Advertisement

Category: ಪ್ರವಾಸ

ವೆರೋನಾ: ಅಮರ ಪ್ರೇಮದ ನಿದರ್ಶನ

ರೋಮಿಯೋ ಜೂಲಿಯೆಟ್ ದುರಂತ ಪ್ರೇಮ ಕಥೆಯ ಎಳೆಯ ಮೇಲೆ ಇಂದಿಗೂ ಬರುತ್ತಿವೆ, ಮುಂದೆಯೂ ಬರುತ್ತವೆ. ಆದರೆ ಈ ಕಥೆ ಕಾಲ್ಪನಿಕವಲ್ಲ ಎಂಬುದು ಗೊತ್ತೇ? ಇದು ನಿಜವಾಗಿಯೂ ಇಟಾಲಿಯ “ವೆರೋನಾ” ಎಂಬಲ್ಲಿ ನಡೆದಿರುವ ಘಟನೆ! ಈ ಅಮರ ಪ್ರೇಮದ ಘಟನೆಗಳು ಅನೇಕ ಸಾಹಿತಿಗಳನ್ನು ಪ್ರಭಾವಿಸಿದೆ. ಅದರಲ್ಲಿ ವಿಲಿಯಂ ಷೇಕ್ಸ್‌ಪಿಯರ್ ಕೂಡ ಒಬ್ಬರು!
‘ದೂರದ ಹಸಿರು’ ಸರಣಿಯಲ್ಲಿ ರೋಮೀಯೋ-ಜೂಲಿಯಟ್‌ ಕಥೆ ನಡೆದ ಸ್ಥಳದ ಕುರಿತು ಬರೆದಿದ್ದಾರೆ ಗುರುದತ್‌ ಅಮೃತಾಪುರ

Read More

‘ಬದಲಾಗದೆ ಉಳಿದವರು ಮಾತ್ರ ಪುರುಷರು’

ಬಹುತೇಕ ಎಲ್ಲಾ ವಸ್ತು ಸಂಗ್ರಹಾಲಯಗಳಲ್ಲಿ ಇರುವಂತೆ ಇಲ್ಲಿಯೂ ಸಹ ಕಜಾರ್ ಮಹಿಳೆಯರು ಕರಕುಶಲದಲ್ಲಿ, ಅಡುಗೆ ವಿಧಾನದಲ್ಲಿ, ಸೌಂದರ್ಯ ಕಲೆಯಲ್ಲಿ, ಕಾವ್ಯ ಕಟ್ಟುವಿಕೆಯಲ್ಲಿ ಬೆಳೆದು ಬಂದ ಬಗೆಗಳ ಬಗ್ಗೆ ಸಾಕ್ಷಿಸಹಿತ ಪ್ರದರ್ಶನ ಇತ್ತು. 1789-1925 ಈ ಕಾಲದಲ್ಲಿ ಇರಾನ್ ದೇಶವನ್ನು ಆಳಿದ ಕಜಾರ್ ಮನೆತನದ ಹೆಣ್ಣು ಮಕ್ಕಳು ಇಸ್ಲಾಮೀಯರಲ್ಲೇ ಅತ್ಯಂತ ಆಧುನಿಕ ಆಲೋಚನೆ ಇದ್ದವರು ಎಂದು ಹೆಸರಾಗಿದ್ದಾರೆ. ಅಂಜಲಿ ರಾಮಣ್ಣ ಬರಹ  

Read More

ಪಂಜಾಬಿಗೆ ಹೋಗಿ ಲಸ್ಸಿ ಕುಡಿಯದಿರೆ ಮೆಚ್ಚನಾ ಪರಮಾತ್ಮನು

ಅಮೃತಸರ ಸಿಖ್ಖರ ಮುಖ್ಯ ಸ್ಥಳವಾದರೂ ಇಲ್ಲಿಂದ 11 ಕಿಲೋಮೀಟರ್ ದೂರದಲ್ಲಿ ಇದೆ ಲವ-ಕುಶರ ಜನ್ಮಸ್ಥಾನ. ಈಗ ಅದನ್ನು ರಾಮತೀರ್ಥ ಮಂದಿರ ಎಂದು ಗುರುತಿಸಲಾಗಿದೆ. ಅಲ್ಲೊಂದು ಸಣ್ಣ ಗುಡಿ ಇದೆ. ಅದರ ಮುಂದೆ ಕುಳಿತಿದ್ದ ಹಿರಿಯರೊಬ್ಬರು ‘ಇಲ್ಲಿಗೆ ಯಾರೂ ಬರುವುದೇ ಇಲ್ಲ ಅದಕ್ಕೇ ನಿತ್ಯ ಪೂಜೆಯೂ ಇಲ್ಲ’ ಎಂದರು. ಸಲಾಕೆಯಿಂದ ಮಾಡಿದ್ದ ಬಾಗಿಲಿಗೆ ಬೀಗ ಹಾಕಿತ್ತು. ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ

Read More

ಹಿಮಹಾಸಿನ ಮೇಲೆ ಚುಕ್ಕಿ ಎಣಿಸಿದ ಖುಷಿ

ಚಾರಣ ಪ್ರಾಂಭವಾದ ಸುಮಾರು ಒಂದು ಘಂಟೆಯ ನಂತರ ಎಲ್ಲರನ್ನೂ ಹಿಮದ ಮೇಲೆ ಮಲಗಿ ಸುಧಾರಿಸಲು ಹೇಳಿದ ನಮ್ಮ ಗೈಡ್ ಇನ್ನೊಂದು ಸೂಚನೆಯನ್ನೂ ಕೊಟ್ಟರು. ಕಣ್ಣು ಮುಚ್ಚಿ ಮೌನವನ್ನು ಆನಂದಿಸಬೇಕು. ಅಲ್ಲಿಯವರೆಗೂ ಗಿಜಿ ಗಿಜಿ ಎನ್ನುತ್ತಿದ್ದ ಗುಂಪು ತಕ್ಷಣ ಮೌನವಾಯಿತು. ಮೌನ ಆಚರಿಸಿ ಅಂತರ್ಮುಖಿಯಾಗುವುದೊ ಅಥವಾ ಕಣ್ಣಿನ ಮೇಲಿರುವ ತಾರಾಗಣವನ್ನು ಲೆಕ್ಕ ಹಾಕುವುದೋ ಎನ್ನುವ ಗೊಂದಲ. ಗುರುದತ್ ಅಮೃತಾಪುರ ಪ್ರವಾಸ ಕಥನ

Read More

ಆನೆಗಳ ಅನಾಥಾಶ್ರಮದಲ್ಲಿ ಮಂಡೋದರಿಯ ನೆನಪಾಯಿತು

ರಾಜೀವ್ ಗಾಂಧಿಯ ನಡೆಯನ್ನು ಕಂಡ ಈ ನೆಲದ ಜನರಿಗೆ ಭಾರತದ ವಿಸ್ತಾರತೆಯ ಬಗ್ಗೆ ಆಸ್ಥೆ ಏನಿಲ್ಲ, ಬೆಂಗಳೂರು ಗೊತ್ತಿಲ್ಲ ಮತ್ತು ಚೆನ್ನೈ ತಮ್ಮದು ಎನ್ನುವುದನ್ನು ಬಿಟ್ಟಿಲ್ಲ. ಎಲ್‌ಟಿಟಿಈ ಜೊತೆ ಸಂಬಂಧ ಇತ್ತು ಎಂದು ನ್ಯಾಯಾಲಯದಲ್ಲಿ ಪ್ರಕರಣ ಎದುರಿಸುತ್ತಿರುವವರು ಸಂಸದರಾಗಿದ್ದಾರೆ ಎಂದರೆ ನಾವೆಲ್ಲರೂ ಒಂದೇ ಎಂದು ಹಾಡಿಕೊಳ್ಳಲು ಅಡ್ಡಿಯಿಲ್ಲ ಎನ್ನಿಸಿತು. ನಮ್ಮಲ್ಲಿ ಸಿಗುವ ನಾಗಣ್ಣ ಸ್ಟೋರ್ಸ್, ಮಲ್ಲಪ್ಪನ ಅಂಗಡಿ ವಗೈರೆಗಳಂತೆ ಅಲ್ಲಿಯೂ ಗಲ್ಲಿಗಲ್ಲಿಗಳಲ್ಲಿ ಹೇರಳವಾಗಿ ಸಿಗುತ್ತವೆ ಕಾಕಾ ಅಂಗಡಿಗಳು ಮತ್ತು ಮ್ಯಾಗಿ ಮ್ಯಾಗಿ ಮ್ಯಾಗಿ ಟು ಮಿನಿಟ್ಸ್‌ನಲ್ಲೇ ಸಿಗುತ್ತವೆ. ಅಂಜಲಿ ರಾಮಣ್ಣ ಅವರ ಪ್ರವಾಸ ಕಥನ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ