Advertisement

Category: ಪ್ರವಾಸ

ಶ್ರದ್ಧೆಯ ಮೂಲ ಎಲ್ಲಿದೆ?

ಆತ ಮೇಲೆ ಹೋಗಿ ಗಂಧದ ಕಡ್ಡಿ ಹಚ್ಚಿ ಅಷ್ಟೂ ದಿಕ್ಕಿಗೆ ಭಕ್ತಿಯಿಂದ ಪೂಜೆ ಮಾಡಿದ. ಆಮೇಲೆ ನಮಸ್ಕರಿಸಿದ. ಹೊರಡುವ ಮುಂಚೆ ಕೇಳಿದೆ. ಏನಿದು ಅಂತ. ಆತ “ಸುತ್ತ ದೇವರುಗಳಿದ್ದಾರೆ, ಪೂಜೆ ಮಾಡದಿದ್ದರೆ ಆಗುತ್ತಾ? ದಿನ ಬೆಳಿಗ್ಗೆ ಸಾಯಂಕಾಲ ನಾವು ಯಾರೇ ಶಿಫ್ಟ್‌ ನಲ್ಲಿರಲಿ ಪೂಜೆ ಮಾತ್ರ ತಪ್ಪಿಸಲ್ಲ” ಎಂದ. ಅವರು ಅದ್ಯಾವುದೂ ಮಾಡದಿದ್ದರೂ ನಡೆಯುತ್ತೆ. ಆರ್ಕಿಯಾಲಜಿಯವರ ಪ್ರಕಾರ ಅದೊಂದು ಸ್ಮಾರಕ. ಪೂಜೆಗೆ ದುಡ್ಡು ಕೊಡೋಲ್ಲ. ಅದು ನಿತ್ಯಪೂಜೆ ನಡೆಯುವ ದೇವಾಲಯವಲ್ಲ. ಆದರೆ ಇದು ಅಲ್ಲಿರುವ ಸೆಕ್ಯುರಿಟಿಗಳು ನಡೆಸಿಕೊಂಡು ಬಂದಿರುವ ಪರಿಪಾಠ.
ಗಿರಿಜಾ ರೈಕ್ವ ಬರೆಯುವ ಪ್ರವಾಸ ಅಂಕಣ

Read More

ಬಂಗಾಳಕೊಲ್ಲಿಯ ಮೂಗುತಿ ವಜ್ರ ಅಂಡಮಾನ್‌

ಸಮುದ್ರದೆದುರು ನಾವೆಲ್ಲರೂ ಗುಬ್ಬಚ್ಚಿಗಳಂತೆ ಹಾರಾಡೋ ಹಕ್ಕಿಗಳು, ಒಮ್ಮೆ ನೀಲಿ ಮತ್ತೊಮ್ಮೆ ಕೆಂಪಾದ ಆಕಾಶ, ಕನಸಿನಲೋಕಕ್ಕೆ ಜಾರುಬಂಡಿಯಾಗೋ ನುಣುಪು ಪಾಚಿ ಕಟ್ಟೆಗಳು, ಎಲ್ಲಿಯೂ ಕಾಣದ ಆದಿವಾಸಿಗಳು, ಹೂವು ಮುಡಿದು ಓಡಾಡೋ ತಮಿಳು-ಬೆಂಗಾಳಿ ಹೆಣ್ಮಕ್ಕಳು, ಎಂದಿನಂತೆ ಏನೇನೋ ಧಾವಂತಹೊತ್ತ ಚಡಪಡಿಸೋ ಗಂಡಸರು, ಬೆರಳುಗಳು ಬೆಸಗೊಂಡಂತೆ ಇಷ್ಟಿಷ್ಟೇ ದೂರದಲ್ಲಿ ಅಂಟಿಕೊಂಡಿರೋ ಚಿಕ್ಕ ಚಿಕ್ಕ ದ್ವೀಪಗಳು, ಭೂಮಿಯೊಂದಿಗಿನ ರೋಮ್ಯಾನ್ಸ್‌ಗಾಗಿಯೇ ಹುಟ್ಟೋ ಸೂರ್ಯ ಇದು ಅಂಡಮಾನ್!
ಅಂಡಮಾನ್‌ ಪ್ರವಾಸದ ಕುರಿತು ಬರೆದಿದ್ದಾರೆ ಅಂಜಲಿ ರಾಮಣ್ಣ

Read More

ಸಿಸಿಲಿಯ ಹಾಳು ಹಂಪೆ ಈ ಸಿರಕುಸಾ

ಇಲ್ಲೊಂದು ಕ್ಯಾಥೆಡ್ರೆಲ್ ಇದೆ. ಇದರ ಮೂಲ ಗ್ರೀಕ್ ದೇವಾಲಯ. ಕ್ರಿ.ಪೂ. ಐದನೇ ಶತಮಾದಲ್ಲಿ ಕಟ್ಟಿದ ಈ ದೇವಾಲಯದ ಕಂಬಗಳು ಈಗಲೂ ಹಾಗೆಯೇ ಇವೆ. ರೋಮನ್ ಆಳ್ವಿಕೆಯಲ್ಲಿ ರೋಮನ್ ದೇವಾಲಯವಾಗಿತ್ತು. ನಂತರ ಕ್ರೈಸ್ತ ಧರ್ಮ ಬಂದ ನಂತರ ಇದನ್ನು ಚರ್ಚ್ ಆಗಿ ಮಾರ್ಪಾಡು ಮಾಡಲಾಯಿತು. ಆಮೇಲೆ ಅರಬ್ಬರ ಆಳ್ವಿಕೆಯಲ್ಲಿ ಮಸೀದಿ ಮಾಡಲಾಯಿತು. ನಂತರ ಮತ್ತೆ ಇಟಾಲಿಯನ್ ಆಳ್ವಿಕೆ ಬಂದ ನಂತರ ಇದನ್ನು ಪುನಃ ಚರ್ಚ್ ಮಾಡಲಾಯಿತು. ನನಗೆ ತಿಳಿದ ಮಟ್ಟಿಗೆ ಗ್ರೀಕ್ ದೇವಾಲಯದಿಂದ ಹಿಡಿದು ರೋಮನ್ ದೇವಾಲಯವಾಗಿ, ನಂತರ ಚರ್ಚ್ ಆಗಿ, ತದನಂತರ ಮಸೀದಿಯಾಗಿ ಮತ್ತೆ ಚರ್ಚ್ ಆದ ಇತಿಹಾಸವಿರುವ ಸ್ಥಳ ಇದೊಂದೇ! ದೂರದ ಹಸಿರು ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

‘ಒಬ್ಬ ಸಾಮಾನ್ಯನೂ ರಾಮನೇ ಆಗಬಹುದು’

ಚಿಕ್ಕಮಗಳೂರಿನಲ್ಲಿ  ಬಾಬಾಬುಡನ್ ಗಿರಿಗೆ ತೆರಳಿ ದತ್ತಪೀಠದ ದರ್ಶನ ಪಡೆಯುವುದೊಂದು ಪ್ರೀತಿಯ ವಿಚಾರ. ಆದರೆ ಜನಜಂಗುಳಿಯ ನಡುವೆ ಕಿರಿದಾದ ಹಾದಿಯಲ್ಲಿ ಒಂದೊಂದೇ ಹೆಜ್ಜೆಯಿಟ್ಟು ಹೋದ ಬಳಿಕ ಮನಸ್ಸು ಮುದುಡಿದಂತಾಯಿತು. ನಿರಾಳವಾದ ವಾತಾವರಣದಲ್ಲಿ ಈ ಪರಿಸರವನ್ನು ಕಣ್ತುಂಬಿಕೊಂಡ ಬಾಲ್ಯದ ಕ್ಷಣಗಳು ನೆನಪಾದವು.  ಅಲ್ಲಿಂದ ಕೋದಂಡ ರಾಮ ಸೀತಾದೇವಿ ಮತ್ತು ಲಕ್ಷ್ಮಣನೊಡನೆ ತ್ರಿಭಂಗಿಯಲ್ಲಿ ನಿಂತಿರುವ ದೇವಸ್ಥಾನಕ್ಕೆ ತೆರಳಿದಾಗ ಅಲ್ಲೊಂದು ಸುಂದರವಾದ ವಿವರಣೆ ಸಿಕ್ಕಿತು. ಚಿಕ್ಕಮಗಳೂರು ಪ್ರವಾಸದ ನೆನಪುಗಳ ಬುತ್ತಿಯನ್ನು ಉಣಬಡಿಸಿದ್ದಾರೆ ಅಂಜಲಿ ರಾಮಣ್ಣ.

Read More

ಗಿರಿಜಾ ರೈಕ್ವ ಬರೆಯುವ ಹೊಸ ಅಂಕಣ ‘ದೇವಸನ್ನಿಧಿ’

ತಿರಿಗಾಡಿದಷ್ಟೂ ಕಾಣುವ ಇಂತಹ ದೇಶಗಳ ಹಂಗಿಲ್ಲದ ನಂಬಿಕೆಗಳ ಪ್ರಪಂಚ ನನಗೊಂದು ಸೋಜಿಗ ಮತ್ತು ಭರವಸೆಯ ಸ್ಪರ್ಶಮಣಿಯಂತೆ ತೋರುತ್ತದೆ. ಕೆಲವು ವರ್ಷಗಳ ಹಿಂದೆ ಬಾಲ್ಟಿಕ್‌ ದೇಶಗಳಲ್ಲಿ ಅಲೆಯುತ್ತಿದ್ದೆ. ಆಗ ಹೋಗಿ ನೋಡಿದ್ದು ಲಿಥುಯೇನಿಯಾದಲ್ಲಿರುವ ‘ಹಿಲ್‌ ಆಫ್‌ ಕ್ರಾಸ್‌ʼ ಅನ್ನುವ ಗುಡ್ಡ. ಲಿಥೂಯೇನಿಯಾ ಬಾಲ್ಟಿಕ್‌ ಸಾಗರದ ನಡುವಿನ ಒಂದು ದೇಶ. ೧೪ ನೇ ಶತಮಾನದಿಂದ ಸೋವಿಯತ್‌ ರಷ್ಯಾದ ಆಳ್ವಿಕೆಯಲ್ಲಿದ್ದು ೧೯೯೧ ರಲ್ಲಿ ಸ್ವತಂತ್ರವಾದ ದೇಶ.
ಗಿರಿಜಾ ರೈಕ್ವ ಬರೆಯುವ ದೇಗುಲಗಳ ಕುರಿತ ಹೊಸ ಪ್ರವಾಸ ಅಂಕಣ “ದೇವಸನ್ನಿಧಿ” ಇಂದಿನಿಂದ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ