Advertisement

Category: ಪ್ರವಾಸ

ಮಥುರಾ ನಗರಿಯಲ್ಲೊಂದು ಭಾವಯಾನ

ವ್ರಜ ಪರಿಕ್ರಮದಲ್ಲಿ ದೀರ್ಘ ಮತ್ತು ಚುಟುಕಾದ ಎರಡು ರೀತಿಯ ಪರಿಕ್ರಮಗಳಿವೆ. ಚಿಕ್ಕಮಟ್ಟದ ಪರಿಕ್ರಮದಲ್ಲಿ ಮಥುರೆಯ ಮುಖ್ಯ ದೇಗುಲ ಮತ್ತು ಪುಣ್ಯಸ್ಥಾನಗಳಿಗೆ ಭೇಟಿ ನೀಡುವುದಷ್ಟೇ ಸೇರಿದೆ. ದೀರ್ಘ ಪರಿಕ್ರಮದಲ್ಲಿ ನಂದಗಾವ್ ಮತ್ತು ಬರ್ಸಾನಾಕ್ಕೆ ಪಾದಯಾತ್ರೆಯನ್ನು ಕೈಗೊಳ್ಳುವುದು ಸೇರಿದೆ. ನಾವೆಲ್ಲ ಕೆಲವೇ ದಿನಗಳ ರಜೆಯಲ್ಲಿ ಮಥುರೆಯನ್ನು ಕ್ಷಿಪ್ರವಾಗಿ ನೋಡಿ ಬರುವವರ ಸಾಲಿಗೆ ಸೇರಿದವರು. ಮಥುರಾ ಯಾತ್ರೆಯ ಕುರಿತ ತಮ್ಮ ಅನುಭವಗಳನ್ನು ಪ್ರಿಯಾ ಭಟ್ ಕಲ್ಲಬ್ಬೆ ಅವರು ಇಲ್ಲಿ ದಾಖಲಿಸಿದ್ದಾರೆ. 

Read More

ಅಚಲ ಸೇತು ಬರೆದ ‘ಕೀವೀ ನಾಡಿನ ಪ್ರವಾಸ ಕಥನ’

ಮುಗಿಲು ಮುಟ್ಟುವ ಬಂಡೆಗಳಿಂದ ಧುಮ್ಮಿಕ್ಕುವ ಬಿಳಿಯ ಜಲರಾಶಿಯನ್ನು ನೋಡುತ್ತಾ ಟಾಸ್ಮನ್ ಸಮುದ್ರದವರೆಗೆ ನೌಕಾ ವಿಹಾರ ಮಾಡುತ್ತ ಸಾಗಬಹುದು. ಅಚ್ಚರಿಯ ಸಂಗತಿಯೆಂದರೆ ಖಾರಿಯ ಉಪ್ಪು ನೀರಿನ ಕೆಳ ಪದರದ ಮೇಲೆ ಸುಮಾರು ಹತ್ತು ಅಡಿಗಳಷ್ಟು ಸಿಹಿ ನೀರಿನ ಪದರ ಸದಾ ಕಾಲ ಶೇಖರಣೆಯಾಗಿರುತ್ತದೆ. ಮೇಲಿನ ಮಳೆ ಕಾಡುಗಳಿಂದ ರೆಂಬೆ ಕೊಂಬೆಗಳ ಸಾರವನ್ನು ಹೊತ್ತು ತರುವ ಕಲಗಚ್ಚಿನಂತಹ ಈ…”

Read More

ಹಸಿರು ಕಡಲ ಹೆಣ್ಣಾಮೆಯ ಪ್ರಸವ ಪ್ರಸಂಗ

“ಆ ದೊಡ್ಡ ಹೆಣ್ಣಾಮೆ ಬಹಳಷ್ಟು ಲೆಕ್ಕಾಚಾರ ಹಾಕಿ ಸಾವಿರಾರು ಮೈಲು ದೂರದಿಂದ ಈಜಿ ಬಂದಿರಬಹುದು. ಭೂಮಿಯ ಅಯಸ್ಕಾಂತೀಯ ಗುಣಗಳು ಈ ಹೆಣ್ಣಿಗೆ ತವರಿನ ದಾರಿಯನ್ನು ತೋರಿಸಿರಬಹುದು. ಕಡಲಿನ ಒಳ ಅಲೆಗಳ ಹರಿವು, ಆಕಾಶದ ತಾರೆಗಳ ಲೆಕ್ಕಾಚಾರ, ಕಡಲ ಭರತ ಇಳಿತಗಳ ಪಂಚಾಂಗ, ಹೊಟ್ಟೆಯೊಳಗಿನ ಮೊಟ್ಟೆಗಳ ಜಾತಕದ ಗೋಚಾರಫಲ ಎಲ್ಲವೂ ಇದ್ದಿರಬಹುದು. ಆದರೆ ಎಲ್ಲೋ ಲೆಕ್ಕ ತಪ್ಪಿದಂತೆ ಇಳಿ ಹಗಲ ಹೊತ್ತೇ ಸೂರ್ಯ ಮುಳುಗುವ ಮೊದಲೇ ಈ ಆಮೆ ಪ್ರಸವ ಮುಗಿಸಿ…”

Read More

ಮಾಯದಂತಹ ಒಂದು ಮಧ್ಯಾಹ್ನದ ಮಳೆ

“ಧರ್ಮ ಗ್ರಂಥಗಳಲ್ಲಿರುವ ಸ್ವರ್ಗದ ವಿವರಗಳಲ್ಲಿರುವ ಎಲ್ಲ ಸೌಂದರ್ಯವನ್ನೂ ನಾನೂ ಇಲ್ಲಿ ಸ್ವತಃ ಕಂಡಿದ್ದೆ. ಆದರೆ ಯಾಕೋ ಅಪ್ಸರೆಯರು ಕಾಣಿಸುತ್ತಿಲ್ಲವಲ್ಲಾ ಎಂದು ಯೋಚಿಸುತ್ತಿದ್ದೆ. ಒಂದು ಮಧ್ಯಾಹ್ನ ಬಿಸಿಲಲ್ಲಿ ತಿರುಗಿ ಬಸವಳಿದು ಒಂದು ನಿಂಬೂ ಪಾನಿಯ ಅಂಗಡಿಗೆ ಹೋಗಿದ್ದೆ. ಅದು ನಿಜವಾಗಿ ಒಂದು ದಿನಸಿ ಅಂಗಡಿ. ಆ ಅಂಗಡಿಯೊಳಗೇ ಒಂದು ಮೂಲೆಯಲ್ಲಿ ನಿಂಬೂ ಪಾನಿಯ ಅಂಗಡಿ. ಅದನ್ನು ನಡೆಸುತ್ತಿರುವವರು ದಿನಸಿ ಅಂಗಡಿಯ ಮಾಲಿಕರ ಮಡದಿಯೂ ಇರಬಹುದು. ಅಥವಾ ಮಗಳೂ ಆಗಿರಬಹುದು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಒಂಬತ್ತನೇ ಕಂತು.

Read More

ಉಕ್ಕಿನ ಮಹಿಳೆ ಹವ್ವಾ ತಾತ

ಹವ್ವಾ ಅವರಿಗೆ ಈಗ ಎಪ್ಪತ್ತೆರಡು ವರ್ಷ. ಕಳೆದ ನಲವತ್ತು ವರ್ಷಗಳಿಂದ ಅಂಗನವಾಡಿಯೊಂದರ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದವರು ಇದೀಗ ತಾನೇ ನಿವೃತ್ತರಾಗಿದ್ದಾರೆ. ಅವರ ಬಳಿ ಇರುವ ಸೈಕಲ್ಲಿಗೂ ಐವತ್ತು ವರ್ಷಗಳಾಗಿವೆ. ಈ ದ್ವೀಪದಲ್ಲಿ ಸೈಕಲ್ಲು ಓಡಿಸಿದ ಮೊದಲ ಮಹಿಳೆ ಈಕೆ. ‘ನೀವು ಬಂದಾಗ ನಾನು ಸೈಕಲ್ಲು ಓಡಿಸುವ ಫೋಟೋ ತೆಗೆಯಬೇಕು’ ಎಂದಿದ್ದರು ಆಕೆ.
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಎಂಟನೇ ಕಂತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ