Advertisement

Category: ಪ್ರವಾಸ

ಮನದೊಳಗೆ ಅಚ್ಚಾಗಿದೆ ಸ್ಲೊವೇನಿಯಾ ಫೋಟೊಫ್ರೇಮ್

ಜಸ್ನಾ ಸರೋವರದ ಪ್ರವಾಸಿಗರಿಗೆ ಒಂದು ಅನಿರೀಕ್ಷಿತ ಉಡುಗೊರೆ ಕಾದಿರುತ್ತದೆ. ಅದು ಇಲ್ಲಿನ ಪ್ರಮುಖ ಆಕರ್ಷಣೆ – ಫೋಟೋ ಫ್ರೇಮ್! ಇಲ್ಲಿ ಬರುವ ಪ್ರವಾಸಿಗಳಿಗೆ ಫೋಟೊಗೋಸ್ಕರವಾಗಿ ಮರದಲ್ಲಿ ಮಾಡಿದ ಒಂದು ಸುಂದರವಾದ ಫೋಟೋ ಫ್ರೇಮ್ ಇದೆ. ಅದರ ಕೊನೆಯಲ್ಲಿ ಸ್ಲೋವೇನಿಯಾದ ಅಜ್ಜ ಪ್ರತಿಯೊಬ್ಬರ ಜೊತೆಗೂ ನೆನಪಾಗಿ ಅವರವರ ಮನೆಗಳಿಗೆ ತೆರಳುತ್ತಾನೆ. ನಾವೆಲ್ಲರೂ ಕೂತು ತೆಗೆಸಿಕೊಂಡಿರುವ ಫೋಟೋ ನೋಡಿದರೆ ನಿಮಗೊಂದು ಕ್ಷಣಕ್ಕೆ ಅಚ್ಚರಿಯಾಗುವುದು ಖಚಿತ. ಆ ಅಜ್ಜ ನಮ್ಮಲ್ಲಿಯ ಯಾರೋ ಒಬ್ಬರು ಎಂಬಂತೆ ಕಾಣುವಷ್ಟು ಚೆನ್ನಾಗಿ ಮೂಡಿ ಬಂದಿರುವ ಕೆತ್ತನೆಯ ಕಲಾವಿದನಿಗೆ ಹಾಗೂ ಈ ಕಲ್ಪನೆಯನ್ನು ಸಾಕಾರಗೊಳಿಸಿದ ಇಲ್ಲಿಯ ಪ್ರವಾಸೋದ್ಯಮ ಇಲಾಖೆಗೆ ನನ್ನ ಧನ್ಯವಾದಗಳು.

Read More

ದಿವಾನಿಯಾದ ಮಸ್ತಾನಿಯ ಕತೆ

ಹೌದಲ್ಲ. ಇವಳು ಎಲ್ಲಿಂದ ಬಂದಳು ಎಲ್ಲಿಗೆ ಹೋದಳು? ಸಂಜಯ್ ಲೀಲಾ ಬನ್ಸಾಲಿಯ ವೈಭವಪರದೆಯಲ್ಲಿ ದೀಪಿಕಾಳ ಮೂಲಕ ಅನಾವರಣಗೊಂಡವಳು.. ಕೊಟ್ಟಿಗೆಯಂತಾಗಿದ್ದ ಮನದ ನಡುವಿನಲ್ಲಿ ನೊರೆ ಹಾಲ್ಗರೆದುಕೊಟ್ಟ, ಬಾಜಿರಾಯನ ‘ಮಸ್ತಾನಿ’ಯನ್ನು ಹುಡುಕಿ ನಾನು ಹೊರಟೆ. ಹಾಡುತ್ತಿದ್ದೆ ನಾನೂ “ಕಹತೆ ಹೆ ಯೇ ದಿವಾನಿ ಮಸ್ತಾನೀ ಹೋಗಯೀ…” ಅವಳು ಇರಲೇ ಇಲ್ಲ, ಅವಳು ಮುಸ್ಲಿಂ ಆಗಿರಲಿಲ್ಲ, ಅವಳು ಬಾಜಿರಾಯನಿಗಿಂತ ಮೊದಲೇ ಸತ್ತಳು, ಆತ್ಮಹತ್ಯೆ ಮಾಡಿಕೊಂಡಳು ವಗೈರೆ ವಗೈರೆ ಎಂದು ಮಾಧ್ಯಮಗಳು ಟಿಆರ್‌ಪಿ ಸಂಕಷ್ಟದಲ್ಲಿ ಹೊರಳಿ ಧುಮ್ಮಿಕ್ಕುತ್ತಿರುವಾಗ ನಾನು ಹಾಡುತ್ತಿದ್ದೆ “ಜ಼್ಅಖಮ್ ಐಸ ತೂನೇ ಲಗಾಯಾ… ಮರ್ಹಮ್ ಐಸ ತೂನೇ ಲಗಾಯಾ… ಮೇ ದಿವಾನಿ ಹೋಗಯೀ… ಹಾಂ ದಿವಾನೀ ಹೋಗಯೀ” ಅಂಜಲಿ ರಾಮಣ್ಣ ಬರೆಯುವ `ಕಂಡಷ್ಟೂ ಪ್ರಪಂಚ’ ಅಂಕಣದಲ್ಲಿ ಹೊಸ ಬರಹ

Read More

ದೇವರು ಧರಿಸುವ ಬಟ್ಟೆಯೂ ದೇವರಿಗೆ ಕೊಟ್ಟ ಮಾತೂ..

ದೇವರಿಗೆ ಉಡುಪಾಗಿ ನೇಯುವುದು ಒಂದಾದರೆ, ದೇವರನ್ನೇ ನೇಯುವುದು  ಕೂಡ ಇನ್ನೊಂದು ಬಗೆಯ  ವಸ್ತ್ರಕಲೆ. ಗುಜರಾತಿನಲ್ಲಿ ಬಟ್ಟೆಯ ಮೇಲೆ ಚಿತ್ರ ಬರೆಯುವ ಮಾತಾ ನಿ ಪಚ್ಚೆಡಿ ಅನ್ನುವ ಸಂಪ್ರದಾಯ ಇದೆ. ಇದನ್ನು ಮಾಡುವವರು ಜಲ್ಲಿ ಕಲ್ಲು ಒಡೆಯುವ, ಅಷ್ಟೇನೂ ಅನುಕೂಲಸ್ಥರಲ್ಲದ ವರ್ಗ.  ಅವರಿಗೆ ದೇವಾಲಯಕ್ಕೆ ಪ್ರವೇಶ ಕೊಡಲಿಲ್ಲ ಅಂತ ಬಟ್ಟೆಯ ಮೇಲೆ ದೇವಿಯ ಚಿತ್ರ ಬರೆದರು. ಅದನ್ನೇ ಪೂಜೆ ಮಾಡುತ್ತಾ ಬಂದರು. ಅವರು ಸೀರೆಗಳ ಮೇಲೆ ವಿಧವಿಧವಾದ ದೇವಿಚಿತ್ರಗಳನ್ನು ಕಲಾತ್ಮಕವಾಗಿ, ಗಾಢ ಬಣ್ಣಗಳಲ್ಲಿ ಬಿದಿರಿನ ಕಡ್ಡಿಗಳಿಂದ ಮೂಡಿಸುತ್ತಾರೆ. ಅದನ್ನು ಗುಜರಾತಿನ ಕಲಮ್‌ಕಾರಿ ಎನ್ನುತ್ತಾರೆ. ಅವರಿಗೆ ಅದು ಬರಿ ಬಟ್ಟೆಯಲ್ಲ, ದೇವಿಯ ಆರಾಧನೆ.
ಗಿರಿಜಾ ರೈಕ್ವ ಬರೆಯುವ ಅಂಕಣ ‘ದೇವಸನ್ನಿಧಿ’

Read More

ಉತ್ಸಾಹ ಚಿಲುಮೆಯ ತೋಳಿಗೆ ಬಳ್ಳಿಯಾಗಿದ್ದ ನಾನು!

ಧರ್ಮಶಾಲಾದಿಂದ 112 ಕಿಲೋಮೀಟರ್‌ಗಳಷ್ಟು ದೂರದಲ್ಲಿ ಆಕರ್ಷಿಸುತ್ತದೆ ಖಜ್ಜಿಯಾರ್ ಗಿರಿಧಾಮ. ದೌಲಾದರ ಪರ್ವತಶ್ರೇಣಿಯ ನಡುವೆ 12ನೆಯ ಶತಮಾನದಲ್ಲಿ ಚಂಬಾ ರಾಜಮನೆತನದವರು ಕಟ್ಟಿಸಿರುವ, ಸಂಪೂರ್ಣ ಮರದಿಂದ ಮಾಡಿರುವ ಅರಮನೆ. ಅದರ ಬಾಗಿಲುವಾಡಗಳಿಗೆ ಕಟ್ಟಿಕೊಂಡಿರುವ ಚಿನ್ನದ ತಗಡು, ಅರಮನೆಯ ಒಳಗೇ ಇರುವ ಖಾಜ್ಜಿ ನಾಗಮಂದಿರ. ಶಿವ ಮತ್ತು ಹಿಡಿಂಬೆಯ ಮೂರ್ತಿಗಳೂ ಇರುವುದು ಇಲ್ಲಿನ ಆಕರ್ಷಣೆ. ನವರಾತ್ರಿಯಲ್ಲಿ ಮಾತ್ರ ಇಲ್ಲಿ ಪೂಜೆ ನಡೆಯುತ್ತದೆ. ಬಾಕಿಯಂತೆ ದೈವಭಕ್ತ ಪ್ರವಾಸಿಗರು ತಾವೇ ಕುಂಕುಮವಿಟ್ಟು ಪೂಜೆ ಮಾಡಿ ಬರಬಹುದು.
ʻಕಂಡಷ್ಟೂ ಪ್ರಪಂಚʼ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಮರಳಲ್ಲ ಇದು ಹಸಿರು ಹರಳು

ದೂರದಲ್ಲಿ ಏರುತ್ತಿದ್ದ ಕೆಂಪು ಧೂಳಿನ ಮೋಡದಿಂದ ಎದ್ದುಬಂದ ಜೀಪಿನಿಂದ ಹೊರಗಿಣುಕಿತ್ತೊಂದು ಹೊಂಗೂದಲಿನ ತೇರು. ಅಹ ದೇವತೆಯಂತೆ ಅವತರಿಸಿದ್ದಳು ಹದಿನಾರರ ಹುಡುಗಿ ಮಕಾಮಾಯಿ.   ನಮ್ಮ ಕತೆ ಕೇಳಿ, ನನ್ನ ಹಿಂದೆ ನಿಧಾನ ಬನ್ನಿ ಎನ್ನುತ್ತಾ ತಾನು ಮಾತ್ರ ಭರೆಂದು ಹಾರುತ್ತ, ಅಲ್ಲಲ್ಲಿ ಜೀಪು ನಿಲ್ಲಿಸಿಕೊಂಡು ನಮಗಾಗಿ ಕಾಯುತ್ತ, ಒಂದು ಸಮುದ್ರ ತೀರದ ಕಲ್ಲು ಹಾದಿಯ ಗುಡಿಸಿಲಿನಂತ ಜಾಗಕ್ಕೆ ಕರೆದೊಯ್ದಳು. ಅದು “ಪಾಪಕೋಲೇ” ಹಸಿರು ಮರಳ ದಂಡೆಯ ಹಾದಿಯ ಶುರುವಾತು. ಜಗದ ಜಗಲಿಯಲಿ ನಿಂತು ಪ್ರವಾಸ ಬರಹಗಳ ಸಾಲಿನಲ್ಲಿ ವೈಶಾಲಿ ಹೆಗಡೆ ಹವಾಯಿ ದ್ವೀಪದ ಕುರಿತು ಬರೆದಿದ್ದಾರೆ .

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ