿಲೋಣಿ ಮುನ್ನುಡಿ

ಶುಭಶ್ರೀ ಬಳಸುವ ಭಾಷೆ ಬಹುತೇಕ ಉತ್ತರ ಕನ್ನಡದ ಕೆಳ ಸಮುದಾಯದ್ದು. ಜೊತೆಗೆ ಮಕ್ಕಳಾಗದವರ ಬಿಕ್ಕು, ಗಂಡನ ದೌರ್ಬಲ್ಯದ ನೆರಳಲ್ಲಿ ನರಳುವ ಹೆಣ್ಮಕ್ಕಳ ಬಿಕ್ಕು, ಮನೆ ತೊರೆದು ಹೋದವರ ನರಳುಗಳನ್ನೆಲ್ಲಾ ಗದ್ಗದಿತ ಕೊರಳಿನಿಂದ ಹೇಳುತ್ತಾ ಹೋಗುತ್ತಾರೆ. ಸಂಕಲನದ ಅತ್ಯಂತ ಗಾಢ ಕತೆಯೆಂದರೆ ‘ಹಗಲು ವೇಷ’. ಮನೆ ತೊರೆದು, ಅನ್ಯ ಕೋಮಿನ ಹುಡುಗನನ್ನು ಮದುವೆಯಾಗಿ, ನರಳುವ ಹೆಣ್ಮಗಳೊಬ್ಬಳ ಚಿತ್ರಣ ಇರುವ ಆ ಕತೆಯಲ್ಲಿ ಧರ್ಮ ಅಥವಾ ದ್ವೇಷದ ಸೋಂಕು ಇಲ್ಲದೇ, ಜಡ್ಜ್ ಮೆಂಟಲ್ ಕೂಡ ಆಗದಂತೆ ಹೆಣ್ಣೊಬ್ಬಳ ಅಂತಃಕರಣದಿಂದ ಆಯೇಷಾ ಅನ್ನುವ ಪಾತ್ರವನ್ನು ಕತೆಗಾರ್ತಿ ನಿರ್ವಹಿಸಿದ ಮೆಚ್ಚುವಂತಿದೆ.
ಶುಭಶ್ರೀ ಭಟ್ಟ ಹೊಸ ಕಥಾಸಂಕಲನ “ಬಿದಿಗೆ ಚಂದ್ರಮನ ಬಿಕ್ಕು” ಕೃತಿಗೆ ವಿಕಾಸ್‌ ನೇಗಿಲೋಣಿ ಬರೆದ ಮುನ್ನುಡಿ

Read More

ಕಾಣುತ್ತಿಲ್ಲವೇ ಅಲ್ಲಿ ಗೋದಿನಾಗರ…: ಡಾ. ಕೆ.ಬಿ. ಶ್ರೀಧರ್ ಕಾದಂಬರಿಯ ಪುಟಗಳು

ಪಲ್ಲವಿಯು ಮುಟ್ಟಿದಲ್ಲೆಲ್ಲಾ ರೋಹಿಣಿಯು ಸಡಿಲಗೊಂಡಳು. ಗಟ್ಟಿಯಾದ ಮೇಣವು ಬೆಂಕಿಯ ಕಾವಿಗೆ ಮೆತ್ತಗಾಗುವಂತೆ… ಗೌತಮನಿಗೆ ನಂಬಲಾಗಲಿಲ್ಲ, ಅರ್ಥವೂ ಆಗಲಿಲ್ಲ. ತನಗರಿಯದ ಯಾವುದೋ ಭಾಷೆಯಲ್ಲಿ ಇವರಿಬ್ಬರು ಸಂವಹಿಸುತ್ತಿದ್ದಾರೆ ಎಂದೆನಿಸಿತು. ಬಗೆಹರಿದಂತೆ ಕಂಡಿದ್ದ ಅನುಮಾನವು ಬುಗ್ಗೆಂದು ಹೊತ್ತಿಕೊಂಡಿತು. ಮೂತ್ರಕ್ಕೆ ಅವಸರವಾದಂತಾಗಿ ಬಚ್ಚಲ ಮನೆಗೆ ಓಡಿದ. ಪಲ್ಲವಿಯು ಮೆಲ್ಲಮೆಲ್ಲನೆ ರೋಹಿಣಿಯನ್ನು ನಡೆಸುತ್ತಾ ಮನೆಯೊಳಗೆ ಕರೆದುಕೊಂಡು ಬಂದು, ಸೋಫಾ ಮೇಲೆ ಕೂರಿಸಿದಳು.
ಡಾ. ಕೆ.ಬಿ. ಶ್ರೀಧರ್ ಹೊಸ ಕಾದಂಬರಿ “ಅನೂಹ್ಯ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕಾವ್ಯ ಸಂಚಾರಿಣಿ ಮಮತಾ ಸಾಗರ: ಬಾನು ಮುಷ್ತಾಕ್ ಮುನ್ನುಡಿ

ಮಮತಾ ಸಾಗರ್‌ ಭಾಷೆಯಲ್ಲಿ ಹೇಳುವುದಾದರೆ ಆಕೆಯ ಪದಸಂಚಾರದ ಲಯ, ಗತಿ, ಭಾವ, ಅರ್ಥ ವ್ಯಾಪ್ತಿ ಮತ್ತು ಭಾಷೆಯ ನಿಲ್ಲದ ಪಯಣ ಕವಿಯತ್ರಿಯಂತೆಯೆ ಆಕೆಯ ಪದಗಳು ಕೂಡ ನಿರಂತರ ಸಂಚಾರದಲ್ಲಿರುತ್ತವೆ. ಹೀಗಾಗಿ ಆಕೆಯ ಭಾವನೆ ಮತ್ತು ಭಾವತೀವ್ರತೆಗಳಿಗೆ ಜಡ್ಡು ಮತ್ತು ಜಿಡ್ಡು ಹಬ್ಬಿಲ್ಲ. ಕೆಲವೆಡೆ ಪ್ರಖರವಾಗಿ ಇಡೀ ಆಸ್ತಿತ್ವವನೆ ಕಲಕುವ ಸಾಲುಗಳು ಯರ್ರಾ ಬಿರ್ರಿ ಕಲ್ಲು ಮಳೆಗರೆದಂತೆ ಮತ್ತೊಮ್ಮೆ ಪುಷ್ಪ ವೃಷ್ಟಿಯಂತೆ ಮತ್ತೊಮೆ ತಣ್ಣಗೆ ಕರಗುವ ಮಂಜಿನ ಕಠಾರಿ ಆಳವಾಗಿ ಎದೆಗಿಳಿದಂತೆ ಕಾಡುತ್ತಲೇ ಹೋಗುತ್ತವೆ.
ಮಮತಾ ಜಿ. ಸಾಗರ ಇಲ್ಲಿಯವರೆಗಿನ ಕವಿತೆಗಳ ಸಂಕಲನ “ಪದಸಂಚಾರ”ಕ್ಕೆ ಬಾನು ಮುಷ್ತಾಕ್‌ ಬರೆದ ಮುನ್ನುಡಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ